<p>ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸುವ ಸಂಬಂಧ ಹೈಕಮಾಂಡ್ ಜೊತೆ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶುಕ್ರವಾರ ದೆಹಲಿಗೆ ತೆರಳುವರು.<br /> <br /> ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದರೂ ಒಂದು ಸ್ಥಾನವನ್ನು ಸುಲಭವಾಗಿ ಪಡೆಯಲು ಕಾಂಗ್ರೆಸ್ಗೆ ಅವಕಾಶವಿದೆ. ಜೆಡಿಎಸ್ ಬೆಂಬಲ ದೊರತೆರೆ ಎರಡನೇ ಸ್ಥಾನ ಪಡೆಯಲು ಸಾಧ್ಯ. ಲಭ್ಯವಿರುವ ಒಂದು ಸ್ಥಾನಕ್ಕೆ ಹೆಸರನ್ನು ಅಂತಿಮಗೊಳಿಸುವುದು, ಜೆಡಿಎಸ್ ಬೆಂಬಲ ಪಡೆಯುವ ಸಾಧ್ಯತೆ ಬಗ್ಗೆ ಚರ್ಚಿಸಲಿದ್ದಾರೆ.<br /> <br /> ರಾಜ್ಯಸಭೆಯ ಉಪ ಸಭಾಪತಿ ಕೆ.ರೆಹಮಾನ್ ಖಾನ್, ಸಿ.ಕೆ.ಜಾಫರ್ ಷರೀಫ್, ಸಿ.ಎಂ.ಇಬ್ರಾಹಿಂ, ಬಿ.ಕೆ.ಹರಿಪ್ರಸಾದ್ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.<br /> <br /> ಇಂದು ಬಿಜೆಪಿ ಸಭೆ: ಪಕ್ಷದ ಅಭ್ಯರ್ಥಿಗಳ ಆಯ್ಕೆ ಸಂಬಂಧ ಬಿಜೆಪಿಯ ಹಿರಿಯ ಮುಖಂಡರು ಶುಕ್ರವಾರ ದೆಹಲಿಯಲ್ಲಿ ಸಭೆ ಸೇರಿ ಚರ್ಚೆ ನಡೆಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಸೋಮವಾರ ಕಡೆಯ ದಿನವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸುವ ಸಂಬಂಧ ಹೈಕಮಾಂಡ್ ಜೊತೆ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶುಕ್ರವಾರ ದೆಹಲಿಗೆ ತೆರಳುವರು.<br /> <br /> ನಾಲ್ಕು ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದರೂ ಒಂದು ಸ್ಥಾನವನ್ನು ಸುಲಭವಾಗಿ ಪಡೆಯಲು ಕಾಂಗ್ರೆಸ್ಗೆ ಅವಕಾಶವಿದೆ. ಜೆಡಿಎಸ್ ಬೆಂಬಲ ದೊರತೆರೆ ಎರಡನೇ ಸ್ಥಾನ ಪಡೆಯಲು ಸಾಧ್ಯ. ಲಭ್ಯವಿರುವ ಒಂದು ಸ್ಥಾನಕ್ಕೆ ಹೆಸರನ್ನು ಅಂತಿಮಗೊಳಿಸುವುದು, ಜೆಡಿಎಸ್ ಬೆಂಬಲ ಪಡೆಯುವ ಸಾಧ್ಯತೆ ಬಗ್ಗೆ ಚರ್ಚಿಸಲಿದ್ದಾರೆ.<br /> <br /> ರಾಜ್ಯಸಭೆಯ ಉಪ ಸಭಾಪತಿ ಕೆ.ರೆಹಮಾನ್ ಖಾನ್, ಸಿ.ಕೆ.ಜಾಫರ್ ಷರೀಫ್, ಸಿ.ಎಂ.ಇಬ್ರಾಹಿಂ, ಬಿ.ಕೆ.ಹರಿಪ್ರಸಾದ್ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.<br /> <br /> ಇಂದು ಬಿಜೆಪಿ ಸಭೆ: ಪಕ್ಷದ ಅಭ್ಯರ್ಥಿಗಳ ಆಯ್ಕೆ ಸಂಬಂಧ ಬಿಜೆಪಿಯ ಹಿರಿಯ ಮುಖಂಡರು ಶುಕ್ರವಾರ ದೆಹಲಿಯಲ್ಲಿ ಸಭೆ ಸೇರಿ ಚರ್ಚೆ ನಡೆಸಲಿದ್ದಾರೆ. ನಾಮಪತ್ರ ಸಲ್ಲಿಕೆಗೆ ಸೋಮವಾರ ಕಡೆಯ ದಿನವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>