<p><strong>ಬೆಂಗಳೂರು: </strong>ಪ್ರದೇಶ ಯುವ ಕಾಂಗ್ರೆಸ್, ಇದೇ 10ರಂದು ರಾಜ್ಯ ಸರ್ಕಾರದ ವಿರುದ್ಧ ಸಾಂಕೇತಿಕ ಪ್ರತಿಭಟನೆ ನಡೆಸಲಿದೆ. ಅಂದು ಬೆಳಿಗ್ಗೆ 11ಕ್ಕೆ `ಕೆಲಸ ಮಾಡಿ-ಇಲ್ಲ ಅಧಿಕಾರ ಬಿಡಿ~ ಘೋಷಣೆಯೊಂದಿಗೆ ಸ್ವತಂತ್ರ ಉದ್ಯಾನದಿಂದ ಮುಖ್ಯಮಂತ್ರಿಯವರ ನಿವಾಸದವರೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ರಿಜ್ವಾನ್ ಅರ್ಷದ್ ತಿಳಿಸಿದರು.<br /> <br /> `ಭ್ರಷ್ಟಾಚಾರವನ್ನೇ ಮೂಲಮಂತ್ರವನ್ನಾಗಿ ಮಾಡಿಕೊಂಡ ಸರ್ಕಾರ, ಹಿಂದೆಂದೂ ಕಂಡರಿಯದ ಅರಾಜಕತೆ ಸೃಷ್ಟಿಸಿದೆ. ಇಷ್ಟು ದಿನ ಜನರ ಹಾದಿ ತಪ್ಪಿಸುವ ಕೆಲಸ ಮಾಡಿದ್ದು ಸಾಕು. ಇನ್ನಾದರೂ ಜನೋಪಕಾರಿ ಕೆಲಸ ಮಾಡಲಿ~ ಎಂದು ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.<br /> <br /> `4 ವರ್ಷಗಳ ಆಡಳಿತಾವಧಿಯಲ್ಲಿ ಮೂರು ಜನ ಮುಖ್ಯಮಂತ್ರಿಗಳಾದರೂ ಲೋಕಾಯುಕ್ತರ ನೇಮಕ ಸಾಧ್ಯವಾಗಿಲ್ಲ. ಕಾನೂನು ಸುವ್ಯವಸ್ಥೆ ಹದಗೆಟ್ಟು ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಹೆಚ್ಚುತ್ತಿದೆ. ನಗರದಲ್ಲಿ ಕಸದ ಸಮಸ್ಯೆ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. `ಯುವ ಬಜೆಟ್~, `ಸಾವಯವ ಕೃಷಿ~ ಬಗ್ಗೆ ಮಾತನಾಡಿ ಪ್ರಚಾರ ಪಡೆದಿದ್ದೇ ಆಯಿತು. ಕೆಲಸ ಮಾತ್ರ ಶೂನ್ಯ~ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.<br /> <br /> `ವಿಫಲವಾದ ಈ ಸರ್ಕಾರದ ವಿರುದ್ಧ ಮುಂದಿನ ದಿನಗಳಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗುವುದು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎನ್ನುವುದು ಕನಸಿನ ಮಾತು. ಆದರೆ ಇನ್ನು ಉಳಿದಿರುವಷ್ಟು ದಿನವಾದರೂ ಉತ್ತಮ ಕೆಲಸ ಮಾಡಲಿ~ ಎಂದು ರಿಜ್ವಾನ್ ಹರಿಹಾಯ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪ್ರದೇಶ ಯುವ ಕಾಂಗ್ರೆಸ್, ಇದೇ 10ರಂದು ರಾಜ್ಯ ಸರ್ಕಾರದ ವಿರುದ್ಧ ಸಾಂಕೇತಿಕ ಪ್ರತಿಭಟನೆ ನಡೆಸಲಿದೆ. ಅಂದು ಬೆಳಿಗ್ಗೆ 11ಕ್ಕೆ `ಕೆಲಸ ಮಾಡಿ-ಇಲ್ಲ ಅಧಿಕಾರ ಬಿಡಿ~ ಘೋಷಣೆಯೊಂದಿಗೆ ಸ್ವತಂತ್ರ ಉದ್ಯಾನದಿಂದ ಮುಖ್ಯಮಂತ್ರಿಯವರ ನಿವಾಸದವರೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಅಧ್ಯಕ್ಷ ರಿಜ್ವಾನ್ ಅರ್ಷದ್ ತಿಳಿಸಿದರು.<br /> <br /> `ಭ್ರಷ್ಟಾಚಾರವನ್ನೇ ಮೂಲಮಂತ್ರವನ್ನಾಗಿ ಮಾಡಿಕೊಂಡ ಸರ್ಕಾರ, ಹಿಂದೆಂದೂ ಕಂಡರಿಯದ ಅರಾಜಕತೆ ಸೃಷ್ಟಿಸಿದೆ. ಇಷ್ಟು ದಿನ ಜನರ ಹಾದಿ ತಪ್ಪಿಸುವ ಕೆಲಸ ಮಾಡಿದ್ದು ಸಾಕು. ಇನ್ನಾದರೂ ಜನೋಪಕಾರಿ ಕೆಲಸ ಮಾಡಲಿ~ ಎಂದು ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.<br /> <br /> `4 ವರ್ಷಗಳ ಆಡಳಿತಾವಧಿಯಲ್ಲಿ ಮೂರು ಜನ ಮುಖ್ಯಮಂತ್ರಿಗಳಾದರೂ ಲೋಕಾಯುಕ್ತರ ನೇಮಕ ಸಾಧ್ಯವಾಗಿಲ್ಲ. ಕಾನೂನು ಸುವ್ಯವಸ್ಥೆ ಹದಗೆಟ್ಟು ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಹೆಚ್ಚುತ್ತಿದೆ. ನಗರದಲ್ಲಿ ಕಸದ ಸಮಸ್ಯೆ ದಿನದಿಂದ ದಿನಕ್ಕೆ ಬೆಳೆಯುತ್ತಿದೆ. `ಯುವ ಬಜೆಟ್~, `ಸಾವಯವ ಕೃಷಿ~ ಬಗ್ಗೆ ಮಾತನಾಡಿ ಪ್ರಚಾರ ಪಡೆದಿದ್ದೇ ಆಯಿತು. ಕೆಲಸ ಮಾತ್ರ ಶೂನ್ಯ~ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.<br /> <br /> `ವಿಫಲವಾದ ಈ ಸರ್ಕಾರದ ವಿರುದ್ಧ ಮುಂದಿನ ದಿನಗಳಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗುವುದು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎನ್ನುವುದು ಕನಸಿನ ಮಾತು. ಆದರೆ ಇನ್ನು ಉಳಿದಿರುವಷ್ಟು ದಿನವಾದರೂ ಉತ್ತಮ ಕೆಲಸ ಮಾಡಲಿ~ ಎಂದು ರಿಜ್ವಾನ್ ಹರಿಹಾಯ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>