<p><strong>ಹಾವೇರಿ:</strong> ಕೆಸರು ಗದ್ದೆಯಂತಾಗಿರುವ ರಸ್ತೆಗಳನ್ನು ದುರಸ್ತಿ ಮಾಡಬೇಕೆಂದು ಒತ್ತಾಯಿಸಿ ಪುರದ ಓಣಿಯ ನಾಗರಿಕರು ರಸ್ತೆಗೆ ಕಲ್ಲುಗಳನ್ನಿಟ್ಟು ಶನಿವಾರ ಪ್ರತಿಭಟನೆ ನಡೆಸಿದರು.<br /> <br /> ಪುರದ ಓಣಿಯ ನಾಗರಿಕರು, ಮಹಿಳೆಯರು ಹಾಗೂ ಮಕ್ಕಳು ರಸ್ತೆಗೆ ಅಡ್ಡಲಾಗಿ ಹಗ್ಗವನ್ನು ಕಟ್ಟಿ, ಕಲ್ಲುಗಳನ್ನಿಟ್ಟು ಸುಮಾರು ಎರಡು ಗಂಟೆಗಳ ಕಾಲ ರಸ್ತೆ ಸಂಚಾರ ಸ್ಥಗಿತಗೊಳಿಸಿದರಲ್ಲದೇ, ರಸ್ತೆ ದುರಸ್ತಿ ಹಾಗೂ ಗಟಾರು ಸ್ವಚ್ಛಗೊಳಿಸದ ನಗರಸಭೆ ವಿರುದ್ಧ ಘೋಷಣೆಗಳನ್ನು ಕೂಗಿದರು.<br /> <br /> ಈ ಸಂದರ್ಭದಲ್ಲಿ ಓಣಿಯ ನಿವಾಸಿ ಲಕ್ಷ್ಮಕ್ಕ ದೇವಿಹೊಸೂರು ಮಾತನಾಡಿ, ಕಳೆದ ಎರಡ್ಮೂರು ವರ್ಷಗಳಿಂದ ಒಳಚರಂಡಿ ಕಾಮಗಾರಿಗಾಗಿ ರಸ್ತೆಯನ್ನು ಅಗೆದು ಅದನ್ನು ಈವರೆಗೆ ಡಾಂಬರು ಮಾಡಲಾಗಿಲ್ಲ. ಮಳೆಗಾಲದಲ್ಲಿ ಈ ರಸ್ತೆ ಸಂಪೂರ್ಣ ಕೆಸರು ಗದ್ದೆಯಂತಾಗುತ್ತವೆ. ಮಕ್ಕಳು, ಸಾರ್ವಜನಿಕರು ರಸ್ತೆಯಲ್ಲಿ ಓಡಾಡದ ಸ್ಥಿತಿ ನಿರ್ಮಾಣವಾಗುತ್ತದೆ. ಆದರೂ, ನಗರಸಭೆ ಅಧಿಕಾರಿಗಳು ರಸ್ತೆ ದುರಸ್ತಿ ಮಾಡಲು ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.<br /> <br /> ಕಳೆದ ವರ್ಷ ಮಳೆಗಾಲದಲ್ಲಿಯೂ ಇದೇ ಪರಿಸ್ಥಿತಿಯಾಗಿತ್ತು. ಹಲವಾರು ಮಕ್ಕಳು, ವೃದ್ದರು ರಸ್ತೆಯಲ್ಲಿ ಬಿದ್ದು ಕೈಕಾಲುಗಳನ್ನು ಮುರಿದುಕೊಂಡಿದ್ದಾರಲ್ಲದೇ, ಅನೇಕ ದ್ವಿಚಕ್ರವಾಹನ ಸವಾರರು ಸ್ಕಿಡ್ಆಗಿ ಬಿದ್ದು ಗಾಯಗೊಂಡಿದ್ದಾರೆ. ಇಷ್ಟಾದರೂ ನಗರಸಭೆ ಅಧಿಕಾರಿಗಳು ಮಾತ್ರ ಇತ್ತ ಗಮನಹರಿಸುತ್ತಿಲ್ಲ ಎಂದು ಆಪಾದಿಸಿದರು.<br /> <br /> ಹಿಂದಿನ ವರ್ಷದಿಂದಲೇ ನಗರಸಭೆ ಅಧಿಕಾರಿಗಳಿಗೆ ಹಾಗೂ ಸದಸ್ಯರಿಗೆ ರಸ್ತೆ ದುರಸ್ತಿ ಮಾಡಿಸಿ, ಡಾಂಬರ್ ಮಾಡಬೇಕೆಂದು ಒತ್ತಾಯಿಸಿ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ನಿತ್ಯದ ಸಮಸ್ಯೆ ತಾಳಿಕೊಳ್ಳಲಾಗದೇ ಅನಿವಾರ್ಯವಾಗಿ ಪ್ರತಿಭಟನೆಗಿಳಿದಿದ್ದೇವೆ ಎಂದು ಪ್ರತಿಭಟನಾ ನಿರತ ಮಹಿಳೆಯರು ಹೇಳಿದರು.<br /> <br /> ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ನಗರಸಭೆ ಅಧಿಕಾರಿಗಳ ಜೊತೆ ಪ್ರತಿಭಟನಾಕಾರರು ಮಾತಿನ ಚಕಮಕಿ ನಡೆಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಈಗಲೇ ರಸ್ತೆ ದುರಸ್ತಿ ಮಾಡಲು ಸಾಧ್ಯವಾಗುವುದಿಲ್ಲ. ಆದರೆ, ತಾತ್ಕಾಲಿಕವಾಗಿ ಕೆಸರು ನಿಲ್ಲದಂತೆ ವ್ಯವಸ್ಥೆ ಮಾಡಲಾಗುತ್ತದೆ. ಗಟಾರು ಸ್ವಚ್ಛ ಮಾಡುವ ಭರವಸೆ ನೀಡಿದರಲ್ಲದೇ, ಮಳೆಗಾಲ ಮುಗಿದ ನಂತರ ರಸ್ತೆ ದುರಸ್ತಿಯ ಜತೆಗೆ ಡಾಂಬರ್ ಮಾಡುವ ಭರವಸೆ ನೀಡಿದರು.<br /> <br /> ನಗರಸಭೆ ನೂತನ ಸದಸ್ಯ ಕರಬಸಪ್ಪ ಹಳದೂರ ಸೇರಿದಂತೆ ಓಣಿಯ ಮಹಿಳೆಯರಾದ ಅನ್ನಪೂರ್ಣ, ರತ್ನಕ್ಕ, ಲಲಿತಾ ಕಳ್ಳಿ, ಮಹಾದೇವಿ ಮಡ್ಲಿ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ:</strong> ಕೆಸರು ಗದ್ದೆಯಂತಾಗಿರುವ ರಸ್ತೆಗಳನ್ನು ದುರಸ್ತಿ ಮಾಡಬೇಕೆಂದು ಒತ್ತಾಯಿಸಿ ಪುರದ ಓಣಿಯ ನಾಗರಿಕರು ರಸ್ತೆಗೆ ಕಲ್ಲುಗಳನ್ನಿಟ್ಟು ಶನಿವಾರ ಪ್ರತಿಭಟನೆ ನಡೆಸಿದರು.<br /> <br /> ಪುರದ ಓಣಿಯ ನಾಗರಿಕರು, ಮಹಿಳೆಯರು ಹಾಗೂ ಮಕ್ಕಳು ರಸ್ತೆಗೆ ಅಡ್ಡಲಾಗಿ ಹಗ್ಗವನ್ನು ಕಟ್ಟಿ, ಕಲ್ಲುಗಳನ್ನಿಟ್ಟು ಸುಮಾರು ಎರಡು ಗಂಟೆಗಳ ಕಾಲ ರಸ್ತೆ ಸಂಚಾರ ಸ್ಥಗಿತಗೊಳಿಸಿದರಲ್ಲದೇ, ರಸ್ತೆ ದುರಸ್ತಿ ಹಾಗೂ ಗಟಾರು ಸ್ವಚ್ಛಗೊಳಿಸದ ನಗರಸಭೆ ವಿರುದ್ಧ ಘೋಷಣೆಗಳನ್ನು ಕೂಗಿದರು.<br /> <br /> ಈ ಸಂದರ್ಭದಲ್ಲಿ ಓಣಿಯ ನಿವಾಸಿ ಲಕ್ಷ್ಮಕ್ಕ ದೇವಿಹೊಸೂರು ಮಾತನಾಡಿ, ಕಳೆದ ಎರಡ್ಮೂರು ವರ್ಷಗಳಿಂದ ಒಳಚರಂಡಿ ಕಾಮಗಾರಿಗಾಗಿ ರಸ್ತೆಯನ್ನು ಅಗೆದು ಅದನ್ನು ಈವರೆಗೆ ಡಾಂಬರು ಮಾಡಲಾಗಿಲ್ಲ. ಮಳೆಗಾಲದಲ್ಲಿ ಈ ರಸ್ತೆ ಸಂಪೂರ್ಣ ಕೆಸರು ಗದ್ದೆಯಂತಾಗುತ್ತವೆ. ಮಕ್ಕಳು, ಸಾರ್ವಜನಿಕರು ರಸ್ತೆಯಲ್ಲಿ ಓಡಾಡದ ಸ್ಥಿತಿ ನಿರ್ಮಾಣವಾಗುತ್ತದೆ. ಆದರೂ, ನಗರಸಭೆ ಅಧಿಕಾರಿಗಳು ರಸ್ತೆ ದುರಸ್ತಿ ಮಾಡಲು ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.<br /> <br /> ಕಳೆದ ವರ್ಷ ಮಳೆಗಾಲದಲ್ಲಿಯೂ ಇದೇ ಪರಿಸ್ಥಿತಿಯಾಗಿತ್ತು. ಹಲವಾರು ಮಕ್ಕಳು, ವೃದ್ದರು ರಸ್ತೆಯಲ್ಲಿ ಬಿದ್ದು ಕೈಕಾಲುಗಳನ್ನು ಮುರಿದುಕೊಂಡಿದ್ದಾರಲ್ಲದೇ, ಅನೇಕ ದ್ವಿಚಕ್ರವಾಹನ ಸವಾರರು ಸ್ಕಿಡ್ಆಗಿ ಬಿದ್ದು ಗಾಯಗೊಂಡಿದ್ದಾರೆ. ಇಷ್ಟಾದರೂ ನಗರಸಭೆ ಅಧಿಕಾರಿಗಳು ಮಾತ್ರ ಇತ್ತ ಗಮನಹರಿಸುತ್ತಿಲ್ಲ ಎಂದು ಆಪಾದಿಸಿದರು.<br /> <br /> ಹಿಂದಿನ ವರ್ಷದಿಂದಲೇ ನಗರಸಭೆ ಅಧಿಕಾರಿಗಳಿಗೆ ಹಾಗೂ ಸದಸ್ಯರಿಗೆ ರಸ್ತೆ ದುರಸ್ತಿ ಮಾಡಿಸಿ, ಡಾಂಬರ್ ಮಾಡಬೇಕೆಂದು ಒತ್ತಾಯಿಸಿ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ನಿತ್ಯದ ಸಮಸ್ಯೆ ತಾಳಿಕೊಳ್ಳಲಾಗದೇ ಅನಿವಾರ್ಯವಾಗಿ ಪ್ರತಿಭಟನೆಗಿಳಿದಿದ್ದೇವೆ ಎಂದು ಪ್ರತಿಭಟನಾ ನಿರತ ಮಹಿಳೆಯರು ಹೇಳಿದರು.<br /> <br /> ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ನಗರಸಭೆ ಅಧಿಕಾರಿಗಳ ಜೊತೆ ಪ್ರತಿಭಟನಾಕಾರರು ಮಾತಿನ ಚಕಮಕಿ ನಡೆಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಈಗಲೇ ರಸ್ತೆ ದುರಸ್ತಿ ಮಾಡಲು ಸಾಧ್ಯವಾಗುವುದಿಲ್ಲ. ಆದರೆ, ತಾತ್ಕಾಲಿಕವಾಗಿ ಕೆಸರು ನಿಲ್ಲದಂತೆ ವ್ಯವಸ್ಥೆ ಮಾಡಲಾಗುತ್ತದೆ. ಗಟಾರು ಸ್ವಚ್ಛ ಮಾಡುವ ಭರವಸೆ ನೀಡಿದರಲ್ಲದೇ, ಮಳೆಗಾಲ ಮುಗಿದ ನಂತರ ರಸ್ತೆ ದುರಸ್ತಿಯ ಜತೆಗೆ ಡಾಂಬರ್ ಮಾಡುವ ಭರವಸೆ ನೀಡಿದರು.<br /> <br /> ನಗರಸಭೆ ನೂತನ ಸದಸ್ಯ ಕರಬಸಪ್ಪ ಹಳದೂರ ಸೇರಿದಂತೆ ಓಣಿಯ ಮಹಿಳೆಯರಾದ ಅನ್ನಪೂರ್ಣ, ರತ್ನಕ್ಕ, ಲಲಿತಾ ಕಳ್ಳಿ, ಮಹಾದೇವಿ ಮಡ್ಲಿ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>