<p>ವಿಜಯಪುರ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ದೇಶದ ಪ್ರಗತಿಯ ಬಗ್ಗೆ ಅತ್ಯುತ್ತಮ ಮತ್ತು ದೂರಗ್ರಾಹಿಯಾದ ಪ್ರಗತಿಪರ ಚಿಂತನೆಗಳನ್ನು ಹೊಂದಿದ್ದರು. ಅವರ ಜನಪರ ಆಲೋಚನೆಗಳನ್ನು ಸಾಕಾರಗೊಳಿಸಲು ಯುವಕರು ಪ್ರಯತ್ನಿಸಬೇಕು ಎಂದು ಮಹಾತ್ಮಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಂ.ಆರ್.ಶಂಕರ ರೆಡ್ಡಿ ತಿಳಿಸಿದರು. <br /> <br /> ಪಟ್ಟಣದ ಮಹಾತ್ಮ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಸದ್ಭಾವನಾ ದಿನಾಚರಣೆ (ಮಾಜಿ ಪ್ರಧಾನಿ ದಿವಂಗತ ರಾಜೀವ್ಗಾಂಧಿ ಹುಟ್ಟು ಹಬ್ಬದ ಪ್ರಯುಕ್ತ) ಮತ್ತು ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. <br /> <br /> ವಿದ್ಯಾಸಂಸ್ಥೆಯ ಅಧ್ಯಕ್ಷ ಅಪ್ಪಯ್ಯಣ್ಣ ಮಾತನಾಡಿ, `ರಾಷ್ಟ್ರೀಯ ಸದ್ಭಾವನಾ ದಿನಾಚರಣೆಯ ಮಹತ್ವ ಇಂದಿನ ಯುವಕರಿಗೆ ಮಹತ್ವಪೂರ್ಣವಾಗಿದೆ. ಯುವಕರನ್ನು ಆದರ್ಶ ನಾಗರಿಕರನ್ನಾಗಿ ಮಾಡಲು ಹಾಗೂ ಅವರಲ್ಲಿ ಸಂಯಮ, ಧೈರ್ಯ, ತ್ಯಾಗ, ಸರಳತೆ, ತಾಳ್ಮೆ ಮುಂತಾದ ಒಳ್ಳೆಯ ಗುಣಗಳನ್ನು ಹಿರಿಯರು ತುಂಬು ದಿಸೆಯಲ್ಲಿ ಹೆಚ್ಚಿನ ಶ್ರಮ ವಹಿಸಬೇಕಾಗಿದೆ ಎಂದು ಹೇಳಿದರು. <br /> <br /> ನೆಹರೂ ಯುವ ಕೇಂದ್ರದ ಜಿಲ್ಲಾ ಯುವಜನ ಸಮನ್ವಯಾಧಿಕಾರಿ ವಿ.ಶಿವಕುಮಾರ್ ಅಚಲಾ, ಭಾರತ ಸೇವಾ ದಳದ ಕಾರ್ಯಕರ್ತ ಎ.ಎಂ.ಮನು, ಶಾಲಾ ದೈಹಿಕ ಶಿಕ್ಷಕ ಜಿ.ವಿ.ಸಿದ್ದಲಿಂಗಯ್ಯ ಮಾತನಾಡಿದರು. <br /> <br /> `ಭಾರತ ವೈಭವ~ ಪತ್ರಿಕೆ ಸಂಪಾದಕ ಮುನಿರಾಜು, ಎನ್.ನಾಗೇಂದ್ರ ಬಾಬು ಉಪಸ್ಥಿತರಿದ್ದರು. <br /> ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯುವಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸ್ಪಂದನ ಯುವಜನ ಸೇವಾ ಸಂಘದ ಕಾರ್ಯದರ್ಶಿ ವಿ.ಪ್ರಶಾಂತ್ ಪ್ರತಿಜ್ಞಾ ವಿಧಿ ಬೋಧಿಸಿದರು. <br /> <br /> ಭವ್ಯಾ ಪ್ರಾರ್ಥಿಸಿದರು. ಶಿಕ್ಷಕ ಈಶ್ವರಪ್ಪ ಉಕ್ಕಡ ಗಾತ್ರಿ ಸ್ವಾಗತಿಸಿ, ಸಿ.ಎಂ.ಚಂದ್ರಶೇಖರಪ್ಪ ವಂದಿಸಿದರು. <br /> ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಹರೂ ಯುವ ಕೇಂದ್ರ ಮತ್ತು ಸ್ಪಂದನ ಯುವಜನ ಸೇವಾ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಯಪುರ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ದೇಶದ ಪ್ರಗತಿಯ ಬಗ್ಗೆ ಅತ್ಯುತ್ತಮ ಮತ್ತು ದೂರಗ್ರಾಹಿಯಾದ ಪ್ರಗತಿಪರ ಚಿಂತನೆಗಳನ್ನು ಹೊಂದಿದ್ದರು. ಅವರ ಜನಪರ ಆಲೋಚನೆಗಳನ್ನು ಸಾಕಾರಗೊಳಿಸಲು ಯುವಕರು ಪ್ರಯತ್ನಿಸಬೇಕು ಎಂದು ಮಹಾತ್ಮಾ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಂ.ಆರ್.ಶಂಕರ ರೆಡ್ಡಿ ತಿಳಿಸಿದರು. <br /> <br /> ಪಟ್ಟಣದ ಮಹಾತ್ಮ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರೀಯ ಸದ್ಭಾವನಾ ದಿನಾಚರಣೆ (ಮಾಜಿ ಪ್ರಧಾನಿ ದಿವಂಗತ ರಾಜೀವ್ಗಾಂಧಿ ಹುಟ್ಟು ಹಬ್ಬದ ಪ್ರಯುಕ್ತ) ಮತ್ತು ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. <br /> <br /> ವಿದ್ಯಾಸಂಸ್ಥೆಯ ಅಧ್ಯಕ್ಷ ಅಪ್ಪಯ್ಯಣ್ಣ ಮಾತನಾಡಿ, `ರಾಷ್ಟ್ರೀಯ ಸದ್ಭಾವನಾ ದಿನಾಚರಣೆಯ ಮಹತ್ವ ಇಂದಿನ ಯುವಕರಿಗೆ ಮಹತ್ವಪೂರ್ಣವಾಗಿದೆ. ಯುವಕರನ್ನು ಆದರ್ಶ ನಾಗರಿಕರನ್ನಾಗಿ ಮಾಡಲು ಹಾಗೂ ಅವರಲ್ಲಿ ಸಂಯಮ, ಧೈರ್ಯ, ತ್ಯಾಗ, ಸರಳತೆ, ತಾಳ್ಮೆ ಮುಂತಾದ ಒಳ್ಳೆಯ ಗುಣಗಳನ್ನು ಹಿರಿಯರು ತುಂಬು ದಿಸೆಯಲ್ಲಿ ಹೆಚ್ಚಿನ ಶ್ರಮ ವಹಿಸಬೇಕಾಗಿದೆ ಎಂದು ಹೇಳಿದರು. <br /> <br /> ನೆಹರೂ ಯುವ ಕೇಂದ್ರದ ಜಿಲ್ಲಾ ಯುವಜನ ಸಮನ್ವಯಾಧಿಕಾರಿ ವಿ.ಶಿವಕುಮಾರ್ ಅಚಲಾ, ಭಾರತ ಸೇವಾ ದಳದ ಕಾರ್ಯಕರ್ತ ಎ.ಎಂ.ಮನು, ಶಾಲಾ ದೈಹಿಕ ಶಿಕ್ಷಕ ಜಿ.ವಿ.ಸಿದ್ದಲಿಂಗಯ್ಯ ಮಾತನಾಡಿದರು. <br /> <br /> `ಭಾರತ ವೈಭವ~ ಪತ್ರಿಕೆ ಸಂಪಾದಕ ಮುನಿರಾಜು, ಎನ್.ನಾಗೇಂದ್ರ ಬಾಬು ಉಪಸ್ಥಿತರಿದ್ದರು. <br /> ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯುವಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸ್ಪಂದನ ಯುವಜನ ಸೇವಾ ಸಂಘದ ಕಾರ್ಯದರ್ಶಿ ವಿ.ಪ್ರಶಾಂತ್ ಪ್ರತಿಜ್ಞಾ ವಿಧಿ ಬೋಧಿಸಿದರು. <br /> <br /> ಭವ್ಯಾ ಪ್ರಾರ್ಥಿಸಿದರು. ಶಿಕ್ಷಕ ಈಶ್ವರಪ್ಪ ಉಕ್ಕಡ ಗಾತ್ರಿ ಸ್ವಾಗತಿಸಿ, ಸಿ.ಎಂ.ಚಂದ್ರಶೇಖರಪ್ಪ ವಂದಿಸಿದರು. <br /> ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಹರೂ ಯುವ ಕೇಂದ್ರ ಮತ್ತು ಸ್ಪಂದನ ಯುವಜನ ಸೇವಾ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>