<p>ಬಾಗಲಕೋಟೆ: ಶ್ರೀಕ್ಷೇತ್ರ ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ವತಿಯಿಂದ ಪ್ರಥಮ `ಬಸವ ಕೃಷಿ~ ಪ್ರಶಸ್ತಿಯನ್ನು ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಜಲ ಸಂಪನ್ಮೂಲ ತಜ್ಞ ರಾಜಸ್ತಾನದ (ಜೈಪುರ) ರಾಜೇಂದ್ರ ಸಿಂಗ್ ಅವರಿಗೆ ಭಾನುವಾರ ಪ್ರದಾನ ಮಾಡಲಾಯಿತು.<br /> <br /> ಕೂಡಲಸಂಗಮದ ಸಂಗಮೇಶ್ವರ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ದ್ವಿತೀಯ `ಬಸವ ಸಂಕ್ರಾಂತಿ~ ಕಾರ್ಯಕ್ರಮದಲ್ಲಿ ರೂ.25 ಸಾವಿರ ನಗದು, ತಾಮ್ರದ ಫಲಕ ಮತ್ತು ಸ್ವರ್ಣ ಫಲಕಗಳನ್ನು ಒಳಗೊಂಡ ಪ್ರಶಸ್ತಿಯನ್ನು ಬಸವಜಯ ಮೃತ್ಯುಂಜಯ ಮಹಾಸ್ವಾಮಿ ಪ್ರದಾನ ಮಾಡಿದರು.<br /> <br /> ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ರಾಜೇಂದ್ರ ಸಿಂಗ್ ಅವರು ಗಣಿಕಾರಿಕೆ, ಕಾರ್ಖಾನೆಗಳ ಮಾಲಿನ್ಯದಿಂದಾಗಿ ಕರ್ನಾಟಕದ ಜೀವನದಿಗಳು ಅಪಾಯಕ್ಕೆ ಸಿಲುಕಿದ್ದು, ನದಿಗಳ ರಕ್ಷಣೆ ಉದ್ದೇಶದಿಂದ ರಾಜ್ಯ ಸರ್ಕಾರ ನೂತನ ನದಿ ನೀತಿಯನ್ನು ಜಾರಿಗೊಳಿಸಬೇಕು ಎಂದು ಸಲಹೆ ಮಾಡಿದರು.<br /> <br /> ಓಡುವ ನೀರನ್ನು ನಡೆಯುವಂತೆ ಮಾಡಬೇಕು, ನಡೆಯುವ ನೀರನ್ನು ನಿಲ್ಲುವಂತೆ ಮಾಡಬೇಕು, ನಿಲ್ಲುವ ನೀರನ್ನು ಭೂಮಿಯಲ್ಲಿ ಇಂಗುವಂತೆ ಮಾಡಬೇಕು, ಆಗ ಮಾತ್ರ ದೇಶದ ನೀರಿನ ಸಮಸ್ಯೆಯನ್ನು ನಿವಾರಣೆ ಮಾಡಬಹುದಾಗಿದೆ ಎಂದರು. ಬಳಿಕ ರೈತರೊಂದಿಗೆ ಸಂವಾದ ನಡೆಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ಶ್ರೀಕ್ಷೇತ್ರ ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ವತಿಯಿಂದ ಪ್ರಥಮ `ಬಸವ ಕೃಷಿ~ ಪ್ರಶಸ್ತಿಯನ್ನು ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಜಲ ಸಂಪನ್ಮೂಲ ತಜ್ಞ ರಾಜಸ್ತಾನದ (ಜೈಪುರ) ರಾಜೇಂದ್ರ ಸಿಂಗ್ ಅವರಿಗೆ ಭಾನುವಾರ ಪ್ರದಾನ ಮಾಡಲಾಯಿತು.<br /> <br /> ಕೂಡಲಸಂಗಮದ ಸಂಗಮೇಶ್ವರ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ದ್ವಿತೀಯ `ಬಸವ ಸಂಕ್ರಾಂತಿ~ ಕಾರ್ಯಕ್ರಮದಲ್ಲಿ ರೂ.25 ಸಾವಿರ ನಗದು, ತಾಮ್ರದ ಫಲಕ ಮತ್ತು ಸ್ವರ್ಣ ಫಲಕಗಳನ್ನು ಒಳಗೊಂಡ ಪ್ರಶಸ್ತಿಯನ್ನು ಬಸವಜಯ ಮೃತ್ಯುಂಜಯ ಮಹಾಸ್ವಾಮಿ ಪ್ರದಾನ ಮಾಡಿದರು.<br /> <br /> ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ರಾಜೇಂದ್ರ ಸಿಂಗ್ ಅವರು ಗಣಿಕಾರಿಕೆ, ಕಾರ್ಖಾನೆಗಳ ಮಾಲಿನ್ಯದಿಂದಾಗಿ ಕರ್ನಾಟಕದ ಜೀವನದಿಗಳು ಅಪಾಯಕ್ಕೆ ಸಿಲುಕಿದ್ದು, ನದಿಗಳ ರಕ್ಷಣೆ ಉದ್ದೇಶದಿಂದ ರಾಜ್ಯ ಸರ್ಕಾರ ನೂತನ ನದಿ ನೀತಿಯನ್ನು ಜಾರಿಗೊಳಿಸಬೇಕು ಎಂದು ಸಲಹೆ ಮಾಡಿದರು.<br /> <br /> ಓಡುವ ನೀರನ್ನು ನಡೆಯುವಂತೆ ಮಾಡಬೇಕು, ನಡೆಯುವ ನೀರನ್ನು ನಿಲ್ಲುವಂತೆ ಮಾಡಬೇಕು, ನಿಲ್ಲುವ ನೀರನ್ನು ಭೂಮಿಯಲ್ಲಿ ಇಂಗುವಂತೆ ಮಾಡಬೇಕು, ಆಗ ಮಾತ್ರ ದೇಶದ ನೀರಿನ ಸಮಸ್ಯೆಯನ್ನು ನಿವಾರಣೆ ಮಾಡಬಹುದಾಗಿದೆ ಎಂದರು. ಬಳಿಕ ರೈತರೊಂದಿಗೆ ಸಂವಾದ ನಡೆಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>