<p><strong>ಬೆಂಗಳೂರು:</strong> ರಾಜ್ಯದ ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ 30 ಮಂದಿ ನಕ್ಸಲರು ಇದ್ದು, ಶ್ರೀಲಂಕಾ ಮತ್ತು ಆಂಧ್ರದ ವಲಸಿಗರೂ ಅವರಲ್ಲಿ ಸೇರಿಕೊಂಡಿದ್ದಾರೆ ಎಂದು ಗೃಹ ಸಚಿವ ಆರ್.ಅಶೋಕ ವಿಧಾನ ಪರಿಷತ್ಗೆ ತಿಳಿಸಿದರು.<br /> <br /> ಸೋಮವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಅಶ್ವತ್ಥನಾರಾಯಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, `ಇತ್ತೀಚೆಗೆ ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ನಕ್ಸಲರು ಪತ್ತೆಯಾಗಿದ್ದರು. 30 ಮಂದಿ ತಂಡದಲ್ಲಿರುವುದು ದೃಢಪಟ್ಟಿದೆ. ವಲಸಿಗರು ಇರುವುದು ಕೂಡ ಖಚಿತವಾಗಿದೆ~ ಎಂದರು.<br /> <br /> ಬಹಳ ದಿನಗಳಿಂದ ನಕ್ಸಲರು- ಪೊಲೀಸ್ ಪಡೆಗಳಿಗೆ ಮುಖಾಮುಖಿ ಆಗಿರಲಿಲ್ಲ. ಆದರೆ, ಈ ಬಾರಿ ಖಚಿತ ಮಾಹಿತಿ ಆಧರಿಸಿ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆಗೆ ಇಳಿದಿದ್ದ ವೇಳೆ ಎರಡು ಬಾರಿ ಮುಖಾಮುಖಿ ಆಗಿದ್ದಾರೆ. <br /> <br /> ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ನಕ್ಸಲ್ ನಿಗ್ರಹ ಪಡೆಗೆ ಒದಗಿಸಲಾಗಿದೆ. ಐಜಿಪಿ ಅಲೋಕ್ಕುಮಾರ್ ಅವರೇ ಸ್ವತಃ ಕಾರ್ಯಾಚರಣೆಯಲ್ಲಿ ಭಾಗವಹಿಸುತ್ತಿದ್ದಾರೆ. ನಕ್ಸಲರನ್ನು ಹತ್ತಿಕ್ಕಲು ಸರ್ಕಾರ ಸಂಪೂರ್ಣವಾಗಿ ಸಜ್ಜಾಗಿದೆ ಎಂದು ತಿಳಿಸಿದರು.<br /> <br /> ಶರಣಾಗಿ ಮುಖ್ಯವಾಹಿನಿಗೆ ಬರುವವರಿಗೆ ಸರ್ಕಾರ ಅಗತ್ಯ ನೆರವು ನೀಡಲಿದೆ. ಆದರೆ, ಬಂದೂಕಿನ ಮೂಲಕ ಸರ್ಕಾರದ ವಿರುದ್ಧ ಸಮರ ಸಾರುವವರಿಗೆ ಬಂದೂಕಿನ ಮೂಲಕವೇ ಉತ್ತರ ನೀಡಲಾಗುವುದು ಎಂದರು.<br /> <br /> ಸಚಿವರ ಉತ್ತರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅಶ್ವತ್ಥನಾರಾಯಣ ಮತ್ತು ಗಣೇಶ್ ಕಾರ್ಣಿಕ್, `ಪೊಲೀಸರಿಗಿಂತ ನಕ್ಸಲರೇ ಹೆಚ್ಚು ಅತ್ಯಾಧುನಿಕ ಶಸ್ತ್ರಾಸ್ತ್ರ ಹೊಂದಿದ್ದಾರೆ. ನಕ್ಸಲ್ಪೀಡಿತ ಪ್ರದೇಶದ ಅಭಿವೃದ್ಧಿ ವಿಷಯದಲ್ಲೂ ಸರ್ಕಾರ ಸೂಕ್ರ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದ ಪಶ್ಚಿಮ ಘಟ್ಟಗಳ ವ್ಯಾಪ್ತಿಯಲ್ಲಿ 30 ಮಂದಿ ನಕ್ಸಲರು ಇದ್ದು, ಶ್ರೀಲಂಕಾ ಮತ್ತು ಆಂಧ್ರದ ವಲಸಿಗರೂ ಅವರಲ್ಲಿ ಸೇರಿಕೊಂಡಿದ್ದಾರೆ ಎಂದು ಗೃಹ ಸಚಿವ ಆರ್.ಅಶೋಕ ವಿಧಾನ ಪರಿಷತ್ಗೆ ತಿಳಿಸಿದರು.<br /> <br /> ಸೋಮವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಅಶ್ವತ್ಥನಾರಾಯಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, `ಇತ್ತೀಚೆಗೆ ಚಿಕ್ಕಮಗಳೂರು-ದಕ್ಷಿಣ ಕನ್ನಡ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ನಕ್ಸಲರು ಪತ್ತೆಯಾಗಿದ್ದರು. 30 ಮಂದಿ ತಂಡದಲ್ಲಿರುವುದು ದೃಢಪಟ್ಟಿದೆ. ವಲಸಿಗರು ಇರುವುದು ಕೂಡ ಖಚಿತವಾಗಿದೆ~ ಎಂದರು.<br /> <br /> ಬಹಳ ದಿನಗಳಿಂದ ನಕ್ಸಲರು- ಪೊಲೀಸ್ ಪಡೆಗಳಿಗೆ ಮುಖಾಮುಖಿ ಆಗಿರಲಿಲ್ಲ. ಆದರೆ, ಈ ಬಾರಿ ಖಚಿತ ಮಾಹಿತಿ ಆಧರಿಸಿ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆಗೆ ಇಳಿದಿದ್ದ ವೇಳೆ ಎರಡು ಬಾರಿ ಮುಖಾಮುಖಿ ಆಗಿದ್ದಾರೆ. <br /> <br /> ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ನಕ್ಸಲ್ ನಿಗ್ರಹ ಪಡೆಗೆ ಒದಗಿಸಲಾಗಿದೆ. ಐಜಿಪಿ ಅಲೋಕ್ಕುಮಾರ್ ಅವರೇ ಸ್ವತಃ ಕಾರ್ಯಾಚರಣೆಯಲ್ಲಿ ಭಾಗವಹಿಸುತ್ತಿದ್ದಾರೆ. ನಕ್ಸಲರನ್ನು ಹತ್ತಿಕ್ಕಲು ಸರ್ಕಾರ ಸಂಪೂರ್ಣವಾಗಿ ಸಜ್ಜಾಗಿದೆ ಎಂದು ತಿಳಿಸಿದರು.<br /> <br /> ಶರಣಾಗಿ ಮುಖ್ಯವಾಹಿನಿಗೆ ಬರುವವರಿಗೆ ಸರ್ಕಾರ ಅಗತ್ಯ ನೆರವು ನೀಡಲಿದೆ. ಆದರೆ, ಬಂದೂಕಿನ ಮೂಲಕ ಸರ್ಕಾರದ ವಿರುದ್ಧ ಸಮರ ಸಾರುವವರಿಗೆ ಬಂದೂಕಿನ ಮೂಲಕವೇ ಉತ್ತರ ನೀಡಲಾಗುವುದು ಎಂದರು.<br /> <br /> ಸಚಿವರ ಉತ್ತರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅಶ್ವತ್ಥನಾರಾಯಣ ಮತ್ತು ಗಣೇಶ್ ಕಾರ್ಣಿಕ್, `ಪೊಲೀಸರಿಗಿಂತ ನಕ್ಸಲರೇ ಹೆಚ್ಚು ಅತ್ಯಾಧುನಿಕ ಶಸ್ತ್ರಾಸ್ತ್ರ ಹೊಂದಿದ್ದಾರೆ. ನಕ್ಸಲ್ಪೀಡಿತ ಪ್ರದೇಶದ ಅಭಿವೃದ್ಧಿ ವಿಷಯದಲ್ಲೂ ಸರ್ಕಾರ ಸೂಕ್ರ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>