<p><strong>ಬೆಂಗಳೂರು: </strong>ಸರ್ಕಾರದ ವತಿಯಿಂದ ಕೈಗೊಳ್ಳುವ ಕಾಮಗಾರಿಗಳ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಎಲ್ಲ ಸಂದರ್ಭದಲ್ಲೂ ಅನುಮಾನ ವ್ಯಕ್ತವಾಗುವಂತಹ ವಾತಾವರಣ ನಿರ್ಮಾಣವಾಗಿದೆ. ಈ ವಿಷಯದಲ್ಲಿ ಅಧಿಕಾರಿಗಳು ರಾಜಕಾರಣಿಗಳ ತಾಳಕ್ಕೆ ತಕ್ಕಂತೆ ಕುಣಿಯಬಾರದು ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಎಚ್ಚರಿಕೆ ನೀಡಿದರು.<br /> <br /> ಕಾಮಗಾರಿ ಗುಣನಿಯಂತ್ರಣ ಕಾರ್ಯಪಡೆ ವತಿಯಿಂದ ಗುರುವಾರ ವಿಕಾಸಸೌಧದಲ್ಲಿ ನಡೆದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, `ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಾಗ ಇರುವ ಹುಮ್ಮಸ್ಸು, ಅವುಗಳ ಅನುಷ್ಠಾನ ಸಂದರ್ಭದಲ್ಲೂ ಇರಬೇಕು. ಕಾಮಗಾರಿಗಳ ಗುಣಮಟ್ಟಕ್ಕೆ ಸಂಬಂಧಿಸಿದಂತೆ ರಾಜಕಾರಣಿಗಳು ಅಧಿಕಾರಿಗಳತ್ತ ಕೈತೋರಿಸಿ ತಪ್ಪಿಸಿಕೊಳ್ಳುತ್ತಾರೆ. ಇದು ಸರಿಯಲ್ಲ. ಕಾಮಗಾರಿಗಳ ಗುಣಮಟ್ಟದ ವಿಷಯದಲ್ಲಿ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ರಾಜಕಾರಣಿಗಳೂ ಪ್ರಾಮಾಣಿಕವಾಗಿರಬೇಕು~ ಎಂದರು.<br /> <br /> ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಪರಸ್ಪರ ವಿಶ್ವಾಸದಿಂದ ಕೆಲಸ ಮಾಡಬೇಕು. ಇದರಿಂದ ಕಳಪೆ ಕಾಮಗಾರಿಗಳು ನಡೆಯದಂತೆ ತಡೆಯಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಸರ್ಕಾರದ ಎಲ್ಲ ಕಾಮಗಾರಿಗಳ ಬಗ್ಗೆಯೂ ಜನರು ಅಪನಂಬಿಕೆ ಮತ್ತು ಸಂಶಯದಿಂದ ಮಾತನಾಡುವ ಪರಿಸ್ಥಿತಿ ಮುಂದುವರಿಯುತ್ತದೆ ಎಂದರು.<br /> <br /> ನಿರ್ಮಾಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಿಯಮಗಳಲ್ಲಿ ಏಕರೂಪತೆ ತರುವ ಅಗತ್ಯವಿದೆ. ಕಾಮಗಾರಿಗಳ ಗುಣಮಟ್ಟ ನಿಯಂತ್ರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳುವಂತೆ ಕಾರ್ಯಪಡೆ ಶಿಫಾರಸು ಮಾಡಿದೆ. ಅವುಗಳನ್ನು ಜಾರಿಗೆ ತರಲು ಸರ್ಕಾರ ಪ್ರಯತ್ನಿಸಲಿದೆ ಎಂದರು.<br /> <br /> ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ರಾಮಚಂದ್ರಗೌಡ ಮಾತನಾಡಿ, ರಾಜ್ಯದಲ್ಲಿ ನಿರ್ಮಾಣ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ. ಈ ದಿಸೆಯಲ್ಲಿ ಪ್ರತ್ಯೇಕ ಪ್ರಾಧಿಕಾರವೊಂದನ್ನು ಅಸ್ತಿತ್ವಕ್ಕೆ ತರಬೇಕು ಎಂದು ಸಲಹೆ ಮಾಡಿದರು.<br /> ಬಂದರು ಸಚಿವ ಜೆ.ಕೃಷ್ಣ ಪಾಲೇಮಾರ್, ಕಾರ್ಯಪಡೆ ಅಧ್ಯಕ್ಷ ಸಿ.ಎಸ್.ವಿಶ್ವನಾಥ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸರ್ಕಾರದ ವತಿಯಿಂದ ಕೈಗೊಳ್ಳುವ ಕಾಮಗಾರಿಗಳ ಗುಣಮಟ್ಟಕ್ಕೆ ಸಂಬಂಧಿಸಿದಂತೆ ಎಲ್ಲ ಸಂದರ್ಭದಲ್ಲೂ ಅನುಮಾನ ವ್ಯಕ್ತವಾಗುವಂತಹ ವಾತಾವರಣ ನಿರ್ಮಾಣವಾಗಿದೆ. ಈ ವಿಷಯದಲ್ಲಿ ಅಧಿಕಾರಿಗಳು ರಾಜಕಾರಣಿಗಳ ತಾಳಕ್ಕೆ ತಕ್ಕಂತೆ ಕುಣಿಯಬಾರದು ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಎಚ್ಚರಿಕೆ ನೀಡಿದರು.<br /> <br /> ಕಾಮಗಾರಿ ಗುಣನಿಯಂತ್ರಣ ಕಾರ್ಯಪಡೆ ವತಿಯಿಂದ ಗುರುವಾರ ವಿಕಾಸಸೌಧದಲ್ಲಿ ನಡೆದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, `ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಾಗ ಇರುವ ಹುಮ್ಮಸ್ಸು, ಅವುಗಳ ಅನುಷ್ಠಾನ ಸಂದರ್ಭದಲ್ಲೂ ಇರಬೇಕು. ಕಾಮಗಾರಿಗಳ ಗುಣಮಟ್ಟಕ್ಕೆ ಸಂಬಂಧಿಸಿದಂತೆ ರಾಜಕಾರಣಿಗಳು ಅಧಿಕಾರಿಗಳತ್ತ ಕೈತೋರಿಸಿ ತಪ್ಪಿಸಿಕೊಳ್ಳುತ್ತಾರೆ. ಇದು ಸರಿಯಲ್ಲ. ಕಾಮಗಾರಿಗಳ ಗುಣಮಟ್ಟದ ವಿಷಯದಲ್ಲಿ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ರಾಜಕಾರಣಿಗಳೂ ಪ್ರಾಮಾಣಿಕವಾಗಿರಬೇಕು~ ಎಂದರು.<br /> <br /> ಚುನಾಯಿತ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಪರಸ್ಪರ ವಿಶ್ವಾಸದಿಂದ ಕೆಲಸ ಮಾಡಬೇಕು. ಇದರಿಂದ ಕಳಪೆ ಕಾಮಗಾರಿಗಳು ನಡೆಯದಂತೆ ತಡೆಯಲು ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಸರ್ಕಾರದ ಎಲ್ಲ ಕಾಮಗಾರಿಗಳ ಬಗ್ಗೆಯೂ ಜನರು ಅಪನಂಬಿಕೆ ಮತ್ತು ಸಂಶಯದಿಂದ ಮಾತನಾಡುವ ಪರಿಸ್ಥಿತಿ ಮುಂದುವರಿಯುತ್ತದೆ ಎಂದರು.<br /> <br /> ನಿರ್ಮಾಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಿಯಮಗಳಲ್ಲಿ ಏಕರೂಪತೆ ತರುವ ಅಗತ್ಯವಿದೆ. ಕಾಮಗಾರಿಗಳ ಗುಣಮಟ್ಟ ನಿಯಂತ್ರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳುವಂತೆ ಕಾರ್ಯಪಡೆ ಶಿಫಾರಸು ಮಾಡಿದೆ. ಅವುಗಳನ್ನು ಜಾರಿಗೆ ತರಲು ಸರ್ಕಾರ ಪ್ರಯತ್ನಿಸಲಿದೆ ಎಂದರು.<br /> <br /> ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ರಾಮಚಂದ್ರಗೌಡ ಮಾತನಾಡಿ, ರಾಜ್ಯದಲ್ಲಿ ನಿರ್ಮಾಣ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕಿದೆ. ಈ ದಿಸೆಯಲ್ಲಿ ಪ್ರತ್ಯೇಕ ಪ್ರಾಧಿಕಾರವೊಂದನ್ನು ಅಸ್ತಿತ್ವಕ್ಕೆ ತರಬೇಕು ಎಂದು ಸಲಹೆ ಮಾಡಿದರು.<br /> ಬಂದರು ಸಚಿವ ಜೆ.ಕೃಷ್ಣ ಪಾಲೇಮಾರ್, ಕಾರ್ಯಪಡೆ ಅಧ್ಯಕ್ಷ ಸಿ.ಎಸ್.ವಿಶ್ವನಾಥ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>