<p><strong>ಬೀದರ್: </strong>ಹೈದರಾಬಾದ್ ಕರ್ನಾಟಕ ಭಾಗದ ಜನರಿಗೆ ಜನಸಂಖ್ಯೆ ಆಧಾರದ ಮೇಲೆ ರಾಜ್ಯಮಟ್ಟದಲ್ಲೂ ವಿವಿಧ ಹುದ್ದೆಗಳಲ್ಲಿ ಮೀಸಲಾತಿ ಕಲ್ಪಿಸಬೇಕು ಎಂದು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ವೈಜನಾಥ ಪಾಟೀಲ್ ಆಗ್ರಹಿಸಿದರು.<br /> <br /> ಹೈದರಾಬಾದ್ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿರುವ ಸಂವಿಧಾನದ 371(ಜೆ)ನೇ ಕಲಂ ತಿದ್ದುಪಡಿ ಮಸೂದೆಯಲ್ಲೇ ದೋಷ ಇದೆ. ಈ ಭಾಗಕ್ಕೆ ಜನಸಂಖ್ಯೆ ಆಧಾರದಲ್ಲಿ ಮೀಸಲು ಒದಗಿಸಬೇಕು ಎಂಬುದು ನಮ್ಮ ಬೇಡಿಕೆಯಾಗಿತ್ತು. ಆದರೆ, ಈ ಭಾಗಕ್ಕಷ್ಟೇ ಸೀಮಿತಗೊಳಿಸಿ ಮೀಸಲಾತಿ ಕಲ್ಪಿಸಲಾಗಿದೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯಮಟ್ಟದಲ್ಲೂ ಮೀಸಲಾತಿ ಒದಗಿಸುವಂತೆ ಆಗ್ರಹಿಸಿ ಹೋರಾಟ ನಡೆಸಲಾಗುವುದು ಎಂದರು.<br /> <br /> ಕೇಂದ್ರವು ರಾಜ್ಯ ಸರ್ಕಾರಕ್ಕೆ ತಿದ್ದುಪಡಿ ಮಸೂದೆಯ ಪ್ರತಿ ಕಳುಹಿಸಿದ ನಂತರವೂ ಅನುಷ್ಠಾನ ವಿಳಂಬವಾಗಿದೆ. ನಗರಸಭೆ ಹಾಗೂ ವಿಧಾನಸಭೆ ಚುನಾವಣೆಯ ನೀತಿ ಸಂಹಿತೆಯೂ ವಿಳಂಬಕ್ಕೆ ಕಾರಣವಾಯಿತು ಎಂದು ಹೇಳಿದರು.<br /> <br /> ನಿಯಮಾವಳಿ ರಚನೆ ಆಗುವವರೆಗೆ ಈ ಭಾಗದಲ್ಲಿ ನೇಮಕಾತಿ ಸ್ಥಗಿತಗೊಳಿಸಿ ಈ ಹಿಂದೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಅದಾಗಿಯೂ ಕೆಲಕಡೆ ನೇಮಕಾತಿ ನಡೆದಿವೆ. ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿ ನೇಮಕಾತಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದರು.<br /> <br /> ಹೊಸ ನಿಯಮಾವಳಿಗಳನ್ನು ರೂಪಿಸಿದ ನಂತರವೇ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 23 ಸಾವಿರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬೇಕು. ಇಲ್ಲದಿದ್ದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.<br /> <br /> ಈ ಬಾರಿಯ ವೃತ್ತಿಪರ ಕೋರ್ಸ್ಗಳ ನೇಮಕಾತಿ ಪ್ರಕ್ರಿಯೆಯನ್ನೂ ತಡೆಹಿಡಿದರೆ ಒಳ್ಳೆಯದು. ಹಾಗಾದಲ್ಲಿ ಈ ಭಾಗದ ಸುಮಾರು 250 ವಿದ್ಯಾರ್ಥಿಗಳಿಗೆ ವೈದ್ಯಕೀಯ ವಿಭಾಗದಲ್ಲಿ ಸರ್ಕಾರಿ ಕೋಟಾದಡಿ ಉಚಿತ ಸೀಟುಗಳು ಸಿಗಲಿವೆ. ಸರ್ಕಾರ ಈ ಬಗೆಗೆ ಚಿಂತನೆ ನಡೆಸಬೇಕು ಎಂದರು.<br /> <br /> ಡಿಪಿಎಆರ್ ಕಾರ್ಯದರ್ಶಿ ಸಂಜೀವಕುಮಾರ್ ಅವರ ಅಧ್ಯಕ್ಷತೆಯ ಸಮಿತಿಯು `ಡಿ' ದರ್ಜೆಯಲ್ಲಿ ಶೇ 100, `ಸಿ' ದರ್ಜೆಯಲ್ಲಿ ಶೇ 80 ಮತ್ತು `ಬಿ' ದರ್ಜೆಯಲ್ಲಿ ಶೇ 70 ರಷ್ಟು ಸರ್ಕಾರಿ ಹುದ್ದೆಗಳನ್ನು ಆಯಾ ಜಿಲ್ಲೆಗೇ ಮೀಸಲಿಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ಅದರಂತೆಯೇ ನೇಮಕಾತಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.<br /> <br /> ನಿಯಮಾವಳಿ ಬಗ್ಗೆ ಸಲಹೆ ಸೂಚನೆ ಪಡೆಯಲು ಮಖ್ಯಮಂತ್ರಿಗಳು ಸಭೆ ಕರೆಯಬೇಕು ಎಂದು ಬೇಡಿಕೆ ಮಂಡಿಸಿದರು.<br /> ಸಮಿತಿಯ ವಿಭಾಗೀಯ ಪ್ರಧಾನ ಕಾರ್ಯದರ್ಶಿ ಅನಿಲಕುಮಾರ್ ಬೆಲ್ದಾರ್, ಜಿಲ್ಲಾ ಗೌರವಾಧ್ಯಕ್ಷ ಪ್ರೊ. ದೇವೇಂದ್ರ ಕಮಲ್, ಜಿಲ್ಲಾ ಅಧ್ಯಕ್ಷ ಪಂಡಿತರಾವ್ ಚಿದ್ರಿ, ಪ್ರಮುಖರಾದ ಶಂಕರೆಪ್ಪ ಹೊನ್ನಾ, ಗುಣವಂತರಾವ್ ಮಂಗಳೂರೆ, ಚನ್ನಬಸಪ್ಪ ಹಾಲಹಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಹೈದರಾಬಾದ್ ಕರ್ನಾಟಕ ಭಾಗದ ಜನರಿಗೆ ಜನಸಂಖ್ಯೆ ಆಧಾರದ ಮೇಲೆ ರಾಜ್ಯಮಟ್ಟದಲ್ಲೂ ವಿವಿಧ ಹುದ್ದೆಗಳಲ್ಲಿ ಮೀಸಲಾತಿ ಕಲ್ಪಿಸಬೇಕು ಎಂದು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ವೈಜನಾಥ ಪಾಟೀಲ್ ಆಗ್ರಹಿಸಿದರು.<br /> <br /> ಹೈದರಾಬಾದ್ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿರುವ ಸಂವಿಧಾನದ 371(ಜೆ)ನೇ ಕಲಂ ತಿದ್ದುಪಡಿ ಮಸೂದೆಯಲ್ಲೇ ದೋಷ ಇದೆ. ಈ ಭಾಗಕ್ಕೆ ಜನಸಂಖ್ಯೆ ಆಧಾರದಲ್ಲಿ ಮೀಸಲು ಒದಗಿಸಬೇಕು ಎಂಬುದು ನಮ್ಮ ಬೇಡಿಕೆಯಾಗಿತ್ತು. ಆದರೆ, ಈ ಭಾಗಕ್ಕಷ್ಟೇ ಸೀಮಿತಗೊಳಿಸಿ ಮೀಸಲಾತಿ ಕಲ್ಪಿಸಲಾಗಿದೆ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯಮಟ್ಟದಲ್ಲೂ ಮೀಸಲಾತಿ ಒದಗಿಸುವಂತೆ ಆಗ್ರಹಿಸಿ ಹೋರಾಟ ನಡೆಸಲಾಗುವುದು ಎಂದರು.<br /> <br /> ಕೇಂದ್ರವು ರಾಜ್ಯ ಸರ್ಕಾರಕ್ಕೆ ತಿದ್ದುಪಡಿ ಮಸೂದೆಯ ಪ್ರತಿ ಕಳುಹಿಸಿದ ನಂತರವೂ ಅನುಷ್ಠಾನ ವಿಳಂಬವಾಗಿದೆ. ನಗರಸಭೆ ಹಾಗೂ ವಿಧಾನಸಭೆ ಚುನಾವಣೆಯ ನೀತಿ ಸಂಹಿತೆಯೂ ವಿಳಂಬಕ್ಕೆ ಕಾರಣವಾಯಿತು ಎಂದು ಹೇಳಿದರು.<br /> <br /> ನಿಯಮಾವಳಿ ರಚನೆ ಆಗುವವರೆಗೆ ಈ ಭಾಗದಲ್ಲಿ ನೇಮಕಾತಿ ಸ್ಥಗಿತಗೊಳಿಸಿ ಈ ಹಿಂದೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಅದಾಗಿಯೂ ಕೆಲಕಡೆ ನೇಮಕಾತಿ ನಡೆದಿವೆ. ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿ ನೇಮಕಾತಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದರು.<br /> <br /> ಹೊಸ ನಿಯಮಾವಳಿಗಳನ್ನು ರೂಪಿಸಿದ ನಂತರವೇ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 23 ಸಾವಿರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಬೇಕು. ಇಲ್ಲದಿದ್ದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.<br /> <br /> ಈ ಬಾರಿಯ ವೃತ್ತಿಪರ ಕೋರ್ಸ್ಗಳ ನೇಮಕಾತಿ ಪ್ರಕ್ರಿಯೆಯನ್ನೂ ತಡೆಹಿಡಿದರೆ ಒಳ್ಳೆಯದು. ಹಾಗಾದಲ್ಲಿ ಈ ಭಾಗದ ಸುಮಾರು 250 ವಿದ್ಯಾರ್ಥಿಗಳಿಗೆ ವೈದ್ಯಕೀಯ ವಿಭಾಗದಲ್ಲಿ ಸರ್ಕಾರಿ ಕೋಟಾದಡಿ ಉಚಿತ ಸೀಟುಗಳು ಸಿಗಲಿವೆ. ಸರ್ಕಾರ ಈ ಬಗೆಗೆ ಚಿಂತನೆ ನಡೆಸಬೇಕು ಎಂದರು.<br /> <br /> ಡಿಪಿಎಆರ್ ಕಾರ್ಯದರ್ಶಿ ಸಂಜೀವಕುಮಾರ್ ಅವರ ಅಧ್ಯಕ್ಷತೆಯ ಸಮಿತಿಯು `ಡಿ' ದರ್ಜೆಯಲ್ಲಿ ಶೇ 100, `ಸಿ' ದರ್ಜೆಯಲ್ಲಿ ಶೇ 80 ಮತ್ತು `ಬಿ' ದರ್ಜೆಯಲ್ಲಿ ಶೇ 70 ರಷ್ಟು ಸರ್ಕಾರಿ ಹುದ್ದೆಗಳನ್ನು ಆಯಾ ಜಿಲ್ಲೆಗೇ ಮೀಸಲಿಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ಅದರಂತೆಯೇ ನೇಮಕಾತಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿದರು.<br /> <br /> ನಿಯಮಾವಳಿ ಬಗ್ಗೆ ಸಲಹೆ ಸೂಚನೆ ಪಡೆಯಲು ಮಖ್ಯಮಂತ್ರಿಗಳು ಸಭೆ ಕರೆಯಬೇಕು ಎಂದು ಬೇಡಿಕೆ ಮಂಡಿಸಿದರು.<br /> ಸಮಿತಿಯ ವಿಭಾಗೀಯ ಪ್ರಧಾನ ಕಾರ್ಯದರ್ಶಿ ಅನಿಲಕುಮಾರ್ ಬೆಲ್ದಾರ್, ಜಿಲ್ಲಾ ಗೌರವಾಧ್ಯಕ್ಷ ಪ್ರೊ. ದೇವೇಂದ್ರ ಕಮಲ್, ಜಿಲ್ಲಾ ಅಧ್ಯಕ್ಷ ಪಂಡಿತರಾವ್ ಚಿದ್ರಿ, ಪ್ರಮುಖರಾದ ಶಂಕರೆಪ್ಪ ಹೊನ್ನಾ, ಗುಣವಂತರಾವ್ ಮಂಗಳೂರೆ, ಚನ್ನಬಸಪ್ಪ ಹಾಲಹಳ್ಳಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>