<p><strong>ಬೆಂಗಳೂರು</strong>: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಮೋಡಿಗೆ ಒಳಗಾಗಿರುವ ರಾಜ್ಯದ ಜನತೆ ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗ ಉಂಟುಮಾಡಿದ್ದಾರೆ. ಲೋಕಸಭೆಯ ಒಟ್ಟು 28 ಸ್ಥಾನಗಳ ಪೈಕಿ 17 ಸ್ಥಾನಗಳು 'ಕಮಲ'ದ ಪಾಲಾಗಿದ್ದು, 'ಕೈ'ಗೆ ಕೇವಲ 9 ಸ್ಥಾನಗಳು ಮಾತ್ರ ದಕ್ಕಿವೆ. ಇನ್ನೂ, ಜೆಡಿಎಸ್ 2 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳುವಂತಾಗಿದೆ.</p>.<p>ಪ್ರಮುಖ ಕ್ಷೇತ್ರಗಳಾದ ಶಿವಮೊಗ್ಗ, ಉಡುಪಿ–ಚಿಕ್ಕಮಗಳೂರು,ದಕ್ಷಿಣ ಕನ್ನಡ, ಮೈಸೂರು, ಬೆಂಗಳೂರು ಉತ್ತರ, ದಕ್ಷಿಣ, ಬಳ್ಳಾರಿ, ದಾವಣಗೆರೆಯಲ್ಲಿ ತೀವ್ರ <span style="font-size: 26px;">ಪೈಪೋಟಿ ನಡುವೆಯೂ ಬಿಜೆಪಿ ಭರ್ಜರಿ ಜಯ ಸಾಧಿಸಿದೆ.</span></p>.<p>ಇನ್ನುಳಿದಂತೆ ಧಾ<span style="font-size: 26px;">ರವಾಡ,ಬಿಜಾಪುರ, ಬಾಗಲಕೋಟೆ, ಬೆಳಗಾವಿ, ಬೀದರ್, ಹಾವೇರಿ ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಿದೆ.</span></p>.<p><strong>ಕಾಂಗ್ರೆಸ್ ತೆಕ್ಕೆಗೆ</strong>: ತುಮಕೂರು, ಗುಲ್ಬರ್ಗ, ಚಿಕ್ಕೋಡಿ, ರಾಯಚೂರು, ಬೆಂಗಳೂರು ಗ್ರಾಮಾಂತರ, ಚಿಕ್ಕೋಡಿ ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಿವೆ.</p>.<p><strong style="font-size: 26px;">ಜೆಡಿಎಸ್</strong><span style="font-size: 26px;">: ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್. ಡಿ. ದೇವೇಗೌಡ ಹಾಸನ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಇನ್ನು ಮಂಡ್ಯದಲ್ಲಿ ರಮ್ಯಾ ಅವರನ್ನು ಕಣಕ್ಕಿಳಿಸಿ ಗೆಲ್ಲುವ ಕಾಂಗ್ರೆಸ್ ನಿರೀಕ್ಷೆ ತಲೆಕೆಳಗಾಗಿದೆ. ಪ್ರತಿಸ್ಪರ್ಧಿ ಜೆಡಿಎಸ್ ನ ಸಿ. ಎಸ್. ಪುಟ್ಟರಾಜು ಗೆಲುವು ಸಾಧಿಸಿದ್ದಾರೆ.</span></p>.<p>ಕೊಪ್ಪಳದಲ್ಲಿ ಬಿಜೆಪಿಯ ಕರಡಿ ಸಂಗಣ್ಣ ಗೆಲುವು ಬಹುತೇಕ ಖಚಿತವಾಗಿದೆ. ಮತಯಂತ್ರವೊಂದರಲ್ಲಿ ತಾಂತ್ರಿಕ ದೋಷದಿಂದ ಗೆಲುವಿನ ಅಧಿಕೃತ ಘೋಷಣೆ ಬಾಕಿ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರ ಮೋಡಿಗೆ ಒಳಗಾಗಿರುವ ರಾಜ್ಯದ ಜನತೆ ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗ ಉಂಟುಮಾಡಿದ್ದಾರೆ. ಲೋಕಸಭೆಯ ಒಟ್ಟು 28 ಸ್ಥಾನಗಳ ಪೈಕಿ 17 ಸ್ಥಾನಗಳು 'ಕಮಲ'ದ ಪಾಲಾಗಿದ್ದು, 'ಕೈ'ಗೆ ಕೇವಲ 9 ಸ್ಥಾನಗಳು ಮಾತ್ರ ದಕ್ಕಿವೆ. ಇನ್ನೂ, ಜೆಡಿಎಸ್ 2 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳುವಂತಾಗಿದೆ.</p>.<p>ಪ್ರಮುಖ ಕ್ಷೇತ್ರಗಳಾದ ಶಿವಮೊಗ್ಗ, ಉಡುಪಿ–ಚಿಕ್ಕಮಗಳೂರು,ದಕ್ಷಿಣ ಕನ್ನಡ, ಮೈಸೂರು, ಬೆಂಗಳೂರು ಉತ್ತರ, ದಕ್ಷಿಣ, ಬಳ್ಳಾರಿ, ದಾವಣಗೆರೆಯಲ್ಲಿ ತೀವ್ರ <span style="font-size: 26px;">ಪೈಪೋಟಿ ನಡುವೆಯೂ ಬಿಜೆಪಿ ಭರ್ಜರಿ ಜಯ ಸಾಧಿಸಿದೆ.</span></p>.<p>ಇನ್ನುಳಿದಂತೆ ಧಾ<span style="font-size: 26px;">ರವಾಡ,ಬಿಜಾಪುರ, ಬಾಗಲಕೋಟೆ, ಬೆಳಗಾವಿ, ಬೀದರ್, ಹಾವೇರಿ ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಿದೆ.</span></p>.<p><strong>ಕಾಂಗ್ರೆಸ್ ತೆಕ್ಕೆಗೆ</strong>: ತುಮಕೂರು, ಗುಲ್ಬರ್ಗ, ಚಿಕ್ಕೋಡಿ, ರಾಯಚೂರು, ಬೆಂಗಳೂರು ಗ್ರಾಮಾಂತರ, ಚಿಕ್ಕೋಡಿ ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಿವೆ.</p>.<p><strong style="font-size: 26px;">ಜೆಡಿಎಸ್</strong><span style="font-size: 26px;">: ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್. ಡಿ. ದೇವೇಗೌಡ ಹಾಸನ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಇನ್ನು ಮಂಡ್ಯದಲ್ಲಿ ರಮ್ಯಾ ಅವರನ್ನು ಕಣಕ್ಕಿಳಿಸಿ ಗೆಲ್ಲುವ ಕಾಂಗ್ರೆಸ್ ನಿರೀಕ್ಷೆ ತಲೆಕೆಳಗಾಗಿದೆ. ಪ್ರತಿಸ್ಪರ್ಧಿ ಜೆಡಿಎಸ್ ನ ಸಿ. ಎಸ್. ಪುಟ್ಟರಾಜು ಗೆಲುವು ಸಾಧಿಸಿದ್ದಾರೆ.</span></p>.<p>ಕೊಪ್ಪಳದಲ್ಲಿ ಬಿಜೆಪಿಯ ಕರಡಿ ಸಂಗಣ್ಣ ಗೆಲುವು ಬಹುತೇಕ ಖಚಿತವಾಗಿದೆ. ಮತಯಂತ್ರವೊಂದರಲ್ಲಿ ತಾಂತ್ರಿಕ ದೋಷದಿಂದ ಗೆಲುವಿನ ಅಧಿಕೃತ ಘೋಷಣೆ ಬಾಕಿ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>