<p><strong>ಬೆಳ್ತಂಗಡಿ: </strong>ರಾಜ್ಯದ್ಲ್ಲಲಿ ಪ್ರಸಕ್ತ ಆರ್ಥಿಕ ವರ್ಷ ಐದು ಲಕ್ಷ ಆಶ್ರಯ ಮನೆಗಳನ್ನು ನಿರ್ಮಿಸಲಾಗುವುದು. ಇಂದಿರಾ ವಸತಿ ಯೋಜನೆಯಡಿ ಒಂದು ಲಕ್ಷ ಮನೆ ಹಾಗೂ ಬಸವ ಸಮಿತಿ ವಸತಿ ಯೋಜನೆಯಡಿಯಲ್ಲಿ ನಾಲ್ಕು ಲಕ್ಷ ಮನೆ- ಹೀಗೆ ಒಟ್ಟು ಐದು ಲಕ್ಷ ಮನೆಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದು ವಸತಿ ಖಾತೆ ಸಚಿವ ವಿ.ಸೋಮಣ್ಣ ಹೇಳಿದರು. <br /> <br /> ಧರ್ಮಸ್ಥಳದಲ್ಲಿ ಗುರುವಾರ ಶ್ರೀ ಸನ್ನಿಧಿ ಅತಿಥಿ ಗೃಹದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. `ನನ್ನ ಮನೆ, ನನ್ನ ಸೊತ್ತು~ ಕಾರ್ಯಕ್ರಮದಡಿ ಈಗಾಗಲೆ 20 ಲಕ್ಷ ಮನೆಗಳನ್ನು ನಿರ್ಮಿಸಲಾಗಿದೆ ಎಂದು ಸಚಿವರು ತಿಳಿಸಿದರು. <br /> <br /> ಬೆಳ್ತಂಗಡಿ ತಾಲ್ಲೂಕಿನಲ್ಲಿರುವ ನಕ್ಸಲ್ ಪೀಡಿತ 12 ಗ್ರಾಮಗಳ ವ್ಯಾಪ್ತಿಯಲ್ಲಿರುವ ವಸತಿರಹಿತರಿಗೆ ಸರ್ಕಾರದ ವತಿಯಿಂದ ಅವರು ವಾಸ್ತವ್ಯ ಇರುವ ಸ್ಥಳದಲ್ಲೇ ಮನೆಗಳನ್ನು ನಿರ್ಮಿಸಿಕೊಡಲಾಗುವುದು ಎಂದು ಭರವಸೆ ನೀಡಿದ ಸಚಿವರು ಈ ಬಗ್ಗೆ ತಕ್ಷಣ ಪ್ರಸ್ತಾವನೆ ಕಳುಹಿಸಿ ಕೊಡುವಂತೆ ತಹಸೀಲ್ದಾರ್ಗೆ ಆದೇಶ ನೀಡಿದರು. <br /> <br /> ದೇವರ ದರ್ಶನದ ನಂತರ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರೊಡನೆ ಸಚಿವರು ಮಾತುಕತೆ ನಡೆಸಿದರು. ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳ್ತಂಗಡಿ: </strong>ರಾಜ್ಯದ್ಲ್ಲಲಿ ಪ್ರಸಕ್ತ ಆರ್ಥಿಕ ವರ್ಷ ಐದು ಲಕ್ಷ ಆಶ್ರಯ ಮನೆಗಳನ್ನು ನಿರ್ಮಿಸಲಾಗುವುದು. ಇಂದಿರಾ ವಸತಿ ಯೋಜನೆಯಡಿ ಒಂದು ಲಕ್ಷ ಮನೆ ಹಾಗೂ ಬಸವ ಸಮಿತಿ ವಸತಿ ಯೋಜನೆಯಡಿಯಲ್ಲಿ ನಾಲ್ಕು ಲಕ್ಷ ಮನೆ- ಹೀಗೆ ಒಟ್ಟು ಐದು ಲಕ್ಷ ಮನೆಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದು ವಸತಿ ಖಾತೆ ಸಚಿವ ವಿ.ಸೋಮಣ್ಣ ಹೇಳಿದರು. <br /> <br /> ಧರ್ಮಸ್ಥಳದಲ್ಲಿ ಗುರುವಾರ ಶ್ರೀ ಸನ್ನಿಧಿ ಅತಿಥಿ ಗೃಹದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. `ನನ್ನ ಮನೆ, ನನ್ನ ಸೊತ್ತು~ ಕಾರ್ಯಕ್ರಮದಡಿ ಈಗಾಗಲೆ 20 ಲಕ್ಷ ಮನೆಗಳನ್ನು ನಿರ್ಮಿಸಲಾಗಿದೆ ಎಂದು ಸಚಿವರು ತಿಳಿಸಿದರು. <br /> <br /> ಬೆಳ್ತಂಗಡಿ ತಾಲ್ಲೂಕಿನಲ್ಲಿರುವ ನಕ್ಸಲ್ ಪೀಡಿತ 12 ಗ್ರಾಮಗಳ ವ್ಯಾಪ್ತಿಯಲ್ಲಿರುವ ವಸತಿರಹಿತರಿಗೆ ಸರ್ಕಾರದ ವತಿಯಿಂದ ಅವರು ವಾಸ್ತವ್ಯ ಇರುವ ಸ್ಥಳದಲ್ಲೇ ಮನೆಗಳನ್ನು ನಿರ್ಮಿಸಿಕೊಡಲಾಗುವುದು ಎಂದು ಭರವಸೆ ನೀಡಿದ ಸಚಿವರು ಈ ಬಗ್ಗೆ ತಕ್ಷಣ ಪ್ರಸ್ತಾವನೆ ಕಳುಹಿಸಿ ಕೊಡುವಂತೆ ತಹಸೀಲ್ದಾರ್ಗೆ ಆದೇಶ ನೀಡಿದರು. <br /> <br /> ದೇವರ ದರ್ಶನದ ನಂತರ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರೊಡನೆ ಸಚಿವರು ಮಾತುಕತೆ ನಡೆಸಿದರು. ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>