<p><strong>ಬೆಂಗಳೂರು:</strong> `ಬೃಹತ್ ಬೆಂಗಳೂರಿನಲ್ಲಿ ಒಟ್ಟು 840 ಕಿಲೋ ಮೀಟರ್ ರಾಜಕಾಲುವೆ ಇದೆ. ಇದರಲ್ಲಿ ಕೆಲಭಾಗ ಒತ್ತುವರಿಯಾಗಿದ್ದರೆ, ಇನ್ನೂ ಕೆಲವು ಕಡೆಗಳಲ್ಲಿ ಮಾರ್ಗ ಬದಲಾಯಿಸಿ ಕಾಲುವೆ ನಿರ್ಮಿಸಲಾಗಿದೆ. ಇದನ್ನು ಸದ್ಯದಲ್ಲೇ ಸರಿಪಡಿಸಲು ಕ್ರಮ ಕೈಗೊಳ್ಳಲಾಗುತ್ತದೆ' ಎಂದು ಬಿಬಿಎಂಪಿ ಆಯುಕ್ತ ಎಂ.ಲಕ್ಷ್ಮೀನಾರಾಯಣ ತಿಳಿಸಿದರು.<br /> <br /> ಬೆಂಗಳೂರು ವಕೀಲರ ಸಂಘ ಬುಧವಾರ `ಬೆಂಗಳೂರು ನಗರದ ಸ್ವಚ್ಛತೆ' ಕುರಿತಂತೆ ಏರ್ಪಡಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜಕಾಲುವೆಯನ್ನು ಮಾರ್ಗ ಬದಲಿಸಿ ಕಟ್ಟಿರುವ ಕಾರಣ ನೀರು ಸರಾಗವಾಗಿ ಹರಿಯಲು ತೊಂದರೆಯಾಗುತ್ತಿದೆ ಎಂದರು.<br /> <br /> `ರಾಜಕಾಲುವೆಗಳ ಒಳಭಾಗದ ಗೋಡೆಗಳನ್ನು ಕಲ್ಲುಗಳಿಂದ ನಿರ್ಮಿಸಿದ್ದು, ಅದು ನೀರಿನ ಹರಿಯುವಿಕೆಯಿಂದ ಕೆಳಭಾಗದಲ್ಲಿ ಕುಸಿಯುತ್ತಿದೆ. ಇದರಿಂದಾಗಿ ನೀರು ಹರಿಯಲು ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಕ್ರೀಟ್ ಬಳಸಿ ಮತ್ತೆ ಗೋಡೆಗಳನ್ನು ನಿರ್ಮಿಸುವ ಅಗತ್ಯವಿದೆ' ಎಂದು ತಿಳಿಸಿದರು.<br /> <br /> `ನಗರದ ಸ್ವಚ್ಛತೆಗಾಗಿ 18ರಿಂದ 20 ಸಾವಿರ ಪೌರ ಕಾರ್ಮಿಕರು ನಿತ್ಯ ಎರಡು ಪಾಳಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ ಅಚ್ಚುಕಟ್ಟಾಗಿ ಕೆಲಸ ಮಾಡುವ ಕಾರ್ಮಿಕರ ಸಂಖ್ಯೆ ಈಗ ಕಡಿಮೆಯಾಗುತ್ತಿದೆ' ಎಂದು ಬೇಸರ ವ್ಯಕ್ತಪಡಿಸಿದರು.<br /> <br /> ಹೈಕೋರ್ಟ್ ನ್ಯಾಯಮೂರ್ತಿ ಕೆ. ಶ್ರೀಧರ್ ರಾವ್ ಮಾತನಾಡಿ, `ಜನಸಂಖ್ಯೆಗೆ ಅನುಗುಣವಾಗಿ ನಗರದಲ್ಲಿ ಚರಂಡಿ ವ್ಯವಸ್ಥೆ ಇಲ್ಲ. ಪ್ರಸ್ತುತ ಪರಿಸ್ಥಿತಿಗೆ ತಕ್ಕಂತೆ ಚರಂಡಿಗಳನ್ನು ಮರು ನಿರ್ಮಾಣ ಮಾಡಬೇಕು. ಇರುವ ಸಾರ್ವಜನಿಕ ಶೌಚಾಲಯಗಳ ಜೊತೆ ಮತ್ತಷ್ಟು ಶೌಚಾಲಯಗಳ ನಿರ್ಮಾಣ ಮಾಡಿ, ಅವುಗಳ ನಿರ್ವಹಣೆಯನ್ನು ಖಾಸಗಿಯವರಿಗೆ ವಹಿಸಬೇಕು' ಎಂದು ಸಲಹೆ ನೀಡಿದರು.<br /> <br /> `ನಗರದ ಸಂಚಾರ ದಟ್ಟಣೆ ನಿವಾರಿಸಲು ರಸ್ತೆಗಳ ವಿಸ್ತರಣೆ, ಮೇಲ್ಸೇತುವೆ ಹಾಗೂ ಕೆಳಸೇತುವೆಗಳ ಅಗತ್ಯವಿದೆ. ಇವುಗಳ ನಿರ್ಮಾಣಕ್ಕಾಗಿ ಮರಗಳನ್ನು ಕಡಿಯುವುದು ಸೂಕ್ತವಲ್ಲ. ಅದಕ್ಕೆ ಬದಲಿ ವ್ಯವಸ್ಥೆಯನ್ನು ಹುಡುಕಬೇಕು. ಅಭಿವೃದ್ಧಿ ಹೆಸರಿನಲ್ಲಿ ಪ್ರಕೃತಿಗೆ ಧಕ್ಕೆ ತರಬಾರದು' ಎಂದು ಸಲಹೆ ನೀಡಿದರು.<br /> <br /> `ಉದ್ಯಾನ ನಗರದಲ್ಲಿ ಉದ್ಯಾನಗಳ ನಿರ್ವಹಣೆ ಸರಿಯಾಗಿ ಆಗುತ್ತಿಲ್ಲ. ಒತ್ತುವರಿಯಾಗಿರುವ ಉದ್ಯಾನಗಳನ್ನು ಮತ್ತೆ ವಶಕ್ಕೆ ಪಡೆದು, ನಿರ್ವಹಣೆ ಮಾಡುವತ್ತ ಬಿಬಿಎಂಪಿ ಗಮನ ಹರಿಸಬೇಕು. ಜೊತೆಗೆ ಉಳಿದಿರುವ ಕೆರೆಗಳ ಹೂಳನ್ನು ತೆಗೆದು ಮಳೆ ನೀರನ್ನು ಇಂಗಿಸುವ ವ್ಯವಸ್ಥೆ ಮಾಡಬೇಕು' ಎಂದು ಸಲಹೆ ನೀಡಿದರು.<br /> <br /> `ಹೈಕೋರ್ಟ್ ಹಾಗೂ ಸಿವಿಲ್ ನ್ಯಾಯಾಲಯದ ಆವರಣಗಳಲ್ಲಿ ಕಸವನ್ನು ಸ್ವಚ್ಛಗೊಳಿಸಿ, ಕಸದಬುಟ್ಟಿಗಳನ್ನು ಇರಿಸುವ ಜವಾಬ್ದಾರಿಯನ್ನು ಬಿಬಿಎಂಪಿ ವಹಿಸಿಕೊಳ್ಳಬೇಕು' ಎಂದು ಮನವಿ ಮಾಡಿದರು.</p>.<p><strong>ಜನರಿಗೆ ಅರಿವಿಲ್ಲ</strong><br /> `ನಗರದ ಸ್ವಚ್ಛತೆ ಬಗ್ಗೆ ಜನರಿಗೆ ಅರಿವಿಲ್ಲ. ನಾವು ನಮ್ಮ ನಗರವನ್ನು ಕಸದ ತೊಟ್ಟಿಯಂತೆ ಕಾಣುತ್ತೇವೆ. ಕಂಡ ಕಂಡಲ್ಲಿ ಕಸವನ್ನು ಎಸೆಯುತ್ತೇವೆ. ಜನರ ಈ ಮನೋಭಾವ ಬದಲಾಗದ ಹೊರತು ನಗರವನ್ನು ಸ್ವಚ್ಛವಾಗಿಡಲು ಆಗುವುದಿಲ್ಲ'.<br /> <strong>- ಎಂ.ಲಕ್ಷ್ಮೀನಾರಾಯಣ, ಬಿಬಿಎಂಪಿ ಆಯುಕ್ತ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಬೃಹತ್ ಬೆಂಗಳೂರಿನಲ್ಲಿ ಒಟ್ಟು 840 ಕಿಲೋ ಮೀಟರ್ ರಾಜಕಾಲುವೆ ಇದೆ. ಇದರಲ್ಲಿ ಕೆಲಭಾಗ ಒತ್ತುವರಿಯಾಗಿದ್ದರೆ, ಇನ್ನೂ ಕೆಲವು ಕಡೆಗಳಲ್ಲಿ ಮಾರ್ಗ ಬದಲಾಯಿಸಿ ಕಾಲುವೆ ನಿರ್ಮಿಸಲಾಗಿದೆ. ಇದನ್ನು ಸದ್ಯದಲ್ಲೇ ಸರಿಪಡಿಸಲು ಕ್ರಮ ಕೈಗೊಳ್ಳಲಾಗುತ್ತದೆ' ಎಂದು ಬಿಬಿಎಂಪಿ ಆಯುಕ್ತ ಎಂ.ಲಕ್ಷ್ಮೀನಾರಾಯಣ ತಿಳಿಸಿದರು.<br /> <br /> ಬೆಂಗಳೂರು ವಕೀಲರ ಸಂಘ ಬುಧವಾರ `ಬೆಂಗಳೂರು ನಗರದ ಸ್ವಚ್ಛತೆ' ಕುರಿತಂತೆ ಏರ್ಪಡಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜಕಾಲುವೆಯನ್ನು ಮಾರ್ಗ ಬದಲಿಸಿ ಕಟ್ಟಿರುವ ಕಾರಣ ನೀರು ಸರಾಗವಾಗಿ ಹರಿಯಲು ತೊಂದರೆಯಾಗುತ್ತಿದೆ ಎಂದರು.<br /> <br /> `ರಾಜಕಾಲುವೆಗಳ ಒಳಭಾಗದ ಗೋಡೆಗಳನ್ನು ಕಲ್ಲುಗಳಿಂದ ನಿರ್ಮಿಸಿದ್ದು, ಅದು ನೀರಿನ ಹರಿಯುವಿಕೆಯಿಂದ ಕೆಳಭಾಗದಲ್ಲಿ ಕುಸಿಯುತ್ತಿದೆ. ಇದರಿಂದಾಗಿ ನೀರು ಹರಿಯಲು ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾಂಕ್ರೀಟ್ ಬಳಸಿ ಮತ್ತೆ ಗೋಡೆಗಳನ್ನು ನಿರ್ಮಿಸುವ ಅಗತ್ಯವಿದೆ' ಎಂದು ತಿಳಿಸಿದರು.<br /> <br /> `ನಗರದ ಸ್ವಚ್ಛತೆಗಾಗಿ 18ರಿಂದ 20 ಸಾವಿರ ಪೌರ ಕಾರ್ಮಿಕರು ನಿತ್ಯ ಎರಡು ಪಾಳಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಆದರೆ ಅಚ್ಚುಕಟ್ಟಾಗಿ ಕೆಲಸ ಮಾಡುವ ಕಾರ್ಮಿಕರ ಸಂಖ್ಯೆ ಈಗ ಕಡಿಮೆಯಾಗುತ್ತಿದೆ' ಎಂದು ಬೇಸರ ವ್ಯಕ್ತಪಡಿಸಿದರು.<br /> <br /> ಹೈಕೋರ್ಟ್ ನ್ಯಾಯಮೂರ್ತಿ ಕೆ. ಶ್ರೀಧರ್ ರಾವ್ ಮಾತನಾಡಿ, `ಜನಸಂಖ್ಯೆಗೆ ಅನುಗುಣವಾಗಿ ನಗರದಲ್ಲಿ ಚರಂಡಿ ವ್ಯವಸ್ಥೆ ಇಲ್ಲ. ಪ್ರಸ್ತುತ ಪರಿಸ್ಥಿತಿಗೆ ತಕ್ಕಂತೆ ಚರಂಡಿಗಳನ್ನು ಮರು ನಿರ್ಮಾಣ ಮಾಡಬೇಕು. ಇರುವ ಸಾರ್ವಜನಿಕ ಶೌಚಾಲಯಗಳ ಜೊತೆ ಮತ್ತಷ್ಟು ಶೌಚಾಲಯಗಳ ನಿರ್ಮಾಣ ಮಾಡಿ, ಅವುಗಳ ನಿರ್ವಹಣೆಯನ್ನು ಖಾಸಗಿಯವರಿಗೆ ವಹಿಸಬೇಕು' ಎಂದು ಸಲಹೆ ನೀಡಿದರು.<br /> <br /> `ನಗರದ ಸಂಚಾರ ದಟ್ಟಣೆ ನಿವಾರಿಸಲು ರಸ್ತೆಗಳ ವಿಸ್ತರಣೆ, ಮೇಲ್ಸೇತುವೆ ಹಾಗೂ ಕೆಳಸೇತುವೆಗಳ ಅಗತ್ಯವಿದೆ. ಇವುಗಳ ನಿರ್ಮಾಣಕ್ಕಾಗಿ ಮರಗಳನ್ನು ಕಡಿಯುವುದು ಸೂಕ್ತವಲ್ಲ. ಅದಕ್ಕೆ ಬದಲಿ ವ್ಯವಸ್ಥೆಯನ್ನು ಹುಡುಕಬೇಕು. ಅಭಿವೃದ್ಧಿ ಹೆಸರಿನಲ್ಲಿ ಪ್ರಕೃತಿಗೆ ಧಕ್ಕೆ ತರಬಾರದು' ಎಂದು ಸಲಹೆ ನೀಡಿದರು.<br /> <br /> `ಉದ್ಯಾನ ನಗರದಲ್ಲಿ ಉದ್ಯಾನಗಳ ನಿರ್ವಹಣೆ ಸರಿಯಾಗಿ ಆಗುತ್ತಿಲ್ಲ. ಒತ್ತುವರಿಯಾಗಿರುವ ಉದ್ಯಾನಗಳನ್ನು ಮತ್ತೆ ವಶಕ್ಕೆ ಪಡೆದು, ನಿರ್ವಹಣೆ ಮಾಡುವತ್ತ ಬಿಬಿಎಂಪಿ ಗಮನ ಹರಿಸಬೇಕು. ಜೊತೆಗೆ ಉಳಿದಿರುವ ಕೆರೆಗಳ ಹೂಳನ್ನು ತೆಗೆದು ಮಳೆ ನೀರನ್ನು ಇಂಗಿಸುವ ವ್ಯವಸ್ಥೆ ಮಾಡಬೇಕು' ಎಂದು ಸಲಹೆ ನೀಡಿದರು.<br /> <br /> `ಹೈಕೋರ್ಟ್ ಹಾಗೂ ಸಿವಿಲ್ ನ್ಯಾಯಾಲಯದ ಆವರಣಗಳಲ್ಲಿ ಕಸವನ್ನು ಸ್ವಚ್ಛಗೊಳಿಸಿ, ಕಸದಬುಟ್ಟಿಗಳನ್ನು ಇರಿಸುವ ಜವಾಬ್ದಾರಿಯನ್ನು ಬಿಬಿಎಂಪಿ ವಹಿಸಿಕೊಳ್ಳಬೇಕು' ಎಂದು ಮನವಿ ಮಾಡಿದರು.</p>.<p><strong>ಜನರಿಗೆ ಅರಿವಿಲ್ಲ</strong><br /> `ನಗರದ ಸ್ವಚ್ಛತೆ ಬಗ್ಗೆ ಜನರಿಗೆ ಅರಿವಿಲ್ಲ. ನಾವು ನಮ್ಮ ನಗರವನ್ನು ಕಸದ ತೊಟ್ಟಿಯಂತೆ ಕಾಣುತ್ತೇವೆ. ಕಂಡ ಕಂಡಲ್ಲಿ ಕಸವನ್ನು ಎಸೆಯುತ್ತೇವೆ. ಜನರ ಈ ಮನೋಭಾವ ಬದಲಾಗದ ಹೊರತು ನಗರವನ್ನು ಸ್ವಚ್ಛವಾಗಿಡಲು ಆಗುವುದಿಲ್ಲ'.<br /> <strong>- ಎಂ.ಲಕ್ಷ್ಮೀನಾರಾಯಣ, ಬಿಬಿಎಂಪಿ ಆಯುಕ್ತ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>