<p><strong>ಬೆಂಗಳೂರು:</strong> ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎದುರಿಸಲು ರಾಜ್ಯದಲ್ಲೂ ಸಮಾನಮನಸ್ಕ ರಾಜಕೀಯ ಶಕ್ತಿಗಳು ಒಂದಾಗಬೇಕು ಎಂದು ಜೆಡಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಕೆ.ಸಿ. ರೆಡ್ಡಿ ಅಭಿಪ್ರಾಯಪಟ್ಟರು.<br /> <br /> ಕಾಂಗ್ರೆಸ್ ಮತ್ತು ಬಿಜೆಪಿಗೆ ಭ್ರಷ್ಟಾಚಾರದ ಕಳಂಕ ಅಂಟಿಕೊಂಡಿದೆ. ರಾಜ್ಯದ ಜನತೆ ಈ ಎರಡು ಪಕ್ಷಗಳಿಗೆ ಪರ್ಯಾಯ ರಾಜಕೀಯ ಶಕ್ತಿಯನ್ನು ಬಯಸಿದ್ದಾರೆ. ಕರ್ನಾಟಕದಲ್ಲಿ ಪರ್ಯಾಯ ರಂಗಕ್ಕೆ ಸೇರುವ ಪಕ್ಷಗಳಲ್ಲಿ ಜೆಡಿಎಸ್ ದೊಡ್ಡ ಪಕ್ಷವಾಗಿದೆ.<br /> <br /> ಹೀಗಾಗಿ ತೃತೀಯ ಶಕ್ತಿ ಒಂದುಗೂಡಿಸುವ ಪ್ರಕ್ರಿಯೆಯನ್ನು ಜೆಡಿಎಸ್ ರಾಷ್ಟ್ರ ಘಟಕದ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಕೈಗೊಳ್ಳಬೇಕು ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> ಈಗಾಗಲೇ ರಾಷ್ಟ್ರಮಟ್ಟದಲ್ಲಿ ಜವಾಬ್ದಾರಿಯುತ ಪರ್ಯಾಯ ರಂಗ ಸ್ಥಾಪನೆಯಾಗಿದೆ. ಇದೇ ಮಾದರಿಯಲ್ಲಿ ರಾಜ್ಯದಲ್ಲೂ ಸಮಾನ ಮನಸ್ಕ ಪಕ್ಷಗಳು ಒಂದುಗೂಡಿದರೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬಹುದು ಎಂದು ಅವರು ಅಭಿಪ್ರಾಯಪಟ್ಟರು.<br /> <br /> <strong>ಲಿಂಗನಮಕ್ಕಿಯಿಂದ ನೀರು ಹರಿಸಿ:</strong> ಲಿಂಗನಮಕ್ಕಿ ಜಲಾಶಯದಿಂದ ಸುಮಾರು 60 ಟಿಎಂಸಿ ನೀರನ್ನು ಬೆಂಗಳೂರಿಗೆ ಹಾಗೂ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಪೂರೈಸಬಹುದು ಎಂದು ಬಿ.ಎನ್. ತ್ಯಾಗರಾಜ್ ಅಧ್ಯಕ್ಷತೆಯ ತಜ್ಞರ ಸಮಿತಿ ಅಭಿಪ್ರಾಯಪಟ್ಟಿದೆ.<br /> <br /> ಆದ್ದರಿಂದ, ರಾಜ್ಯ ಸರ್ಕಾರ ಆದ್ಯತೆಯ ಮೇರೆಗೆ ತಕ್ಷಣ ಈ ಯೋಜನೆ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎದುರಿಸಲು ರಾಜ್ಯದಲ್ಲೂ ಸಮಾನಮನಸ್ಕ ರಾಜಕೀಯ ಶಕ್ತಿಗಳು ಒಂದಾಗಬೇಕು ಎಂದು ಜೆಡಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ.ಕೆ.ಸಿ. ರೆಡ್ಡಿ ಅಭಿಪ್ರಾಯಪಟ್ಟರು.<br /> <br /> ಕಾಂಗ್ರೆಸ್ ಮತ್ತು ಬಿಜೆಪಿಗೆ ಭ್ರಷ್ಟಾಚಾರದ ಕಳಂಕ ಅಂಟಿಕೊಂಡಿದೆ. ರಾಜ್ಯದ ಜನತೆ ಈ ಎರಡು ಪಕ್ಷಗಳಿಗೆ ಪರ್ಯಾಯ ರಾಜಕೀಯ ಶಕ್ತಿಯನ್ನು ಬಯಸಿದ್ದಾರೆ. ಕರ್ನಾಟಕದಲ್ಲಿ ಪರ್ಯಾಯ ರಂಗಕ್ಕೆ ಸೇರುವ ಪಕ್ಷಗಳಲ್ಲಿ ಜೆಡಿಎಸ್ ದೊಡ್ಡ ಪಕ್ಷವಾಗಿದೆ.<br /> <br /> ಹೀಗಾಗಿ ತೃತೀಯ ಶಕ್ತಿ ಒಂದುಗೂಡಿಸುವ ಪ್ರಕ್ರಿಯೆಯನ್ನು ಜೆಡಿಎಸ್ ರಾಷ್ಟ್ರ ಘಟಕದ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ಕೈಗೊಳ್ಳಬೇಕು ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.<br /> <br /> ಈಗಾಗಲೇ ರಾಷ್ಟ್ರಮಟ್ಟದಲ್ಲಿ ಜವಾಬ್ದಾರಿಯುತ ಪರ್ಯಾಯ ರಂಗ ಸ್ಥಾಪನೆಯಾಗಿದೆ. ಇದೇ ಮಾದರಿಯಲ್ಲಿ ರಾಜ್ಯದಲ್ಲೂ ಸಮಾನ ಮನಸ್ಕ ಪಕ್ಷಗಳು ಒಂದುಗೂಡಿದರೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬಹುದು ಎಂದು ಅವರು ಅಭಿಪ್ರಾಯಪಟ್ಟರು.<br /> <br /> <strong>ಲಿಂಗನಮಕ್ಕಿಯಿಂದ ನೀರು ಹರಿಸಿ:</strong> ಲಿಂಗನಮಕ್ಕಿ ಜಲಾಶಯದಿಂದ ಸುಮಾರು 60 ಟಿಎಂಸಿ ನೀರನ್ನು ಬೆಂಗಳೂರಿಗೆ ಹಾಗೂ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಪೂರೈಸಬಹುದು ಎಂದು ಬಿ.ಎನ್. ತ್ಯಾಗರಾಜ್ ಅಧ್ಯಕ್ಷತೆಯ ತಜ್ಞರ ಸಮಿತಿ ಅಭಿಪ್ರಾಯಪಟ್ಟಿದೆ.<br /> <br /> ಆದ್ದರಿಂದ, ರಾಜ್ಯ ಸರ್ಕಾರ ಆದ್ಯತೆಯ ಮೇರೆಗೆ ತಕ್ಷಣ ಈ ಯೋಜನೆ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>