<p><strong>ನವದೆಹಲಿ:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. `ಆಹಾರ ಭದ್ರತೆ ಕಾಯ್ದೆ' ಕುರಿತು ಚರ್ಚಿಸಲು ಕರೆದಿದ್ದ ಸಭೆಯಲ್ಲಿ ಸಿದ್ದರಾಮಯ್ಯ ಪಕ್ಷದ ಅಧ್ಯಕ್ಷರಿಗೆ ಬಜೆಟ್ ಪ್ರತಿಯನ್ನು ನೀಡಿದರು. ಸಂಜೆ ಮುಖ್ಯಮಂತ್ರಿ ಅವರನ್ನು ಕರೆಸಿಕೊಂಡ ಸೋನಿಯಾ `ಉತ್ತಮ ಬಜೆಟ್ ಕೊಟ್ಟಿದ್ದೀರಿ ಎಂದು ಬೆನ್ನು ತಟ್ಟಿದರು' ಎಂದು ಉನ್ನತ ಮೂಲಗಳು ತಿಳಿಸಿವೆ.<br /> <br /> `ನಿಜಕ್ಕೂ ಒಳ್ಳೆಯ ಬಜೆಟ್ ನೀಡಿದ್ದೀರಿ. ಎಲ್ಲರನ್ನು ತೃಪ್ತಿಪಡಿಸುವ ಕೆಲಸ ಮಾಡಿದ್ದೀರಿ. ನಿಮ್ಮ ಬಜೆಟ್ ನೋಡಿ ಸಂತಸವಾಗಿದೆ. ಬಜೆಟ್ನಲ್ಲಿ ಪ್ರಕಟಿಸಿರುವ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಿ. ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ನಿಮಗೆ ಅತ್ಯಂತ ಕಡಿಮೆ ಸಮಯವಿದೆ' ಎಂದು ಸೋನಿಯಾ ನೆನಪಿಸಿದ್ದಾರೆ.<br /> <br /> `ಕೃಷಿ, ನೀರಾವರಿ, ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಕ್ಷೇತ್ರಗಳಿಗೆ ಒತ್ತು ನೀಡಿದ್ದೀರಿ. ರೈತರು, ಬಡವರು, ದಲಿತರು, ಮಹಿಳೆಯರು, ಮಕ್ಕಳು ಹಾಗೂ ಹಿಂದುಳಿದ ವರ್ಗಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾರ್ಯಕ್ರಮಗಳನ್ನು ರೂಪಿಸಿದ್ದೀರಿ. ನಿಮ್ಮ ಕಾರ್ಯಕ್ರಮಗಳಿಗೆ ಸಂಪನ್ಮೂಲ ಕ್ರೋಡೀಕರಣವೇ ದೊಡ್ಡ ಸವಾಲು. ಈ ಸವಾಲನ್ನು ಸಮರ್ಥವಾಗಿ ಎದುರಿಸಿ' ಎಂದು ಕಿವಿಮಾತು ಹೇಳಿದರು ಎನ್ನಲಾಗಿದೆ.<br /> <br /> <strong>ಪರಮೇಶ್ವರ್ ಸಂಚಾಲಕ</strong><br /> ರಾಜ್ಯ ಕಾಂಗ್ರೆಸ್ ಪಕ್ಷ- ಸರ್ಕಾರದ ನಡುವೆ ಹೊಂದಾಣಿಕೆಗೆ `ಸಮನ್ವಯ ಸಮಿತಿ' ಮತ್ತು ಪ್ರಣಾಳಿಕೆಯಲ್ಲಿನ ಭರವಸೆಗಳ ಈಡೇರಿಕೆಗೆ `ಅನುಷ್ಠಾನ ಸಮಿತಿ'ಯು ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ಸಿಂಗ್ ನೇತೃತ್ವದಲ್ಲಿ ಶೀಘ್ರ ಅಸ್ತಿತ್ವಕ್ಕೆ ಬರಲಿದೆ. ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಉಭಯ ಸಮಿತಿಗಳ ಸಂಚಾಲಕರಾಗಿರುತ್ತಾರೆಂದು ಮುಖ್ಯಮಂತ್ರಿ ಶನಿವಾರ ಪತ್ರಕರ್ತರಿಗೆ ತಿಳಿಸಿದರು.<br /> <br /> ಸಮನ್ವಯ ಸಮಿತಿ ಹಾಗೂ ಪ್ರಣಾಳಿಕೆ ಸಮಿತಿ ಸದಸ್ಯರ ಪಟ್ಟಿಯನ್ನು ರಾಜ್ಯದ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರಿಗೆ ತಲುಪಿಸಲಾಗಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಜತೆ ಸಮಾಲೋಚಿಸಿ ಒಪ್ಪಿಗೆ ಪಡೆದ ಬಳಿಕ ಅಧಿಕೃತವಾಗಿ ಪ್ರಕಟವಾಗಲಿದೆ.<br /> <br /> ರಾಜ್ಯದ ಉಸ್ತುವಾರಿ ಕಾರ್ಯದರ್ಶಿ ಸೆಲ್ವ ಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ನ ಹಿರಿಯ ನಾಯಕರೊಬ್ಬರು ಉಭಯ ಸಮಿತಿಗಳ ಸದಸ್ಯರಾಗಿರುತ್ತಾರೆ. ಪ್ರಣಾಳಿಕೆ ಅನುಷ್ಠಾನ ಸಮಿತಿಯಲ್ಲಿ ಸಂಪುಟ ಸದಸ್ಯರೊಬ್ಬರು ಇರುತ್ತಾರೆ. ಎಐಸಿಸಿ ಅಧ್ಯಕ್ಷರು ಇಬ್ಬರು ಹಿರಿಯ ನಾಯಕರನ್ನು ನೇಮಕ ಮಾಡಲಿದ್ದಾರೆ.<br /> <br /> ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ನಡುವೆ ಆರಂಭವಾಗಿದೆ ಎನ್ನಲಾದ `ಶೀತಲ ಸಮರ'ದ ಹಿನ್ನೆಲೆಯಲ್ಲಿ ಪಕ್ಷ ಮತ್ತು ಸರ್ಕಾರದ ನಡುವಿನ ಸಮನ್ವಯಕ್ಕೆ ಸಮಿತಿ ರಚನೆ ಮಾಡಲಾಗುತ್ತಿದೆ ಎನ್ನುವ ವರದಿಗಳು ಪ್ರಕಟವಾಗಿದ್ದವು. ಆದರೆ, ಕೆಪಿಸಿಸಿ ಅಧ್ಯಕ್ಷರ ಜತೆ ತಮಗೆ ಭಿನ್ನಾಭಿಪ್ರಾಯ ಇದೆ ಎಂಬ ವರದಿಗಳನ್ನು ಸಿದ್ದರಾಮಯ್ಯ ತಳ್ಳಿಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. `ಆಹಾರ ಭದ್ರತೆ ಕಾಯ್ದೆ' ಕುರಿತು ಚರ್ಚಿಸಲು ಕರೆದಿದ್ದ ಸಭೆಯಲ್ಲಿ ಸಿದ್ದರಾಮಯ್ಯ ಪಕ್ಷದ ಅಧ್ಯಕ್ಷರಿಗೆ ಬಜೆಟ್ ಪ್ರತಿಯನ್ನು ನೀಡಿದರು. ಸಂಜೆ ಮುಖ್ಯಮಂತ್ರಿ ಅವರನ್ನು ಕರೆಸಿಕೊಂಡ ಸೋನಿಯಾ `ಉತ್ತಮ ಬಜೆಟ್ ಕೊಟ್ಟಿದ್ದೀರಿ ಎಂದು ಬೆನ್ನು ತಟ್ಟಿದರು' ಎಂದು ಉನ್ನತ ಮೂಲಗಳು ತಿಳಿಸಿವೆ.<br /> <br /> `ನಿಜಕ್ಕೂ ಒಳ್ಳೆಯ ಬಜೆಟ್ ನೀಡಿದ್ದೀರಿ. ಎಲ್ಲರನ್ನು ತೃಪ್ತಿಪಡಿಸುವ ಕೆಲಸ ಮಾಡಿದ್ದೀರಿ. ನಿಮ್ಮ ಬಜೆಟ್ ನೋಡಿ ಸಂತಸವಾಗಿದೆ. ಬಜೆಟ್ನಲ್ಲಿ ಪ್ರಕಟಿಸಿರುವ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಿ. ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ನಿಮಗೆ ಅತ್ಯಂತ ಕಡಿಮೆ ಸಮಯವಿದೆ' ಎಂದು ಸೋನಿಯಾ ನೆನಪಿಸಿದ್ದಾರೆ.<br /> <br /> `ಕೃಷಿ, ನೀರಾವರಿ, ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಕ್ಷೇತ್ರಗಳಿಗೆ ಒತ್ತು ನೀಡಿದ್ದೀರಿ. ರೈತರು, ಬಡವರು, ದಲಿತರು, ಮಹಿಳೆಯರು, ಮಕ್ಕಳು ಹಾಗೂ ಹಿಂದುಳಿದ ವರ್ಗಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಕಾರ್ಯಕ್ರಮಗಳನ್ನು ರೂಪಿಸಿದ್ದೀರಿ. ನಿಮ್ಮ ಕಾರ್ಯಕ್ರಮಗಳಿಗೆ ಸಂಪನ್ಮೂಲ ಕ್ರೋಡೀಕರಣವೇ ದೊಡ್ಡ ಸವಾಲು. ಈ ಸವಾಲನ್ನು ಸಮರ್ಥವಾಗಿ ಎದುರಿಸಿ' ಎಂದು ಕಿವಿಮಾತು ಹೇಳಿದರು ಎನ್ನಲಾಗಿದೆ.<br /> <br /> <strong>ಪರಮೇಶ್ವರ್ ಸಂಚಾಲಕ</strong><br /> ರಾಜ್ಯ ಕಾಂಗ್ರೆಸ್ ಪಕ್ಷ- ಸರ್ಕಾರದ ನಡುವೆ ಹೊಂದಾಣಿಕೆಗೆ `ಸಮನ್ವಯ ಸಮಿತಿ' ಮತ್ತು ಪ್ರಣಾಳಿಕೆಯಲ್ಲಿನ ಭರವಸೆಗಳ ಈಡೇರಿಕೆಗೆ `ಅನುಷ್ಠಾನ ಸಮಿತಿ'ಯು ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ಸಿಂಗ್ ನೇತೃತ್ವದಲ್ಲಿ ಶೀಘ್ರ ಅಸ್ತಿತ್ವಕ್ಕೆ ಬರಲಿದೆ. ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಉಭಯ ಸಮಿತಿಗಳ ಸಂಚಾಲಕರಾಗಿರುತ್ತಾರೆಂದು ಮುಖ್ಯಮಂತ್ರಿ ಶನಿವಾರ ಪತ್ರಕರ್ತರಿಗೆ ತಿಳಿಸಿದರು.<br /> <br /> ಸಮನ್ವಯ ಸಮಿತಿ ಹಾಗೂ ಪ್ರಣಾಳಿಕೆ ಸಮಿತಿ ಸದಸ್ಯರ ಪಟ್ಟಿಯನ್ನು ರಾಜ್ಯದ ಉಸ್ತುವಾರಿ ದಿಗ್ವಿಜಯ್ ಸಿಂಗ್ ಅವರಿಗೆ ತಲುಪಿಸಲಾಗಿದೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಜತೆ ಸಮಾಲೋಚಿಸಿ ಒಪ್ಪಿಗೆ ಪಡೆದ ಬಳಿಕ ಅಧಿಕೃತವಾಗಿ ಪ್ರಕಟವಾಗಲಿದೆ.<br /> <br /> ರಾಜ್ಯದ ಉಸ್ತುವಾರಿ ಕಾರ್ಯದರ್ಶಿ ಸೆಲ್ವ ಕುಮಾರ್ ಹಾಗೂ ರಾಜ್ಯ ಕಾಂಗ್ರೆಸ್ನ ಹಿರಿಯ ನಾಯಕರೊಬ್ಬರು ಉಭಯ ಸಮಿತಿಗಳ ಸದಸ್ಯರಾಗಿರುತ್ತಾರೆ. ಪ್ರಣಾಳಿಕೆ ಅನುಷ್ಠಾನ ಸಮಿತಿಯಲ್ಲಿ ಸಂಪುಟ ಸದಸ್ಯರೊಬ್ಬರು ಇರುತ್ತಾರೆ. ಎಐಸಿಸಿ ಅಧ್ಯಕ್ಷರು ಇಬ್ಬರು ಹಿರಿಯ ನಾಯಕರನ್ನು ನೇಮಕ ಮಾಡಲಿದ್ದಾರೆ.<br /> <br /> ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ನಡುವೆ ಆರಂಭವಾಗಿದೆ ಎನ್ನಲಾದ `ಶೀತಲ ಸಮರ'ದ ಹಿನ್ನೆಲೆಯಲ್ಲಿ ಪಕ್ಷ ಮತ್ತು ಸರ್ಕಾರದ ನಡುವಿನ ಸಮನ್ವಯಕ್ಕೆ ಸಮಿತಿ ರಚನೆ ಮಾಡಲಾಗುತ್ತಿದೆ ಎನ್ನುವ ವರದಿಗಳು ಪ್ರಕಟವಾಗಿದ್ದವು. ಆದರೆ, ಕೆಪಿಸಿಸಿ ಅಧ್ಯಕ್ಷರ ಜತೆ ತಮಗೆ ಭಿನ್ನಾಭಿಪ್ರಾಯ ಇದೆ ಎಂಬ ವರದಿಗಳನ್ನು ಸಿದ್ದರಾಮಯ್ಯ ತಳ್ಳಿಹಾಕಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>