<p><strong>ಬಳ್ಳಾರಿ:</strong> `ಸೋದರ ಜಿ.ಜನಾರ್ದನ ರೆಡ್ಡಿ ಅವರಿಗೆ ಜಾಮೀನು ಪಡೆಯುವುದಕ್ಕಾಗಿ ಯಾರಿಗೂ ಹಣ ನೀಡಿಲ್ಲ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ. ತಪ್ಪು ಮಾಡಿದ್ದು ರುಜುವಾತು ಆದಲ್ಲಿ ರಾಜಕೀಯ ನಿವೃತ್ತಿ ಪಡೆಯುವೆ~ ಎಂದು ಶಾಸಕ ಜಿ.ಸೋಮಶೇಖರ ರೆಡ್ಡಿ ತಿಳಿಸಿದರು. <br /> <br /> ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಮತ ಹಾಕಲು ನಗರದ ಮತ ಕೇಂದ್ರವೊಂದಕ್ಕೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ಜನಾರ್ದನ ರೆಡ್ಡಿ ಜಾಮೀನಿಗಾಗಿ ನ್ಯಾಯಾಧೀಶರ ಮೇಲೆ ಪ್ರಭಾವ ಬೀರಲು ಲಂಚ ನೀಡಿರುವ ಆರೋಪದ ಹಿನ್ನೆಲೆಯಲ್ಲಿ, ಆಂಧ್ರಪ್ರದೇಶದ ಭ್ರಷ್ಟಾಚಾರ ವಿರೋಧಿ ದಳ (ಎಸಿಬಿ), ಎಫ್ಐಆರ್ನಲ್ಲಿ ತಮ್ಮ ಹೆಸರು ಸೇರಿಸಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, `ಲಂಚದ ಕುರಿತು ನನಗೇನೂ ಗೊತ್ತಿಲ್ಲ. ಈ ವಿಷಯವಾಗಿ ನಾನು ಯಾರ ಜತೆಗೂ ಮಾತನಾಡಿಲ್ಲ. ~<br /> <br /> ಇದೆಲ್ಲವೂ ರಾಜಕೀಯ ಕುತಂತ್ರ. ಶಾಸಕ ಸುರೇಶಬಾಬು ಸೇರಿದಂತೆ ನಾವು ಯಾವುದೇ ತಪ್ಪನ್ನು ಮಾಡಿಲ್ಲ. ಈ ಕುರಿತ ಆಧಾರಗಳಿದ್ದಲ್ಲಿ ಬಹಿರಂಗಪಡಿಸಲಿ~ ಎಂದರು.<br /> <br /> `ನ್ಯಾಯಾಧೀಶರಿಗೆ ಲಂಚ ನೀಡುವ ಕುರಿತು ನಾವು ಎಂದೂ ಯೋಚಿಸಿಲ್ಲ. ಅದರ ಅಗತ್ಯವೇ ಇಲ್ಲ. ನಮಗೆ ಕಾನೂನಿನ ಮೇಲೆ ಗೌರವವಿದೆ. ಈ ಕುರಿತು ಕಾನೂನು ತಜ್ಞರೊಂದಿಗೆ ಚರ್ಚಿಸಿ, ಕಾನೂನು ಹೋರಾಟ ನಡೆಸುತ್ತೇವೆ~ ಎಂದು ಸ್ಪಷ್ಟಪಡಿಸಿದರು.<br /> <br /> `ಜನಾರ್ದನ ರೆಡ್ಡಿಗೆ ಜಾಮೀನು ದೊರೆತ ದಿನ ನಾನು ಹೈದರಾಬಾದ್ನ ಸಿಬಿಐ ಕೋರ್ಟ್ನಲ್ಲಿದ್ದೆ ಎಂದು ರೆಡ್ಡಿ ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ:</strong> `ಸೋದರ ಜಿ.ಜನಾರ್ದನ ರೆಡ್ಡಿ ಅವರಿಗೆ ಜಾಮೀನು ಪಡೆಯುವುದಕ್ಕಾಗಿ ಯಾರಿಗೂ ಹಣ ನೀಡಿಲ್ಲ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ. ತಪ್ಪು ಮಾಡಿದ್ದು ರುಜುವಾತು ಆದಲ್ಲಿ ರಾಜಕೀಯ ನಿವೃತ್ತಿ ಪಡೆಯುವೆ~ ಎಂದು ಶಾಸಕ ಜಿ.ಸೋಮಶೇಖರ ರೆಡ್ಡಿ ತಿಳಿಸಿದರು. <br /> <br /> ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಮತ ಹಾಕಲು ನಗರದ ಮತ ಕೇಂದ್ರವೊಂದಕ್ಕೆ ಭಾನುವಾರ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> ಜನಾರ್ದನ ರೆಡ್ಡಿ ಜಾಮೀನಿಗಾಗಿ ನ್ಯಾಯಾಧೀಶರ ಮೇಲೆ ಪ್ರಭಾವ ಬೀರಲು ಲಂಚ ನೀಡಿರುವ ಆರೋಪದ ಹಿನ್ನೆಲೆಯಲ್ಲಿ, ಆಂಧ್ರಪ್ರದೇಶದ ಭ್ರಷ್ಟಾಚಾರ ವಿರೋಧಿ ದಳ (ಎಸಿಬಿ), ಎಫ್ಐಆರ್ನಲ್ಲಿ ತಮ್ಮ ಹೆಸರು ಸೇರಿಸಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, `ಲಂಚದ ಕುರಿತು ನನಗೇನೂ ಗೊತ್ತಿಲ್ಲ. ಈ ವಿಷಯವಾಗಿ ನಾನು ಯಾರ ಜತೆಗೂ ಮಾತನಾಡಿಲ್ಲ. ~<br /> <br /> ಇದೆಲ್ಲವೂ ರಾಜಕೀಯ ಕುತಂತ್ರ. ಶಾಸಕ ಸುರೇಶಬಾಬು ಸೇರಿದಂತೆ ನಾವು ಯಾವುದೇ ತಪ್ಪನ್ನು ಮಾಡಿಲ್ಲ. ಈ ಕುರಿತ ಆಧಾರಗಳಿದ್ದಲ್ಲಿ ಬಹಿರಂಗಪಡಿಸಲಿ~ ಎಂದರು.<br /> <br /> `ನ್ಯಾಯಾಧೀಶರಿಗೆ ಲಂಚ ನೀಡುವ ಕುರಿತು ನಾವು ಎಂದೂ ಯೋಚಿಸಿಲ್ಲ. ಅದರ ಅಗತ್ಯವೇ ಇಲ್ಲ. ನಮಗೆ ಕಾನೂನಿನ ಮೇಲೆ ಗೌರವವಿದೆ. ಈ ಕುರಿತು ಕಾನೂನು ತಜ್ಞರೊಂದಿಗೆ ಚರ್ಚಿಸಿ, ಕಾನೂನು ಹೋರಾಟ ನಡೆಸುತ್ತೇವೆ~ ಎಂದು ಸ್ಪಷ್ಟಪಡಿಸಿದರು.<br /> <br /> `ಜನಾರ್ದನ ರೆಡ್ಡಿಗೆ ಜಾಮೀನು ದೊರೆತ ದಿನ ನಾನು ಹೈದರಾಬಾದ್ನ ಸಿಬಿಐ ಕೋರ್ಟ್ನಲ್ಲಿದ್ದೆ ಎಂದು ರೆಡ್ಡಿ ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>