<p><strong>ನವದೆಹಲಿ (ಪಿಟಿಐ):</strong> ಸಣ್ಣ ರಾಜ್ಯಗಳ ರಚನೆಗೆ ಸಂಬಂಧಿಸಿದಂತೆ ಎರಡನೇ ರಾಜ್ಯ ಪುನರ್ ವಿಂಗಡಣಾ ಆಯೋಗವನ್ನು ರಚಿಸಬೇಕೆಂಬ ಬೇಡಿಕೆಯನ್ನು ಕೇಂದ್ರ ಸರ್ಕಾರ ತಳ್ಳಿ ಹಾಕಿದೆ.<br /> <br /> ಮಂಗಳವಾರ ಲೋಕಸಭೆಯಲ್ಲಿ ಈ ಕುರಿತು ಉತ್ತರಿಸಿದ ಗೃಹಖಾತೆಯ ರಾಜ್ಯ ಸಚಿವ ಗುರುದಾಸ್ ಕಾಮತ್, ಸಣ್ಣ ರಾಜ್ಯಗಳ ಪುನರ್ವಿಂಗಡಣೆ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸದ್ಯ ಯಾವುದೇ ಆಲೋಚನೆ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದರು. ಅಂತೆಯೇ ಯಾವುದೇ ರಾಜ್ಯದಿಂದಲೂ ಹೊಸ ರಾಜ್ಯ ರಚನೆಗೆ ಪ್ರಸ್ತಾವ ಬಂದಿಲ್ಲ ಎಂದು ತಿಳಿಸಿದರು.<br /> <br /> ಸದ್ಯಕ್ಕೆ ಪ್ರತ್ಯೇಕ ರಾಜ್ಯ ರಚನೆಗಳ ಬೇಡಿಕೆ ಪಟ್ಟಿಯಲ್ಲಿ ಆಂಧ್ರಪ್ರದೇಶದ ತೆಲಂಗಾಣ, ಮಹಾರಾಷ್ಟ್ರದ ವಿದರ್ಭ, ಉತ್ತರ ಪ್ರದೇಶದ ಬುಂದೇಲ್ಖಂಡಗಳು ಪ್ರಮುಖವಾಗಿವೆ. ಇವುಗಳನ್ನು ಹೊರತುಪಡಿಸಿದರೆ ಕರ್ನಾಟಕದಿಂದ ಕೊಡಗು ಸೇರಿದಂತೆ ಕೆಲ ರಾಜ್ಯಗಳ ವಿವಿಧ ಸಂಘಟನೆಗಳು ಪ್ರತ್ಯೇಕ ರಾಜ್ಯಕ್ಕಾಗಿ ಬೇಡಿಕೆ ಮುಂದಿಟ್ಟಿವೆ. <br /> <br /> ನೂತನ ರಾಜ್ಯ ರಚನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಎಲ್ಲಾ ರೀತಿಯ ಸಮರ್ಪಕ ಅಂಶಗಳನ್ನು ಪರಿಗಣಿಸಿದ ನಂತರವೇ ನಿರ್ಧಾರ ಕೈಗೊಳ್ಳುತ್ತದೆ. ಇಂತಹ ನಿರ್ಧಾರ ಸಾಮಾನ್ಯ ಒಮ್ಮತಾಭಿಪ್ರಾಯಕ್ಕೆ ಅನುಗುಣವಾಗಿ ಇರುತ್ತದೆ ಎಂದು ಕಾಮತ್ ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಸಣ್ಣ ರಾಜ್ಯಗಳ ರಚನೆಗೆ ಸಂಬಂಧಿಸಿದಂತೆ ಎರಡನೇ ರಾಜ್ಯ ಪುನರ್ ವಿಂಗಡಣಾ ಆಯೋಗವನ್ನು ರಚಿಸಬೇಕೆಂಬ ಬೇಡಿಕೆಯನ್ನು ಕೇಂದ್ರ ಸರ್ಕಾರ ತಳ್ಳಿ ಹಾಕಿದೆ.<br /> <br /> ಮಂಗಳವಾರ ಲೋಕಸಭೆಯಲ್ಲಿ ಈ ಕುರಿತು ಉತ್ತರಿಸಿದ ಗೃಹಖಾತೆಯ ರಾಜ್ಯ ಸಚಿವ ಗುರುದಾಸ್ ಕಾಮತ್, ಸಣ್ಣ ರಾಜ್ಯಗಳ ಪುನರ್ವಿಂಗಡಣೆ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸದ್ಯ ಯಾವುದೇ ಆಲೋಚನೆ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದರು. ಅಂತೆಯೇ ಯಾವುದೇ ರಾಜ್ಯದಿಂದಲೂ ಹೊಸ ರಾಜ್ಯ ರಚನೆಗೆ ಪ್ರಸ್ತಾವ ಬಂದಿಲ್ಲ ಎಂದು ತಿಳಿಸಿದರು.<br /> <br /> ಸದ್ಯಕ್ಕೆ ಪ್ರತ್ಯೇಕ ರಾಜ್ಯ ರಚನೆಗಳ ಬೇಡಿಕೆ ಪಟ್ಟಿಯಲ್ಲಿ ಆಂಧ್ರಪ್ರದೇಶದ ತೆಲಂಗಾಣ, ಮಹಾರಾಷ್ಟ್ರದ ವಿದರ್ಭ, ಉತ್ತರ ಪ್ರದೇಶದ ಬುಂದೇಲ್ಖಂಡಗಳು ಪ್ರಮುಖವಾಗಿವೆ. ಇವುಗಳನ್ನು ಹೊರತುಪಡಿಸಿದರೆ ಕರ್ನಾಟಕದಿಂದ ಕೊಡಗು ಸೇರಿದಂತೆ ಕೆಲ ರಾಜ್ಯಗಳ ವಿವಿಧ ಸಂಘಟನೆಗಳು ಪ್ರತ್ಯೇಕ ರಾಜ್ಯಕ್ಕಾಗಿ ಬೇಡಿಕೆ ಮುಂದಿಟ್ಟಿವೆ. <br /> <br /> ನೂತನ ರಾಜ್ಯ ರಚನೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಎಲ್ಲಾ ರೀತಿಯ ಸಮರ್ಪಕ ಅಂಶಗಳನ್ನು ಪರಿಗಣಿಸಿದ ನಂತರವೇ ನಿರ್ಧಾರ ಕೈಗೊಳ್ಳುತ್ತದೆ. ಇಂತಹ ನಿರ್ಧಾರ ಸಾಮಾನ್ಯ ಒಮ್ಮತಾಭಿಪ್ರಾಯಕ್ಕೆ ಅನುಗುಣವಾಗಿ ಇರುತ್ತದೆ ಎಂದು ಕಾಮತ್ ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>