<p><strong>ಹೊನ್ನಾಳಿ:</strong> ಕಲುಷಿತಗೊಂಡಿರುವ ಇಂದಿನ ರಾಜಕಾರಣದಲ್ಲಿ ಗುರುಗಳ ಮಾರ್ಗದರ್ಶನ ಅವಶ್ಯಕತೆ ಇದೆಯಾದ್ದರಿಂದ ನಾನು ಹಿರೇಕಲ್ಮಠ ಶ್ರೀಗಳ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸುವೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.<br /> <br /> ಅವರು ಶನಿವಾರ ಹಿರೇಕಲ್ಮಠದಲ್ಲಿ ಹಮ್ಮಿಕೊಂಡಿದ್ದ ಅಮಾವಾಸ್ಯೆ ಧರ್ಮ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.<br /> ಮತದಾರರ ಮನಸ್ಸೆಳೆಯಲು ಅನೇಕ ಮಾರ್ಗಗಳನ್ನು ಅನುಸರಿಸಲಾಯಿತು ಇಂದು ಯಾವ ರಾಜಕಾರಣಿಯು ಪ್ರಾಮಾಣಿಕನಾಗಿ ಉಳಿದಿಲ್ಲ, ಇದರ ಜತೆ ಮತದಾರರು ಹೊರತಾಗಿಲ್ಲ ಎಂದು ಅವರು ತಮ್ಮ ಮನದಾಳದ ಮಾತನ್ನು ಹೇಳಿದರು.<br /> <br /> ಮುಂದಿನ ದಿನಗಳಲ್ಲಿ ಹಿರೇಕಲ್ಮಠದ ಶ್ರೀಗಳು ತಿಂಗಳಿಗೊಂದು ಬಾರಿ ಕರೆಸಿ, ತಾಲೂಕಿನಲ್ಲಿರುವ ಸಮಸ್ಯಗಳು ತಮ್ಮ ಗಮನಕ್ಕೆ ಬಂದು ಅದನು ತಿಳಿಸಿ ಕೆಲಸ ಮಾಡುವ ಬಗ್ಗೆ ಸೂಚಿಸಿದರೆ ಅದರಂತೆ ಶಿರಾಸವಹಿಸಿ ಕೆಲಸ ಮಾಡುವೆ ಎಂದು ಅವರು ಹೇಳಿದರು.\</p>.<p>ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಶಾಸಕರು ಪಕ್ಷಭೇದ ಮಾಡದೆ ತಾಲೂಕಿನ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು. ಬಡತನ ರೇಖೆಗಿಂತ ಕೆಳಗಿರುವವರನ್ನು ಗುರ್ತಿಸಿ ಅವರ ಶ್ರೇಯೋಭಿವೃದ್ಧಿಗೆ ಶ್ರಮಿಸಿ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂದು ಶಾಸಕರಿಗೆ ಸೂಚಿಸಿದರು.</p>.<p>ಇದೇ ಸಂದರ್ಭದಲ್ಲಿ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ವರ್ತಕ ನ್ಯಾಮತಿ ಕೆ.ವಿ.ಮನೋಹರ್. ಚನ್ನಪ್ಪಸ್ವಾಮಿ ವಿದ್ಯಾಪೀಠದ ಕಾರ್ಯದರ್ಶಿಗಳಾದ ಚನ್ನಯ್ಯ ಬೆನ್ನೂರುಮಠ, ಎಂ.ಈಶ್ವರಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ:</strong> ಕಲುಷಿತಗೊಂಡಿರುವ ಇಂದಿನ ರಾಜಕಾರಣದಲ್ಲಿ ಗುರುಗಳ ಮಾರ್ಗದರ್ಶನ ಅವಶ್ಯಕತೆ ಇದೆಯಾದ್ದರಿಂದ ನಾನು ಹಿರೇಕಲ್ಮಠ ಶ್ರೀಗಳ ಮಾರ್ಗದರ್ಶನದಲ್ಲಿ ಕಾರ್ಯ ನಿರ್ವಹಿಸುವೆ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೇಳಿದರು.<br /> <br /> ಅವರು ಶನಿವಾರ ಹಿರೇಕಲ್ಮಠದಲ್ಲಿ ಹಮ್ಮಿಕೊಂಡಿದ್ದ ಅಮಾವಾಸ್ಯೆ ಧರ್ಮ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.<br /> ಮತದಾರರ ಮನಸ್ಸೆಳೆಯಲು ಅನೇಕ ಮಾರ್ಗಗಳನ್ನು ಅನುಸರಿಸಲಾಯಿತು ಇಂದು ಯಾವ ರಾಜಕಾರಣಿಯು ಪ್ರಾಮಾಣಿಕನಾಗಿ ಉಳಿದಿಲ್ಲ, ಇದರ ಜತೆ ಮತದಾರರು ಹೊರತಾಗಿಲ್ಲ ಎಂದು ಅವರು ತಮ್ಮ ಮನದಾಳದ ಮಾತನ್ನು ಹೇಳಿದರು.<br /> <br /> ಮುಂದಿನ ದಿನಗಳಲ್ಲಿ ಹಿರೇಕಲ್ಮಠದ ಶ್ರೀಗಳು ತಿಂಗಳಿಗೊಂದು ಬಾರಿ ಕರೆಸಿ, ತಾಲೂಕಿನಲ್ಲಿರುವ ಸಮಸ್ಯಗಳು ತಮ್ಮ ಗಮನಕ್ಕೆ ಬಂದು ಅದನು ತಿಳಿಸಿ ಕೆಲಸ ಮಾಡುವ ಬಗ್ಗೆ ಸೂಚಿಸಿದರೆ ಅದರಂತೆ ಶಿರಾಸವಹಿಸಿ ಕೆಲಸ ಮಾಡುವೆ ಎಂದು ಅವರು ಹೇಳಿದರು.\</p>.<p>ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಶಾಸಕರು ಪಕ್ಷಭೇದ ಮಾಡದೆ ತಾಲೂಕಿನ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಹೇಳಿದರು. ಬಡತನ ರೇಖೆಗಿಂತ ಕೆಳಗಿರುವವರನ್ನು ಗುರ್ತಿಸಿ ಅವರ ಶ್ರೇಯೋಭಿವೃದ್ಧಿಗೆ ಶ್ರಮಿಸಿ ಸಮಾಜದ ಮುಖ್ಯವಾಹಿನಿಗೆ ತರಬೇಕು ಎಂದು ಶಾಸಕರಿಗೆ ಸೂಚಿಸಿದರು.</p>.<p>ಇದೇ ಸಂದರ್ಭದಲ್ಲಿ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ವರ್ತಕ ನ್ಯಾಮತಿ ಕೆ.ವಿ.ಮನೋಹರ್. ಚನ್ನಪ್ಪಸ್ವಾಮಿ ವಿದ್ಯಾಪೀಠದ ಕಾರ್ಯದರ್ಶಿಗಳಾದ ಚನ್ನಯ್ಯ ಬೆನ್ನೂರುಮಠ, ಎಂ.ಈಶ್ವರಪ್ಪ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>