<p><strong>ಬೆಂಗಳೂರು:</strong> ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಖ್ಯಾತ ಹಿನ್ನೆಲೆ ಗಾಯಕ ಪಿ.ಬಿ.ಶ್ರೀನಿವಾಸ್ ಅವರಿಗೆ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ಮಂಗಳವಾರ ಕನ್ನಡ ವಿಶ್ವವಿದ್ಯಾಲಯದ ನಾಡೋಜ ಪದವಿ ಪ್ರದಾನ ಮಾಡಿದರು.<br /> <br /> ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪದವಿ ಸ್ವೀಕರಿಸಿ ಮಾತನಾಡಿದ ಡಾ.ವೀರೇಂದ್ರ ಹೆಗ್ಗಡೆ, ‘ಧರ್ಮಸ್ಥಳದಲ್ಲಿ ಅನೇಕ ಸ್ಮಾರಕ ಹಾಗೂ ತಾಡಪತ್ರಿಗಳ ಸಂರಕ್ಷಣೆ ಮಾಡಲಾಗಿದ್ದರೂ, ಇನ್ನೂ ಹಲವಾರು ಸ್ಮಾರಕಗಳು ಸಂರಕ್ಷಣೆಯಿಲ್ಲದೇ ನಶಿಸುತ್ತಿವೆ’ ಎಂದು ವಿಷಾದಿಸಿದರು.<br /> <br /> ಧರ್ಮಸ್ಥಳದಲ್ಲಿ ಸ್ಥಾಪಿಸಲಾದ ಮಂಜೂಷಾ ವಸ್ತುಸಂಗ್ರಹಾಲಯ ಹಾಗೂ ಗ್ರಂಥ ಭಂಡಾರವನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯವು ಸಂಶೋಧನೆಗೆ ಬಳಸಿಕೊಳ್ಳಬಹುದು ಎಂದು ನುಡಿದರು.ಧರ್ಮಸ್ಥಳಕ್ಕೆ ಭೇಟಿ ನೀಡಬೇಕು ಎಂದು ರಾಜ್ಯಪಾಲರನ್ನು ಅವರು ಇದೇ ಸಂದರ್ಭದಲ್ಲಿ ಆಹ್ವಾನಿಸಿದರು. <br /> <br /> ಗಾಯಕ ಪಿ.ಬಿ.ಶ್ರೀನಿವಾಸ್, ಇದೊಂದು ಮರೆಯಲಾಗದ ಹೊನ್ನಿನ ದಿನ ಎಂದು ಬಣ್ಣಿಸಿ, ಸ್ವರಚನೆಯ ಕವಿತೆಯ ಸಾಲುಗಳನ್ನು ಹಾಡಿದರು.ಸಾಹಿತಿ ದಂಪತಿ ಡಾ.ಹಂಪ ನಾಗರಾಜಯ್ಯ ಹಾಗೂ ಡಾ.ಕಮಲಾ ಹಂಪನಾ, ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ, ಹಂಪಿ ಕನ್ನಡ ವಿ.ವಿ. ಕುಲಪತಿ ಡಾ.ಎ.ಮುರಿಗೆಪ್ಪ ಮತ್ತಿತರರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಖ್ಯಾತ ಹಿನ್ನೆಲೆ ಗಾಯಕ ಪಿ.ಬಿ.ಶ್ರೀನಿವಾಸ್ ಅವರಿಗೆ ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಅವರು ಮಂಗಳವಾರ ಕನ್ನಡ ವಿಶ್ವವಿದ್ಯಾಲಯದ ನಾಡೋಜ ಪದವಿ ಪ್ರದಾನ ಮಾಡಿದರು.<br /> <br /> ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪದವಿ ಸ್ವೀಕರಿಸಿ ಮಾತನಾಡಿದ ಡಾ.ವೀರೇಂದ್ರ ಹೆಗ್ಗಡೆ, ‘ಧರ್ಮಸ್ಥಳದಲ್ಲಿ ಅನೇಕ ಸ್ಮಾರಕ ಹಾಗೂ ತಾಡಪತ್ರಿಗಳ ಸಂರಕ್ಷಣೆ ಮಾಡಲಾಗಿದ್ದರೂ, ಇನ್ನೂ ಹಲವಾರು ಸ್ಮಾರಕಗಳು ಸಂರಕ್ಷಣೆಯಿಲ್ಲದೇ ನಶಿಸುತ್ತಿವೆ’ ಎಂದು ವಿಷಾದಿಸಿದರು.<br /> <br /> ಧರ್ಮಸ್ಥಳದಲ್ಲಿ ಸ್ಥಾಪಿಸಲಾದ ಮಂಜೂಷಾ ವಸ್ತುಸಂಗ್ರಹಾಲಯ ಹಾಗೂ ಗ್ರಂಥ ಭಂಡಾರವನ್ನು ಹಂಪಿ ಕನ್ನಡ ವಿಶ್ವವಿದ್ಯಾಲಯವು ಸಂಶೋಧನೆಗೆ ಬಳಸಿಕೊಳ್ಳಬಹುದು ಎಂದು ನುಡಿದರು.ಧರ್ಮಸ್ಥಳಕ್ಕೆ ಭೇಟಿ ನೀಡಬೇಕು ಎಂದು ರಾಜ್ಯಪಾಲರನ್ನು ಅವರು ಇದೇ ಸಂದರ್ಭದಲ್ಲಿ ಆಹ್ವಾನಿಸಿದರು. <br /> <br /> ಗಾಯಕ ಪಿ.ಬಿ.ಶ್ರೀನಿವಾಸ್, ಇದೊಂದು ಮರೆಯಲಾಗದ ಹೊನ್ನಿನ ದಿನ ಎಂದು ಬಣ್ಣಿಸಿ, ಸ್ವರಚನೆಯ ಕವಿತೆಯ ಸಾಲುಗಳನ್ನು ಹಾಡಿದರು.ಸಾಹಿತಿ ದಂಪತಿ ಡಾ.ಹಂಪ ನಾಗರಾಜಯ್ಯ ಹಾಗೂ ಡಾ.ಕಮಲಾ ಹಂಪನಾ, ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ, ಹಂಪಿ ಕನ್ನಡ ವಿ.ವಿ. ಕುಲಪತಿ ಡಾ.ಎ.ಮುರಿಗೆಪ್ಪ ಮತ್ತಿತರರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>