<p><strong>ಮದ್ದೂರು:</strong> ಮುಂದಿನ ಚುನಾವಣೆಗೆ ಪಕ್ಷವನ್ನು ತಳಹಂತದಿಂದ ಕಟ್ಟುವ ಕೆಲಸಕ್ಕೆ ಚಾಲನೆ ನೀಡಿದ್ದು, ಇದು ತಮ್ಮ ರಾಜಕೀಯ ಜೀವನದ ಕೊನೆಯ ಹೋರಾಟ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಶುಕ್ರವಾರ ಘೋಷಿಸಿದರು. <br /> <br /> ಶಾಸಕಿ ಕಲ್ಪನ ಸಿದ್ದರಾಜು ಅವರ ನಿವಾಸಕ್ಕೆ ಭೇಟಿ ನೀಡಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. `ಮುಂದಿನ ಫೆಬ್ರುವರಿ 10ರ ನಂತರ ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲೂ ಪ್ರವಾಸ ಮಾಡುತ್ತೇನೆ. ಕೇವಲ ಭಾಷಣ ಮಾಡಿ ಸಮಯ ವ್ಯರ್ಥಗೊಳಿಸದೇ ಪಕ್ಷದ ಬಲವರ್ಧನೆಗೆ ಸ್ಥಳೀಯ ಮುಖಂಡರೊಡನೆ ಚರ್ಚಿಸಿ ಅಗತ್ಯ ರೂಪುರೇಷೆಗಳನ್ನು ಸಿದ್ಧಪಡಿಸುತ್ತೇನೆ~ ಎಂದರು. <br /> <br /> `ಬಿಜೆಪಿ ಹಾಗೂ ಕಾಂಗ್ರೆಸ್ನ ಆಂತರಿಕ ಬಿಕ್ಕಟ್ಟಿನ ಬಗೆಗೆ ಪ್ರತಿಕ್ರಿಯಿಸುವುದಿಲ್ಲ. ಅದು ಅವರ ಪಕ್ಷಗಳಿಗೆ ಬಿಟ್ಟ ವಿಚಾರ. ಲೋಕಾಯುಕ್ತ ಬನ್ನೂರಮಠ ಅವರ ನೇಮಕದ ವಿಚಾರ ಕುರಿತು ಏನನ್ನೂ ಹೇಳುವುದಿಲ್ಲ. ರಾಜ್ಯದ ಜನರಿಗೆ ಈ ವಿವಾದದ ಆಳ ಅಗಲದ ಪರಿಚಯವಿದೆ. ರಾಜ್ಯದಲ್ಲಿ ಬಡಜನರ ಶೋಷಣೆ ಹೆಚ್ಚುತ್ತಿರುವುದು ನನ್ನ ಮನಸ್ಸಿಗೆ ನೋವಾಗಿದೆ. ಹೀಗಾಗಿ ಈ ಇಳಿವಯಸ್ಸಿನಲ್ಲಿ ಅಂತಹ ಜನರ ಒಳಿತಿಗಾಗಿ ಕೆಲಸ ಮಾಡಲು ನಿರ್ಧರಿಸಿದ್ದೇನೆ~ ಎಂದು ತಿಳಿಸಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು:</strong> ಮುಂದಿನ ಚುನಾವಣೆಗೆ ಪಕ್ಷವನ್ನು ತಳಹಂತದಿಂದ ಕಟ್ಟುವ ಕೆಲಸಕ್ಕೆ ಚಾಲನೆ ನೀಡಿದ್ದು, ಇದು ತಮ್ಮ ರಾಜಕೀಯ ಜೀವನದ ಕೊನೆಯ ಹೋರಾಟ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಶುಕ್ರವಾರ ಘೋಷಿಸಿದರು. <br /> <br /> ಶಾಸಕಿ ಕಲ್ಪನ ಸಿದ್ದರಾಜು ಅವರ ನಿವಾಸಕ್ಕೆ ಭೇಟಿ ನೀಡಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. `ಮುಂದಿನ ಫೆಬ್ರುವರಿ 10ರ ನಂತರ ರಾಜ್ಯದ ಎಲ್ಲಾ 30 ಜಿಲ್ಲೆಗಳಲ್ಲೂ ಪ್ರವಾಸ ಮಾಡುತ್ತೇನೆ. ಕೇವಲ ಭಾಷಣ ಮಾಡಿ ಸಮಯ ವ್ಯರ್ಥಗೊಳಿಸದೇ ಪಕ್ಷದ ಬಲವರ್ಧನೆಗೆ ಸ್ಥಳೀಯ ಮುಖಂಡರೊಡನೆ ಚರ್ಚಿಸಿ ಅಗತ್ಯ ರೂಪುರೇಷೆಗಳನ್ನು ಸಿದ್ಧಪಡಿಸುತ್ತೇನೆ~ ಎಂದರು. <br /> <br /> `ಬಿಜೆಪಿ ಹಾಗೂ ಕಾಂಗ್ರೆಸ್ನ ಆಂತರಿಕ ಬಿಕ್ಕಟ್ಟಿನ ಬಗೆಗೆ ಪ್ರತಿಕ್ರಿಯಿಸುವುದಿಲ್ಲ. ಅದು ಅವರ ಪಕ್ಷಗಳಿಗೆ ಬಿಟ್ಟ ವಿಚಾರ. ಲೋಕಾಯುಕ್ತ ಬನ್ನೂರಮಠ ಅವರ ನೇಮಕದ ವಿಚಾರ ಕುರಿತು ಏನನ್ನೂ ಹೇಳುವುದಿಲ್ಲ. ರಾಜ್ಯದ ಜನರಿಗೆ ಈ ವಿವಾದದ ಆಳ ಅಗಲದ ಪರಿಚಯವಿದೆ. ರಾಜ್ಯದಲ್ಲಿ ಬಡಜನರ ಶೋಷಣೆ ಹೆಚ್ಚುತ್ತಿರುವುದು ನನ್ನ ಮನಸ್ಸಿಗೆ ನೋವಾಗಿದೆ. ಹೀಗಾಗಿ ಈ ಇಳಿವಯಸ್ಸಿನಲ್ಲಿ ಅಂತಹ ಜನರ ಒಳಿತಿಗಾಗಿ ಕೆಲಸ ಮಾಡಲು ನಿರ್ಧರಿಸಿದ್ದೇನೆ~ ಎಂದು ತಿಳಿಸಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>