<p>ಗಂಗಾವತಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು ಸುಮಾರು 7254 ಕಿ.ಮೀ. ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಯನ್ನು ರೂ. 2797 ಕೋಟಿ ಮೊತ್ತದಲ್ಲಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಇಲಾಖೆ ಕಾರ್ಯಮಗ್ನವಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಎಂ. ಉದಾಸಿ ಹೇಳಿದರು.<br /> <br /> ಏಷ್ಯಾ ಅಭಿವೃದ್ಧಿ ಬ್ಯಾಂಕಿನ ಹಣಕಾಸು ನೆರವಿನಲ್ಲಿ `ಕೆಶಿಪ್~ ಯೋಜನೆಯಡಿ ರಾಜ್ಯ ಹೆದ್ದಾರಿ 29ರ ಗಂಗಾವತಿ- ಮುದ್ಗಲ್ ಸಂಪರ್ಕ ಕಲ್ಪಿಸುವ 74 ಕಿ.ಮೀ. ರಸ್ತೆಯನ್ನು ಮೇಲ್ದರ್ಜೆಗೆ ಏರಿಸುವ ಕಾಮಗಾರಿಗೆ ಅವರು ಶುಕ್ರವಾರ ಇಲ್ಲಿ ಚಾಲನೆ ನೀಡಿದರು.<br /> <br /> ಬಳಿಕ ಸಮಾರಂಭದಲ್ಲಿ ಮಾತನಾಡಿದ ಅವರು, 2,797 ಕೋಟಿ ಮೊತ್ತದ ಕಾಮಗಾರಿಯನ್ನು ಹಣಕಾಸು ಅನುಮೋದನೆಗೆ ಕಳಿಸಲಾಗಿದೆ. ಶೀಘ್ರ ಮಂಜೂರಾತಿ ದೊರೆಯುವ ನಿರೀಕ್ಷೆಯಿದೆ ಎಂದರು.<br /> <br /> ಹೈ-ಕ ಹಿಂದುಳಿದ ಪ್ರದೇಶ ಎಂಬುವುದನ್ನು ಗಮನದಲ್ಲಿ ಇಟ್ಟುಕೊಂಡು ಎಲ್ಲ ಜಿಲ್ಲೆ, ಪ್ರದೇಶಕ್ಕಿಂತ ಹೆಚ್ಚಿನ ಅನುದಾನವನ್ನು ಇಲ್ಲಿನ ಜಿಲ್ಲೆಗಳಿಗೆ ನೀಡಲಾಗುತ್ತಿದೆ. ಈ ಹಿಂದಿನ ಯಾವ ಸರ್ಕಾರಗಳೂ ನೀಡದಷ್ಟು ಹಣವನ್ನು ಈಗಿನ ಸರ್ಕಾರ ಹೈ-ಕ ಭಾಗಕ್ಕೆ ನೀಡಿದೆ ಎಂದು ವಿವರಿಸಿದರು.<br /> <br /> ದೇಶದಲ್ಲಿ ಸ್ಥಿರ ಆರ್ಥಿಕ ನೀತಿ ಪ್ರಕಟಿಸಬೇಕು. ಸರ್ಕಾರ ಬದಲಾದರೂ ಆರ್ಥಿಕ ನೀತಿ ಬದಲಾಗಬಾರದು. ಒಟ್ಟು ಆದಾಯದಲ್ಲಿ ಒಂದು ನಿಗದಿತ ಪ್ರಮಾಣವನ್ನು ಶಿಕ್ಷಣ, ಆರೋಗ್ಯ, ನೀರು, ರಸ್ತೆಯಂಥ ಮೂಲ ಸೌಕರ್ಯಕ್ಕೆ ಮೀಸಲಿಡುವ ಬಗ್ಗೆ ಚರ್ಚೆಯಾಗಬೇಕು ಎಂದರು. <br /> <br /> ವಿಶ್ವ ಬ್ಯಾಂಕಿನಿಂದ 4,500 ಕೋಟಿ ಹಣಕಾಸಿನ ನೆರವು ಪಡೆದು ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದೆ. ಈ ಹಿಂದೆ ಯಾವ ಸರ್ಕಾರವೂ ರಾಜ್ಯದ ಇಷ್ಟೊಂದು ಪ್ರಮಾಣದ ರಸ್ತೆ ಅಭಿವೃದ್ಧಿ ಮಾಡಿರಲಿಲ್ಲ ಎಂದು ಸಚಿವ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗಂಗಾವತಿ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು ಸುಮಾರು 7254 ಕಿ.ಮೀ. ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಯನ್ನು ರೂ. 2797 ಕೋಟಿ ಮೊತ್ತದಲ್ಲಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಇಲಾಖೆ ಕಾರ್ಯಮಗ್ನವಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಎಂ. ಉದಾಸಿ ಹೇಳಿದರು.<br /> <br /> ಏಷ್ಯಾ ಅಭಿವೃದ್ಧಿ ಬ್ಯಾಂಕಿನ ಹಣಕಾಸು ನೆರವಿನಲ್ಲಿ `ಕೆಶಿಪ್~ ಯೋಜನೆಯಡಿ ರಾಜ್ಯ ಹೆದ್ದಾರಿ 29ರ ಗಂಗಾವತಿ- ಮುದ್ಗಲ್ ಸಂಪರ್ಕ ಕಲ್ಪಿಸುವ 74 ಕಿ.ಮೀ. ರಸ್ತೆಯನ್ನು ಮೇಲ್ದರ್ಜೆಗೆ ಏರಿಸುವ ಕಾಮಗಾರಿಗೆ ಅವರು ಶುಕ್ರವಾರ ಇಲ್ಲಿ ಚಾಲನೆ ನೀಡಿದರು.<br /> <br /> ಬಳಿಕ ಸಮಾರಂಭದಲ್ಲಿ ಮಾತನಾಡಿದ ಅವರು, 2,797 ಕೋಟಿ ಮೊತ್ತದ ಕಾಮಗಾರಿಯನ್ನು ಹಣಕಾಸು ಅನುಮೋದನೆಗೆ ಕಳಿಸಲಾಗಿದೆ. ಶೀಘ್ರ ಮಂಜೂರಾತಿ ದೊರೆಯುವ ನಿರೀಕ್ಷೆಯಿದೆ ಎಂದರು.<br /> <br /> ಹೈ-ಕ ಹಿಂದುಳಿದ ಪ್ರದೇಶ ಎಂಬುವುದನ್ನು ಗಮನದಲ್ಲಿ ಇಟ್ಟುಕೊಂಡು ಎಲ್ಲ ಜಿಲ್ಲೆ, ಪ್ರದೇಶಕ್ಕಿಂತ ಹೆಚ್ಚಿನ ಅನುದಾನವನ್ನು ಇಲ್ಲಿನ ಜಿಲ್ಲೆಗಳಿಗೆ ನೀಡಲಾಗುತ್ತಿದೆ. ಈ ಹಿಂದಿನ ಯಾವ ಸರ್ಕಾರಗಳೂ ನೀಡದಷ್ಟು ಹಣವನ್ನು ಈಗಿನ ಸರ್ಕಾರ ಹೈ-ಕ ಭಾಗಕ್ಕೆ ನೀಡಿದೆ ಎಂದು ವಿವರಿಸಿದರು.<br /> <br /> ದೇಶದಲ್ಲಿ ಸ್ಥಿರ ಆರ್ಥಿಕ ನೀತಿ ಪ್ರಕಟಿಸಬೇಕು. ಸರ್ಕಾರ ಬದಲಾದರೂ ಆರ್ಥಿಕ ನೀತಿ ಬದಲಾಗಬಾರದು. ಒಟ್ಟು ಆದಾಯದಲ್ಲಿ ಒಂದು ನಿಗದಿತ ಪ್ರಮಾಣವನ್ನು ಶಿಕ್ಷಣ, ಆರೋಗ್ಯ, ನೀರು, ರಸ್ತೆಯಂಥ ಮೂಲ ಸೌಕರ್ಯಕ್ಕೆ ಮೀಸಲಿಡುವ ಬಗ್ಗೆ ಚರ್ಚೆಯಾಗಬೇಕು ಎಂದರು. <br /> <br /> ವಿಶ್ವ ಬ್ಯಾಂಕಿನಿಂದ 4,500 ಕೋಟಿ ಹಣಕಾಸಿನ ನೆರವು ಪಡೆದು ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದೆ. ಈ ಹಿಂದೆ ಯಾವ ಸರ್ಕಾರವೂ ರಾಜ್ಯದ ಇಷ್ಟೊಂದು ಪ್ರಮಾಣದ ರಸ್ತೆ ಅಭಿವೃದ್ಧಿ ಮಾಡಿರಲಿಲ್ಲ ಎಂದು ಸಚಿವ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>