<p><strong>ಬೆಂಗಳೂರು:</strong> ಹರಿಯಾಣದ ಸೂರಜ್ಕುಂಡ್ ಮೇಳದ ಮಾದರಿಯಲ್ಲಿ ಪ್ರತಿ ವರ್ಷ ಬೆಂಗಳೂರಿನಲ್ಲಿ ಕರಕುಶಲ ಮೇಳ ಹಾಗೂ ಸಂತೆ ಆಯೋಜಿಸಲು ಸರ್ಕಾರ ನಿರ್ಧರಿಸಿದೆ.<br /> <br /> ಪ್ರವಾಸೋದ್ಯಮ ವಲಯದ ಒಟ್ಟಾರೆ ಅಭಿವೃದ್ಧಿಗೆ ಬಜೆಟ್ನಲ್ಲಿ ರೂ 347 ಕೋಟಿ ಅನುದಾನ ನೀಡಲಾಗಿದ್ದು, ಪ್ರವಾಸೋದ್ಯಮ ಇಲಾಖೆ ಬಲವರ್ಧನೆ ಮತ್ತು ಕಾರ್ಯ ಚಟುವಟಿಕೆಗಳ ಉತ್ತೇಜನಕ್ಕೆ ರೂ 60 ಕೋಟಿ ಒದಗಿಸಲಾಗಿದೆ.<br /> <br /> <strong>ಬಜೆಟ್ನ ಇತರೆ ಕೆಲವು ಮುಖ್ಯಾಂಶಗಳು..</strong><br /> *ಹಿಂದುಳಿದ ಹಾಗೂ ಅಲ್ಪ ಸಂಖ್ಯಾತ ವರ್ಗದವರಿಗೆ ಆತಿಥ್ಯ ಕ್ಷೇತ್ರದಲ್ಲಿ ಅಲ್ಪಾವಧಿ ತರಬೇತಿ.<br /> * ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಸಿಬ್ಬಂದಿ ನೇಮಕ ಹಾಗೂ ಪುನರ್ರಚನೆಗೆ ರೂ 2 ಕೋಟಿ ಅನುದಾನ.<br /> *ಪ್ರವಾಸೋದ್ಯಮ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ಹಾಗೂ ಕರ್ನಾಟಕದಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ಸಂಯೋಜನೆಗೊಳಿಸಲು ಪ್ರವಾಸೋದ್ಯಮ ವ್ಯಾಪಾರ ಸೌಕರ್ಯ ಕಾಯ್ದೆ ಜಾರಿ.<br /> *ಒಂದೇ ಸೂರಿನಡಿ ಎಲ್ಲಾ ಪ್ರವಾಸಿ ಸೇವೆಗಳನ್ನು ಒದಗಿಸಲು ವಿಶ್ವ ಪಾರಂಪರಿಕ ತಾಣಗಳಾದ ಹಂಪಿ ಮತ್ತು ಪಟ್ಟದಕಲ್ಲಿನಲ್ಲಿ ಪ್ರವಾಸಿ ಪ್ಲಾಜಾಗಳ ನಿರ್ಮಾಣ.<br /> *ಹಿಂದುಳಿದ ಹಾಗೂ ಅಲ್ಪ ಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ಕರ್ನಾಟಕ ದರ್ಶನ ಪ್ರವಾಸ ಸೌಲಭ್ಯ.<br /> *ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವರ್ಗದವರಿಗೆ ಪ್ರವಾಸಿ ಟ್ಯಾಕ್ಸಿಗಳ ವಿತರಣೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಹರಿಯಾಣದ ಸೂರಜ್ಕುಂಡ್ ಮೇಳದ ಮಾದರಿಯಲ್ಲಿ ಪ್ರತಿ ವರ್ಷ ಬೆಂಗಳೂರಿನಲ್ಲಿ ಕರಕುಶಲ ಮೇಳ ಹಾಗೂ ಸಂತೆ ಆಯೋಜಿಸಲು ಸರ್ಕಾರ ನಿರ್ಧರಿಸಿದೆ.<br /> <br /> ಪ್ರವಾಸೋದ್ಯಮ ವಲಯದ ಒಟ್ಟಾರೆ ಅಭಿವೃದ್ಧಿಗೆ ಬಜೆಟ್ನಲ್ಲಿ ರೂ 347 ಕೋಟಿ ಅನುದಾನ ನೀಡಲಾಗಿದ್ದು, ಪ್ರವಾಸೋದ್ಯಮ ಇಲಾಖೆ ಬಲವರ್ಧನೆ ಮತ್ತು ಕಾರ್ಯ ಚಟುವಟಿಕೆಗಳ ಉತ್ತೇಜನಕ್ಕೆ ರೂ 60 ಕೋಟಿ ಒದಗಿಸಲಾಗಿದೆ.<br /> <br /> <strong>ಬಜೆಟ್ನ ಇತರೆ ಕೆಲವು ಮುಖ್ಯಾಂಶಗಳು..</strong><br /> *ಹಿಂದುಳಿದ ಹಾಗೂ ಅಲ್ಪ ಸಂಖ್ಯಾತ ವರ್ಗದವರಿಗೆ ಆತಿಥ್ಯ ಕ್ಷೇತ್ರದಲ್ಲಿ ಅಲ್ಪಾವಧಿ ತರಬೇತಿ.<br /> * ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಸಿಬ್ಬಂದಿ ನೇಮಕ ಹಾಗೂ ಪುನರ್ರಚನೆಗೆ ರೂ 2 ಕೋಟಿ ಅನುದಾನ.<br /> *ಪ್ರವಾಸೋದ್ಯಮ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ಹಾಗೂ ಕರ್ನಾಟಕದಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ಸಂಯೋಜನೆಗೊಳಿಸಲು ಪ್ರವಾಸೋದ್ಯಮ ವ್ಯಾಪಾರ ಸೌಕರ್ಯ ಕಾಯ್ದೆ ಜಾರಿ.<br /> *ಒಂದೇ ಸೂರಿನಡಿ ಎಲ್ಲಾ ಪ್ರವಾಸಿ ಸೇವೆಗಳನ್ನು ಒದಗಿಸಲು ವಿಶ್ವ ಪಾರಂಪರಿಕ ತಾಣಗಳಾದ ಹಂಪಿ ಮತ್ತು ಪಟ್ಟದಕಲ್ಲಿನಲ್ಲಿ ಪ್ರವಾಸಿ ಪ್ಲಾಜಾಗಳ ನಿರ್ಮಾಣ.<br /> *ಹಿಂದುಳಿದ ಹಾಗೂ ಅಲ್ಪ ಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ಕರ್ನಾಟಕ ದರ್ಶನ ಪ್ರವಾಸ ಸೌಲಭ್ಯ.<br /> *ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವರ್ಗದವರಿಗೆ ಪ್ರವಾಸಿ ಟ್ಯಾಕ್ಸಿಗಳ ವಿತರಣೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>