<p><strong>ಯಲಹಂಕ:</strong> ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಷಿಯೇಷನ್ನ ನೂತನ ಅಧ್ಯಕ್ಷರಾಗಿ ಎಂ.ಹನುಮಂತೇಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.<br /> <br /> ಎಂ.ಎಸ್.ಪಾಳ್ಯದಲ್ಲಿ ನಡೆದ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಸಂಸ್ಥೆಯ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯಲ್ಲಿ ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಹನುಮಂತೇಗೌಡ ಅವರೊಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.<br /> <br /> ಉಪಾಧ್ಯಕ್ಷರಾಗಿ ತುಮಕೂರಿನ ಸಿ.ಶಿವಮೂರ್ತಿ, ಕಾರ್ಯದರ್ಶಿಯಾಗಿ ಹಿರಿಯೂರಿನ ಎ.ಕೃಷ್ಣಮೂರ್ತಿ, ಸಹ ಕಾರ್ಯದರ್ಶಿಯಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎ.ಮುನಿರಾಜು, ಖಜಾಂಚಿಯಾಗಿ ಬ್ಯಾಡಗಿಯ ಶಿವಾನಂದ ಮಲ್ಲನಗೌಡರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.<br /> <br /> ಚುನಾವಣೆ ಸಂದರ್ಭದಲ್ಲಿ ಕೇವಲ ಐದು ಸ್ಥಾನಗಳಿಗೆ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಇನ್ನುಳಿದ ಸದಸ್ಯರನ್ನು ಅಧ್ಯಕ್ಷರ ನೇತೃತ್ವದ ಸಭೆಯಲ್ಲಿ ಅಂತಿಮಗೊಳಿಸುವಂತೆ ಸರ್ವ ಸದಸ್ಯರ ಸಭೆಯಲ್ಲಿ ನಿರ್ಣಯಿಸಲಾಯಿತು. ಅದರಂತೆ ಮಧ್ಯಾಹ್ನ 1.30ಕ್ಕೆ ನೂತನ ಅಧ್ಯಕ್ಷರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕೆಳಕಂಡ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.<br /> <br /> <strong>ಆಯ್ಕೆ: </strong>ಪಿ.ಎಂ.ಸೋಮಶೇಖರ (ಚೇರ್ಮನ್) ಸಿ.ಎಸ್.ಬರಗಾಲಿ, ಮೋಹನ್ ಹಿರೇಮನಿ, ಪುರುಷೋತ್ತಮ್ ಪೂಜಾರಿ (ಉಪಾಧ್ಯಕ್ಷರು) ಹಾಗೂ ಜಂಟಿ ಕಾರ್ಯದರ್ಶಿಗಳಾಗಿ ರಾಜೇಂದ್ರ ಸುವರ್ಣ, ಎಂ.ಎಚ್.ಮುಕ್ಕಣ್ಣವರ್ ಅವರನ್ನು ಆಯ್ಕೆ ಮಾಡಲಾಯಿತು.<br /> <br /> ವೀಕ್ಷಕರಾಗಿ ಅಮೆಚೂರ್ ಕಬಡ್ಡಿ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ತಮಿಳುನಾಡು ಕಬಡ್ಡಿ ಸಂಸ್ಥೆಯ ಕಾರ್ಯದರ್ಶಿ ಷಫೀವುಲ್ಲಾ, ಕರ್ನಾಟಕ ಒಲಂಪಿಕ್ ಅಸೋಷಿಯೇಷನ್ನ ಜಂಟಿ ಕಾರ್ಯದರ್ಶಿ ಪ್ರಕಾಶ್ ಆಗಮಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಷಿಯೇಷನ್ನ ನೂತನ ಅಧ್ಯಕ್ಷರಾಗಿ ಎಂ.ಹನುಮಂತೇಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.<br /> <br /> ಎಂ.ಎಸ್.ಪಾಳ್ಯದಲ್ಲಿ ನಡೆದ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಸಂಸ್ಥೆಯ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯಲ್ಲಿ ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಹನುಮಂತೇಗೌಡ ಅವರೊಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.<br /> <br /> ಉಪಾಧ್ಯಕ್ಷರಾಗಿ ತುಮಕೂರಿನ ಸಿ.ಶಿವಮೂರ್ತಿ, ಕಾರ್ಯದರ್ಶಿಯಾಗಿ ಹಿರಿಯೂರಿನ ಎ.ಕೃಷ್ಣಮೂರ್ತಿ, ಸಹ ಕಾರ್ಯದರ್ಶಿಯಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎ.ಮುನಿರಾಜು, ಖಜಾಂಚಿಯಾಗಿ ಬ್ಯಾಡಗಿಯ ಶಿವಾನಂದ ಮಲ್ಲನಗೌಡರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.<br /> <br /> ಚುನಾವಣೆ ಸಂದರ್ಭದಲ್ಲಿ ಕೇವಲ ಐದು ಸ್ಥಾನಗಳಿಗೆ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಇನ್ನುಳಿದ ಸದಸ್ಯರನ್ನು ಅಧ್ಯಕ್ಷರ ನೇತೃತ್ವದ ಸಭೆಯಲ್ಲಿ ಅಂತಿಮಗೊಳಿಸುವಂತೆ ಸರ್ವ ಸದಸ್ಯರ ಸಭೆಯಲ್ಲಿ ನಿರ್ಣಯಿಸಲಾಯಿತು. ಅದರಂತೆ ಮಧ್ಯಾಹ್ನ 1.30ಕ್ಕೆ ನೂತನ ಅಧ್ಯಕ್ಷರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕೆಳಕಂಡ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.<br /> <br /> <strong>ಆಯ್ಕೆ: </strong>ಪಿ.ಎಂ.ಸೋಮಶೇಖರ (ಚೇರ್ಮನ್) ಸಿ.ಎಸ್.ಬರಗಾಲಿ, ಮೋಹನ್ ಹಿರೇಮನಿ, ಪುರುಷೋತ್ತಮ್ ಪೂಜಾರಿ (ಉಪಾಧ್ಯಕ್ಷರು) ಹಾಗೂ ಜಂಟಿ ಕಾರ್ಯದರ್ಶಿಗಳಾಗಿ ರಾಜೇಂದ್ರ ಸುವರ್ಣ, ಎಂ.ಎಚ್.ಮುಕ್ಕಣ್ಣವರ್ ಅವರನ್ನು ಆಯ್ಕೆ ಮಾಡಲಾಯಿತು.<br /> <br /> ವೀಕ್ಷಕರಾಗಿ ಅಮೆಚೂರ್ ಕಬಡ್ಡಿ ಫೆಡರೇಷನ್ ಆಫ್ ಇಂಡಿಯಾ ವತಿಯಿಂದ ತಮಿಳುನಾಡು ಕಬಡ್ಡಿ ಸಂಸ್ಥೆಯ ಕಾರ್ಯದರ್ಶಿ ಷಫೀವುಲ್ಲಾ, ಕರ್ನಾಟಕ ಒಲಂಪಿಕ್ ಅಸೋಷಿಯೇಷನ್ನ ಜಂಟಿ ಕಾರ್ಯದರ್ಶಿ ಪ್ರಕಾಶ್ ಆಗಮಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>