<p><strong>ಬೆಂಗಳೂರು: </strong>ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಒತ್ತಾಯಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಕಾರ್ಯಕರ್ತರು ನಗರದ ಪುರಭವನದ ಬಳಿ ಮಂಗಳವಾರ ಪ್ರತಿಭಟನೆ ನಡೆಸಿದರು.<br /> <br /> ಈ ವೇಳೆ ಮಾತನಾಡಿದ ಎಸ್ಡಿಪಿಐ ರಾಜ್ಯ ಘಟಕದ ಅಧ್ಯಕ್ಷ ಅಬ್ದುಲ್ ಮಜೀದ್, ‘ರಾಜ್ಯದ 60ಕ್ಕೂ ಹೆಚ್ಚು ಇಲಾಖೆಗಳಲ್ಲಿ ಒಟ್ಟು 1.80 ಲಕ್ಷ ಹುದ್ದೆಗಳು ಖಾಲಿ ಇವೆ. ಆ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ. ಉದ್ಯೋಗ ಕಲ್ಪಿಸುವಂತೆ ಕೋರಿ ಸಾವಿರಾರು ಯುವಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನತಾ ದರ್ಶನದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಆ ಅರ್ಜಿಗಳು ಕಸದ ಬುಟ್ಟಿ ಸೇರಿವೆ’ ಎಂದು ಆರೋಪಿಸಿದರು.<br /> <br /> ‘ಹಿಂದಿನ ಬಿಜೆಪಿ ಸರ್ಕಾರವು ನೌಕರರ ನಿವೃತ್ತಿ ವಯಸ್ಸನ್ನು 58 ರಿಂದ 60 ವರ್ಷಕ್ಕೆ ಏರಿಸುವ ಮೂಲಕ ನಿರುದ್ಯೋಗ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಕೂಡ ಸದ್ಯ ಯಾವುದೇ ಹುದ್ದೆಗಳಿಗೆ ಅರ್ಜಿ ಆಹ್ವಾನಿಸುವುದಿಲ್ಲ ಎಂದು ಹೇಳಿದೆ. ಈ ಜನವಿರೋಧಿ ನೀತಿಗಳಿಗೆ ಮುಂಬರುವ ಚುನಾವಣೆಗಳಲ್ಲಿ ಪಾಠ ಕಲಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.<br /> <br /> ಎಸ್ಡಿಪಿಐ ನಗರ ಘಟಕದ ಅಧ್ಯಕ್ಷ ಫಯಾಜ್ ಅಹಮದ್ ಮಾತನಾಡಿ, ‘ದೇಶದ ಭವಿಷ್ಯದ ದೃಷ್ಟಿಯಿಂದ ಗುಣಮಟ್ಟದ ಶಿಕ್ಷಣ ಹಾಗೂ ಉದ್ಯೋಗಾವಕಾಶ ಕಲ್ಪಿಸುವುದು ಸರ್ಕಾರದ ಕರ್ತವ್ಯ. ಉನ್ನತ ಶಿಕ್ಷಣ ಪೂರ್ಣಗೊಳಿಸಿದರೂ ಉದ್ಯೋಗ ಸಿಗದ ಕಾರಣ ಕೆಲ ಯುವಕರು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ. ಈ ಕಾರಣದಿಂದ ರಾಜ್ಯದಲ್ಲಿ ಕೊಲೆ, ಸುಲಿಗೆ, ದರೋಡೆ, ಕಳ್ಳತನ, ವಂಚನೆಯಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲಸ ಸಿಗದ ಬಡ ಪೋಷಕರು, ಶಾಲೆಗೆ ಹೋಗಬೇಕಾದ ತಮ್ಮ ಮಕ್ಕಳನ್ನು ಭಿಕ್ಷಾಟನೆಗೆ ಕಳುಹಿಸುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಒತ್ತಾಯಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಕಾರ್ಯಕರ್ತರು ನಗರದ ಪುರಭವನದ ಬಳಿ ಮಂಗಳವಾರ ಪ್ರತಿಭಟನೆ ನಡೆಸಿದರು.<br /> <br /> ಈ ವೇಳೆ ಮಾತನಾಡಿದ ಎಸ್ಡಿಪಿಐ ರಾಜ್ಯ ಘಟಕದ ಅಧ್ಯಕ್ಷ ಅಬ್ದುಲ್ ಮಜೀದ್, ‘ರಾಜ್ಯದ 60ಕ್ಕೂ ಹೆಚ್ಚು ಇಲಾಖೆಗಳಲ್ಲಿ ಒಟ್ಟು 1.80 ಲಕ್ಷ ಹುದ್ದೆಗಳು ಖಾಲಿ ಇವೆ. ಆ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ. ಉದ್ಯೋಗ ಕಲ್ಪಿಸುವಂತೆ ಕೋರಿ ಸಾವಿರಾರು ಯುವಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನತಾ ದರ್ಶನದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಆ ಅರ್ಜಿಗಳು ಕಸದ ಬುಟ್ಟಿ ಸೇರಿವೆ’ ಎಂದು ಆರೋಪಿಸಿದರು.<br /> <br /> ‘ಹಿಂದಿನ ಬಿಜೆಪಿ ಸರ್ಕಾರವು ನೌಕರರ ನಿವೃತ್ತಿ ವಯಸ್ಸನ್ನು 58 ರಿಂದ 60 ವರ್ಷಕ್ಕೆ ಏರಿಸುವ ಮೂಲಕ ನಿರುದ್ಯೋಗ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಕೂಡ ಸದ್ಯ ಯಾವುದೇ ಹುದ್ದೆಗಳಿಗೆ ಅರ್ಜಿ ಆಹ್ವಾನಿಸುವುದಿಲ್ಲ ಎಂದು ಹೇಳಿದೆ. ಈ ಜನವಿರೋಧಿ ನೀತಿಗಳಿಗೆ ಮುಂಬರುವ ಚುನಾವಣೆಗಳಲ್ಲಿ ಪಾಠ ಕಲಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.<br /> <br /> ಎಸ್ಡಿಪಿಐ ನಗರ ಘಟಕದ ಅಧ್ಯಕ್ಷ ಫಯಾಜ್ ಅಹಮದ್ ಮಾತನಾಡಿ, ‘ದೇಶದ ಭವಿಷ್ಯದ ದೃಷ್ಟಿಯಿಂದ ಗುಣಮಟ್ಟದ ಶಿಕ್ಷಣ ಹಾಗೂ ಉದ್ಯೋಗಾವಕಾಶ ಕಲ್ಪಿಸುವುದು ಸರ್ಕಾರದ ಕರ್ತವ್ಯ. ಉನ್ನತ ಶಿಕ್ಷಣ ಪೂರ್ಣಗೊಳಿಸಿದರೂ ಉದ್ಯೋಗ ಸಿಗದ ಕಾರಣ ಕೆಲ ಯುವಕರು ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ. ಈ ಕಾರಣದಿಂದ ರಾಜ್ಯದಲ್ಲಿ ಕೊಲೆ, ಸುಲಿಗೆ, ದರೋಡೆ, ಕಳ್ಳತನ, ವಂಚನೆಯಂತಹ ಪ್ರಕರಣಗಳು ಹೆಚ್ಚಾಗುತ್ತಿವೆ. ಕೆಲಸ ಸಿಗದ ಬಡ ಪೋಷಕರು, ಶಾಲೆಗೆ ಹೋಗಬೇಕಾದ ತಮ್ಮ ಮಕ್ಕಳನ್ನು ಭಿಕ್ಷಾಟನೆಗೆ ಕಳುಹಿಸುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>