<p><strong>ನವದೆಹಲಿ (ಪಿಟಿಐ): </strong>ಆರುಷಿ ಮತ್ತು ಮನೆಯ ಸಹಾಯಕ ಹೇಮರಾಜ್ ಜೋಡಿ ಕೊಲೆ ಪ್ರಕರಣದಲ್ಲಿ ಆರೋಪಕ್ಕೆ ಗುರಿಯಾಗಿರುವ ಆರುಷಿ ತಂದೆ, ಡಾ. ರಾಜೇಶ್ ತಲ್ವಾರ್ ಅವರಿಗೆ ನೀಡಿರುವ ಜಾಮೀನು ಫೆ. 4ರವರೆಗೂ ಜಾರಿಯಲ್ಲಿರುವ ಕಾರಣ ಅವರನ್ನು ಬಂಧಿಸಬಾರದು ಎಂದು ಸುಪ್ರೀಂಕೋರ್ಟ್ ಸೋಮವಾರ ಸೂಚಿಸಿದೆ.<br /> <br /> ಈ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯ ದಂಪತಿ, ಆರುಷಿ ತಂದೆ ರಾಜೇಶ್ ತಲ್ವಾರ್ ಮತ್ತು ತಾಯಿ ನೂಪುರ್ ತಲ್ವಾರ್ ಅವರನ್ನು ವಿಚಾರಣೆಗೆ ಗುರಿಪಡಿಸಬೇಕು ಎಂದು ಅಧೀನ ನ್ಯಾಯಾಲಯ ಆದೇಶಿಸಿತ್ತು. ಈ ಆದೇಶಕ್ಕೆ ನೀಡಿದ್ದ ತಡೆಯನ್ನು ಸರ್ವೋಚ್ಚ ನ್ಯಾಯಾಲಯವು ಶುಕ್ರವಾರ ತೆರವುಗೊಳಿಸಿತು. ಆದ್ದರಿಂದ ರಾಜೇಶ್ ತಮ್ಮನ್ನು ಬಂಧಿಸಬಹುದು ಎಂದು ಆತಂಕಗೊಂಡಿದ್ದರು.<br /> <br /> ನ್ಯಾಯಮೂರ್ತಿಗಳಾದ ಎ.ಕೆ. ಗಂಗೂಲಿ ಮತ್ತು ಜೆ.ಎಸ್. ಖೇಹರ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠವು, ರಾಜೇಶ್ ಅವರ ಜಾಮೀನು ಅರ್ಜಿಗೆ ಸಂಬಂಧಿಸಿದ ಮುಂದಿನ ಯಾವುದೇ ವಿಚಾರಣೆಯನ್ನು ಫೆ. 4ರಂದು ಈ ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳುವ ಗಾಜಿಯಾಬಾದ್ ನ್ಯಾಯಾಲಯವೇ ನಡೆಸಲಿದೆ ಎಂದು ಹೇಳಿದೆ.<br /> <br /> ರಾಜೇಶ್ ಪೊಲೀಸರಿಗೆ ಮಾಹಿತಿ ನೀಡದೆ ಊರು ಬಿಡುವಂತಿಲ್ಲ ಮತ್ತು ಅವರ ಪಾಸ್ಪೋರ್ಟ್ ಅನ್ನು ಮ್ಯಾಜಿಸ್ಟ್ರೇಟ್ರ ವಶಕ್ಕೆ ಒಪ್ಪಿಸಬೇಕು ಎಂಬ ಷರತ್ತನ್ನು ನ್ಯಾಯ ಪೀಠ ವಿಧಿಸಿದೆ.<br /> <br /> ಇದಕ್ಕೆ ಆಕ್ಷೇಪಗಳಿದ್ದರೆ ಅಧೀನ ನ್ಯಾಯಾಲಯದ ಮೊರೆ ಹೋಗಲು ಸಿಬಿಐಗೆ ನ್ಯಾಯ ಪೀಠ ಅವಕಾಶ ನೀಡಿದೆ. ಅತ್ಯಂತ ಕುತೂಹಲಕರ ತಿರುವುಗಳನ್ನು ಪಡೆಯುತ್ತಿರುವ ಆರುಷಿಯ ಕೊಲೆ 2008ರ ಮೇ 15- 16ರ ಮಧ್ಯರಾತ್ರಿಯಲ್ಲಿ ನಡೆದಿತ್ತು. ಮರು ದಿವಸ ಮನೆಯ ಸಹಾಯಕನಾಗಿದ್ದ ಹೇಮರಾಜ್ನ ಶವ ರಾಜೇಶ್ ಅವರ ಮನೆ ತಾರಸಿ ಮೇಲೆ ಪತ್ತೆ ಆಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಆರುಷಿ ಮತ್ತು ಮನೆಯ ಸಹಾಯಕ ಹೇಮರಾಜ್ ಜೋಡಿ ಕೊಲೆ ಪ್ರಕರಣದಲ್ಲಿ ಆರೋಪಕ್ಕೆ ಗುರಿಯಾಗಿರುವ ಆರುಷಿ ತಂದೆ, ಡಾ. ರಾಜೇಶ್ ತಲ್ವಾರ್ ಅವರಿಗೆ ನೀಡಿರುವ ಜಾಮೀನು ಫೆ. 4ರವರೆಗೂ ಜಾರಿಯಲ್ಲಿರುವ ಕಾರಣ ಅವರನ್ನು ಬಂಧಿಸಬಾರದು ಎಂದು ಸುಪ್ರೀಂಕೋರ್ಟ್ ಸೋಮವಾರ ಸೂಚಿಸಿದೆ.<br /> <br /> ಈ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯ ದಂಪತಿ, ಆರುಷಿ ತಂದೆ ರಾಜೇಶ್ ತಲ್ವಾರ್ ಮತ್ತು ತಾಯಿ ನೂಪುರ್ ತಲ್ವಾರ್ ಅವರನ್ನು ವಿಚಾರಣೆಗೆ ಗುರಿಪಡಿಸಬೇಕು ಎಂದು ಅಧೀನ ನ್ಯಾಯಾಲಯ ಆದೇಶಿಸಿತ್ತು. ಈ ಆದೇಶಕ್ಕೆ ನೀಡಿದ್ದ ತಡೆಯನ್ನು ಸರ್ವೋಚ್ಚ ನ್ಯಾಯಾಲಯವು ಶುಕ್ರವಾರ ತೆರವುಗೊಳಿಸಿತು. ಆದ್ದರಿಂದ ರಾಜೇಶ್ ತಮ್ಮನ್ನು ಬಂಧಿಸಬಹುದು ಎಂದು ಆತಂಕಗೊಂಡಿದ್ದರು.<br /> <br /> ನ್ಯಾಯಮೂರ್ತಿಗಳಾದ ಎ.ಕೆ. ಗಂಗೂಲಿ ಮತ್ತು ಜೆ.ಎಸ್. ಖೇಹರ್ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠವು, ರಾಜೇಶ್ ಅವರ ಜಾಮೀನು ಅರ್ಜಿಗೆ ಸಂಬಂಧಿಸಿದ ಮುಂದಿನ ಯಾವುದೇ ವಿಚಾರಣೆಯನ್ನು ಫೆ. 4ರಂದು ಈ ಪ್ರಕರಣದ ವಿಚಾರಣೆ ಕೈಗೆತ್ತಿಕೊಳ್ಳುವ ಗಾಜಿಯಾಬಾದ್ ನ್ಯಾಯಾಲಯವೇ ನಡೆಸಲಿದೆ ಎಂದು ಹೇಳಿದೆ.<br /> <br /> ರಾಜೇಶ್ ಪೊಲೀಸರಿಗೆ ಮಾಹಿತಿ ನೀಡದೆ ಊರು ಬಿಡುವಂತಿಲ್ಲ ಮತ್ತು ಅವರ ಪಾಸ್ಪೋರ್ಟ್ ಅನ್ನು ಮ್ಯಾಜಿಸ್ಟ್ರೇಟ್ರ ವಶಕ್ಕೆ ಒಪ್ಪಿಸಬೇಕು ಎಂಬ ಷರತ್ತನ್ನು ನ್ಯಾಯ ಪೀಠ ವಿಧಿಸಿದೆ.<br /> <br /> ಇದಕ್ಕೆ ಆಕ್ಷೇಪಗಳಿದ್ದರೆ ಅಧೀನ ನ್ಯಾಯಾಲಯದ ಮೊರೆ ಹೋಗಲು ಸಿಬಿಐಗೆ ನ್ಯಾಯ ಪೀಠ ಅವಕಾಶ ನೀಡಿದೆ. ಅತ್ಯಂತ ಕುತೂಹಲಕರ ತಿರುವುಗಳನ್ನು ಪಡೆಯುತ್ತಿರುವ ಆರುಷಿಯ ಕೊಲೆ 2008ರ ಮೇ 15- 16ರ ಮಧ್ಯರಾತ್ರಿಯಲ್ಲಿ ನಡೆದಿತ್ತು. ಮರು ದಿವಸ ಮನೆಯ ಸಹಾಯಕನಾಗಿದ್ದ ಹೇಮರಾಜ್ನ ಶವ ರಾಜೇಶ್ ಅವರ ಮನೆ ತಾರಸಿ ಮೇಲೆ ಪತ್ತೆ ಆಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>