<p>ಬೆಂಗಳೂರು: ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲಾ ವಾಹನಗಳ ಚಾಲಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಲು ವಾರಾಂತ್ಯದೊಳಗೆ ಒಂದು ದಿನದ ಶಿಬಿರವನ್ನು ಹಮ್ಮಿಕೊಳ್ಳಲಾಗುವುದು ಎಂದು ಸಂಚಾರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.<br /> <br /> `ಶಾಲಾ ವಾಹನಗಳು ಅಪಘಾತಕ್ಕೀಡಾಗಿ ಮುಗ್ಧ ಮಕ್ಕಳು ಸಾವನ್ನಪ್ಪುತ್ತಿರುವ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚುತ್ತಿವೆ. ಆದ್ದರಿಂದ ಮಕ್ಕಳ ರಕ್ಷಣೆಗೆ ಪ್ರಥಮ ಆದ್ಯತೆ ನೀಡುವ ಅಗತ್ಯವಿದೆ. ಮಕ್ಕಳನ್ನು ಶಾಲಾ ವಾಹನದಲ್ಲಿ ಕರೆದೊಯ್ಯುವಾಗ ಚಾಲಕರು ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಅಂತಹ ಅಂಶಗಳ ಬಗ್ಗೆ ಈ ಶಿಬಿರದಲ್ಲಿ ಮಾಹಿತಿ ನೀಡಲಾಗುವುದು~ ಎಂದು ಪೊಲೀಸರು ಹೇಳಿದ್ದಾರೆ.<br /> <br /> `ಶಾಲಾ ವಾಹನ ಅಪಘಾತಕ್ಕೀಡಾಗಿ ಮಕ್ಕಳಿಗೆ ಸಣ್ಣ ಗಾಯಗಳಾದರೂ ಆ ಶಾಲೆ ನಾಗರೀಕರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ. ಈ ದೃಷ್ಟಿಯಿಂದ ಸಂಚಾರ ಪೊಲೀಸ್ ಇಲಾಖೆಯು 2005ರಲ್ಲೇ `ಸೇಫ್ ರೂಟ್ ಟು ಸ್ಕೂಲ್~ ಎಂಬ ಯೋಜನೆಯನ್ನು ಜಾರಿಗೆ ತಂದಿದೆ. ಆ ಯೋಜನೆಯಡಿ ಈ ಶಿಬಿರವನ್ನು ಆಯೋಜಿಸಲಾಗುವುದು. ಮೋಟಾರು ವಾಹನ ಕಾಯ್ದೆ, ಸುರಕ್ಷತಾ ಚಾಲನೆಯ ಕೌಶಲ್ಯಗಳು, ಸಂಚಾರ ನಿಯಮಗಳು, ತುರ್ತು ಚಿಕಿತ್ಸೆ ಸೇರಿದಂತೆ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ಶಿಬಿರದಲ್ಲಿ ಮಾಹಿತಿ ನೀಡಲಾಗುವುದು. <br /> <br /> ಈ ಶಿಬಿರಕ್ಕೆ ಉಚಿತ ಪ್ರವೇಶವಿದ್ದು, ಶಾಲಾ ಆಡಳಿತ ಮಂಡಳಿಯು ಎಲ್ಲಾ ಚಾಲಕರನ್ನು ಶಿಬಿರಕ್ಕೆ ಕಳುಹಿಸಿ ಅದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಂಚಾರ ತರಬೇತಿ ಸಂಸ್ಥೆಯ (ಟಿಟಿಐ) ಸಹಾಯಕ ಪೊಲೀಸ್ ಕಮಿಷನರ್ ಅವರನ್ನು ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆ : 9480801808, ಇ-ಮೇಲ್ ವಿಳಾಸ: ಛ್ಝ್ಚಠ್ಟಿಚ್ಛ್ಛಜ್ಚಿಚ್ಚಿಃಜಞಜ್ಝಿ.್ಚಟಞ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲಾ ವಾಹನಗಳ ಚಾಲಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸಲು ವಾರಾಂತ್ಯದೊಳಗೆ ಒಂದು ದಿನದ ಶಿಬಿರವನ್ನು ಹಮ್ಮಿಕೊಳ್ಳಲಾಗುವುದು ಎಂದು ಸಂಚಾರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.<br /> <br /> `ಶಾಲಾ ವಾಹನಗಳು ಅಪಘಾತಕ್ಕೀಡಾಗಿ ಮುಗ್ಧ ಮಕ್ಕಳು ಸಾವನ್ನಪ್ಪುತ್ತಿರುವ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚುತ್ತಿವೆ. ಆದ್ದರಿಂದ ಮಕ್ಕಳ ರಕ್ಷಣೆಗೆ ಪ್ರಥಮ ಆದ್ಯತೆ ನೀಡುವ ಅಗತ್ಯವಿದೆ. ಮಕ್ಕಳನ್ನು ಶಾಲಾ ವಾಹನದಲ್ಲಿ ಕರೆದೊಯ್ಯುವಾಗ ಚಾಲಕರು ಕೆಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಅಂತಹ ಅಂಶಗಳ ಬಗ್ಗೆ ಈ ಶಿಬಿರದಲ್ಲಿ ಮಾಹಿತಿ ನೀಡಲಾಗುವುದು~ ಎಂದು ಪೊಲೀಸರು ಹೇಳಿದ್ದಾರೆ.<br /> <br /> `ಶಾಲಾ ವಾಹನ ಅಪಘಾತಕ್ಕೀಡಾಗಿ ಮಕ್ಕಳಿಗೆ ಸಣ್ಣ ಗಾಯಗಳಾದರೂ ಆ ಶಾಲೆ ನಾಗರೀಕರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ. ಈ ದೃಷ್ಟಿಯಿಂದ ಸಂಚಾರ ಪೊಲೀಸ್ ಇಲಾಖೆಯು 2005ರಲ್ಲೇ `ಸೇಫ್ ರೂಟ್ ಟು ಸ್ಕೂಲ್~ ಎಂಬ ಯೋಜನೆಯನ್ನು ಜಾರಿಗೆ ತಂದಿದೆ. ಆ ಯೋಜನೆಯಡಿ ಈ ಶಿಬಿರವನ್ನು ಆಯೋಜಿಸಲಾಗುವುದು. ಮೋಟಾರು ವಾಹನ ಕಾಯ್ದೆ, ಸುರಕ್ಷತಾ ಚಾಲನೆಯ ಕೌಶಲ್ಯಗಳು, ಸಂಚಾರ ನಿಯಮಗಳು, ತುರ್ತು ಚಿಕಿತ್ಸೆ ಸೇರಿದಂತೆ ಮಕ್ಕಳ ರಕ್ಷಣೆಗೆ ಸಂಬಂಧಿಸಿದ ಹಲವು ವಿಚಾರಗಳ ಬಗ್ಗೆ ಶಿಬಿರದಲ್ಲಿ ಮಾಹಿತಿ ನೀಡಲಾಗುವುದು. <br /> <br /> ಈ ಶಿಬಿರಕ್ಕೆ ಉಚಿತ ಪ್ರವೇಶವಿದ್ದು, ಶಾಲಾ ಆಡಳಿತ ಮಂಡಳಿಯು ಎಲ್ಲಾ ಚಾಲಕರನ್ನು ಶಿಬಿರಕ್ಕೆ ಕಳುಹಿಸಿ ಅದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಂಚಾರ ತರಬೇತಿ ಸಂಸ್ಥೆಯ (ಟಿಟಿಐ) ಸಹಾಯಕ ಪೊಲೀಸ್ ಕಮಿಷನರ್ ಅವರನ್ನು ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆ : 9480801808, ಇ-ಮೇಲ್ ವಿಳಾಸ: ಛ್ಝ್ಚಠ್ಟಿಚ್ಛ್ಛಜ್ಚಿಚ್ಚಿಃಜಞಜ್ಝಿ.್ಚಟಞ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>