<p><strong>ಬೆಂಗಳೂರು: </strong> ಮಹದೇವಪುರ ಕ್ಷೇತ್ರದ ಬೈರತಿ ಸಮೀಪದ ರಾಂಪುರ ಕೆರೆಕೋಡಿಯಲ್ಲಿ ಕಾಣಿಸಿಕೊಂಡಿರುವ ನೊರೆಯ ಪ್ರಮಾಣ ಕಡಿಮೆಯಾಗುವ ಲಕ್ಷಣ ಕಾಣಿಸುತ್ತಿಲ್ಲ. ದಿನದಿಂದ ದಿನಕ್ಕೆ ನೊರೆಯ ಪ್ರಮಾಣ ಹೆಚ್ಚಾಗುತ್ತಿರುವುದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.<br /> <br /> ಕೆರೆ ಕೋಡಿಯಲ್ಲಿ ಮಂಗಳವಾರ ದುರ್ನಾತದಿಂದ ಕೂಡಿದ ನೊರೆ ಭಾರಿ ಪ್ರಮಾಣದಲ್ಲಿ ತುಂಬಿಕೊಂಡಿತ್ತು. ಇದರಿಂದಾಗಿ ಆಸುಪಾಸಿನ ರೈತರು ಕಿರಿಕಿರಿ ಅನುಭವಿಸುವಂತಾಗಿದೆ. ಆಗಾಗ ಜೋರಾಗಿ ಗಾಳಿ ಬಂದಾಗ ಪಕ್ಕದ ರಸ್ತೆಗೂ ನೊರೆ ಚಿಮ್ಮುತ್ತಿತ್ತು. ಈ ರಸ್ತೆಯಲ್ಲಿ ಸಾಗುವವರು, ಮೈಮೇಲೆ ನೊರೆ ಬೀಳುವುದನ್ನು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.<br /> <br /> ಕಸದ ಹಾವಳಿ: ‘ಕೆರೆಯಲ್ಲಿ ನೊರೆ ಹಾವಳಿಯ ಜೊತೆಗೆ ಕಸದ ಸಮಸ್ಯೆಯೂ ಹೆಚ್ಚಿದೆ. ದೊಡ್ಡಗುಬ್ಬಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಊರುಗಳಲ್ಲಿ ಸಂಗ್ರಹವಾಗುವ ಕಸವನ್ನು ಕೆರೆ ಕೋಡಿಯಲ್ಲಿ ಸುರಿಯಲಾಗುತ್ತಿದೆ. ಈ ಕಸ ಕೆರೆ ನೀರಿನೊಂದಿಗೆ ಸೇರಿ, ಕೊಳೆತು ದುರ್ನಾತ ಮತ್ತಷ್ಟು ಹೆಚ್ಚುತ್ತಿದೆ. ಗಾಳಿ ಬೀಸಿದಾಗ ಅದರ ಜೊತೆ ವಾಕರಿಕೆ ತರಿಸುವಂತಹ ದುರ್ವಾಸನೆಯೂ ಊರಿನೊಳಕ್ಕೆ ಬರುತ್ತಿದೆ. ಆದ್ದರಿಂದ ಕೆರೆ ಕೋಡಿಯಲ್ಲಿ ಕಸವನ್ನು ಸುರಿಯದಂತೆ ಗ್ರಾಮ ಪಂಚಾಯ್ತಿ ಕ್ರಮ ಕೈಗೊಳ್ಳಬೇಕು’ ಎಂದು ಗ್ರಾಮದ ನಿವಾಸಿ ಮಂಜುಳಮ್ಮ ಆಗ್ರಹಿಸಿದರು.<br /> <br /> ‘ನೊರೆ ಕಾಣಿಸಿಕೊಳ್ಳುವ ಮೊದಲು ಸೊಳ್ಳೆಗಳ ಹಾವಳಿ ಕಡಿಮೆಯಾಗಿತ್ತು. ಆದರೆ ಇತ್ತೀಚೆಗೆ ಸೊಳ್ಳೆಗಳ ಹಾವಳಿ ಬಹಳ ಹೆಚ್ಚಾಗಿದೆ. ಈ ಬಗ್ಗೆ ಗ್ರಾಮ ಪಂಚಾಯ್ತಿ ಕಚೇರಿಗೆ ದೂರು ನೀಡಿದ್ದೇವೆ. ಸೊಳ್ಳೆಗಳ ಹಾವಳಿಯನ್ನು ತಡೆಗಟ್ಟಲು ಔಷಧಿ ಸಿಂಪಡಿಸುವಂತೆ ಕೋರಿದ್ದೆವು. ಆದರೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಅವರು ದೂರಿದರು.<br /> <br /> <strong>ಬಿಬಿಎಂಪಿಯಿಂದಲೂ ಕಸ:</strong> ‘ಕೆರೆ ಕಟ್ಟೆಯ ಮೇಲಿನ ರಸ್ತೆ ಬದಿಯಲ್ಲಿ ಬಿಬಿಎಂಪಿ ಪೌರ ಕಾರ್ಮಿಕರು ರಾತ್ರಿವೇಳೆಯಲ್ಲಿ ಲಾರಿಗಟ್ಟಲೇ ಕಸವನ್ನು ಸುರಿದು ಹೋಗುತ್ತಿದ್ದಾರೆ.<br /> <br /> ಈ ಕಸವೂ ಕೆರೆಯನ್ನು ಸೇರುತ್ತಿದೆ. ರಸ್ತೆಯಲ್ಲಿ ಸಂಚರಿಸುವವರು ಕೊಳೆತು ನಾರುವ ಕಸದ ರಾಶಿಯಿಂದಾಗಿ ಮೂಗು ಮುಚ್ಚಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.<br /> <br /> <strong>ಶಾಸಕರ ವಿರುದ್ಧವೂ ಆಕ್ರೋಶ</strong><br /> ‘ಬೆಳ್ಳಂದೂರು ಕೆರೆಯಂತೆಯೇ ರಾಂಪುರ ಕೆರೆಯಲ್ಲಿ ನೊರೆ ಕಾಣಿಸಿಕೊಳ್ಳುತ್ತಿದೆ. ಈ ಬಗ್ಗೆ ಪಾಲಿಕೆಗೆ ದೂರು ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಮಾಲಿನ್ಯ ನಿಯಂತ್ರಣ ಮಂಡಳಿಯಾಗಲಿ, ಕೆರೆ ಅಭಿವೃದ್ಧಿ ಪ್ರಾಧಿಕಾರವಾಗಲಿ ಇತ್ತ ಗಮನಹರಿಸಿಲ್ಲ. ಸ್ಥಳೀಯ ಶಾಸಕರಂತೂ ಸಮಸ್ಯೆಯನ್ನು ಕಿವಿಗೆ ಹಾಕಿಕೊಂಡಿಲ್ಲ. ಈ ಬಗ್ಗೆ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಶಾಸಕರು ಹೇಳುತ್ತಾರೆ’ ಎಂದು ಸ್ಥಳೀಯ ನಿವಾಸಿ ಯಲ್ಲಪ್ಪ ಆರೋಪಿಸಿದರು.</p>.<p>‘ಕೆರೆಗೆ ಕಶ್ಮಲ ಸೇರುತ್ತಿರುವುದನ್ನು ತಡೆಗಟ್ಟಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವನ್ನು ಕೈಗೊಳ್ಳಬೇಕು. ಇಲ್ಲದಿದ್ದರೆ ಗ್ರಾಮಸ್ಥರೆಲ್ಲರೂ ಒಟ್ಟಾಗಿ ಸೇರಿ ಪ್ರತಿಭಟನೆ ನಡೆಸುತ್ತೇವೆ’ ಎಂದು ಅವರು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong> ಮಹದೇವಪುರ ಕ್ಷೇತ್ರದ ಬೈರತಿ ಸಮೀಪದ ರಾಂಪುರ ಕೆರೆಕೋಡಿಯಲ್ಲಿ ಕಾಣಿಸಿಕೊಂಡಿರುವ ನೊರೆಯ ಪ್ರಮಾಣ ಕಡಿಮೆಯಾಗುವ ಲಕ್ಷಣ ಕಾಣಿಸುತ್ತಿಲ್ಲ. ದಿನದಿಂದ ದಿನಕ್ಕೆ ನೊರೆಯ ಪ್ರಮಾಣ ಹೆಚ್ಚಾಗುತ್ತಿರುವುದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.<br /> <br /> ಕೆರೆ ಕೋಡಿಯಲ್ಲಿ ಮಂಗಳವಾರ ದುರ್ನಾತದಿಂದ ಕೂಡಿದ ನೊರೆ ಭಾರಿ ಪ್ರಮಾಣದಲ್ಲಿ ತುಂಬಿಕೊಂಡಿತ್ತು. ಇದರಿಂದಾಗಿ ಆಸುಪಾಸಿನ ರೈತರು ಕಿರಿಕಿರಿ ಅನುಭವಿಸುವಂತಾಗಿದೆ. ಆಗಾಗ ಜೋರಾಗಿ ಗಾಳಿ ಬಂದಾಗ ಪಕ್ಕದ ರಸ್ತೆಗೂ ನೊರೆ ಚಿಮ್ಮುತ್ತಿತ್ತು. ಈ ರಸ್ತೆಯಲ್ಲಿ ಸಾಗುವವರು, ಮೈಮೇಲೆ ನೊರೆ ಬೀಳುವುದನ್ನು ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.<br /> <br /> ಕಸದ ಹಾವಳಿ: ‘ಕೆರೆಯಲ್ಲಿ ನೊರೆ ಹಾವಳಿಯ ಜೊತೆಗೆ ಕಸದ ಸಮಸ್ಯೆಯೂ ಹೆಚ್ಚಿದೆ. ದೊಡ್ಡಗುಬ್ಬಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಊರುಗಳಲ್ಲಿ ಸಂಗ್ರಹವಾಗುವ ಕಸವನ್ನು ಕೆರೆ ಕೋಡಿಯಲ್ಲಿ ಸುರಿಯಲಾಗುತ್ತಿದೆ. ಈ ಕಸ ಕೆರೆ ನೀರಿನೊಂದಿಗೆ ಸೇರಿ, ಕೊಳೆತು ದುರ್ನಾತ ಮತ್ತಷ್ಟು ಹೆಚ್ಚುತ್ತಿದೆ. ಗಾಳಿ ಬೀಸಿದಾಗ ಅದರ ಜೊತೆ ವಾಕರಿಕೆ ತರಿಸುವಂತಹ ದುರ್ವಾಸನೆಯೂ ಊರಿನೊಳಕ್ಕೆ ಬರುತ್ತಿದೆ. ಆದ್ದರಿಂದ ಕೆರೆ ಕೋಡಿಯಲ್ಲಿ ಕಸವನ್ನು ಸುರಿಯದಂತೆ ಗ್ರಾಮ ಪಂಚಾಯ್ತಿ ಕ್ರಮ ಕೈಗೊಳ್ಳಬೇಕು’ ಎಂದು ಗ್ರಾಮದ ನಿವಾಸಿ ಮಂಜುಳಮ್ಮ ಆಗ್ರಹಿಸಿದರು.<br /> <br /> ‘ನೊರೆ ಕಾಣಿಸಿಕೊಳ್ಳುವ ಮೊದಲು ಸೊಳ್ಳೆಗಳ ಹಾವಳಿ ಕಡಿಮೆಯಾಗಿತ್ತು. ಆದರೆ ಇತ್ತೀಚೆಗೆ ಸೊಳ್ಳೆಗಳ ಹಾವಳಿ ಬಹಳ ಹೆಚ್ಚಾಗಿದೆ. ಈ ಬಗ್ಗೆ ಗ್ರಾಮ ಪಂಚಾಯ್ತಿ ಕಚೇರಿಗೆ ದೂರು ನೀಡಿದ್ದೇವೆ. ಸೊಳ್ಳೆಗಳ ಹಾವಳಿಯನ್ನು ತಡೆಗಟ್ಟಲು ಔಷಧಿ ಸಿಂಪಡಿಸುವಂತೆ ಕೋರಿದ್ದೆವು. ಆದರೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಅವರು ದೂರಿದರು.<br /> <br /> <strong>ಬಿಬಿಎಂಪಿಯಿಂದಲೂ ಕಸ:</strong> ‘ಕೆರೆ ಕಟ್ಟೆಯ ಮೇಲಿನ ರಸ್ತೆ ಬದಿಯಲ್ಲಿ ಬಿಬಿಎಂಪಿ ಪೌರ ಕಾರ್ಮಿಕರು ರಾತ್ರಿವೇಳೆಯಲ್ಲಿ ಲಾರಿಗಟ್ಟಲೇ ಕಸವನ್ನು ಸುರಿದು ಹೋಗುತ್ತಿದ್ದಾರೆ.<br /> <br /> ಈ ಕಸವೂ ಕೆರೆಯನ್ನು ಸೇರುತ್ತಿದೆ. ರಸ್ತೆಯಲ್ಲಿ ಸಂಚರಿಸುವವರು ಕೊಳೆತು ನಾರುವ ಕಸದ ರಾಶಿಯಿಂದಾಗಿ ಮೂಗು ಮುಚ್ಚಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.<br /> <br /> <strong>ಶಾಸಕರ ವಿರುದ್ಧವೂ ಆಕ್ರೋಶ</strong><br /> ‘ಬೆಳ್ಳಂದೂರು ಕೆರೆಯಂತೆಯೇ ರಾಂಪುರ ಕೆರೆಯಲ್ಲಿ ನೊರೆ ಕಾಣಿಸಿಕೊಳ್ಳುತ್ತಿದೆ. ಈ ಬಗ್ಗೆ ಪಾಲಿಕೆಗೆ ದೂರು ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಮಾಲಿನ್ಯ ನಿಯಂತ್ರಣ ಮಂಡಳಿಯಾಗಲಿ, ಕೆರೆ ಅಭಿವೃದ್ಧಿ ಪ್ರಾಧಿಕಾರವಾಗಲಿ ಇತ್ತ ಗಮನಹರಿಸಿಲ್ಲ. ಸ್ಥಳೀಯ ಶಾಸಕರಂತೂ ಸಮಸ್ಯೆಯನ್ನು ಕಿವಿಗೆ ಹಾಕಿಕೊಂಡಿಲ್ಲ. ಈ ಬಗ್ಗೆ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಶಾಸಕರು ಹೇಳುತ್ತಾರೆ’ ಎಂದು ಸ್ಥಳೀಯ ನಿವಾಸಿ ಯಲ್ಲಪ್ಪ ಆರೋಪಿಸಿದರು.</p>.<p>‘ಕೆರೆಗೆ ಕಶ್ಮಲ ಸೇರುತ್ತಿರುವುದನ್ನು ತಡೆಗಟ್ಟಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವನ್ನು ಕೈಗೊಳ್ಳಬೇಕು. ಇಲ್ಲದಿದ್ದರೆ ಗ್ರಾಮಸ್ಥರೆಲ್ಲರೂ ಒಟ್ಟಾಗಿ ಸೇರಿ ಪ್ರತಿಭಟನೆ ನಡೆಸುತ್ತೇವೆ’ ಎಂದು ಅವರು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>