<p>ಚಾಮರಾಜನಗರ: ಬಿಜೆಪಿ ರಾಜ್ಯ ಸರ್ಕಾರದ ಆಡಳಿತ ವೈಖರಿ ಖಂಡಿಸಿ ಜನಾಭಿಪ್ರಾಯ ಸಂಗ್ರಹಿಸಲು ಕಾಂಗ್ರೆಸ್ ಯುವ ಘಟಕದಿಂದ `ಯುವ ಧ್ವನಿ~ ಅಭಿಯಾನ ಆರಂಭಗೊಂಡಿದೆ.<br /> <br /> `ರಾಜ್ಯ ಸರ್ಕಾರ ಮುಂದುವರಿಯಬೇಕೆ ಅಥವಾ ಬೇಡವೇ? ಎಂಬ ಪ್ರಶ್ನೆ ಮುಂದಿಟ್ಟುಕೊಂಡು ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಸೆ. 5ರವರೆಗೆ ಅಭಿಯಾನ ನಡೆಯಲಿದೆ. ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರದಲ್ಲೂ ಜನಾ ಭಿಪ್ರಾಯ ಸಂಗ್ರಹಕ್ಕೆ ನಿರ್ಧರಿಸಲಾಗಿದೆ.<br /> <br /> ಸಾರ್ವಜನಿಕರು ಮಿಸ್ಕಾಲ್, ಎಸ್ಎಂಎಸ್, ಇ-ಮೇಲ್ ಮೂಲಕ ಹಾಗೂ ಯುವ ಘಟಕದಿಂದ ಸ್ಥಾಪಿಸುವ ಮತ ಗಟ್ಟೆಗಳಲ್ಲಿ ನೇರವಾಗಿ ಮತದಾನದ ಮೂಲಕವೂ ಅಭಿಪ್ರಾಯ ತಿಳಿಸ ಬಹುದು~ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಕೆರೆಹಳ್ಳಿ ನವೀನ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.<br /> <br /> ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಭ್ರಷ್ಟಾಚಾರ ಉಲ್ಬಣಿಸಿದೆ. ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ವಿದ್ಯುತ್ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಹೆಚ್ಚುತ್ತಿವೆ. ಸ್ವಜನಪಕ್ಷಪಾತ ಎಲ್ಲೆ ಮೀರಿದೆ ಎಂದರು.<br /> <br /> ಶೀಘ್ರವೇ, ಜಿಲ್ಲಾ ಕೇಂದ್ರದಲ್ಲಿರುವ ಪಕ್ಷದ ಕಚೇರಿ, ಭುವನೇಶ್ವರಿ ವೃತ್ತ, ಜಿಲ್ಲಾಡಳಿತ ಭವನ, ತಹಶೀಲ್ದಾರ್ ಕಚೇರಿ ಬಳಿಯಲ್ಲಿ ಮತಗಟ್ಟೆ ಸ್ಥಾಪಿಸಲಾ ಗುವುದು ಎಂದರು.<br /> <br /> ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾ ಯಿತಿ ಸದಸ್ಯೆ ಜಿ. ನಾಗಶ್ರೀ, ಅರುಣ್ಕುಮಾರ್, ಶ್ರೀಕಾಂತ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: ಬಿಜೆಪಿ ರಾಜ್ಯ ಸರ್ಕಾರದ ಆಡಳಿತ ವೈಖರಿ ಖಂಡಿಸಿ ಜನಾಭಿಪ್ರಾಯ ಸಂಗ್ರಹಿಸಲು ಕಾಂಗ್ರೆಸ್ ಯುವ ಘಟಕದಿಂದ `ಯುವ ಧ್ವನಿ~ ಅಭಿಯಾನ ಆರಂಭಗೊಂಡಿದೆ.<br /> <br /> `ರಾಜ್ಯ ಸರ್ಕಾರ ಮುಂದುವರಿಯಬೇಕೆ ಅಥವಾ ಬೇಡವೇ? ಎಂಬ ಪ್ರಶ್ನೆ ಮುಂದಿಟ್ಟುಕೊಂಡು ಈ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಸೆ. 5ರವರೆಗೆ ಅಭಿಯಾನ ನಡೆಯಲಿದೆ. ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರದಲ್ಲೂ ಜನಾ ಭಿಪ್ರಾಯ ಸಂಗ್ರಹಕ್ಕೆ ನಿರ್ಧರಿಸಲಾಗಿದೆ.<br /> <br /> ಸಾರ್ವಜನಿಕರು ಮಿಸ್ಕಾಲ್, ಎಸ್ಎಂಎಸ್, ಇ-ಮೇಲ್ ಮೂಲಕ ಹಾಗೂ ಯುವ ಘಟಕದಿಂದ ಸ್ಥಾಪಿಸುವ ಮತ ಗಟ್ಟೆಗಳಲ್ಲಿ ನೇರವಾಗಿ ಮತದಾನದ ಮೂಲಕವೂ ಅಭಿಪ್ರಾಯ ತಿಳಿಸ ಬಹುದು~ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಕೆರೆಹಳ್ಳಿ ನವೀನ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.<br /> <br /> ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಭ್ರಷ್ಟಾಚಾರ ಉಲ್ಬಣಿಸಿದೆ. ಬರ ಪರಿಸ್ಥಿತಿ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ವಿದ್ಯುತ್ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ. ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಹೆಚ್ಚುತ್ತಿವೆ. ಸ್ವಜನಪಕ್ಷಪಾತ ಎಲ್ಲೆ ಮೀರಿದೆ ಎಂದರು.<br /> <br /> ಶೀಘ್ರವೇ, ಜಿಲ್ಲಾ ಕೇಂದ್ರದಲ್ಲಿರುವ ಪಕ್ಷದ ಕಚೇರಿ, ಭುವನೇಶ್ವರಿ ವೃತ್ತ, ಜಿಲ್ಲಾಡಳಿತ ಭವನ, ತಹಶೀಲ್ದಾರ್ ಕಚೇರಿ ಬಳಿಯಲ್ಲಿ ಮತಗಟ್ಟೆ ಸ್ಥಾಪಿಸಲಾ ಗುವುದು ಎಂದರು.<br /> <br /> ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾ ಯಿತಿ ಸದಸ್ಯೆ ಜಿ. ನಾಗಶ್ರೀ, ಅರುಣ್ಕುಮಾರ್, ಶ್ರೀಕಾಂತ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>