<p><strong>ತಲಘಟ್ಟಪುರ:</strong> ಅಂಜನಾಪುರ ವಾರ್ಡ್ ವ್ಯಾಪ್ತಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೈಗೊಂಡಿರುವ ರೂ. 1.40 ಕೋಟಿ ವೆಚ್ಚದ ರಾಜಕಾಲುವೆ ಅಭಿವೃದ್ಧಿ ಕಾಮಗಾರಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ಇತ್ತೀಚೆಗೆ ಚಾಲನೆ ನೀಡಿದರು.<br /> <br /> ರಾಜಕಾಲುವೆಯಲ್ಲಿ ನೀರು ಸರಾಗ ಹರಿಯದೇ ಹರಿನಗರ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುತ್ತಮುತ್ತಲ ಪ್ರದೇಶಗಳಲ್ಲಿ ಜನರು ನರಕ ಯಾತನೆ ಅನುಭವಿಸುವಂತಾಗಿತ್ತು. ಗಾಳಿ ಮತ್ತು ಮಳೆ ಬಂದಾಗ ಅಲ್ಲಿನ ಜನರು ಕೆಟ್ಟವಾಸನೆ ಕುಡಿಯುವುದರ ಜೊತೆಗೆ ಅನೇಕ ಕಾಯಿಲೆಗಳಿಂದ ತುತ್ತಾಗುತ್ತಿದ್ದರು. ಈ ಬಗ್ಗೆ `ಪ್ರಜಾವಾಣಿ~ಯಲ್ಲಿ ಈಚೆಗೆ ವರದಿ ಪ್ರಕಟವಾಗಿತ್ತು.<br /> <br /> ರಾಜಕಾಲುವೆ ಅಭಿವೃದ್ಧಿಗೆ ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ ನಾಗರಿಕರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.<br /> <br /> ಕೃಷ್ಣಪ್ಪ ಮಾತನಾಡಿ `ಅತಿ ಹಿಂದುಳಿದ ಮತ್ತು ಹೊಸದಾಗಿ ಪಾಲಿಕೆ ವ್ಯಾಪ್ತಿಗೆ ಪ್ರದೇಶಗಳಿಗೆ ಪಾಲಿಕೆ ಹೆಚ್ಚಿನ ಅನುದಾನ ನೀಡಬೇಕು. <br /> <br /> ಹರಿನಗರ, ಕೊತ್ತನೂರು ಸುತ್ತಮುತ್ತ ಖಾಸಗಿ ಲೇಔಟ್, ಬಹುಮಹಡಿ ಕಟ್ಟಡ, ಮನೆ ನಿರ್ಮಿಸಿರುವುದರಿಂದ ಶೌಚಾಲಯದ ನೀರು ತಗ್ಗುಪ್ರದೇಶಗಳಿಗೆ ಹರಿದು ಸಮಸ್ಯೆ ಉಂಟಾಗಿದೆ. ಈ ಸಮಸ್ಯೆಯನ್ನು ಶೀಘ್ರ ಬಗೆಹರಿಸಲಾಗುವುದು~ ಎಂದರು.<br /> <br /> ಇದೇ ಸಂದರ್ಭದಲ್ಲಿ ಶಾಸಕರು, ಸ್ಥಳೀಯ ಪಾಲಿಕೆ ಸದಸ್ಯ ಎಸ್.ಗಂಗಾಧರ್ ಅವರ ಜತೆಗೂಡಿ ತಿಪ್ಪಸಂದ್ರ ಕಾಲೋನಿ , ಗೊಲ್ಲಹಳ್ಳಿ ಗ್ರಾಮದಲ್ಲಿ ಸಿಮೆಂಟ್ ರಸ್ತೆ, ರಸ್ತೆ ಅಭಿವೃದ್ದಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಲಘಟ್ಟಪುರ:</strong> ಅಂಜನಾಪುರ ವಾರ್ಡ್ ವ್ಯಾಪ್ತಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೈಗೊಂಡಿರುವ ರೂ. 1.40 ಕೋಟಿ ವೆಚ್ಚದ ರಾಜಕಾಲುವೆ ಅಭಿವೃದ್ಧಿ ಕಾಮಗಾರಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಎಂ.ಕೃಷ್ಣಪ್ಪ ಇತ್ತೀಚೆಗೆ ಚಾಲನೆ ನೀಡಿದರು.<br /> <br /> ರಾಜಕಾಲುವೆಯಲ್ಲಿ ನೀರು ಸರಾಗ ಹರಿಯದೇ ಹರಿನಗರ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುತ್ತಮುತ್ತಲ ಪ್ರದೇಶಗಳಲ್ಲಿ ಜನರು ನರಕ ಯಾತನೆ ಅನುಭವಿಸುವಂತಾಗಿತ್ತು. ಗಾಳಿ ಮತ್ತು ಮಳೆ ಬಂದಾಗ ಅಲ್ಲಿನ ಜನರು ಕೆಟ್ಟವಾಸನೆ ಕುಡಿಯುವುದರ ಜೊತೆಗೆ ಅನೇಕ ಕಾಯಿಲೆಗಳಿಂದ ತುತ್ತಾಗುತ್ತಿದ್ದರು. ಈ ಬಗ್ಗೆ `ಪ್ರಜಾವಾಣಿ~ಯಲ್ಲಿ ಈಚೆಗೆ ವರದಿ ಪ್ರಕಟವಾಗಿತ್ತು.<br /> <br /> ರಾಜಕಾಲುವೆ ಅಭಿವೃದ್ಧಿಗೆ ಕ್ರಮ ಕೈಗೊಂಡಿರುವ ಹಿನ್ನೆಲೆಯಲ್ಲಿ ನಾಗರಿಕರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.<br /> <br /> ಕೃಷ್ಣಪ್ಪ ಮಾತನಾಡಿ `ಅತಿ ಹಿಂದುಳಿದ ಮತ್ತು ಹೊಸದಾಗಿ ಪಾಲಿಕೆ ವ್ಯಾಪ್ತಿಗೆ ಪ್ರದೇಶಗಳಿಗೆ ಪಾಲಿಕೆ ಹೆಚ್ಚಿನ ಅನುದಾನ ನೀಡಬೇಕು. <br /> <br /> ಹರಿನಗರ, ಕೊತ್ತನೂರು ಸುತ್ತಮುತ್ತ ಖಾಸಗಿ ಲೇಔಟ್, ಬಹುಮಹಡಿ ಕಟ್ಟಡ, ಮನೆ ನಿರ್ಮಿಸಿರುವುದರಿಂದ ಶೌಚಾಲಯದ ನೀರು ತಗ್ಗುಪ್ರದೇಶಗಳಿಗೆ ಹರಿದು ಸಮಸ್ಯೆ ಉಂಟಾಗಿದೆ. ಈ ಸಮಸ್ಯೆಯನ್ನು ಶೀಘ್ರ ಬಗೆಹರಿಸಲಾಗುವುದು~ ಎಂದರು.<br /> <br /> ಇದೇ ಸಂದರ್ಭದಲ್ಲಿ ಶಾಸಕರು, ಸ್ಥಳೀಯ ಪಾಲಿಕೆ ಸದಸ್ಯ ಎಸ್.ಗಂಗಾಧರ್ ಅವರ ಜತೆಗೂಡಿ ತಿಪ್ಪಸಂದ್ರ ಕಾಲೋನಿ , ಗೊಲ್ಲಹಳ್ಳಿ ಗ್ರಾಮದಲ್ಲಿ ಸಿಮೆಂಟ್ ರಸ್ತೆ, ರಸ್ತೆ ಅಭಿವೃದ್ದಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>