<p><strong>ಬೆಂಗಳೂರು:</strong> `ರಾಜಕಾಲುವೆಗಳ ಒತ್ತುವರಿ ತೆರವಿಗೆ ಈಗಾಗಲೇ ಪೀಣ್ಯ ಕೈಗಾರಿಕಾ ಪ್ರದೇಶದಿಂದ ಕಾರ್ಯಾಚರಣೆ ಆರಂಭಿಸಲಾಗಿದೆ. ನಗರದ ಇತರ ಭಾಗಗಳಲ್ಲಿ ನಡೆದ ಒತ್ತುವರಿಯನ್ನೂ ತೆರವುಗೊಳಿಸಲಾಗುವುದು' ಎಂದು ಬಿಬಿಎಂಪಿ ಆಯುಕ್ತ ಎಂ.ಲಕ್ಷ್ಮೀನಾರಾಯಣ ತಿಳಿಸಿದರು.<br /> <br /> `ನಗರದ 857 ಕಿ.ಮೀ. ಉದ್ದದ ರಾಜಕಾಲುವೆ ಮತ್ತು ಅದರ ಸುತ್ತಲಿನ ಪ್ರದೇಶದಲ್ಲಿ ರೂ7,500 ಕೋಟಿ ಮೌಲ್ಯದ ಭೂಮಿ ಅತಿಕ್ರಮಣಗೊಂಡಿದೆ' ಎಂಬ ಬಿಜೆಪಿ ಸದಸ್ಯ ಎನ್.ಆರ್. ರಮೇಶ್ ಅವರ ದೂರಿಗೆ ಈ ರೀತಿ ಪ್ರತಿಕ್ರಿಯಿಸಿದರು.<br /> <br /> `ರಾಜಕಾಲುವೆಗಳ ಸಮಗ್ರ ಸಮೀಕ್ಷೆ ನಡೆಸಿ, ಅತಿಕ್ರಮಣವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು' ಎಂದ ಅವರು, `ಒತ್ತುವರಿ ಮಾಡಿಕೊಂಡ ಪ್ರತಿಷ್ಠಿತ ಸಂಸ್ಥೆಗಳ ಕಟ್ಟಡಗಳನ್ನೂ ಬಿಡುವುದಿಲ್ಲ' ಎಂದು ತಿಳಿಸಿದರು.<br /> <br /> `ರೂ1.5 ಲಕ್ಷ ವೆಚ್ಚದಲ್ಲಿ ಉಪಗ್ರಹದ ಮೂಲಕ ರಾಜಕಾಲುವೆಗಳ ನಕ್ಷೆ ತೆಗೆಯಿಸಲಾಗಿದ್ದು, ಭಾರಿ ಒತ್ತುವರಿ ಕಂಡುಬಂದಿದೆ. ಪ್ರತಿಷ್ಠಿತ ಸಂಸ್ಥೆಗಳೇ ಈ ಒತ್ತುವರಿ ಮಾಡಿಕೊಂಡಿವೆ. ಹೀಗಾಗಿ ಮಳೆ ನೀರು ಹರಿಯಲು ಸ್ಥಳವೇ ಇಲ್ಲದಂತಾಗಿದೆ' ಎಂದು ರಮೇಶ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ರಾಜಕಾಲುವೆಗಳ ಒತ್ತುವರಿ ತೆರವಿಗೆ ಈಗಾಗಲೇ ಪೀಣ್ಯ ಕೈಗಾರಿಕಾ ಪ್ರದೇಶದಿಂದ ಕಾರ್ಯಾಚರಣೆ ಆರಂಭಿಸಲಾಗಿದೆ. ನಗರದ ಇತರ ಭಾಗಗಳಲ್ಲಿ ನಡೆದ ಒತ್ತುವರಿಯನ್ನೂ ತೆರವುಗೊಳಿಸಲಾಗುವುದು' ಎಂದು ಬಿಬಿಎಂಪಿ ಆಯುಕ್ತ ಎಂ.ಲಕ್ಷ್ಮೀನಾರಾಯಣ ತಿಳಿಸಿದರು.<br /> <br /> `ನಗರದ 857 ಕಿ.ಮೀ. ಉದ್ದದ ರಾಜಕಾಲುವೆ ಮತ್ತು ಅದರ ಸುತ್ತಲಿನ ಪ್ರದೇಶದಲ್ಲಿ ರೂ7,500 ಕೋಟಿ ಮೌಲ್ಯದ ಭೂಮಿ ಅತಿಕ್ರಮಣಗೊಂಡಿದೆ' ಎಂಬ ಬಿಜೆಪಿ ಸದಸ್ಯ ಎನ್.ಆರ್. ರಮೇಶ್ ಅವರ ದೂರಿಗೆ ಈ ರೀತಿ ಪ್ರತಿಕ್ರಿಯಿಸಿದರು.<br /> <br /> `ರಾಜಕಾಲುವೆಗಳ ಸಮಗ್ರ ಸಮೀಕ್ಷೆ ನಡೆಸಿ, ಅತಿಕ್ರಮಣವನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲಾಗುವುದು' ಎಂದ ಅವರು, `ಒತ್ತುವರಿ ಮಾಡಿಕೊಂಡ ಪ್ರತಿಷ್ಠಿತ ಸಂಸ್ಥೆಗಳ ಕಟ್ಟಡಗಳನ್ನೂ ಬಿಡುವುದಿಲ್ಲ' ಎಂದು ತಿಳಿಸಿದರು.<br /> <br /> `ರೂ1.5 ಲಕ್ಷ ವೆಚ್ಚದಲ್ಲಿ ಉಪಗ್ರಹದ ಮೂಲಕ ರಾಜಕಾಲುವೆಗಳ ನಕ್ಷೆ ತೆಗೆಯಿಸಲಾಗಿದ್ದು, ಭಾರಿ ಒತ್ತುವರಿ ಕಂಡುಬಂದಿದೆ. ಪ್ರತಿಷ್ಠಿತ ಸಂಸ್ಥೆಗಳೇ ಈ ಒತ್ತುವರಿ ಮಾಡಿಕೊಂಡಿವೆ. ಹೀಗಾಗಿ ಮಳೆ ನೀರು ಹರಿಯಲು ಸ್ಥಳವೇ ಇಲ್ಲದಂತಾಗಿದೆ' ಎಂದು ರಮೇಶ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>