<p><strong>ಬೆಂಗಳೂರು:</strong> `ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯ ಕ್ಷೇತ್ರಕ್ಕೆ ತಮ್ಮನ್ನು ತೊಡಗಿಸಿಕೊಂಡರೆ ಭ್ರಷ್ಟಾಚಾರ ನಿಯಂತ್ರಣ ಸಾಧ್ಯವಿದೆ~ ಎಂದು ವಿಧಾನ ಪರಿಷತ್ತಿನ ಉಪಸಭಾಪತಿ ವಿಮಲಾಗೌಡ ಅಭಿಪ್ರಾಯಪಟ್ಟರು.<br /> <br /> ಮಹಾರಾಣಿ ಮಹಿಳಾ ಕಲಾ, ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಶನಿವಾರ ನಡೆದ 2012-13ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್.ಸಿ.ಸಿ ಮತ್ತು ಎನ್.ಎಸ್.ಎಸ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.<br /> <br /> `ರಾಜಕೀಯ ಕ್ಷೇತ್ರಕ್ಕೆ ಪ್ರಾಮಾಣಿಕತೆ ಹಾಗೂ ಬದ್ಧತೆ ಬಹಳ ಮುಖ್ಯ. ಮಹಿಳೆಯರಲ್ಲಿ ಈ ಗುಣಗಳು ಹೆಚ್ಚು. ಯಾವುದೇ ಕ್ಷೇತ್ರದಲ್ಲಾದರೂ ಮಹಿಳೆಯರು ಹೆಚ್ಚು ಪ್ರಾಮಾಣಿಕತೆ ಹಾಗೂ ಬದ್ಧತೆಯಿಂದ ಕೆಲಸ ಮಾಡುತ್ತಾರೆ. ಹೀಗಾಗಿ ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ರಾಜಕೀಯ ಕ್ಷೇತ್ರಕ್ಕೆ ಬಂದು ಭ್ರಷ್ಟಾಚಾರದ ಪ್ರಮಾಣವನ್ನು ಕಡಿಮೆ ಮಾಡಲು ಪ್ರಯತ್ನಿಸಬೇಕು~ ಎಂದು ಅವರು ಕರೆ ನೀಡಿದರು.<br /> <br /> `ಮಹಿಳೆಯರು ಸಮಾಜದಲ್ಲಿ ಅನೇಕ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಮಹಿಳೆ ಎಂಬ ಕಾರಣಕ್ಕಾಗೇ ಅವರನ್ನು ತುಳಿಯುವ ಪ್ರಯತ್ನ ಪುರುಷ ಪ್ರಧಾನ ಸಮಾಜದಿಂದ ಆಗುತ್ತಿದೆ. ಇದನ್ನು ಎದುರಿಸಿ ಗುರಿ ತಲುಪಬೇಕಾದ ಸವಾಲು ಮಹಿಳೆಯರ ಮುಂದಿದೆ~ ಎಂದರು. <br /> <br /> ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಮಾತನಾಡಿ, `ಉನ್ನತ ವಿದ್ಯಾಭ್ಯಾಸವನ್ನು ಪಡೆದು, ಉನ್ನತ ಹುದ್ದೆಗಳಿಗೆ ಏರುವ ಬಗ್ಗೆ ಹೆಣ್ಣು ಮಕ್ಕಳು ಗಂಭೀರವಾಗಿ ಪ್ರಯತ್ನಿಸಬೇಕು~ ಎಂದು ಕರೆ ನೀಡಿದರು. <br /> ನಂತರ ಕಾಲೇಜಿನ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. <br /> <br /> ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ, ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕಿ ಡಾ.ವಿ.ಕಮಲಮ್ಮ, ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಆರ್.ರವಿಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯ ಕ್ಷೇತ್ರಕ್ಕೆ ತಮ್ಮನ್ನು ತೊಡಗಿಸಿಕೊಂಡರೆ ಭ್ರಷ್ಟಾಚಾರ ನಿಯಂತ್ರಣ ಸಾಧ್ಯವಿದೆ~ ಎಂದು ವಿಧಾನ ಪರಿಷತ್ತಿನ ಉಪಸಭಾಪತಿ ವಿಮಲಾಗೌಡ ಅಭಿಪ್ರಾಯಪಟ್ಟರು.<br /> <br /> ಮಹಾರಾಣಿ ಮಹಿಳಾ ಕಲಾ, ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಶನಿವಾರ ನಡೆದ 2012-13ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್.ಸಿ.ಸಿ ಮತ್ತು ಎನ್.ಎಸ್.ಎಸ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.<br /> <br /> `ರಾಜಕೀಯ ಕ್ಷೇತ್ರಕ್ಕೆ ಪ್ರಾಮಾಣಿಕತೆ ಹಾಗೂ ಬದ್ಧತೆ ಬಹಳ ಮುಖ್ಯ. ಮಹಿಳೆಯರಲ್ಲಿ ಈ ಗುಣಗಳು ಹೆಚ್ಚು. ಯಾವುದೇ ಕ್ಷೇತ್ರದಲ್ಲಾದರೂ ಮಹಿಳೆಯರು ಹೆಚ್ಚು ಪ್ರಾಮಾಣಿಕತೆ ಹಾಗೂ ಬದ್ಧತೆಯಿಂದ ಕೆಲಸ ಮಾಡುತ್ತಾರೆ. ಹೀಗಾಗಿ ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ರಾಜಕೀಯ ಕ್ಷೇತ್ರಕ್ಕೆ ಬಂದು ಭ್ರಷ್ಟಾಚಾರದ ಪ್ರಮಾಣವನ್ನು ಕಡಿಮೆ ಮಾಡಲು ಪ್ರಯತ್ನಿಸಬೇಕು~ ಎಂದು ಅವರು ಕರೆ ನೀಡಿದರು.<br /> <br /> `ಮಹಿಳೆಯರು ಸಮಾಜದಲ್ಲಿ ಅನೇಕ ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ. ಮಹಿಳೆ ಎಂಬ ಕಾರಣಕ್ಕಾಗೇ ಅವರನ್ನು ತುಳಿಯುವ ಪ್ರಯತ್ನ ಪುರುಷ ಪ್ರಧಾನ ಸಮಾಜದಿಂದ ಆಗುತ್ತಿದೆ. ಇದನ್ನು ಎದುರಿಸಿ ಗುರಿ ತಲುಪಬೇಕಾದ ಸವಾಲು ಮಹಿಳೆಯರ ಮುಂದಿದೆ~ ಎಂದರು. <br /> <br /> ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಮಾತನಾಡಿ, `ಉನ್ನತ ವಿದ್ಯಾಭ್ಯಾಸವನ್ನು ಪಡೆದು, ಉನ್ನತ ಹುದ್ದೆಗಳಿಗೆ ಏರುವ ಬಗ್ಗೆ ಹೆಣ್ಣು ಮಕ್ಕಳು ಗಂಭೀರವಾಗಿ ಪ್ರಯತ್ನಿಸಬೇಕು~ ಎಂದು ಕರೆ ನೀಡಿದರು. <br /> ನಂತರ ಕಾಲೇಜಿನ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. <br /> <br /> ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ, ಕಾಲೇಜು ಶಿಕ್ಷಣ ಇಲಾಖೆಯ ನಿರ್ದೇಶಕಿ ಡಾ.ವಿ.ಕಮಲಮ್ಮ, ಕಾಲೇಜಿನ ಪ್ರಾಂಶುಪಾಲ ಪ್ರೊ.ಕೆ.ಆರ್.ರವಿಕುಮಾರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>