<p><strong>ಯಲಹಂಕ: </strong>ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ವಿದ್ಯಾನಗರ ಕ್ರಾಸ್ ಬಳಿ ರಸ್ತೆಗೆ ಮಧ್ಯದಲ್ಲಿದ್ದ ಕರಿಮಾ ರಿಯಮ್ಮ ದೇವಸ್ಥಾನ ಹಾಗೂ ವೆಂಕಟಾಲ ಸಮೀಪ ರಸ್ತೆಗೆ ಹೊಂದಿಕೊಂಡಿದ್ದ ಮಸೀದಿಯನ್ನು ಜಿಲ್ಲಾಧಿಕಾರಿ ಅವರ ಆದೇಶದ ಮೇರೆಗೆ ಸೋಮವಾರ ತೆರವು ಗೊಳಿಸಲಾಯಿತು.<br /> <br /> ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿಗಳು ಹಾಗೂ ತಹ ಶೀಲ್ದಾರ್ ನೇತೃತ್ವದ ತಂಡ ಪೊಲೀಸ್ ಭದ್ರತೆಯೊಂದಿಗೆ ಕಾರ್ಯಾಚರಣೆ ನಡೆಸಿ, ಕರಿಮಾರಿ ಯಮ್ಮ ದೇವಸ್ಥಾನವನ್ನು ತೆರವು ಗೊಳಿಸಲು ಮುಂದಾದರು. ಈ ಸಂದರ್ಭ ಅಧಿಕ ಸಂಖ್ಯೆಯಲ್ಲಿ ಜಮಾಯಿಸಿದ್ದ ಸ್ಥಳೀಯರು ಕಾರ್ಯಾಚರಣೆಗೆ ತಡೆಯೊಡ್ಡಿ, ಜನರ ಧಾರ್ಮಿಕ ಭಾವನೆಗೆ ಧಕ್ಕೆ ಬರುವುದರಿಂದ ಯಾವುದೇ ಕಾರಣಕ್ಕೂ ದೇವಸ್ಥಾನವನ್ನು ತೆರವು ಗೊಳಿಸಬಾರದು ಎಂದು ಪಟ್ಟು ಹಿಡಿದರು.</p>.<p>ಈ ಸಂದರ್ಭದಲ್ಲಿ ಸ್ಥಳೀಯರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು, ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ನಂತರ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ, ತೆರವು ಕಾರ್ಯಾಚರಣೆಗೆ ಅನುವು ಮಾಡಿಕೊಟ್ಟರು.<br /> <br /> ‘ದೇವಾಲಯವನ್ನು ತೆರವು ಗೊಳಿಸುವಂತೆ ಈಗಾಗಲೆ ಸಂಬಂಧಪಟ್ಟವರಿಗೆ ಐದಾರು ಬಾರಿ ನೋಟಿಸ್ ಜಾರಿಗೊಳಿಸಿ, ಕಾಲಾ ವಕಾಶ ನೀಡಲಾಗಿತ್ತು. ಆದರೂ ತೆರವುಗೊಳಿಸಿಲ್ಲ. ರಾಷ್ಟ್ರೀ ಯ ಹೆದ್ದಾರಿಯ ವಿಸ್ತರಣೆ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಜಿಲ್ಲಾಧಿ ಕಾರಿಗಳ ಆದೇಶದ ಮೇರೆಗೆ ತೆರವುಗೊಳಿಸಲಾಗಿದೆ’ ಎಂದು ಬೆಂಗಳೂರು ಉತ್ತರ (ಹೆಚ್ಚುವರಿ) ತಹಶೀಲ್ದಾರ್ ಬಾಳಪ್ಪ ಹಂದಿಗುಂದ ತಿಳಿಸಿದರು.<br /> <br /> ಇದೇ ರೀತಿ ರಸ್ತೆಗೆ ಹೊಂದಿಕೊಂಡಿರುವ ಯಲಹಂಕದ ಬಾಲಾಜಿ ದೇವಸ್ಥಾನ ಹಾಗೂ ಬ್ಯಾಟರಾಯನಪುರದ ಕೋದಂಡರಾಮಸ್ವಾಮಿ ದೇವಾಲಯವನ್ನು ಶೀಘ್ರದಲ್ಲೆ ತೆರವುಗೊಳಿಸಲಾಗುವುದು ಎಂದು ಅವರು ಹೇಳಿದರು. ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿ ಮಹೇಶ್ಬಾಬು, ಈಶಾನ್ಯ ವಿಭಾಗದ ಡಿಸಿಪಿ ಟಿ.ಆರ್.ಸುರೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ: </strong>ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ವಿದ್ಯಾನಗರ ಕ್ರಾಸ್ ಬಳಿ ರಸ್ತೆಗೆ ಮಧ್ಯದಲ್ಲಿದ್ದ ಕರಿಮಾ ರಿಯಮ್ಮ ದೇವಸ್ಥಾನ ಹಾಗೂ ವೆಂಕಟಾಲ ಸಮೀಪ ರಸ್ತೆಗೆ ಹೊಂದಿಕೊಂಡಿದ್ದ ಮಸೀದಿಯನ್ನು ಜಿಲ್ಲಾಧಿಕಾರಿ ಅವರ ಆದೇಶದ ಮೇರೆಗೆ ಸೋಮವಾರ ತೆರವು ಗೊಳಿಸಲಾಯಿತು.<br /> <br /> ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿಗಳು ಹಾಗೂ ತಹ ಶೀಲ್ದಾರ್ ನೇತೃತ್ವದ ತಂಡ ಪೊಲೀಸ್ ಭದ್ರತೆಯೊಂದಿಗೆ ಕಾರ್ಯಾಚರಣೆ ನಡೆಸಿ, ಕರಿಮಾರಿ ಯಮ್ಮ ದೇವಸ್ಥಾನವನ್ನು ತೆರವು ಗೊಳಿಸಲು ಮುಂದಾದರು. ಈ ಸಂದರ್ಭ ಅಧಿಕ ಸಂಖ್ಯೆಯಲ್ಲಿ ಜಮಾಯಿಸಿದ್ದ ಸ್ಥಳೀಯರು ಕಾರ್ಯಾಚರಣೆಗೆ ತಡೆಯೊಡ್ಡಿ, ಜನರ ಧಾರ್ಮಿಕ ಭಾವನೆಗೆ ಧಕ್ಕೆ ಬರುವುದರಿಂದ ಯಾವುದೇ ಕಾರಣಕ್ಕೂ ದೇವಸ್ಥಾನವನ್ನು ತೆರವು ಗೊಳಿಸಬಾರದು ಎಂದು ಪಟ್ಟು ಹಿಡಿದರು.</p>.<p>ಈ ಸಂದರ್ಭದಲ್ಲಿ ಸ್ಥಳೀಯರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದು, ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ನಂತರ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಿ, ತೆರವು ಕಾರ್ಯಾಚರಣೆಗೆ ಅನುವು ಮಾಡಿಕೊಟ್ಟರು.<br /> <br /> ‘ದೇವಾಲಯವನ್ನು ತೆರವು ಗೊಳಿಸುವಂತೆ ಈಗಾಗಲೆ ಸಂಬಂಧಪಟ್ಟವರಿಗೆ ಐದಾರು ಬಾರಿ ನೋಟಿಸ್ ಜಾರಿಗೊಳಿಸಿ, ಕಾಲಾ ವಕಾಶ ನೀಡಲಾಗಿತ್ತು. ಆದರೂ ತೆರವುಗೊಳಿಸಿಲ್ಲ. ರಾಷ್ಟ್ರೀ ಯ ಹೆದ್ದಾರಿಯ ವಿಸ್ತರಣೆ ಕಾರ್ಯ ಕೈಗೊಳ್ಳುವ ಹಿನ್ನೆಲೆಯಲ್ಲಿ ಜಿಲ್ಲಾಧಿ ಕಾರಿಗಳ ಆದೇಶದ ಮೇರೆಗೆ ತೆರವುಗೊಳಿಸಲಾಗಿದೆ’ ಎಂದು ಬೆಂಗಳೂರು ಉತ್ತರ (ಹೆಚ್ಚುವರಿ) ತಹಶೀಲ್ದಾರ್ ಬಾಳಪ್ಪ ಹಂದಿಗುಂದ ತಿಳಿಸಿದರು.<br /> <br /> ಇದೇ ರೀತಿ ರಸ್ತೆಗೆ ಹೊಂದಿಕೊಂಡಿರುವ ಯಲಹಂಕದ ಬಾಲಾಜಿ ದೇವಸ್ಥಾನ ಹಾಗೂ ಬ್ಯಾಟರಾಯನಪುರದ ಕೋದಂಡರಾಮಸ್ವಾಮಿ ದೇವಾಲಯವನ್ನು ಶೀಘ್ರದಲ್ಲೆ ತೆರವುಗೊಳಿಸಲಾಗುವುದು ಎಂದು ಅವರು ಹೇಳಿದರು. ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿ ಮಹೇಶ್ಬಾಬು, ಈಶಾನ್ಯ ವಿಭಾಗದ ಡಿಸಿಪಿ ಟಿ.ಆರ್.ಸುರೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>