<p>ಚಾಮರಾಜನಗರ: ತಾಲ್ಲೂಕಿನ ಹಿತ್ತಲುಗುಡ್ಡ, ಕುಂಟುಗುಡಿಪೋಡು ಹಾಗೂ ಭೋಗಾಪುರ ಗ್ರಾಮದಲ್ಲಿ ಇತ್ತೀಚೆಗೆ ಸಿಮೆಂಟ್ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು. <br /> <br /> ಭೋಗಾಪುರ ಗ್ರಾಮದಲ್ಲಿ ಗುದ್ದಲಿಪೂಜೆ ನೆರವೇರಿಸಿದ ನಂತರ ಮಾತನಾಡಿದ ಅವರು, ಗ್ರಾಮದ ಪರಿಶಿಷ್ಟ ಜಾತಿಯ ಬೀದಿಯಲ್ಲಿ 12.43 ಲಕ್ಷ ರೂ ವೆಚ್ಚದಡಿ ಸಿಮೆಂಟ್ ರಸ್ತೆ, ಚರಂಡಿ ನಿರ್ಮಾಣ ಮಾಡಲಾಗುತ್ತಿದೆ. <br /> <br /> ಹಿತ್ತಲಗುಡ್ಡ ಗಿರಿಜನ ಕಾಲೊನಿಯಲ್ಲಿ 8.37 ಲಕ್ಷ ರೂ ವೆಚ್ಚದಡಿ ಸಿಮೆಂಟ್ ರಸ್ತೆ, ಚರಂಡಿ ನಿರ್ಮಾಣ, ಕುಂಟಗುಡಿಪೋಡು ಗಿರಿಜನ ಕಾಲೊನಿಯಲ್ಲಿ 10 ಲಕ್ಷ ರೂ ವೆಚ್ಚದಲ್ಲಿ ಸಿಮೆಂಟ್ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ವಿವರಿಸಿದರು. <br /> <br /> ಭೋಗಾಪುರ ಗ್ರಾಮವನ್ನು ಗುಡಿಸಲುರಹಿತ ಗ್ರಾಮವನ್ನಾಗಿ ಮಾಡಲಾಗುವುದು. ಗ್ರಾಮಕ್ಕೆ ಕಾವೇರಿ ಕುಡಿಯುವ ನೀರು ಪೂರೈಕೆ ಮಾಡಲು ಚಿಂತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಿಂದ ಗ್ರಾಮದ ತನಕ 1.42 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಪಡಿಸಲಾಗುತ್ತದೆ. ನಲ್ಲೂರು- ಹಿತ್ತಲಗುಡ್ಡ ಗ್ರಾಮದ ರಸ್ತೆ ಅಭಿವೃದ್ಧಿಗೆ 1.50 ಕೋಟಿ ರೂ ಮಂಜೂರಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದರು. <br /> <br /> ತಾ.ಪಂ. ಅಧ್ಯಕ್ಷೆ ಪದ್ಮಾ ಚಂದ್ರು ಮಾತನಾಡಿದರು. ಉಪಾಧ್ಯಕ್ಷ ಮಹಾಲಿಂಗಸ್ವಾಮಿ, ಸದಸ್ಯ ಮಹಾಲಿಂಗು, ಭೋಗಾಪುರ ಗ್ರಾ.ಪಂ. ಉಪಾಧ್ಯಕ್ಷ ಗುರುಸ್ವಾಮಿ, ಸದಸ್ಯೆ ಸುನೀತಾ, ಎಂ.ಎಸ್. ಮಾದಯ್ಯ, ನಾಗಯ್ಯ, ಮೂರ್ತಿ, ಕುಮಾರನಾಯಕ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: ತಾಲ್ಲೂಕಿನ ಹಿತ್ತಲುಗುಡ್ಡ, ಕುಂಟುಗುಡಿಪೋಡು ಹಾಗೂ ಭೋಗಾಪುರ ಗ್ರಾಮದಲ್ಲಿ ಇತ್ತೀಚೆಗೆ ಸಿಮೆಂಟ್ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು. <br /> <br /> ಭೋಗಾಪುರ ಗ್ರಾಮದಲ್ಲಿ ಗುದ್ದಲಿಪೂಜೆ ನೆರವೇರಿಸಿದ ನಂತರ ಮಾತನಾಡಿದ ಅವರು, ಗ್ರಾಮದ ಪರಿಶಿಷ್ಟ ಜಾತಿಯ ಬೀದಿಯಲ್ಲಿ 12.43 ಲಕ್ಷ ರೂ ವೆಚ್ಚದಡಿ ಸಿಮೆಂಟ್ ರಸ್ತೆ, ಚರಂಡಿ ನಿರ್ಮಾಣ ಮಾಡಲಾಗುತ್ತಿದೆ. <br /> <br /> ಹಿತ್ತಲಗುಡ್ಡ ಗಿರಿಜನ ಕಾಲೊನಿಯಲ್ಲಿ 8.37 ಲಕ್ಷ ರೂ ವೆಚ್ಚದಡಿ ಸಿಮೆಂಟ್ ರಸ್ತೆ, ಚರಂಡಿ ನಿರ್ಮಾಣ, ಕುಂಟಗುಡಿಪೋಡು ಗಿರಿಜನ ಕಾಲೊನಿಯಲ್ಲಿ 10 ಲಕ್ಷ ರೂ ವೆಚ್ಚದಲ್ಲಿ ಸಿಮೆಂಟ್ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ ಎಂದು ವಿವರಿಸಿದರು. <br /> <br /> ಭೋಗಾಪುರ ಗ್ರಾಮವನ್ನು ಗುಡಿಸಲುರಹಿತ ಗ್ರಾಮವನ್ನಾಗಿ ಮಾಡಲಾಗುವುದು. ಗ್ರಾಮಕ್ಕೆ ಕಾವೇರಿ ಕುಡಿಯುವ ನೀರು ಪೂರೈಕೆ ಮಾಡಲು ಚಿಂತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಿಂದ ಗ್ರಾಮದ ತನಕ 1.42 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿಪಡಿಸಲಾಗುತ್ತದೆ. ನಲ್ಲೂರು- ಹಿತ್ತಲಗುಡ್ಡ ಗ್ರಾಮದ ರಸ್ತೆ ಅಭಿವೃದ್ಧಿಗೆ 1.50 ಕೋಟಿ ರೂ ಮಂಜೂರಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದರು. <br /> <br /> ತಾ.ಪಂ. ಅಧ್ಯಕ್ಷೆ ಪದ್ಮಾ ಚಂದ್ರು ಮಾತನಾಡಿದರು. ಉಪಾಧ್ಯಕ್ಷ ಮಹಾಲಿಂಗಸ್ವಾಮಿ, ಸದಸ್ಯ ಮಹಾಲಿಂಗು, ಭೋಗಾಪುರ ಗ್ರಾ.ಪಂ. ಉಪಾಧ್ಯಕ್ಷ ಗುರುಸ್ವಾಮಿ, ಸದಸ್ಯೆ ಸುನೀತಾ, ಎಂ.ಎಸ್. ಮಾದಯ್ಯ, ನಾಗಯ್ಯ, ಮೂರ್ತಿ, ಕುಮಾರನಾಯಕ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>