<p><strong>ಹೈದರಾಬಾದ್ (ಪಿಟಿಐ/ಐಎಎನ್ಎಸ್):</strong> ಅಸೋಸಿಯೆಟೆಡ್ ಮೈನಿಂಗ್ ಕಂಪೆನಿ (ಎಎಂಸಿ)ಯ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಜನಾರ್ದನ ರೆಡ್ಡಿ ಶುಕ್ರವಾರ ಬೆಂಗಳೂರಿನ ಸಿಬಿಐ ನ್ಯಾಯಾಲಯದ ಮುಂದೆ ಹಾಜರಾಗಬೇಕಿದ್ದು, ಸಿಬಿಐ ಪೊಲೀಸರು ರಸ್ತೆ ಮೂಲಕ ಅವರನ್ನು ಬೆಂಗಳೂರಿಗೆ ಕರೆದೊಯ್ದರು.<br /> <br /> ಪ್ರಯಾಣದ ಅವಧಿ ಹಾಗೂ ಭದ್ರತೆ ಅಂಶಗಳನ್ನು ಗಮನಿಸಿ ತಮ್ಮದೇ ಖರ್ಚಿನಲ್ಲಿ ಬೆಂಗಳೂರಿಗೆ ವಿಮಾನದಲ್ಲಿ ಪ್ರಯಾಣಿಸಲು ಅನುಮತಿ ನೀಡುವಂತೆ ರೆಡ್ಡಿ ಹೈದರಾಬಾದ್ನ ಸಿಬಿಐ ನ್ಯಾಯಾಲಯಕ್ಕೆ ಗುರುವಾರ ಅರ್ಜಿ ಸಲ್ಲಿಸಿದ್ದರು.</p>.<p>ರಸ್ತೆ ಮಾರ್ಗದಲ್ಲಿ ತೆರಳಿದಲ್ಲಿ ತಮ್ಮ ಜೀವಕ್ಕೆ ಅಪಾಯವಿದೆ ಎಂದು ಅವರು ಹೇಳಿದ್ದರು. ಹಾಗಾಗಿ ರೆಡ್ಡಿ ವಿಮಾನ ಮಾರ್ಗದಲ್ಲಿ ಬೆಂಗಳೂರಿಗೆ ತೆರಳಲಿದ್ದಾರೆಯೇ ಅಥವಾ ರಸ್ತೆ ಮೂಲಕ ಪ್ರಯಾಣಿಸಲಿದ್ದಾರೆಯೇ ಎಂಬ ಕುರಿತು ಕುತೂಹಲ ಮೂಡಿತ್ತು.<br /> <br /> ಆದರೆ, ವಿಶೇಷ ಸಿಬಿಐ ನ್ಯಾಯಾಲಯ ರೆಡ್ಡಿ ಅವರನ್ನು ಹೇಗೆ ಕರೆದೊಯ್ಯಬೇಕು ಎಂಬ ನಿರ್ಧಾರವನ್ನು ಜೈಲಿನ ನಿಯಮಾವಳಿಗಳಿಗೆ ಅನುಗುಣವಾಗಿ ಅಲ್ಲಿನ ಅಧಿಕಾರಿಗಳೇ ತೆಗೆದುಕೊಳ್ಳಬೇಕು ಎಂದು ಹೇಳಿತು. ಇದೇ ಸಂದರ್ಭದಲ್ಲಿ ತಮ್ಮ ಹೆಲಿಕಾಪ್ಟರ್ ಹಿಂದಿರುಗಿಸಬೇಕು ಎಂದು ರೆಡ್ಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಮುಂದಕ್ಕೆ ಹಾಕಿತು.<br /> <br /> <strong>ಮಿನಿ ಬಸ್ ಪಯಣ</strong>: ಗುರುವಾರ ಸಂಜೆ ಹೊತ್ತಿಗೆ ಚಂಚಲಗುಡ ಕೇಂದ್ರ ಕಾರಾಗೃಹದಿಂದ ರೆಡ್ಡಿ ಅವರನ್ನು ಹೊರತಂದು ಮಿನಿ ಬಸ್ನಲ್ಲಿ ಕೂರಿಸಲಾಯಿತು. <br /> <br /> ಬಿಗಿ ಭದ್ರತೆಯಲ್ಲಿ ಬೆಂಗಳೂರಿಗೆ ಕರೆದೊಯ್ಯಲಾಯಿತು. ಇಬ್ಬರು ಸಬ್ ಇನ್ಸ್ಪೆಕ್ಟರ್ಗಳು ಹಾಗೂ 8 ಜನ ಪೊಲೀಸರು ರೆಡ್ಡಿ ಅವರ ಕಾವಲಿಗೆ ಇದ್ದರು.<br /> <br /> <strong>ಹಿನ್ನೆಲೆ: </strong>ಒಬಳಾಪುರಂ ಮೈನಿಂಗ್ ಕಂಪೆನಿ (ಒಎಂಸಿ) ಅಕ್ರಮ ಗಣಿಗಾರಿಕೆ ಹಗರಣದಲ್ಲಿ ಆರೋಪಿಯಾಗಿರುವ ಜನಾರ್ದನ ರೆಡ್ಡಿ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದು ಅವರನ್ನು ಹೈದರಾಬಾದ್ನ ಚಂಚಲಗುಡ ಕೇಂದ್ರ ಕಾರಾಗೃಹದಲ್ಲಿ ಇಡಲಾಗಿದೆ.<br /> <br /> ಜನಾರ್ದನ ರೆಡ್ಡಿ ಹಾಗೂ ಅವರ ಪತ್ನಿ ಅರುಣಾ, ಅಸೋಸಿಯೆಟೆಡ್ ಮೈನಿಂಗ್ ಕಂಪೆನಿಯ ಮಾಲೀಕರಾಗಿದ್ದು, ಈ ಕಂಪೆನಿ ಅಕ್ರಮ ಗಣಿಗಾರಿಕೆ ನಡೆಸಿದ ಪ್ರಕರಣದಲ್ಲಿ ಸಿಬಿಐ ಕರ್ನಾಟಕ ಘಟಕ, ರೆಡ್ಡಿ ದಂಪತಿ, ಕಾಂಗ್ರೆಸ್ ನಾಯಕ ವಿ. ಮುನಿಯಪ್ಪ ಸೇರಿದಂತೆ ಇಪ್ಪತ ಜನರ ವಿರುದ್ಧ ಎಫ್ಐಆರ್ ದಾಖಲಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್ (ಪಿಟಿಐ/ಐಎಎನ್ಎಸ್):</strong> ಅಸೋಸಿಯೆಟೆಡ್ ಮೈನಿಂಗ್ ಕಂಪೆನಿ (ಎಎಂಸಿ)ಯ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಜನಾರ್ದನ ರೆಡ್ಡಿ ಶುಕ್ರವಾರ ಬೆಂಗಳೂರಿನ ಸಿಬಿಐ ನ್ಯಾಯಾಲಯದ ಮುಂದೆ ಹಾಜರಾಗಬೇಕಿದ್ದು, ಸಿಬಿಐ ಪೊಲೀಸರು ರಸ್ತೆ ಮೂಲಕ ಅವರನ್ನು ಬೆಂಗಳೂರಿಗೆ ಕರೆದೊಯ್ದರು.<br /> <br /> ಪ್ರಯಾಣದ ಅವಧಿ ಹಾಗೂ ಭದ್ರತೆ ಅಂಶಗಳನ್ನು ಗಮನಿಸಿ ತಮ್ಮದೇ ಖರ್ಚಿನಲ್ಲಿ ಬೆಂಗಳೂರಿಗೆ ವಿಮಾನದಲ್ಲಿ ಪ್ರಯಾಣಿಸಲು ಅನುಮತಿ ನೀಡುವಂತೆ ರೆಡ್ಡಿ ಹೈದರಾಬಾದ್ನ ಸಿಬಿಐ ನ್ಯಾಯಾಲಯಕ್ಕೆ ಗುರುವಾರ ಅರ್ಜಿ ಸಲ್ಲಿಸಿದ್ದರು.</p>.<p>ರಸ್ತೆ ಮಾರ್ಗದಲ್ಲಿ ತೆರಳಿದಲ್ಲಿ ತಮ್ಮ ಜೀವಕ್ಕೆ ಅಪಾಯವಿದೆ ಎಂದು ಅವರು ಹೇಳಿದ್ದರು. ಹಾಗಾಗಿ ರೆಡ್ಡಿ ವಿಮಾನ ಮಾರ್ಗದಲ್ಲಿ ಬೆಂಗಳೂರಿಗೆ ತೆರಳಲಿದ್ದಾರೆಯೇ ಅಥವಾ ರಸ್ತೆ ಮೂಲಕ ಪ್ರಯಾಣಿಸಲಿದ್ದಾರೆಯೇ ಎಂಬ ಕುರಿತು ಕುತೂಹಲ ಮೂಡಿತ್ತು.<br /> <br /> ಆದರೆ, ವಿಶೇಷ ಸಿಬಿಐ ನ್ಯಾಯಾಲಯ ರೆಡ್ಡಿ ಅವರನ್ನು ಹೇಗೆ ಕರೆದೊಯ್ಯಬೇಕು ಎಂಬ ನಿರ್ಧಾರವನ್ನು ಜೈಲಿನ ನಿಯಮಾವಳಿಗಳಿಗೆ ಅನುಗುಣವಾಗಿ ಅಲ್ಲಿನ ಅಧಿಕಾರಿಗಳೇ ತೆಗೆದುಕೊಳ್ಳಬೇಕು ಎಂದು ಹೇಳಿತು. ಇದೇ ಸಂದರ್ಭದಲ್ಲಿ ತಮ್ಮ ಹೆಲಿಕಾಪ್ಟರ್ ಹಿಂದಿರುಗಿಸಬೇಕು ಎಂದು ರೆಡ್ಡಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಮುಂದಕ್ಕೆ ಹಾಕಿತು.<br /> <br /> <strong>ಮಿನಿ ಬಸ್ ಪಯಣ</strong>: ಗುರುವಾರ ಸಂಜೆ ಹೊತ್ತಿಗೆ ಚಂಚಲಗುಡ ಕೇಂದ್ರ ಕಾರಾಗೃಹದಿಂದ ರೆಡ್ಡಿ ಅವರನ್ನು ಹೊರತಂದು ಮಿನಿ ಬಸ್ನಲ್ಲಿ ಕೂರಿಸಲಾಯಿತು. <br /> <br /> ಬಿಗಿ ಭದ್ರತೆಯಲ್ಲಿ ಬೆಂಗಳೂರಿಗೆ ಕರೆದೊಯ್ಯಲಾಯಿತು. ಇಬ್ಬರು ಸಬ್ ಇನ್ಸ್ಪೆಕ್ಟರ್ಗಳು ಹಾಗೂ 8 ಜನ ಪೊಲೀಸರು ರೆಡ್ಡಿ ಅವರ ಕಾವಲಿಗೆ ಇದ್ದರು.<br /> <br /> <strong>ಹಿನ್ನೆಲೆ: </strong>ಒಬಳಾಪುರಂ ಮೈನಿಂಗ್ ಕಂಪೆನಿ (ಒಎಂಸಿ) ಅಕ್ರಮ ಗಣಿಗಾರಿಕೆ ಹಗರಣದಲ್ಲಿ ಆರೋಪಿಯಾಗಿರುವ ಜನಾರ್ದನ ರೆಡ್ಡಿ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದು ಅವರನ್ನು ಹೈದರಾಬಾದ್ನ ಚಂಚಲಗುಡ ಕೇಂದ್ರ ಕಾರಾಗೃಹದಲ್ಲಿ ಇಡಲಾಗಿದೆ.<br /> <br /> ಜನಾರ್ದನ ರೆಡ್ಡಿ ಹಾಗೂ ಅವರ ಪತ್ನಿ ಅರುಣಾ, ಅಸೋಸಿಯೆಟೆಡ್ ಮೈನಿಂಗ್ ಕಂಪೆನಿಯ ಮಾಲೀಕರಾಗಿದ್ದು, ಈ ಕಂಪೆನಿ ಅಕ್ರಮ ಗಣಿಗಾರಿಕೆ ನಡೆಸಿದ ಪ್ರಕರಣದಲ್ಲಿ ಸಿಬಿಐ ಕರ್ನಾಟಕ ಘಟಕ, ರೆಡ್ಡಿ ದಂಪತಿ, ಕಾಂಗ್ರೆಸ್ ನಾಯಕ ವಿ. ಮುನಿಯಪ್ಪ ಸೇರಿದಂತೆ ಇಪ್ಪತ ಜನರ ವಿರುದ್ಧ ಎಫ್ಐಆರ್ ದಾಖಲಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>