<p><strong>ಸಿರಿಗೆರೆ (ಚಿತ್ರದುರ್ಗ ಜಿಲ್ಲೆ): </strong>ಪ್ರದರ್ಶನ ಕಲೆಯಾದ ವೀರಗಾಸೆಯ ಉಳಿವು ಮತ್ತು ಬೆಳವಣಿಗೆಗಾಗಿ ತರಳಬಾಳು ಜಗದ್ಗುರು ಬೃಹನ್ಮಠದ ಅಣ್ಣನ ಬಳಗವು ಕಳೆದ 25 ವರ್ಷಗಳಿಂದ ವೀರಗಾಸೆ ಸ್ಪರ್ಧೆಯನ್ನು ನಡೆಸಿಕೊಂಡು ಬರುತ್ತಿದ್ದು, ಈ ಬಾರಿಯೂ ಏಪ್ರಿಲ್ 11ರ ಸೋಮವಾರ ಸಿರಿಗೆರೆಯಲ್ಲಿ ರಾಜ್ಯಮಟ್ಟದ ವೀರಗಾಸೆ ಸ್ಪರ್ಧೆ ಏರ್ಪಡಿಸಲಾಗಿದೆ.<br /> <br /> ಆಸಕ್ತ ತಂಡವು ಉಚಿತವಾಗಿ ತಮ್ಮ ಹೆಸರನ್ನು ಏಪ್ರಿಲ್ 9ರೊಳಗೆ ನೋಂದಾಯಿಸಿಕೊಳ್ಳಬಹುದು. ಪ್ರತಿ ತಂಡದಲ್ಲಿ 12 ಕಲಾವಿದರಿಗೆ ಅವಕಾಶವಿರುತ್ತದೆ. ಉಚಿತ ಊಟ, ವಸತಿ ಸೌಲಭ್ಯ ಹಾಗೂ ಎರಡೂ ಕಡೆಯ ಪ್ರಯಾಣ ವೆಚ್ಚ ನೀಡಲಾಗುವುದು. ಸ್ಪರ್ಧೆಯನ್ನು ಹಿರಿಯ ಮತ್ತು ಕಿರಿಯ ವಿಭಾಗಗಳಲ್ಲಿ ನಡೆಸಿ ಪ್ರತ್ಯೇಕ 3 ಬಹುಮಾನಗಳನ್ನು ವೇಷಭೂಷಣ, ವಾದ್ಯ, ಒಡಪು ಸಾಹಿತ್ಯ, ಅಭಿನಯ ಆಧರಿಸಿ ನೀಡಲಾಗುವುದು.<br /> <br /> ಹೆಚ್ಚಿನ ಮಾಹಿತಿಗೆ ಜಿ.ಎಸ್. ಶಿವಕುಮಾರ್, ಕಾರ್ಯದರ್ಶಿ, ಅಣ್ಣನ ಬಳಗ, ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ - 577 541 ಚಿತ್ರದುರ್ಗ ತಾಲ್ಲೂಕು ಮತ್ತು ಜಿಲ್ಲೆ. ದೂರವಾಣಿ - 9986430496 ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಬೃಹನ್ಮಠದ ಪ್ರಕಟಣೆ ತಿಳಿಸಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರಿಗೆರೆ (ಚಿತ್ರದುರ್ಗ ಜಿಲ್ಲೆ): </strong>ಪ್ರದರ್ಶನ ಕಲೆಯಾದ ವೀರಗಾಸೆಯ ಉಳಿವು ಮತ್ತು ಬೆಳವಣಿಗೆಗಾಗಿ ತರಳಬಾಳು ಜಗದ್ಗುರು ಬೃಹನ್ಮಠದ ಅಣ್ಣನ ಬಳಗವು ಕಳೆದ 25 ವರ್ಷಗಳಿಂದ ವೀರಗಾಸೆ ಸ್ಪರ್ಧೆಯನ್ನು ನಡೆಸಿಕೊಂಡು ಬರುತ್ತಿದ್ದು, ಈ ಬಾರಿಯೂ ಏಪ್ರಿಲ್ 11ರ ಸೋಮವಾರ ಸಿರಿಗೆರೆಯಲ್ಲಿ ರಾಜ್ಯಮಟ್ಟದ ವೀರಗಾಸೆ ಸ್ಪರ್ಧೆ ಏರ್ಪಡಿಸಲಾಗಿದೆ.<br /> <br /> ಆಸಕ್ತ ತಂಡವು ಉಚಿತವಾಗಿ ತಮ್ಮ ಹೆಸರನ್ನು ಏಪ್ರಿಲ್ 9ರೊಳಗೆ ನೋಂದಾಯಿಸಿಕೊಳ್ಳಬಹುದು. ಪ್ರತಿ ತಂಡದಲ್ಲಿ 12 ಕಲಾವಿದರಿಗೆ ಅವಕಾಶವಿರುತ್ತದೆ. ಉಚಿತ ಊಟ, ವಸತಿ ಸೌಲಭ್ಯ ಹಾಗೂ ಎರಡೂ ಕಡೆಯ ಪ್ರಯಾಣ ವೆಚ್ಚ ನೀಡಲಾಗುವುದು. ಸ್ಪರ್ಧೆಯನ್ನು ಹಿರಿಯ ಮತ್ತು ಕಿರಿಯ ವಿಭಾಗಗಳಲ್ಲಿ ನಡೆಸಿ ಪ್ರತ್ಯೇಕ 3 ಬಹುಮಾನಗಳನ್ನು ವೇಷಭೂಷಣ, ವಾದ್ಯ, ಒಡಪು ಸಾಹಿತ್ಯ, ಅಭಿನಯ ಆಧರಿಸಿ ನೀಡಲಾಗುವುದು.<br /> <br /> ಹೆಚ್ಚಿನ ಮಾಹಿತಿಗೆ ಜಿ.ಎಸ್. ಶಿವಕುಮಾರ್, ಕಾರ್ಯದರ್ಶಿ, ಅಣ್ಣನ ಬಳಗ, ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ - 577 541 ಚಿತ್ರದುರ್ಗ ತಾಲ್ಲೂಕು ಮತ್ತು ಜಿಲ್ಲೆ. ದೂರವಾಣಿ - 9986430496 ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಬೃಹನ್ಮಠದ ಪ್ರಕಟಣೆ ತಿಳಿಸಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>