<p><strong>ಸಿದ್ದಾಪುರ</strong>: ಮಾನಸ ಸರೋವರ ಯಾತ್ರೆಗೆ ತೆರಳಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ ಉತ್ತರಾಖಂಡದ ಹೃಷಿಕೇಶದ ಚಿದಾನಂದ ಸರಸ್ವತಿ ಸ್ವಾಮೀಜಿ ಅವರ ಆಶ್ರಮದಲ್ಲಿ ಕ್ಷೇಮದಿಂದ ವಾಸ್ತವ್ಯ ಮಾಡಿದ್ದಾರೆ ಎಂದು ಹವ್ಯಕ ಮಹಾಮಂಡಳದ ಅಧ್ಯಕ್ಷ ಆರ್.ಎಸ್.ಹೆಗಡೆ ಹರಗಿ ತಿಳಿಸಿದ್ದಾರೆ.<br /> <br /> ಶ್ರೀಗಳೊಂದಿಗೆ ಯಾತ್ರೆಗೆ ತೆರಳಿರುವ ಅವರು, ಅಲ್ಲಿ ಸುರಿದ ಭಾರಿ ಮಳೆಯಿಂದ ಮಠದ ಶಿಷ್ಯರು ಆತಂಕಕ್ಕೆ ಒಳಗಾಗಿರುವ ಹಿನ್ನೆಲೆಯಲ್ಲಿ ಈ ಹೇಳಿಕೆ ನೀಡಿದ್ದಾರೆ.<br /> <br /> ಬುಧವಾರ ಅಲ್ಲಿ ನದಿಯ ಪ್ರವಾಹ ಇಳಿಮುಖವಾಗಿದ್ದು ರಾಘವೇಶ್ವರ ಭಾರತಿ ಸ್ವಾಮೀಜಿ ಇದೇ 23ರಂದು ನವದೆಹಲಿ ಮೂಲಕ ಮಾನಸ ಸರೋವರ ಪರಿಕ್ರಮ ಮುಂದುವರಿಸುವರು. ಆದ್ದರಿಂದ ಯಾರೂ ಆತಂಕಗೊಳ್ಳಬೇಕಾಗಿಲ್ಲ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿದ್ದಾಪುರ</strong>: ಮಾನಸ ಸರೋವರ ಯಾತ್ರೆಗೆ ತೆರಳಿರುವ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತಿ ಸ್ವಾಮೀಜಿ ಉತ್ತರಾಖಂಡದ ಹೃಷಿಕೇಶದ ಚಿದಾನಂದ ಸರಸ್ವತಿ ಸ್ವಾಮೀಜಿ ಅವರ ಆಶ್ರಮದಲ್ಲಿ ಕ್ಷೇಮದಿಂದ ವಾಸ್ತವ್ಯ ಮಾಡಿದ್ದಾರೆ ಎಂದು ಹವ್ಯಕ ಮಹಾಮಂಡಳದ ಅಧ್ಯಕ್ಷ ಆರ್.ಎಸ್.ಹೆಗಡೆ ಹರಗಿ ತಿಳಿಸಿದ್ದಾರೆ.<br /> <br /> ಶ್ರೀಗಳೊಂದಿಗೆ ಯಾತ್ರೆಗೆ ತೆರಳಿರುವ ಅವರು, ಅಲ್ಲಿ ಸುರಿದ ಭಾರಿ ಮಳೆಯಿಂದ ಮಠದ ಶಿಷ್ಯರು ಆತಂಕಕ್ಕೆ ಒಳಗಾಗಿರುವ ಹಿನ್ನೆಲೆಯಲ್ಲಿ ಈ ಹೇಳಿಕೆ ನೀಡಿದ್ದಾರೆ.<br /> <br /> ಬುಧವಾರ ಅಲ್ಲಿ ನದಿಯ ಪ್ರವಾಹ ಇಳಿಮುಖವಾಗಿದ್ದು ರಾಘವೇಶ್ವರ ಭಾರತಿ ಸ್ವಾಮೀಜಿ ಇದೇ 23ರಂದು ನವದೆಹಲಿ ಮೂಲಕ ಮಾನಸ ಸರೋವರ ಪರಿಕ್ರಮ ಮುಂದುವರಿಸುವರು. ಆದ್ದರಿಂದ ಯಾರೂ ಆತಂಕಗೊಳ್ಳಬೇಕಾಗಿಲ್ಲ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>