<p>ಮುಂಬೈ (ಪಿಟಿಐ): `ಹಳ್ಳಿಗಳ ರಸ್ತೆ ಸಮಸ್ಯೆಗೆ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ (ಪಿಎಂಜಿಎಸ್ವೈ) ಶಾಶ್ವತ ಪರಿಹಾರವಲ್ಲ~ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಜೈರಾಂ ರಮೇಶ್ ಹೇಳಿದರು.<br /> <br /> ಭಾನುವಾರ ಇಲ್ಲಿ ನಡೆದ `ಎಂಜೆಂಡೆರಿಂಗ್ ಫಿಸಿಕಲ್ ಇನ್ಫ್ರಾಸ್ಟ್ರಕ್ಚರ್ ವಯಾ ಪಿಎಂಜಿಎಸ್ವೈ~ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಮಾತನಾಡಿದ ಅವರು, ಗ್ರಾಮಗಳಲ್ಲಿ ರಸ್ತೆ ನಿರ್ಮಾಣ ಆಯಾ ರಾಜ್ಯ ಸರ್ಕಾರಗಳ ಜವಾಬ್ದಾರಿ. <br /> <br /> ಕೇಂದ್ರ ಸರ್ಕಾರ ಕೇವಲ ರಸ್ತೆ ನಿರ್ಮಾಣ ಮತ್ತು ನಿರ್ವಹಣೆಗೆ ಹಣ ವ್ಯಯ ಮಾಡುತ್ತಿದ್ದರೆ, ಹಳ್ಳಿಗಳಲ್ಲಿ ಇತರೆ ಮೂಲಸೌಲಭ್ಯಗಳನ್ನು ಕಲ್ಪಿಸಲು ಹಣದ ಕೊರತೆ ಉಂಟಾಗುತ್ತದೆ ಎಂದು ಅವರು ವಿವರಿಸಿದರು. `ಕೇಂದ್ರ ಸರ್ಕಾರದ ಯೋಜನೆಗಳು ರಾಷ್ಟ್ರಮಟ್ಟದಲ್ಲಿ ರೂಪಗೊಳ್ಳುವುದರಿಂದ ಸ್ಥಳೀಯ ಅವಶ್ಯಕತೆಗೆ ತಕ್ಕಂತೆ ಅವುಗಳನ್ನು ಬದಲಾಯಿಸಿಕೊಳ್ಳಲು ಅವಕಾಶವಿರುವುದಿಲ್ಲ~ ಎಂದು ಅವರು ಸ್ಪಷ್ಟಪಡಿಸಿದ್ದಾರೆ.<br /> <br /> ಭಯೋತ್ಪಾದನಾ ನಿಗ್ರಹಕ್ಕೆ ಸಂಬಂಧಿಸಿದಂತೆ ಉದ್ದೇಶಿತ ಎನ್ಸಿಟಿಸಿ ಯೋಜನೆಯನ್ನು ವಿರೋಧಿಸುತ್ತಿರುವ ರಾಜ್ಯ ಸರ್ಕಾರಗಳ ನಡೆಯನ್ನು ಉಲ್ಲೇಖಿಸಿ ಮಾತನಾಡಿದ ಸಚಿವರು, `ಒಂದೆಡೆ ರಾಜ್ಯ ಸರ್ಕಾರಗಳು ಪಿಎಂಜಿಎಸ್ವೈ ಯೋಜನೆಯಡಿ ನಿರ್ಮಿತ ರಸ್ತೆಗಳ ದುರಸ್ತಿಗಾಗಿ ಕೇಂದ್ರದಿಂದ ಹಣ ಕೇಳುತ್ತವೆ. ಇನ್ನೊಂದೆಡೆ ಗಣತಂತ್ರ ವ್ಯವಸ್ಥೆ ಬಗ್ಗೆ ಅಪಸ್ವರ ಎತ್ತುತ್ತವೆ~ ಎಂದು ವ್ಯಂಗ್ಯವಾಡಿದರು.<br /> <strong><br /> ಸಚಿವರ ಶ್ಲಾಘನೆ</strong> : `500 ಕ್ಕೂ ಹೆಚ್ಚು ಜನಸಂಖ್ಯೆ ಇರುವ ಗ್ರಾಮಗಳಿಗೆ ರಸ್ತೆ ಸಂಪರ್ಕ ಕಲ್ಪಿಸುವುದು ಪಿಎಂಜಿಎಸ್ವೈ ಯೋಜನೆ ಉದ್ದೇಶ. ಪ್ರಸ್ತುತ ಮಧ್ಯಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ 500ಕ್ಕೂ ಕಡಿಮೆ ಜನಸಂಖ್ಯೆ ಇರುವ ಗ್ರಾಮಗಳಿಗೆ ರಸ್ತೆ ನಿರ್ಮಿಸುವಂತಹ ಯೋಜನೆ ರೂಪಿಸುತ್ತಿರುವುದು ಸ್ವಾಗತಾರ್ಹ ಸಂಗತಿ~ ಎಂದು ರಮೇಶ್ ಶ್ಲಾಘಿಸಿದರು.<br /> <br /> <strong>ಹಣ ಬಿಡುಗಡೆ </strong>: `ಗ್ರಾಮೀಣ ಅಭಿವೃದ್ಧಿಗಾಗಿ ಶೇ 50ರಷ್ಟು ಹಣವನ್ನು `12ನೇ ಪಂಚ ವಾರ್ಷಿಕ ಯೋಜನೆಯ ಕೊನೆಯಲ್ಲಿ ಆಯಾ ರಾಜ್ಯ ಸರ್ಕಾರಗಳಿಗೆ ಬಿಡುಗಡೆ ಮಾಡುವುದಾಗಿ ಸಚಿವರು ತಿಳಿಸಿದರು. ರಾಜ್ಯ ಸರ್ಕಾರಗಳು ಆದ್ಯತೆ ಮೇರೆಗೆ ಹಣವನ್ನು ಖರ್ಚು ಮಾಡಬಹುದು~ ಎಂದು ಸಲಹೆ ನೀಡಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಬೈ (ಪಿಟಿಐ): `ಹಳ್ಳಿಗಳ ರಸ್ತೆ ಸಮಸ್ಯೆಗೆ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ (ಪಿಎಂಜಿಎಸ್ವೈ) ಶಾಶ್ವತ ಪರಿಹಾರವಲ್ಲ~ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಜೈರಾಂ ರಮೇಶ್ ಹೇಳಿದರು.<br /> <br /> ಭಾನುವಾರ ಇಲ್ಲಿ ನಡೆದ `ಎಂಜೆಂಡೆರಿಂಗ್ ಫಿಸಿಕಲ್ ಇನ್ಫ್ರಾಸ್ಟ್ರಕ್ಚರ್ ವಯಾ ಪಿಎಂಜಿಎಸ್ವೈ~ ಕಾರ್ಯಕ್ರಮದ ಉದ್ಘಾಟನೆಯಲ್ಲಿ ಮಾತನಾಡಿದ ಅವರು, ಗ್ರಾಮಗಳಲ್ಲಿ ರಸ್ತೆ ನಿರ್ಮಾಣ ಆಯಾ ರಾಜ್ಯ ಸರ್ಕಾರಗಳ ಜವಾಬ್ದಾರಿ. <br /> <br /> ಕೇಂದ್ರ ಸರ್ಕಾರ ಕೇವಲ ರಸ್ತೆ ನಿರ್ಮಾಣ ಮತ್ತು ನಿರ್ವಹಣೆಗೆ ಹಣ ವ್ಯಯ ಮಾಡುತ್ತಿದ್ದರೆ, ಹಳ್ಳಿಗಳಲ್ಲಿ ಇತರೆ ಮೂಲಸೌಲಭ್ಯಗಳನ್ನು ಕಲ್ಪಿಸಲು ಹಣದ ಕೊರತೆ ಉಂಟಾಗುತ್ತದೆ ಎಂದು ಅವರು ವಿವರಿಸಿದರು. `ಕೇಂದ್ರ ಸರ್ಕಾರದ ಯೋಜನೆಗಳು ರಾಷ್ಟ್ರಮಟ್ಟದಲ್ಲಿ ರೂಪಗೊಳ್ಳುವುದರಿಂದ ಸ್ಥಳೀಯ ಅವಶ್ಯಕತೆಗೆ ತಕ್ಕಂತೆ ಅವುಗಳನ್ನು ಬದಲಾಯಿಸಿಕೊಳ್ಳಲು ಅವಕಾಶವಿರುವುದಿಲ್ಲ~ ಎಂದು ಅವರು ಸ್ಪಷ್ಟಪಡಿಸಿದ್ದಾರೆ.<br /> <br /> ಭಯೋತ್ಪಾದನಾ ನಿಗ್ರಹಕ್ಕೆ ಸಂಬಂಧಿಸಿದಂತೆ ಉದ್ದೇಶಿತ ಎನ್ಸಿಟಿಸಿ ಯೋಜನೆಯನ್ನು ವಿರೋಧಿಸುತ್ತಿರುವ ರಾಜ್ಯ ಸರ್ಕಾರಗಳ ನಡೆಯನ್ನು ಉಲ್ಲೇಖಿಸಿ ಮಾತನಾಡಿದ ಸಚಿವರು, `ಒಂದೆಡೆ ರಾಜ್ಯ ಸರ್ಕಾರಗಳು ಪಿಎಂಜಿಎಸ್ವೈ ಯೋಜನೆಯಡಿ ನಿರ್ಮಿತ ರಸ್ತೆಗಳ ದುರಸ್ತಿಗಾಗಿ ಕೇಂದ್ರದಿಂದ ಹಣ ಕೇಳುತ್ತವೆ. ಇನ್ನೊಂದೆಡೆ ಗಣತಂತ್ರ ವ್ಯವಸ್ಥೆ ಬಗ್ಗೆ ಅಪಸ್ವರ ಎತ್ತುತ್ತವೆ~ ಎಂದು ವ್ಯಂಗ್ಯವಾಡಿದರು.<br /> <strong><br /> ಸಚಿವರ ಶ್ಲಾಘನೆ</strong> : `500 ಕ್ಕೂ ಹೆಚ್ಚು ಜನಸಂಖ್ಯೆ ಇರುವ ಗ್ರಾಮಗಳಿಗೆ ರಸ್ತೆ ಸಂಪರ್ಕ ಕಲ್ಪಿಸುವುದು ಪಿಎಂಜಿಎಸ್ವೈ ಯೋಜನೆ ಉದ್ದೇಶ. ಪ್ರಸ್ತುತ ಮಧ್ಯಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ 500ಕ್ಕೂ ಕಡಿಮೆ ಜನಸಂಖ್ಯೆ ಇರುವ ಗ್ರಾಮಗಳಿಗೆ ರಸ್ತೆ ನಿರ್ಮಿಸುವಂತಹ ಯೋಜನೆ ರೂಪಿಸುತ್ತಿರುವುದು ಸ್ವಾಗತಾರ್ಹ ಸಂಗತಿ~ ಎಂದು ರಮೇಶ್ ಶ್ಲಾಘಿಸಿದರು.<br /> <br /> <strong>ಹಣ ಬಿಡುಗಡೆ </strong>: `ಗ್ರಾಮೀಣ ಅಭಿವೃದ್ಧಿಗಾಗಿ ಶೇ 50ರಷ್ಟು ಹಣವನ್ನು `12ನೇ ಪಂಚ ವಾರ್ಷಿಕ ಯೋಜನೆಯ ಕೊನೆಯಲ್ಲಿ ಆಯಾ ರಾಜ್ಯ ಸರ್ಕಾರಗಳಿಗೆ ಬಿಡುಗಡೆ ಮಾಡುವುದಾಗಿ ಸಚಿವರು ತಿಳಿಸಿದರು. ರಾಜ್ಯ ಸರ್ಕಾರಗಳು ಆದ್ಯತೆ ಮೇರೆಗೆ ಹಣವನ್ನು ಖರ್ಚು ಮಾಡಬಹುದು~ ಎಂದು ಸಲಹೆ ನೀಡಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>