<p><strong>ಬೆಂಗಳೂರು: </strong>ಬಿಬಿಎಂಪಿ ಹಾಗೂ ಭಾರತೀಯ ವಿದ್ಯಾಭವನದ ಸಹಯೋಗದಲ್ಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ದಯಾನಂದ ವಾರ್ಡ್ನಲ್ಲಿ 3.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಸಿಬಿಎಸ್ಇ ಪಠ್ಯಕ್ರಮದ ಶಾಲೆಯನ್ನು ಕಾನೂನು ಸಚಿವ ಎಸ್. ಸುರೇಶ್ ಕುಮಾರ್ ಶನಿವಾರ ಉದ್ಘಾಟಿಸಿದರು.<br /> <br /> ಕಾರ್ಯಕ್ರಮದಲ್ಲಿ ಅವರು ಮಾತನಾಡಿ, `ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಲೆಂದು ಈ ಶಾಲೆಯನ್ನು ಆರಂಭಿಸಲಾಗಿದೆ. ಕೆಳವರ್ಗದ ನಾಗರಿಕರೇ ಹೆಚ್ಚಿರುವ ಈ ಪ್ರದೇಶದಲ್ಲಿ ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡಲು ಈ ಶಾಲೆ ನೆರವಾಗಲಿದೆ. ಈ ಶಾಲಾ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದ್ದ ಭಾರತೀಯ ವಿದ್ಯಾಭವನದ ಸ್ಥಾಪಕ ಮತ್ತೂರು ಕೃಷ್ಣಮೂರ್ತಿ ಅವರ ಸದಾಶಯದಂತೆ ದೇಶಕ್ಕೆ ಸತ್ಪ್ರಜೆಗಳನ್ನು ನೀಡುವಲ್ಲಿ ನೆರವಾಗಬೇಕು~ ಎಂದರು. <br /> <br /> ಗಾಂಧಿನಗರದ ಶಾಸಕ ದಿನೇಶ್ ಗುಂಡೂರಾವ್, ಭಾರತೀಯ ವಿದ್ಯಾಭವನದ ನಿರ್ದೇಶಕ ಸುರೇಶ್, ಬಿಬಿಎಂಪಿ ಸದಸ್ಯರಾದ ಶಕೀಲಾ ಮುನಿರಾಜು, ಕೃಷ್ಣಪ್ಪ, ಪದ್ಮರಾಜ್ ಉಪಸ್ಥಿತರಿದ್ದರು. 2800 ಚದರ ಮೀಟರ್ ವಿಸ್ತೀರ್ಣದ ಈ ಕಟ್ಟಡ ಮೂರು ಮಹಡಿ ಎತ್ತರ ಹೊಂದಿದೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬಿಬಿಎಂಪಿ ಹಾಗೂ ಭಾರತೀಯ ವಿದ್ಯಾಭವನದ ಸಹಯೋಗದಲ್ಲಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ದಯಾನಂದ ವಾರ್ಡ್ನಲ್ಲಿ 3.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಸಿಬಿಎಸ್ಇ ಪಠ್ಯಕ್ರಮದ ಶಾಲೆಯನ್ನು ಕಾನೂನು ಸಚಿವ ಎಸ್. ಸುರೇಶ್ ಕುಮಾರ್ ಶನಿವಾರ ಉದ್ಘಾಟಿಸಿದರು.<br /> <br /> ಕಾರ್ಯಕ್ರಮದಲ್ಲಿ ಅವರು ಮಾತನಾಡಿ, `ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಲೆಂದು ಈ ಶಾಲೆಯನ್ನು ಆರಂಭಿಸಲಾಗಿದೆ. ಕೆಳವರ್ಗದ ನಾಗರಿಕರೇ ಹೆಚ್ಚಿರುವ ಈ ಪ್ರದೇಶದಲ್ಲಿ ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡಲು ಈ ಶಾಲೆ ನೆರವಾಗಲಿದೆ. ಈ ಶಾಲಾ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದ್ದ ಭಾರತೀಯ ವಿದ್ಯಾಭವನದ ಸ್ಥಾಪಕ ಮತ್ತೂರು ಕೃಷ್ಣಮೂರ್ತಿ ಅವರ ಸದಾಶಯದಂತೆ ದೇಶಕ್ಕೆ ಸತ್ಪ್ರಜೆಗಳನ್ನು ನೀಡುವಲ್ಲಿ ನೆರವಾಗಬೇಕು~ ಎಂದರು. <br /> <br /> ಗಾಂಧಿನಗರದ ಶಾಸಕ ದಿನೇಶ್ ಗುಂಡೂರಾವ್, ಭಾರತೀಯ ವಿದ್ಯಾಭವನದ ನಿರ್ದೇಶಕ ಸುರೇಶ್, ಬಿಬಿಎಂಪಿ ಸದಸ್ಯರಾದ ಶಕೀಲಾ ಮುನಿರಾಜು, ಕೃಷ್ಣಪ್ಪ, ಪದ್ಮರಾಜ್ ಉಪಸ್ಥಿತರಿದ್ದರು. 2800 ಚದರ ಮೀಟರ್ ವಿಸ್ತೀರ್ಣದ ಈ ಕಟ್ಟಡ ಮೂರು ಮಹಡಿ ಎತ್ತರ ಹೊಂದಿದೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>