<p><strong>ಹೊಸಪೇಟೆ: </strong>ನಗರದ ಮೇನ್ಬಜಾರ್ ರಸ್ತೆ ವಿಸ್ತರಣೆಗಾಗಿ ಕಾಲಾವಕಾಶ ನೀಡಿದ್ದರೂ ಕ್ರಮತೆಗೆದುಕೊಳ್ಳದ ಅಂಗಡಿಗಳನ್ನು ನಗರಸಭೆ ವತಿಯಿಂದ ಶನಿವಾರ ನೆಲಸಮ ಮಾಡಲಾಯಿತು.</p>.<p>ಕೆಲ ಅಂಗಡಿಗಳ ಕಟ್ಟಡಗಳನ್ನು ಜೆಸಿಬಿ ಯಂತ್ರಗಳ ಸಹಾಯದಿಂದ ತೆರವು ಮಾಡಲಾಯಿತು. ಮೇನ್ಬಜಾರ್ ರಸ್ತೆಯನ್ನು ವಿಸ್ತರಿಸಲು ಕೆಲ ತಿಂಗಳ ಹಿಂದೆ ಒಮ್ಮತದಿಂದ ನಿರ್ಧರಿಸಲಾಗಿತ್ತು. ಅದೇ ರೀತಿಯಾಗಿ ಆ ಭಾಗದ ಶೇ. 90ರಷ್ಟು ವ್ಯಾಪಾರಸ್ಥರು ಕಟ್ಟಡಗಳನ್ನು ಸ್ವ-ಪ್ರೇರಣೆಯಿಂದ ತೆರವುಮಾಡಿದ್ದರು. ಆದರೆ ಕೆಲವು ಅಂಗಡಿಗಳ ಮಾಲೀಕರು ತೆರವುಮಾಡದ ಹಿನ್ನೆಲೆಯಲ್ಲಿ ಕಾಮಗಾರಿಯಲ್ಲಿ ವಿಳಂಬವಾಗಿತ್ತು.</p>.<p>ರಸ್ತೆ ವಿಸ್ತರಣೆ ಹಿನ್ನೆಲೆಯಲ್ಲಿ ಮುಖ್ಯರಸ್ತೆಯಲ್ಲಿ ಎಲ್ಲಾ ಕಾಮಗಾರಿಗಳನ್ನು ಕೈಗೊಂಡಿರುವ ನಗರಸಭೆ ಅಧಿಕಾರಿಗಳು, ಅಂತಿಮವಾಗಿ ಶನಿವಾರ ಬೆಳಿಗ್ಗೆ ಜೆಸಿಬಿ ಯಂತ್ರಗಳ ಸಹಾಯದಿಂದ ಕಟ್ಟಡಗಳನ್ನು ತೆರವುಗೊಳಿಸಲಾರಂಭಿಸಿದರು. ನಗರಸಭೆ ಪೌರಾಯುಕ್ತ ಕೆ. ರಂಗಸ್ವಾಮಿ, ಎಂಜಿನಿಯರ್ ಮನ್ಸೂರ್ ಅಹಮ್ಮದ್ ಸೇರಿದಂತೆ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.</p>.<p> ಕೆಲ ಅಂಗಡಿಗಳ ಮಾಲೀಕರು ಆಕ್ಷೇಪ ವ್ಯಕ್ತಪಡಿಸಬಹುದು ಎಂಬ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ: </strong>ನಗರದ ಮೇನ್ಬಜಾರ್ ರಸ್ತೆ ವಿಸ್ತರಣೆಗಾಗಿ ಕಾಲಾವಕಾಶ ನೀಡಿದ್ದರೂ ಕ್ರಮತೆಗೆದುಕೊಳ್ಳದ ಅಂಗಡಿಗಳನ್ನು ನಗರಸಭೆ ವತಿಯಿಂದ ಶನಿವಾರ ನೆಲಸಮ ಮಾಡಲಾಯಿತು.</p>.<p>ಕೆಲ ಅಂಗಡಿಗಳ ಕಟ್ಟಡಗಳನ್ನು ಜೆಸಿಬಿ ಯಂತ್ರಗಳ ಸಹಾಯದಿಂದ ತೆರವು ಮಾಡಲಾಯಿತು. ಮೇನ್ಬಜಾರ್ ರಸ್ತೆಯನ್ನು ವಿಸ್ತರಿಸಲು ಕೆಲ ತಿಂಗಳ ಹಿಂದೆ ಒಮ್ಮತದಿಂದ ನಿರ್ಧರಿಸಲಾಗಿತ್ತು. ಅದೇ ರೀತಿಯಾಗಿ ಆ ಭಾಗದ ಶೇ. 90ರಷ್ಟು ವ್ಯಾಪಾರಸ್ಥರು ಕಟ್ಟಡಗಳನ್ನು ಸ್ವ-ಪ್ರೇರಣೆಯಿಂದ ತೆರವುಮಾಡಿದ್ದರು. ಆದರೆ ಕೆಲವು ಅಂಗಡಿಗಳ ಮಾಲೀಕರು ತೆರವುಮಾಡದ ಹಿನ್ನೆಲೆಯಲ್ಲಿ ಕಾಮಗಾರಿಯಲ್ಲಿ ವಿಳಂಬವಾಗಿತ್ತು.</p>.<p>ರಸ್ತೆ ವಿಸ್ತರಣೆ ಹಿನ್ನೆಲೆಯಲ್ಲಿ ಮುಖ್ಯರಸ್ತೆಯಲ್ಲಿ ಎಲ್ಲಾ ಕಾಮಗಾರಿಗಳನ್ನು ಕೈಗೊಂಡಿರುವ ನಗರಸಭೆ ಅಧಿಕಾರಿಗಳು, ಅಂತಿಮವಾಗಿ ಶನಿವಾರ ಬೆಳಿಗ್ಗೆ ಜೆಸಿಬಿ ಯಂತ್ರಗಳ ಸಹಾಯದಿಂದ ಕಟ್ಟಡಗಳನ್ನು ತೆರವುಗೊಳಿಸಲಾರಂಭಿಸಿದರು. ನಗರಸಭೆ ಪೌರಾಯುಕ್ತ ಕೆ. ರಂಗಸ್ವಾಮಿ, ಎಂಜಿನಿಯರ್ ಮನ್ಸೂರ್ ಅಹಮ್ಮದ್ ಸೇರಿದಂತೆ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.</p>.<p> ಕೆಲ ಅಂಗಡಿಗಳ ಮಾಲೀಕರು ಆಕ್ಷೇಪ ವ್ಯಕ್ತಪಡಿಸಬಹುದು ಎಂಬ ಕಾರಣದಿಂದ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>