<p><strong>ಬೆಂಗಳೂರು: </strong>`ರಾಜ್ಯದಲ್ಲಿ ಮಕ್ಕಳ ಸಂಖ್ಯೆ ಎಷ್ಟಿದೆ ಎಂಬುದನ್ನು ಸಮರ್ಪಕವಾಗಿ ಸಮೀಕ್ಷೆ ನಡೆಸಿ ಅದಕ್ಕೆ ಅನುಗುಣವಾಗಿ ಗುಣಮಟ್ಟದ ಆಹಾರ ಪೂರೈಸುವತ್ತ ಸರ್ಕಾರ ಚಿಂತನೆ ನಡೆಸಬೇಕು~ ಎಂದು ವಕೀಲ ಕ್ಲಿಫ್ಟನ್ ಡಿ.ರೋಜಾರಿಯೋ ತಿಳಿಸಿದರು.<br /> <br /> ಚೈಲ್ಡ್ ರೈಟ್ಸ್ ಟ್ರಸ್ಟ್ ನಗರದಲ್ಲಿ ಶನಿವಾರ ಆಯೋಜಿಸಿದ್ದ `ರಾಜ್ಯದಲ್ಲಿ ಮಕ್ಕಳ ಅಪೌಷ್ಟಿಕತೆಗೆ ಕಾರಣ ಮತ್ತು ಪರಿಹಾರಗಳು~ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.`ಅಂಗನವಾಡಿಯಲ್ಲಿ ಮಕ್ಕಳಿಗೆ ಪ್ಯಾಕೇಟ್ ಮಾದರಿಯಲ್ಲಿ ಆಹಾರವನ್ನು ಒದಗಿಸಲಾಗುತ್ತಿದೆ. ಇದನ್ನು ರದ್ದು ಮಾಡಿ ಆಯಾ ಪ್ರದೇಶಗಳಲ್ಲಿ ಲಭ್ಯವಿರುವ ಆಹಾರ ಪದಾರ್ಥಗಳನ್ನೇ ಸಮರ್ಪಕವಾಗಿ ಪೂರೈಸುವ ವ್ಯವಸ್ಥೆ ರೂಪುಗೊಳ್ಳಬೇಕು. ಇದಕ್ಕಾಗಿ ಸರ್ಕಾರ ಬಜೆಟ್ನಲ್ಲಿ ಹೆಚ್ಚಿನ ಹಣ ಮೀಸಲಿಡಬೇಕು~ ಎಂದರು. <br /> <br /> `ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಅಂಗನವಾಡಿ ಕೇಂದ್ರಗಳ ಕೊರತೆಯಿದೆ. ಕೊಳೆಗೇರಿ ಮತ್ತು ಬಡಜನರು ಇರುವ ಪ್ರದೇಶಗಳಲ್ಲಿ ಕಡ್ಡಾಯವಾಗಿ ಅಂಗನವಾಡಿ ಕೇಂದ್ರಗಳನ್ನು ತೆರೆಯಬೇಕು. ಅಸ್ತಿತ್ವದಲ್ಲಿರುವ ಅಂಗನವಾಡಿ ಕೇಂದ್ರಗಳು ಮೂಲ ಸೌಕರ್ಯದ ಸಮಸ್ಯೆಯನ್ನು ಎದುರಿಸುತ್ತಿದ್ದು ಇದನ್ನು ಸರಿಪಡಿಸಬೇಕು~ ಎಂದು ಆಗ್ರಹಿಸಿದರು.<br /> <br /> `ಸಾಮಾಜಿಕ ನ್ಯಾಯದಡಿಯಲ್ಲಿ ಎಲ್ಲ ಮಕ್ಕಳಿಗೆ ಆಹಾರವನ್ನು ಒದಗಿಸಬೇಕು. ಹಸಿವಿನಿಂದ ಯಾವುದೇ ಮಕ್ಕಳು ಸಾಯದಂತೆ ಕ್ರಮ ತೆಗೆದುಕೊಳ್ಳಬೇಕಿರುವುದು ಸರ್ಕಾರದ ಕರ್ತವ್ಯವಾಗಿದೆ~ ಎಂದರು.<br /> <br /> ಚೈಲ್ಡ್ ರೈಟ್ಸ್ ಟ್ರಸ್ಟಿ ಡಾ.ಪದ್ಮಿನಿ, `ಅಪೌಷ್ಟಿಕತೆಯ ಸಮಸ್ಯೆಯಿಂದ ದಿನವೊಂದಕ್ಕೆ ಐದು ವರ್ಷದೊಳಗಿನ ಮೂರು ಮಕ್ಕಳು ಮೃತಪಡುತ್ತಿರುವುದು ಆತಂಕದ ಸಂಗತಿ. ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು~ ಎಂದರು. ಮಕ್ಕಳ ಆಯೋಗದ ಸದಸ್ಯ ವಾಸುದೇವ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ರಾಜ್ಯದಲ್ಲಿ ಮಕ್ಕಳ ಸಂಖ್ಯೆ ಎಷ್ಟಿದೆ ಎಂಬುದನ್ನು ಸಮರ್ಪಕವಾಗಿ ಸಮೀಕ್ಷೆ ನಡೆಸಿ ಅದಕ್ಕೆ ಅನುಗುಣವಾಗಿ ಗುಣಮಟ್ಟದ ಆಹಾರ ಪೂರೈಸುವತ್ತ ಸರ್ಕಾರ ಚಿಂತನೆ ನಡೆಸಬೇಕು~ ಎಂದು ವಕೀಲ ಕ್ಲಿಫ್ಟನ್ ಡಿ.ರೋಜಾರಿಯೋ ತಿಳಿಸಿದರು.<br /> <br /> ಚೈಲ್ಡ್ ರೈಟ್ಸ್ ಟ್ರಸ್ಟ್ ನಗರದಲ್ಲಿ ಶನಿವಾರ ಆಯೋಜಿಸಿದ್ದ `ರಾಜ್ಯದಲ್ಲಿ ಮಕ್ಕಳ ಅಪೌಷ್ಟಿಕತೆಗೆ ಕಾರಣ ಮತ್ತು ಪರಿಹಾರಗಳು~ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.`ಅಂಗನವಾಡಿಯಲ್ಲಿ ಮಕ್ಕಳಿಗೆ ಪ್ಯಾಕೇಟ್ ಮಾದರಿಯಲ್ಲಿ ಆಹಾರವನ್ನು ಒದಗಿಸಲಾಗುತ್ತಿದೆ. ಇದನ್ನು ರದ್ದು ಮಾಡಿ ಆಯಾ ಪ್ರದೇಶಗಳಲ್ಲಿ ಲಭ್ಯವಿರುವ ಆಹಾರ ಪದಾರ್ಥಗಳನ್ನೇ ಸಮರ್ಪಕವಾಗಿ ಪೂರೈಸುವ ವ್ಯವಸ್ಥೆ ರೂಪುಗೊಳ್ಳಬೇಕು. ಇದಕ್ಕಾಗಿ ಸರ್ಕಾರ ಬಜೆಟ್ನಲ್ಲಿ ಹೆಚ್ಚಿನ ಹಣ ಮೀಸಲಿಡಬೇಕು~ ಎಂದರು. <br /> <br /> `ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಅಂಗನವಾಡಿ ಕೇಂದ್ರಗಳ ಕೊರತೆಯಿದೆ. ಕೊಳೆಗೇರಿ ಮತ್ತು ಬಡಜನರು ಇರುವ ಪ್ರದೇಶಗಳಲ್ಲಿ ಕಡ್ಡಾಯವಾಗಿ ಅಂಗನವಾಡಿ ಕೇಂದ್ರಗಳನ್ನು ತೆರೆಯಬೇಕು. ಅಸ್ತಿತ್ವದಲ್ಲಿರುವ ಅಂಗನವಾಡಿ ಕೇಂದ್ರಗಳು ಮೂಲ ಸೌಕರ್ಯದ ಸಮಸ್ಯೆಯನ್ನು ಎದುರಿಸುತ್ತಿದ್ದು ಇದನ್ನು ಸರಿಪಡಿಸಬೇಕು~ ಎಂದು ಆಗ್ರಹಿಸಿದರು.<br /> <br /> `ಸಾಮಾಜಿಕ ನ್ಯಾಯದಡಿಯಲ್ಲಿ ಎಲ್ಲ ಮಕ್ಕಳಿಗೆ ಆಹಾರವನ್ನು ಒದಗಿಸಬೇಕು. ಹಸಿವಿನಿಂದ ಯಾವುದೇ ಮಕ್ಕಳು ಸಾಯದಂತೆ ಕ್ರಮ ತೆಗೆದುಕೊಳ್ಳಬೇಕಿರುವುದು ಸರ್ಕಾರದ ಕರ್ತವ್ಯವಾಗಿದೆ~ ಎಂದರು.<br /> <br /> ಚೈಲ್ಡ್ ರೈಟ್ಸ್ ಟ್ರಸ್ಟಿ ಡಾ.ಪದ್ಮಿನಿ, `ಅಪೌಷ್ಟಿಕತೆಯ ಸಮಸ್ಯೆಯಿಂದ ದಿನವೊಂದಕ್ಕೆ ಐದು ವರ್ಷದೊಳಗಿನ ಮೂರು ಮಕ್ಕಳು ಮೃತಪಡುತ್ತಿರುವುದು ಆತಂಕದ ಸಂಗತಿ. ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು~ ಎಂದರು. ಮಕ್ಕಳ ಆಯೋಗದ ಸದಸ್ಯ ವಾಸುದೇವ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>