<p><strong>ಬೆಂಗಳೂರು:</strong> ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷವಾದ ಕಾಂಗ್ರೆಸ್ನಲ್ಲಿ ರಾಜ್ಯಸಭೆಯ ಟಿಕೆಟ್ಗಾಗಿ ಆಕಾಂಕ್ಷಿಗಳು ತೀವ್ರ ಲಾಬಿ ನಡೆಸಿದ್ದಾರೆ.<br /> <br /> ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರೆಲ್ಲ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರದಲ್ಲಿ ತೊಡಗಿರುವುದರಿಂದ ರಾಜ್ಯಸಭೆಯ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಇನ್ನೂ ಆರಂಭವಾಗಿಲ್ಲ. ಆದರೆ ಆಕಾಂಕ್ಷಿಗಳು ಈಗಾಗಲೇ ಹೈಕಮಾಂಡ್ ಮೇಲೆ ಒತ್ತಡ ಹೇರುವ ಕಾರ್ಯದಲ್ಲಿ ತೊಡಗಿದ್ದಾರೆ.<br /> <br /> ಇದೇ 30ರಂದು ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ನಾಲ್ಕು ಸ್ಥಾನಗಳ ಚುನಾವಣೆಗೆ ಸೋಮವಾರದಿಂದ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ಬಿಜೆಪಿಗೆ ಎರಡು, ಕಾಂಗ್ರೆಸ್ಗೆ ಒಂದು ಸ್ಥಾನ ಸುಲಭವಾಗಿ ದೊರೆಯಲಿದ್ದು, ನಾಲ್ಕನೇ ಅಭ್ಯರ್ಥಿಯ ಗೆಲುವಿನಲ್ಲಿ ಜೆಡಿಎಸ್ ನಿರ್ಣಾಯಕ ಪಾತ್ರ ವಹಿಸಲಿದೆ.<br /> <br /> ರಾಜ್ಯಸಭೆಯ ಉಪ ಸಭಾಪತಿ ಕೆ.ರೆಹಮಾನ್ ಖಾನ್, ಸಂಸದರಾದ ಕೆ.ಬಿ.ಶಾಣಪ್ಪ, ಹೇಮಾಮಾಲಿನಿ ಮತ್ತು ರಾಜೀವ್ ಚಂದ್ರಶೇಖರ್ ನಿವೃತ್ತಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ಆ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ನ ರೆಹಮಾನ್ ಖಾನ್ ಪುನರಾಯ್ಕೆ ಬಯಸಿದ್ದಾರೆ. ಇನ್ನು ಮಾಜಿ ಕೇಂದ್ರ ಸಚಿವರಾದ ಸಿ.ಕೆ.ಜಾಫರ್ ಷರೀಫ್, ಸಿ.ಎಂ. ಇಬ್ರಾಹಿಂ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ಅವರೂ ಟಿಕೆಟ್ಗಾಗಿ ಪ್ರಯತ್ನ ನಡೆಸಿದ್ದಾರೆ.<br /> <br /> ಒಂದು ಸ್ಥಾನ ಮಾತ್ರ ಕಾಂಗ್ರೆಸ್ಗೆ ದೊರೆಯಲಿದ್ದು, ಮುಸ್ಲಿಂ ಸಮುದಾಯಕ್ಕೆ ಸೇರಿದವರಿಗೇ ಆ ಸ್ಥಾನ ನೀಡುವ ಸಾಧ್ಯತೆಗಳಿವೆ. ರೆಹಮಾನ್ ಖಾನ್ ಪುನರಾಯ್ಕೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಒಂದು ವೇಳೆ ಅವರನ್ನು ಕೈಬಿಟ್ಟರೆ ಹಿರಿಯ ಮುಖಂಡರಾದ ಷರೀಫ್ಗೆ ಟಿಕೆಟ್ ನೀಡಬಹುದು ಎಂದು ಮೂಲಗಳು ತಿಳಿಸಿವೆ. <br /> <br /> ಬಿಜೆಪಿಯಲ್ಲೂ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಹಾಲಿ ಸದಸ್ಯರಾದ ಶಾಣಪ್ಪ ಅವರೊಂದಿಗೆ ದೆಹಲಿಯಲ್ಲಿ ರಾಜ್ಯದ ವಿಶೇಷ ಪ್ರತಿನಿಧಿಯಾಗಿರುವ ವಿ.ಧನಂಜಯಕುಮಾರ್, ಲೋಕಸಭೆಯ ಮಾಜಿ ಉಪಸಭಾಧ್ಯಕ್ಷ ಎಸ್.ಮಲ್ಲಿಕಾರ್ಜುನಯ್ಯ ಮೊದಲಾದವರು ಟಿಕೆಟ್ಗಾಗಿ ಪೈಪೋಟಿ ನಡೆಸಿದ್ದಾರೆ.<br /> <br /> ಈ ಬಾರಿ ಹೇಮಾಮಾಲಿನಿ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಕಡಿಮೆ. ಆದರೆ ಆ ಸ್ಥಾನಕ್ಕೆ ರಾಷ್ಟ್ರಮಟ್ಟದ ಮುಖಂಡರೊಬ್ಬರನ್ನು ಆಯ್ಕೆ ಮಾಡಲಾಗುತ್ತದೆ. ರಾಜ್ಯದಿಂದ ಒಬ್ಬರಿಗೆ ಮಾತ್ರ ಅವಕಾಶ ಸಿಗಲಿದ್ದು, ಶಾಣಪ್ಪ ಅಥವಾ ಅವರ ಸಮುದಾಯಕ್ಕೆ ಸೇರಿದ ಯುವಕರಿಗೆ ಟಿಕೆಟ್ ನೀಡಲು ಚಿಂತನೆ ನಡೆದಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.<br /> <br /> <strong>ಜೆಡಿಎಸ್ ನಿರ್ಣಾಯಕ:</strong> ವಿಧಾನ ಸಭೆಯ ಒಟ್ಟು ಸಂಖ್ಯಾಬಲ 224. ಒಬ್ಬ ಅಭ್ಯರ್ಥಿಯ ಗೆಲುವಿಗೆ 45 ಮತಗಳು ಬೇಕು. ಸಂಖ್ಯಾಬಲದ ಆಧಾರದ ಮೇಲೆ ಬಿಜೆಪಿ ಎರಡು, ಕಾಂಗ್ರೆಸ್ ಒಂದು ಸ್ಥಾನವನ್ನು ಸುಲಭವಾಗಿ ಪಡೆಯಲಿದೆ. <br /> <br /> 26 ಸದಸ್ಯರನ್ನು ಹೊಂದಿರುವ ಜೆಡಿಎಸ್ ಮತಗಳು ನಿರ್ಣಾಯಕ ಪಾತ್ರ ವಹಿಸಲಿವೆ. ಜೆಡಿಎಸ್ನವರು ಕಾಂಗ್ರೆಸ್ಗೆ ಬೆಂಬಲ ನೀಡಿದರೆ ಆ ಪಕ್ಷಕ್ಕೆ ಎರಡು ಸ್ಥಾನಗಳು ದೊರೆಯಲಿವೆ. ಆದರೆ ಈಗಿನ ಪರಿಸ್ಥಿತಿಯನ್ನು ಗಮನಿಸಿದರೆ ಅಂತಹ ಸಾಧ್ಯತೆಗಳು ತುಂಬಾ ಕಡಿಮೆ. <br /> <br /> ರಾಜೀವ್ ಚಂದ್ರಶೇಖರ್, ಆದಿಕೇಶವುಲು ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದು ಜೆಡಿಎಸ್ನ 26 ಮತ್ತು ಬಿಜೆಪಿಯ ಹೆಚ್ಚುವರಿ ಮತಗಳನ್ನು ಪಡೆಯುವ ಮೂಲಕ ಆಯ್ಕೆಯಾಗಲು ಪ್ರಯತ್ನ ನಡೆಸಿದ್ದಾರೆ. <br /> <br /> ಇದಲ್ಲದೆ ಆಂಧ್ರ ಪ್ರದೇಶದ ಪ್ರಭಾವಿ ಮುಖಂಡರೊಬ್ಬರು ನಾಲ್ಕನೇ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ರಾಜೀವ್ ಚಂದ್ರಶೇಖರ್ ಪುನರಾಯ್ಕೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರೋಧವಿದೆ ಎನ್ನಲಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಆಡಳಿತಾರೂಢ ಬಿಜೆಪಿ ಮತ್ತು ವಿರೋಧ ಪಕ್ಷವಾದ ಕಾಂಗ್ರೆಸ್ನಲ್ಲಿ ರಾಜ್ಯಸಭೆಯ ಟಿಕೆಟ್ಗಾಗಿ ಆಕಾಂಕ್ಷಿಗಳು ತೀವ್ರ ಲಾಬಿ ನಡೆಸಿದ್ದಾರೆ.<br /> <br /> ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರೆಲ್ಲ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರದಲ್ಲಿ ತೊಡಗಿರುವುದರಿಂದ ರಾಜ್ಯಸಭೆಯ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಇನ್ನೂ ಆರಂಭವಾಗಿಲ್ಲ. ಆದರೆ ಆಕಾಂಕ್ಷಿಗಳು ಈಗಾಗಲೇ ಹೈಕಮಾಂಡ್ ಮೇಲೆ ಒತ್ತಡ ಹೇರುವ ಕಾರ್ಯದಲ್ಲಿ ತೊಡಗಿದ್ದಾರೆ.<br /> <br /> ಇದೇ 30ರಂದು ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ನಾಲ್ಕು ಸ್ಥಾನಗಳ ಚುನಾವಣೆಗೆ ಸೋಮವಾರದಿಂದ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ಬಿಜೆಪಿಗೆ ಎರಡು, ಕಾಂಗ್ರೆಸ್ಗೆ ಒಂದು ಸ್ಥಾನ ಸುಲಭವಾಗಿ ದೊರೆಯಲಿದ್ದು, ನಾಲ್ಕನೇ ಅಭ್ಯರ್ಥಿಯ ಗೆಲುವಿನಲ್ಲಿ ಜೆಡಿಎಸ್ ನಿರ್ಣಾಯಕ ಪಾತ್ರ ವಹಿಸಲಿದೆ.<br /> <br /> ರಾಜ್ಯಸಭೆಯ ಉಪ ಸಭಾಪತಿ ಕೆ.ರೆಹಮಾನ್ ಖಾನ್, ಸಂಸದರಾದ ಕೆ.ಬಿ.ಶಾಣಪ್ಪ, ಹೇಮಾಮಾಲಿನಿ ಮತ್ತು ರಾಜೀವ್ ಚಂದ್ರಶೇಖರ್ ನಿವೃತ್ತಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ಆ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ನ ರೆಹಮಾನ್ ಖಾನ್ ಪುನರಾಯ್ಕೆ ಬಯಸಿದ್ದಾರೆ. ಇನ್ನು ಮಾಜಿ ಕೇಂದ್ರ ಸಚಿವರಾದ ಸಿ.ಕೆ.ಜಾಫರ್ ಷರೀಫ್, ಸಿ.ಎಂ. ಇಬ್ರಾಹಿಂ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ಅವರೂ ಟಿಕೆಟ್ಗಾಗಿ ಪ್ರಯತ್ನ ನಡೆಸಿದ್ದಾರೆ.<br /> <br /> ಒಂದು ಸ್ಥಾನ ಮಾತ್ರ ಕಾಂಗ್ರೆಸ್ಗೆ ದೊರೆಯಲಿದ್ದು, ಮುಸ್ಲಿಂ ಸಮುದಾಯಕ್ಕೆ ಸೇರಿದವರಿಗೇ ಆ ಸ್ಥಾನ ನೀಡುವ ಸಾಧ್ಯತೆಗಳಿವೆ. ರೆಹಮಾನ್ ಖಾನ್ ಪುನರಾಯ್ಕೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಒಂದು ವೇಳೆ ಅವರನ್ನು ಕೈಬಿಟ್ಟರೆ ಹಿರಿಯ ಮುಖಂಡರಾದ ಷರೀಫ್ಗೆ ಟಿಕೆಟ್ ನೀಡಬಹುದು ಎಂದು ಮೂಲಗಳು ತಿಳಿಸಿವೆ. <br /> <br /> ಬಿಜೆಪಿಯಲ್ಲೂ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ. ಹಾಲಿ ಸದಸ್ಯರಾದ ಶಾಣಪ್ಪ ಅವರೊಂದಿಗೆ ದೆಹಲಿಯಲ್ಲಿ ರಾಜ್ಯದ ವಿಶೇಷ ಪ್ರತಿನಿಧಿಯಾಗಿರುವ ವಿ.ಧನಂಜಯಕುಮಾರ್, ಲೋಕಸಭೆಯ ಮಾಜಿ ಉಪಸಭಾಧ್ಯಕ್ಷ ಎಸ್.ಮಲ್ಲಿಕಾರ್ಜುನಯ್ಯ ಮೊದಲಾದವರು ಟಿಕೆಟ್ಗಾಗಿ ಪೈಪೋಟಿ ನಡೆಸಿದ್ದಾರೆ.<br /> <br /> ಈ ಬಾರಿ ಹೇಮಾಮಾಲಿನಿ ಅವರಿಗೆ ಟಿಕೆಟ್ ನೀಡುವ ಸಾಧ್ಯತೆ ಕಡಿಮೆ. ಆದರೆ ಆ ಸ್ಥಾನಕ್ಕೆ ರಾಷ್ಟ್ರಮಟ್ಟದ ಮುಖಂಡರೊಬ್ಬರನ್ನು ಆಯ್ಕೆ ಮಾಡಲಾಗುತ್ತದೆ. ರಾಜ್ಯದಿಂದ ಒಬ್ಬರಿಗೆ ಮಾತ್ರ ಅವಕಾಶ ಸಿಗಲಿದ್ದು, ಶಾಣಪ್ಪ ಅಥವಾ ಅವರ ಸಮುದಾಯಕ್ಕೆ ಸೇರಿದ ಯುವಕರಿಗೆ ಟಿಕೆಟ್ ನೀಡಲು ಚಿಂತನೆ ನಡೆದಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.<br /> <br /> <strong>ಜೆಡಿಎಸ್ ನಿರ್ಣಾಯಕ:</strong> ವಿಧಾನ ಸಭೆಯ ಒಟ್ಟು ಸಂಖ್ಯಾಬಲ 224. ಒಬ್ಬ ಅಭ್ಯರ್ಥಿಯ ಗೆಲುವಿಗೆ 45 ಮತಗಳು ಬೇಕು. ಸಂಖ್ಯಾಬಲದ ಆಧಾರದ ಮೇಲೆ ಬಿಜೆಪಿ ಎರಡು, ಕಾಂಗ್ರೆಸ್ ಒಂದು ಸ್ಥಾನವನ್ನು ಸುಲಭವಾಗಿ ಪಡೆಯಲಿದೆ. <br /> <br /> 26 ಸದಸ್ಯರನ್ನು ಹೊಂದಿರುವ ಜೆಡಿಎಸ್ ಮತಗಳು ನಿರ್ಣಾಯಕ ಪಾತ್ರ ವಹಿಸಲಿವೆ. ಜೆಡಿಎಸ್ನವರು ಕಾಂಗ್ರೆಸ್ಗೆ ಬೆಂಬಲ ನೀಡಿದರೆ ಆ ಪಕ್ಷಕ್ಕೆ ಎರಡು ಸ್ಥಾನಗಳು ದೊರೆಯಲಿವೆ. ಆದರೆ ಈಗಿನ ಪರಿಸ್ಥಿತಿಯನ್ನು ಗಮನಿಸಿದರೆ ಅಂತಹ ಸಾಧ್ಯತೆಗಳು ತುಂಬಾ ಕಡಿಮೆ. <br /> <br /> ರಾಜೀವ್ ಚಂದ್ರಶೇಖರ್, ಆದಿಕೇಶವುಲು ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದು ಜೆಡಿಎಸ್ನ 26 ಮತ್ತು ಬಿಜೆಪಿಯ ಹೆಚ್ಚುವರಿ ಮತಗಳನ್ನು ಪಡೆಯುವ ಮೂಲಕ ಆಯ್ಕೆಯಾಗಲು ಪ್ರಯತ್ನ ನಡೆಸಿದ್ದಾರೆ. <br /> <br /> ಇದಲ್ಲದೆ ಆಂಧ್ರ ಪ್ರದೇಶದ ಪ್ರಭಾವಿ ಮುಖಂಡರೊಬ್ಬರು ನಾಲ್ಕನೇ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ರಾಜೀವ್ ಚಂದ್ರಶೇಖರ್ ಪುನರಾಯ್ಕೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರೋಧವಿದೆ ಎನ್ನಲಾಗಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>