<p><strong>ಕುಶಾಲನಗರ: </strong>ಕೊಣನೂರು– ಮಾಕುಟ್ಟಗಳ ನಡುವೆ ನಡೆಯುತ್ತಿರುವ ರಾಜ್ಯ ಹೆದ್ದಾರಿ ವಿಸ್ತರಣೆಯ ಸಂದರ್ಭದಲ್ಲಿ ಕೆಆರ್ಡಿಸಿಎಲ್ ಅಧಿಕಾರಿಗಳು ತಾರತಮ್ಯ ಎಸಗಿದ್ದಾರೆ ಎಂದು ಆರೋಪಿಸಿ ಪಟ್ಟಣದಲ್ಲಿ ಕಾವೇರಿ ಸೇನೆ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.<br /> <br /> ಪ್ರತಿಭಟನಾಕಾರರು ಪಟ್ಟಣದ ಸೋಮೇಶ್ವರ ದೇವಾಲಯದ ವೃತ್ತದಲ್ಲಿ ಕಾವೇರಿ ಸೇನೆ ನೇತೃತ್ವದಲ್ಲಿ ಐದು ನಿಮಿಷಗಳ ಕಾಲ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. ಬಳಿಕ ಕೆಆರ್ಡಿಸಿಎಲ್ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು. ಅಲ್ಲದೆ, ಅದೇ ರಸ್ತೆಯಲ್ಲಿ ಮಾರುಕಟ್ಟೆವರೆಗೆ ಮೆರವಣಿಗೆ ನಡೆಸಿದರು.<br /> <br /> ಕಾವೇರಿಸೇನೆ ಜಿಲ್ಲಾ ಸಂಚಾಲಕ ರವಿಚಂಗಪ್ಪ ಮಾತನಾಡಿ, ಕೊಣನೂರು– ಮಾಕುಟ್ಟ ಹೆದ್ದಾರಿ ವಿಸ್ತರಣೆ ಸಂದರ್ಭದಲ್ಲಿ ಶಿರಂಗಾಲದಿಂದ ಕುಶಾಲನಗರದ ನಡುವೆ ಕಟ್ಟಡಗಳನ್ನು ತೆರವುಗೊಳಿಸುವಲ್ಲಿ ಅಧಿಕಾರಿಗಳು ತಾರತಮ್ಯ ಎಸಗಿದ್ದಾರೆ ಎಂದು ಆರೋಪಿಸಿದರು.<br /> ಬಡವರು ಮತ್ತು ಅಮಾಯಕರ ಕಟ್ಟಡಗಳನ್ನು ಬಲವಂತವಾಗಿ ತೆರವುಗೊಳಿಸಲಾಗಿದೆ. ಆದರೆ, ಅಧಿಕಾರ ಉಳ್ಳವರ ಕಟ್ಟಡಗಳನ್ನು ತೆರವುಗೊಳಿಸುವುದರ ಬದಲಾಗಿ ಅವರಿಂದಲೇ ಲಂಚಪಡೆದು ಕಟ್ಟಡಗಳನ್ನು ಹಾಗೇ ಉಳಿಸಿ ರಸ್ತೆಯನ್ನು ಕಿರಿದಾಗಿ ಮಾಡಲಾಗಿದೆ ಎಂದು ದೂರಿದರು.<br /> <br /> ತಕ್ಷಣವೇ ಕೆಆರ್ಡಿಸಿಎಲ್ ಅಧಿಕಾರಿಗಳು ಇಂತಹ ತಾರತಮ್ಯವನ್ನು ಕೈಬಿಟ್ಟು ಕಿರಿದಾಗಿ ಮಾಡಿರುವ ರಸ್ತೆಗಳನ್ನು ಸರಿಪಡಿಸಿ ಊರಿನ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಒತ್ತಾಯಿಸಿದರು. ಈ ಕುರಿತು ಅಧಿಕಾರಿಗಳು ಎಚ್ಚೆತ್ತುಕೊಳ್ಳದಿದ್ದಲ್ಲ ತೀವ್ರ ಸ್ವರೂಪದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ರಾಮು, ಮಂಜು ಇತರರು ಭಾಗವಹಿಸಿದ್ದರು.<br /> <br /> <strong>7ರಿಂದ ವಾರ್ಷಿಕೋತ್ಸವ</strong><br /> ಮಡಿಕೇರಿ: -ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಮಾರ್ಚ್ 7 ಮತು 8 ರಂದು 65ನೇ ಕಾಲೇಜು ಕ್ರೀಡಾ, ಪ್ರತಿಭಾ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಲಿದೆ.ಮಾ.7ರಂದು ಬೆಳಗ್ಗೆ 10.30ಕ್ಕೆ ಕ್ರೀಡೆ ಹಾಗೂ ಪ್ರತಿಭೋತ್ಸವ ಕಾರ್ಯಕ್ರಮ ನಡೆಯಲಿದೆ.</p>.<p>ಕೆ.ಎಸ್. ದೇವಯ್ಯ, ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪುಷ್ಪ ಕುಟ್ಟಣ್ಣ ಇತರರು ಪಾಲ್ಗೊಳ್ಳಲಿದ್ದಾರೆ. 8ರಂದು ಕಾಲೇಜಿನ 65ನೇ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾಧಿಕಾರಿ ಅನುರಾಗ್ ತಿವಾರಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಎನ್.ಎ. ಅಪ್ಪಯ್ಯ, ಕಾಲೇಜಿನ ಪ್ರಾಂಶುಪಾಲರಾದ ಡಾ.ಪಾರ್ವತಿ ಅಪ್ಪಯ್ಯ ಭಾಗವಹಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ: </strong>ಕೊಣನೂರು– ಮಾಕುಟ್ಟಗಳ ನಡುವೆ ನಡೆಯುತ್ತಿರುವ ರಾಜ್ಯ ಹೆದ್ದಾರಿ ವಿಸ್ತರಣೆಯ ಸಂದರ್ಭದಲ್ಲಿ ಕೆಆರ್ಡಿಸಿಎಲ್ ಅಧಿಕಾರಿಗಳು ತಾರತಮ್ಯ ಎಸಗಿದ್ದಾರೆ ಎಂದು ಆರೋಪಿಸಿ ಪಟ್ಟಣದಲ್ಲಿ ಕಾವೇರಿ ಸೇನೆ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.<br /> <br /> ಪ್ರತಿಭಟನಾಕಾರರು ಪಟ್ಟಣದ ಸೋಮೇಶ್ವರ ದೇವಾಲಯದ ವೃತ್ತದಲ್ಲಿ ಕಾವೇರಿ ಸೇನೆ ನೇತೃತ್ವದಲ್ಲಿ ಐದು ನಿಮಿಷಗಳ ಕಾಲ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು. ಬಳಿಕ ಕೆಆರ್ಡಿಸಿಎಲ್ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು. ಅಲ್ಲದೆ, ಅದೇ ರಸ್ತೆಯಲ್ಲಿ ಮಾರುಕಟ್ಟೆವರೆಗೆ ಮೆರವಣಿಗೆ ನಡೆಸಿದರು.<br /> <br /> ಕಾವೇರಿಸೇನೆ ಜಿಲ್ಲಾ ಸಂಚಾಲಕ ರವಿಚಂಗಪ್ಪ ಮಾತನಾಡಿ, ಕೊಣನೂರು– ಮಾಕುಟ್ಟ ಹೆದ್ದಾರಿ ವಿಸ್ತರಣೆ ಸಂದರ್ಭದಲ್ಲಿ ಶಿರಂಗಾಲದಿಂದ ಕುಶಾಲನಗರದ ನಡುವೆ ಕಟ್ಟಡಗಳನ್ನು ತೆರವುಗೊಳಿಸುವಲ್ಲಿ ಅಧಿಕಾರಿಗಳು ತಾರತಮ್ಯ ಎಸಗಿದ್ದಾರೆ ಎಂದು ಆರೋಪಿಸಿದರು.<br /> ಬಡವರು ಮತ್ತು ಅಮಾಯಕರ ಕಟ್ಟಡಗಳನ್ನು ಬಲವಂತವಾಗಿ ತೆರವುಗೊಳಿಸಲಾಗಿದೆ. ಆದರೆ, ಅಧಿಕಾರ ಉಳ್ಳವರ ಕಟ್ಟಡಗಳನ್ನು ತೆರವುಗೊಳಿಸುವುದರ ಬದಲಾಗಿ ಅವರಿಂದಲೇ ಲಂಚಪಡೆದು ಕಟ್ಟಡಗಳನ್ನು ಹಾಗೇ ಉಳಿಸಿ ರಸ್ತೆಯನ್ನು ಕಿರಿದಾಗಿ ಮಾಡಲಾಗಿದೆ ಎಂದು ದೂರಿದರು.<br /> <br /> ತಕ್ಷಣವೇ ಕೆಆರ್ಡಿಸಿಎಲ್ ಅಧಿಕಾರಿಗಳು ಇಂತಹ ತಾರತಮ್ಯವನ್ನು ಕೈಬಿಟ್ಟು ಕಿರಿದಾಗಿ ಮಾಡಿರುವ ರಸ್ತೆಗಳನ್ನು ಸರಿಪಡಿಸಿ ಊರಿನ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಒತ್ತಾಯಿಸಿದರು. ಈ ಕುರಿತು ಅಧಿಕಾರಿಗಳು ಎಚ್ಚೆತ್ತುಕೊಳ್ಳದಿದ್ದಲ್ಲ ತೀವ್ರ ಸ್ವರೂಪದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ರಾಮು, ಮಂಜು ಇತರರು ಭಾಗವಹಿಸಿದ್ದರು.<br /> <br /> <strong>7ರಿಂದ ವಾರ್ಷಿಕೋತ್ಸವ</strong><br /> ಮಡಿಕೇರಿ: -ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನಲ್ಲಿ ಮಾರ್ಚ್ 7 ಮತು 8 ರಂದು 65ನೇ ಕಾಲೇಜು ಕ್ರೀಡಾ, ಪ್ರತಿಭಾ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಲಿದೆ.ಮಾ.7ರಂದು ಬೆಳಗ್ಗೆ 10.30ಕ್ಕೆ ಕ್ರೀಡೆ ಹಾಗೂ ಪ್ರತಿಭೋತ್ಸವ ಕಾರ್ಯಕ್ರಮ ನಡೆಯಲಿದೆ.</p>.<p>ಕೆ.ಎಸ್. ದೇವಯ್ಯ, ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪುಷ್ಪ ಕುಟ್ಟಣ್ಣ ಇತರರು ಪಾಲ್ಗೊಳ್ಳಲಿದ್ದಾರೆ. 8ರಂದು ಕಾಲೇಜಿನ 65ನೇ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾಧಿಕಾರಿ ಅನುರಾಗ್ ತಿವಾರಿ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಎನ್.ಎ. ಅಪ್ಪಯ್ಯ, ಕಾಲೇಜಿನ ಪ್ರಾಂಶುಪಾಲರಾದ ಡಾ.ಪಾರ್ವತಿ ಅಪ್ಪಯ್ಯ ಭಾಗವಹಿಸಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>