<p><strong>ನರಗುಂದ: </strong>ಬಿಜೆಪಿ ಸರ್ಕಾರದ ಭ್ರಷ್ಟ ಆಡಳಿತದಿಂದ ರಾಜ್ಯದ ಘನತೆಗೆ ಚ್ಯುತಿಯಾಗಿದ್ದು, ಅದನ್ನು ತೊಡೆದು ಹಾಕಲು ಕಾಂಗ್ರೆಸ್ಗೆ ಐದು ವರ್ಷದ ಅಧಿಕಾರಾವಧಿ ಸಾಲದು ಎಂದು ಶಾಸಕ ಬಿ.ಆರ್.ಯಾವಗಲ್ ಹೇಳಿದರು.<br /> <br /> ತಾಲ್ಲೂಕಿನ ಕೊಣ್ಣೂರಿನಲ್ಲಿ ಗ್ರಾಮ ಪಂಚಾಯ್ತಿ ವತಿಯಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಬಿಜೆಪಿಯವರು ಕಳಸಾ-ಬಂಡೂರಿ ನಾಲೆ ಜೋಡಣೆ ವಿಚಾರವನ್ನು ಅಧಿಕಾರ ಹಿಡಿಯಲು ದಾಳವಾಗಿ ಬಳಸಿಕೊಂಡರು. ಅದನ್ನು ಕಾರ್ಯಗತಗೊಳಿಸಲು ಅವರಿಂದ ಸಾಧ್ಯವಾಗಲಿಲ್ಲ ಎಂದ ಅವರು, ಮೂಲ ಸೌಕರ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.<br /> <br /> ಸಾನಿಧ್ಯ ವಹಿಸಿದ್ದ ಡಾ. ಶಿವಕುಮಾರ ಶಿವಾಚಾರ್ಯರು ಮಾತನಾಡಿ, ಜನಪ್ರತಿನಿಧಿಗಳು ಕೊಣ್ಣೂರಿಗೆ ಮಲತಾಯಿ ಧೋರಣೆ ಮಾಡದೇ ಸುವರ್ಣ ಗ್ರಾಮ ನಿರ್ಮಿಸುವಲ್ಲಿ ಸಹಕರಿಸಬೇಕು ಎಂದರು.<br /> <br /> ಅವರಾದಿ ಫಲಹಾರೇಶ್ವರ ಸಂಸ್ಥಾನಮಠದ ಮೃತ್ಯುಂಜಯ ಸ್ವಾಮೀಜಿ ಮಾತನಾಡಿದರು. ಈ ಸಂದರ್ಭದಲ್ಲಿ ಗ್ರಾಮದ ಅಂಜುಮನ್ ಇಸ್ಲಾಂ ಸಮಿತಿ, ವಿಶ್ವಕರ್ಮ ಸಮಾಜ, ಕುರುಬ ಸಮಾಜ, ಜೈನ ಸಮಾಜ, ಮಾದಿಗ ಸಮಾಜ, ಕೃಷಿ ಪತ್ತಿನ ಸಹಕಾರಿ ಸಂಘ, ಮಾಯಮ್ಮ ದೇವಿ ಯುವಕ ಮಂಡಳ, ಕಾಳಿದಾಸ ಯುವಕ ಮಂಡಳದವರು ಶಾಸಕರನ್ನು ಸನ್ಮಾನಿಸಿದರು.<br /> <br /> ದೇವಾನಂದ ಚೌಡರಡ್ಡಿ, ಎಚ್.ಎನ್.ಕರಿಗೌಡ್ರ, ಶಿವಾನಂದ ಕಳಸಣ್ಣವರ, ಕೆ.ಎಚ್.ವಾಸನ, ಆರ್.ಎನ್.ಕರಿಗೌಡ್ರ, ಶಿವಾನಂದ ವಾಸನ, ಬಿಸ್ಮಿಲ್ಲಾ ಕಡಕೋಳ, ಟಿ.ಬಿ.ಶಿರಿಯಪ್ಪಗೌಡ್ರ, ಬಸಪ್ಪ ನರಗುಂದ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನರಗುಂದ: </strong>ಬಿಜೆಪಿ ಸರ್ಕಾರದ ಭ್ರಷ್ಟ ಆಡಳಿತದಿಂದ ರಾಜ್ಯದ ಘನತೆಗೆ ಚ್ಯುತಿಯಾಗಿದ್ದು, ಅದನ್ನು ತೊಡೆದು ಹಾಕಲು ಕಾಂಗ್ರೆಸ್ಗೆ ಐದು ವರ್ಷದ ಅಧಿಕಾರಾವಧಿ ಸಾಲದು ಎಂದು ಶಾಸಕ ಬಿ.ಆರ್.ಯಾವಗಲ್ ಹೇಳಿದರು.<br /> <br /> ತಾಲ್ಲೂಕಿನ ಕೊಣ್ಣೂರಿನಲ್ಲಿ ಗ್ರಾಮ ಪಂಚಾಯ್ತಿ ವತಿಯಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಬಿಜೆಪಿಯವರು ಕಳಸಾ-ಬಂಡೂರಿ ನಾಲೆ ಜೋಡಣೆ ವಿಚಾರವನ್ನು ಅಧಿಕಾರ ಹಿಡಿಯಲು ದಾಳವಾಗಿ ಬಳಸಿಕೊಂಡರು. ಅದನ್ನು ಕಾರ್ಯಗತಗೊಳಿಸಲು ಅವರಿಂದ ಸಾಧ್ಯವಾಗಲಿಲ್ಲ ಎಂದ ಅವರು, ಮೂಲ ಸೌಕರ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.<br /> <br /> ಸಾನಿಧ್ಯ ವಹಿಸಿದ್ದ ಡಾ. ಶಿವಕುಮಾರ ಶಿವಾಚಾರ್ಯರು ಮಾತನಾಡಿ, ಜನಪ್ರತಿನಿಧಿಗಳು ಕೊಣ್ಣೂರಿಗೆ ಮಲತಾಯಿ ಧೋರಣೆ ಮಾಡದೇ ಸುವರ್ಣ ಗ್ರಾಮ ನಿರ್ಮಿಸುವಲ್ಲಿ ಸಹಕರಿಸಬೇಕು ಎಂದರು.<br /> <br /> ಅವರಾದಿ ಫಲಹಾರೇಶ್ವರ ಸಂಸ್ಥಾನಮಠದ ಮೃತ್ಯುಂಜಯ ಸ್ವಾಮೀಜಿ ಮಾತನಾಡಿದರು. ಈ ಸಂದರ್ಭದಲ್ಲಿ ಗ್ರಾಮದ ಅಂಜುಮನ್ ಇಸ್ಲಾಂ ಸಮಿತಿ, ವಿಶ್ವಕರ್ಮ ಸಮಾಜ, ಕುರುಬ ಸಮಾಜ, ಜೈನ ಸಮಾಜ, ಮಾದಿಗ ಸಮಾಜ, ಕೃಷಿ ಪತ್ತಿನ ಸಹಕಾರಿ ಸಂಘ, ಮಾಯಮ್ಮ ದೇವಿ ಯುವಕ ಮಂಡಳ, ಕಾಳಿದಾಸ ಯುವಕ ಮಂಡಳದವರು ಶಾಸಕರನ್ನು ಸನ್ಮಾನಿಸಿದರು.<br /> <br /> ದೇವಾನಂದ ಚೌಡರಡ್ಡಿ, ಎಚ್.ಎನ್.ಕರಿಗೌಡ್ರ, ಶಿವಾನಂದ ಕಳಸಣ್ಣವರ, ಕೆ.ಎಚ್.ವಾಸನ, ಆರ್.ಎನ್.ಕರಿಗೌಡ್ರ, ಶಿವಾನಂದ ವಾಸನ, ಬಿಸ್ಮಿಲ್ಲಾ ಕಡಕೋಳ, ಟಿ.ಬಿ.ಶಿರಿಯಪ್ಪಗೌಡ್ರ, ಬಸಪ್ಪ ನರಗುಂದ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>