<p><strong>ಜೈಪುರ (ಪಿಟಿಐ): </strong>ಉತ್ತರಾಖಂಡದಲ್ಲಿ ಧಾರಾಕಾರ ಮಳೆ ಹಾಗೂ ಪ್ರವಾಹದಿಂದ ಅನೇಕರು ಸಾವನ್ನಪ್ಪಿದ್ದು, ಹೆದ್ದಾರಿಗಳು ಮುಚ್ಚಿಹೋಗಿರುವ ಹಿನ್ನೆಲೆಯಲ್ಲಿ ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮಂಗಳವಾರ ರಾಜ್ಯಕ್ಕೆ ರೂ 2ಕೋಟಿ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದ್ದಾರೆ.<br /> <br /> ಉತ್ತರಾಖಂಡ ಮುಖ್ಯಮಂತ್ರಿ ವಿಜಯ್ ಬಹುಗುಣ ಅವರೊಂದಿಗೆ ಮಾತನಾಡಿದ ಗೆಹ್ಲೋಟ್ ಅವರು ಆ ರಾಜ್ಯದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಜನರ ಬಗ್ಗೆ ಅನುಕಂಪ ವ್ಯಕ್ತಪಡಿಸಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. ರಾಜ್ಯದಲ್ಲಿ ಮಳೆ ಕ್ಷೀಣಿಸಿದೆ. ಮಂಗಳವಾರ ಮಧ್ಯಾಹ್ನ ಮೋಡ ಸ್ಪಷ್ಟವಾಗಿದೆ.</p>.<p>ಆಹಾರದ ಪೊಟ್ಟಣಗಳನ್ನು ಹೆಲಿಕಾಪ್ಟರ್ ಮೂಲಕ ನೀಡಲಾಗುತ್ತಿದ್ದು, ಸೇನೆಯ ಸಹಾಯ ತೆಗೆದುಕೊಳ್ಳಲಾಗಿದೆ ಎಂದು ಗೆಹ್ಲೋಟ್ ಅವರಿಗೆ ಬಹುಗುಣ ಅವರು ಮಾಹಿತಿ ನೀಡಿದ್ದಾರೆ.ರಾಜಸ್ತಾನದ ಮುಖ್ಯ ಕಾರ್ಯದರ್ಶಿ ಸಿ.ಕೆ.ಮ್ಯಾಥ್ಯೂ ಕೂಡ ಉತ್ತರಾಖಂಡಕ್ಕೆ ಅಗತ್ಯವಾದ ಸಹಾಯ ನೀಡುವುದಾಗಿ ಹೇಳಿದ್ದಾರೆ ಎಂದು ಪ್ರಕಟಣೆ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ (ಪಿಟಿಐ): </strong>ಉತ್ತರಾಖಂಡದಲ್ಲಿ ಧಾರಾಕಾರ ಮಳೆ ಹಾಗೂ ಪ್ರವಾಹದಿಂದ ಅನೇಕರು ಸಾವನ್ನಪ್ಪಿದ್ದು, ಹೆದ್ದಾರಿಗಳು ಮುಚ್ಚಿಹೋಗಿರುವ ಹಿನ್ನೆಲೆಯಲ್ಲಿ ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಮಂಗಳವಾರ ರಾಜ್ಯಕ್ಕೆ ರೂ 2ಕೋಟಿ ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದ್ದಾರೆ.<br /> <br /> ಉತ್ತರಾಖಂಡ ಮುಖ್ಯಮಂತ್ರಿ ವಿಜಯ್ ಬಹುಗುಣ ಅವರೊಂದಿಗೆ ಮಾತನಾಡಿದ ಗೆಹ್ಲೋಟ್ ಅವರು ಆ ರಾಜ್ಯದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಜನರ ಬಗ್ಗೆ ಅನುಕಂಪ ವ್ಯಕ್ತಪಡಿಸಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. ರಾಜ್ಯದಲ್ಲಿ ಮಳೆ ಕ್ಷೀಣಿಸಿದೆ. ಮಂಗಳವಾರ ಮಧ್ಯಾಹ್ನ ಮೋಡ ಸ್ಪಷ್ಟವಾಗಿದೆ.</p>.<p>ಆಹಾರದ ಪೊಟ್ಟಣಗಳನ್ನು ಹೆಲಿಕಾಪ್ಟರ್ ಮೂಲಕ ನೀಡಲಾಗುತ್ತಿದ್ದು, ಸೇನೆಯ ಸಹಾಯ ತೆಗೆದುಕೊಳ್ಳಲಾಗಿದೆ ಎಂದು ಗೆಹ್ಲೋಟ್ ಅವರಿಗೆ ಬಹುಗುಣ ಅವರು ಮಾಹಿತಿ ನೀಡಿದ್ದಾರೆ.ರಾಜಸ್ತಾನದ ಮುಖ್ಯ ಕಾರ್ಯದರ್ಶಿ ಸಿ.ಕೆ.ಮ್ಯಾಥ್ಯೂ ಕೂಡ ಉತ್ತರಾಖಂಡಕ್ಕೆ ಅಗತ್ಯವಾದ ಸಹಾಯ ನೀಡುವುದಾಗಿ ಹೇಳಿದ್ದಾರೆ ಎಂದು ಪ್ರಕಟಣೆ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>