<p><strong>ಬಾಗಲಕೋಟೆ:</strong> ನಗರದ ಬಸವೇಶ್ವರ ಎಂಜನಿಯರಿಂಗ್ ಕಾಲೇಜಿನ ಹಮ್ಮಿಕೊಳ್ಳಲಾಗಿರುವ ಎರಡು ದಿನಗಳ ರಾಜ್ಯಮಟ್ಟದ ತಾಂತ್ರಿಕ ಉತ್ಸವಕ್ಕೆ ವಿಜಾಪುರ ಜಿಲ್ಲಾಧಿಕಾರಿ ಶಿವಯೋಗಿ ಕಳಸದ ಶುಕ್ರವಾರ ಚಾಲನೆ ನೀಡಿದರು. <br /> <br /> ಈ ಸಂದರ್ಭದಲ್ಲಿ ಮಾತನಾಡಿದ ಅವರು, ಎಂಜಿನಿಯರ್ಗಳ ಮೇಲೆ ಸಾಮಾಜಿಕ ಹೊಣೆಗಾರಿಕೆ ಇದ್ದು, ಅದನ್ನು ಅರಿತು ಸಮಾಜಕ್ಕೆ ಉಪಯೋಗವಾಗುವಂತ ಸಂಶೋಧನೆಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.<br /> <br /> ಆತ್ಮ ವಿಶ್ವಾಸದಿಂದ ವೈಜ್ಞಾನಿಕ ಸವಾಲುಗಳನ್ನು ಎದುರಿಸುವ ಛಾತಿ ಬೆಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕಳಸದ ಅವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ.ಆರ್.ಎನ್.ಹೆರಕಲ್, ಎಂಜಿನಿಯರಿಂಗ್ ಕ್ಷೇತ್ರದ ಅವಿಷ್ಕಾರಗಳು ಸಮಾಜದ ಅಭಿವೃದ್ಧಿಗೆ ಬಳಕೆಯಾಗಬೇಕು ಮತ್ತು ಪೂರಕವಾಗಿರಬೇಕು ಎಂದು ಅಭಿಪ್ರಾಯಪಟ್ಟರು.<br /> <br /> ಮುಂಬೈನ ಆರ್ಕ್ ಟೆಕ್ನೋ ಸಲ್ಯೂಶನ್ ಕಂಪೆನಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ತಾಂತ್ರಿಕ ಕಾರ್ಯಾಗಾರದಲ್ಲಿ ಬೆಂಗಳೂರಿನ ಡಾ.ಸುಧೀರ ಕೌಶಿಕ ಉಪನ್ಯಾಸ ನೀಡಿದರು.<br /> ಡಾ. ಡಿ.ಎಸ್. ಜಂಗಮಶೆಟ್ಟಿ ತಾಂತ್ರಿಕ ಉತ್ಸವದ ಪರಿಚಯ ಮಾಡಿಕೊಟ್ಟರು.</p>.<p>ರಾಜ್ಯದ ವಿವಿಧ ಎಂಜಿನಿಯರಿಂಗ್ ಕಾಲೇಜುಗಳಿಂದ ಆಗಮಿಸಿರುವ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವಿವಿಧ ವೈಜ್ಞಾನಿಕ ಆಯಾಮಗಳ ಬಗ್ಗೆ ಮತ್ತು ಅವುಗಳನ್ನು ರೋಬೋಟೊಗಳಲ್ಲಿ ಬಳಸುವ ವಿಧಾನಗಳ ಕುರಿತು ಉಪನ್ಯಾಸ ಹಾಗೂ ತರಬೇತಿ ನೀಡಲಾಯಿತು. ಅನಿರುದ್ಧ ಮತ್ತು ಪ್ರಿಯಾಂಕಾ ನಿರೂಪಿಸಿದರು. ಎನ್.ಜೆ. ಜಗದೀಶ ಸ್ವಾಗತಿಸಿದರು. ಶೃತಿ ಶಾಂತಗಿರಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ನಗರದ ಬಸವೇಶ್ವರ ಎಂಜನಿಯರಿಂಗ್ ಕಾಲೇಜಿನ ಹಮ್ಮಿಕೊಳ್ಳಲಾಗಿರುವ ಎರಡು ದಿನಗಳ ರಾಜ್ಯಮಟ್ಟದ ತಾಂತ್ರಿಕ ಉತ್ಸವಕ್ಕೆ ವಿಜಾಪುರ ಜಿಲ್ಲಾಧಿಕಾರಿ ಶಿವಯೋಗಿ ಕಳಸದ ಶುಕ್ರವಾರ ಚಾಲನೆ ನೀಡಿದರು. <br /> <br /> ಈ ಸಂದರ್ಭದಲ್ಲಿ ಮಾತನಾಡಿದ ಅವರು, ಎಂಜಿನಿಯರ್ಗಳ ಮೇಲೆ ಸಾಮಾಜಿಕ ಹೊಣೆಗಾರಿಕೆ ಇದ್ದು, ಅದನ್ನು ಅರಿತು ಸಮಾಜಕ್ಕೆ ಉಪಯೋಗವಾಗುವಂತ ಸಂಶೋಧನೆಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.<br /> <br /> ಆತ್ಮ ವಿಶ್ವಾಸದಿಂದ ವೈಜ್ಞಾನಿಕ ಸವಾಲುಗಳನ್ನು ಎದುರಿಸುವ ಛಾತಿ ಬೆಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕಳಸದ ಅವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ.ಆರ್.ಎನ್.ಹೆರಕಲ್, ಎಂಜಿನಿಯರಿಂಗ್ ಕ್ಷೇತ್ರದ ಅವಿಷ್ಕಾರಗಳು ಸಮಾಜದ ಅಭಿವೃದ್ಧಿಗೆ ಬಳಕೆಯಾಗಬೇಕು ಮತ್ತು ಪೂರಕವಾಗಿರಬೇಕು ಎಂದು ಅಭಿಪ್ರಾಯಪಟ್ಟರು.<br /> <br /> ಮುಂಬೈನ ಆರ್ಕ್ ಟೆಕ್ನೋ ಸಲ್ಯೂಶನ್ ಕಂಪೆನಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ತಾಂತ್ರಿಕ ಕಾರ್ಯಾಗಾರದಲ್ಲಿ ಬೆಂಗಳೂರಿನ ಡಾ.ಸುಧೀರ ಕೌಶಿಕ ಉಪನ್ಯಾಸ ನೀಡಿದರು.<br /> ಡಾ. ಡಿ.ಎಸ್. ಜಂಗಮಶೆಟ್ಟಿ ತಾಂತ್ರಿಕ ಉತ್ಸವದ ಪರಿಚಯ ಮಾಡಿಕೊಟ್ಟರು.</p>.<p>ರಾಜ್ಯದ ವಿವಿಧ ಎಂಜಿನಿಯರಿಂಗ್ ಕಾಲೇಜುಗಳಿಂದ ಆಗಮಿಸಿರುವ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ವಿವಿಧ ವೈಜ್ಞಾನಿಕ ಆಯಾಮಗಳ ಬಗ್ಗೆ ಮತ್ತು ಅವುಗಳನ್ನು ರೋಬೋಟೊಗಳಲ್ಲಿ ಬಳಸುವ ವಿಧಾನಗಳ ಕುರಿತು ಉಪನ್ಯಾಸ ಹಾಗೂ ತರಬೇತಿ ನೀಡಲಾಯಿತು. ಅನಿರುದ್ಧ ಮತ್ತು ಪ್ರಿಯಾಂಕಾ ನಿರೂಪಿಸಿದರು. ಎನ್.ಜೆ. ಜಗದೀಶ ಸ್ವಾಗತಿಸಿದರು. ಶೃತಿ ಶಾಂತಗಿರಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>