<p>ಬೆಂಗಳೂರು : 2010-2011ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು ಜೀವಮಾನದ ಸಾಧನೆಗಾಗಿ ನಟ ಎಸ್.ಶಿವರಾಂ ಅವರಿಗೆ ಡಾ. ರಾಜಕುಮಾರ್ ಪ್ರಶಸ್ತಿ, ನಿರ್ದೇಶಕ ಭಾರ್ಗವ ಅವರಿಗೆ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ನೀಡಲಾಗಿದೆ. ವಿಷ್ಣುವರ್ಧನ್ ಪ್ರಶಸ್ತಿಗೆ ನಟ ಅಂಬರೀಷ್ ಆಯ್ಕೆಯಾಗಿದ್ದಾರೆ. <br /> <br /> ಆಯ್ಕೆ ಸಮಿತಿ ಅಧ್ಯಕ್ಷೆ ಭಾರತಿ ವಿಷ್ಣುವರ್ಧನ್ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಡಿ.ವಿ.ಸದನಂದ ಗೌಡ ನಗರದಲ್ಲಿ ಗುರುವಾರ ಪ್ರಶಸ್ತಿಗಳನ್ನು ಪ್ರಕಟಿಸಿದರು. <br /> <br /> ಪ್ರಥಮ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ರಾಕ್ಲೈನ್ ಪ್ರೊಡಕ್ಷನ್ಸ್ ನಿರ್ಮಾಣದ ಉಪೇಂದ್ರ ನಿರ್ದೇಶನದ `ಸೂಪರ್~ ಚಿತ್ರ ಆಯ್ಕೆಯಾಗಿದೆ. ಉಪೇಂದ್ರ ಅತ್ಯುತ್ತಮ ನಿರ್ದೇಶಕನಾಗಿ ಹೊರಹೊಮ್ಮಿದ್ದಾರೆ. ಹಂಸಲೇಖ ಇಮೇಜಸ್ ಪ್ರೈ. ಲಿಮಿಟೆಡ್ನ `ಭಗವತಿಕಾಡು~ ಚಿತ್ರಕ್ಕೆ ದ್ವಿತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿ ಲಭಿಸಿದೆ. ರೇಣು ಡಿಜಿಟಲ್ ಸ್ಟುಡಿಯೊ ನಿರ್ಮಾಣದ ನಿರ್ದೇಶಕ ರೇಣುಕುಮಾರ್ ಅವರ ಶಬ್ದಮಣಿ ಚಿತ್ರಕ್ಕೆ ತೃತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿ ಸಂದಿದೆ. ವಿಶೇಷ ಸಾಮಾಜಿಕ ಕಾಳಜಿಯ ಚಿತ್ರ ಶ್ರೀನಿವಾಸ್ ಕೌಶಿಕ್ ನಿರ್ದೇಶನದ `ತರಂಗಿಣಿ~. ಅತ್ಯುತ್ತಮ ಮಕ್ಕಳ ಚಿತ್ರ ಸಿ.ಲಕ್ಷ್ಮಣ್ ನಿರ್ದೇಶನದ `ನನ್ನ ಗೋಪಾಲ~. <br /> <br /> ಅತ್ಯುತ್ತಮ ನಟ ಪ್ರಶಸ್ತಿಗೆ ಪುನೀತ್ರಾಜ್ಕುಮಾರ್ (ಚಿತ್ರ: ಪೃಥ್ವಿ), ಅತ್ಯುತ್ತಮ ನಟಿ ಪ್ರಶಸ್ತಿಗೆ ಕಲ್ಯಾಣಿ (ಚಿತ್ರ: ಸೂಸೈಡ್) ಅವರನ್ನು ಆಯ್ಕೆಮಾಡಲಾಗಿದೆ. ಅತ್ಯುತ್ತಮ ಪೋಷಕ ನಟ ಪ್ರಶಸ್ತಿಗೆ ರಮೇಶ್ ಭಟ್ (ಚಿತ್ರ ಉಯ್ಯಾಲೆ),ಅತುತ್ತಮ ಪೋಷಕ ನಟಿ ಪ್ರಶಸ್ತಿಗೆ ವಿಜಯಲಕ್ಷ್ಮಿ ಸಿಂಗ್ (ಚಿತ್ರ: ವೀರ ಪರಂಪರೆ) ಪಾತ್ರರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು : 2010-2011ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು ಜೀವಮಾನದ ಸಾಧನೆಗಾಗಿ ನಟ ಎಸ್.ಶಿವರಾಂ ಅವರಿಗೆ ಡಾ. ರಾಜಕುಮಾರ್ ಪ್ರಶಸ್ತಿ, ನಿರ್ದೇಶಕ ಭಾರ್ಗವ ಅವರಿಗೆ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ನೀಡಲಾಗಿದೆ. ವಿಷ್ಣುವರ್ಧನ್ ಪ್ರಶಸ್ತಿಗೆ ನಟ ಅಂಬರೀಷ್ ಆಯ್ಕೆಯಾಗಿದ್ದಾರೆ. <br /> <br /> ಆಯ್ಕೆ ಸಮಿತಿ ಅಧ್ಯಕ್ಷೆ ಭಾರತಿ ವಿಷ್ಣುವರ್ಧನ್ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿ ಡಿ.ವಿ.ಸದನಂದ ಗೌಡ ನಗರದಲ್ಲಿ ಗುರುವಾರ ಪ್ರಶಸ್ತಿಗಳನ್ನು ಪ್ರಕಟಿಸಿದರು. <br /> <br /> ಪ್ರಥಮ ಅತ್ಯುತ್ತಮ ಚಿತ್ರ ಪ್ರಶಸ್ತಿಗೆ ರಾಕ್ಲೈನ್ ಪ್ರೊಡಕ್ಷನ್ಸ್ ನಿರ್ಮಾಣದ ಉಪೇಂದ್ರ ನಿರ್ದೇಶನದ `ಸೂಪರ್~ ಚಿತ್ರ ಆಯ್ಕೆಯಾಗಿದೆ. ಉಪೇಂದ್ರ ಅತ್ಯುತ್ತಮ ನಿರ್ದೇಶಕನಾಗಿ ಹೊರಹೊಮ್ಮಿದ್ದಾರೆ. ಹಂಸಲೇಖ ಇಮೇಜಸ್ ಪ್ರೈ. ಲಿಮಿಟೆಡ್ನ `ಭಗವತಿಕಾಡು~ ಚಿತ್ರಕ್ಕೆ ದ್ವಿತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿ ಲಭಿಸಿದೆ. ರೇಣು ಡಿಜಿಟಲ್ ಸ್ಟುಡಿಯೊ ನಿರ್ಮಾಣದ ನಿರ್ದೇಶಕ ರೇಣುಕುಮಾರ್ ಅವರ ಶಬ್ದಮಣಿ ಚಿತ್ರಕ್ಕೆ ತೃತೀಯ ಅತ್ಯುತ್ತಮ ಚಿತ್ರ ಪ್ರಶಸ್ತಿ ಸಂದಿದೆ. ವಿಶೇಷ ಸಾಮಾಜಿಕ ಕಾಳಜಿಯ ಚಿತ್ರ ಶ್ರೀನಿವಾಸ್ ಕೌಶಿಕ್ ನಿರ್ದೇಶನದ `ತರಂಗಿಣಿ~. ಅತ್ಯುತ್ತಮ ಮಕ್ಕಳ ಚಿತ್ರ ಸಿ.ಲಕ್ಷ್ಮಣ್ ನಿರ್ದೇಶನದ `ನನ್ನ ಗೋಪಾಲ~. <br /> <br /> ಅತ್ಯುತ್ತಮ ನಟ ಪ್ರಶಸ್ತಿಗೆ ಪುನೀತ್ರಾಜ್ಕುಮಾರ್ (ಚಿತ್ರ: ಪೃಥ್ವಿ), ಅತ್ಯುತ್ತಮ ನಟಿ ಪ್ರಶಸ್ತಿಗೆ ಕಲ್ಯಾಣಿ (ಚಿತ್ರ: ಸೂಸೈಡ್) ಅವರನ್ನು ಆಯ್ಕೆಮಾಡಲಾಗಿದೆ. ಅತ್ಯುತ್ತಮ ಪೋಷಕ ನಟ ಪ್ರಶಸ್ತಿಗೆ ರಮೇಶ್ ಭಟ್ (ಚಿತ್ರ ಉಯ್ಯಾಲೆ),ಅತುತ್ತಮ ಪೋಷಕ ನಟಿ ಪ್ರಶಸ್ತಿಗೆ ವಿಜಯಲಕ್ಷ್ಮಿ ಸಿಂಗ್ (ಚಿತ್ರ: ವೀರ ಪರಂಪರೆ) ಪಾತ್ರರಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>