<p>ಬೈಂದೂರು: `ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟತೆಯನ್ನು ಬಯಲುಗೊಳಿಸಿರುವ ಲೋಕಾಯುಕ್ತ ವರದಿಯ ಪ್ರಕಾರ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ರಾಜ್ಯದ ಅಮೂಲ್ಯ ನೈಸರ್ಗಿಕ ಸಂಪತ್ತನ್ನು ಲೂಟಿ ಮಾಡಿ ಸ್ವಂತ ಸಂಪತ್ತು ಹೆಚ್ಚಿಸಿಕೊಂಡ ಎಲ್ಲರನ್ನು ಶಿಕ್ಷೆಗೊಳಪಡಿಸಬೇಕು~ ಎಂದು ಶುಕ್ರವಾರ ಬೈಂದೂರು ಮತ್ತು ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದ ಪ್ರತಿಭಟನಾ ಸಭೆಯಲ್ಲಿ ಆಗ್ರಹಿಸಲಾಯಿತು. ಬೈಂದೂರು ವಿಶೇಷ ತಹಶೀಲ್ದಾರ್ ಕಚೇರಿ ಮುಂದೆ ನಡೆದ ಈ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಗೋಪಾಲ ಪೂಜಾರಿ, ಸರ್ಕಾರದ ಭ್ರಷ್ಟಾಚಾರ, ಆಡಳಿತ ವೈಫಲ್ಯ ಮತ್ತು ಜನ ವಿರೋಧಿ ಕ್ರಮಗಳನ್ನು ಖಂಡಿಸಿದರು. ಮಳೆಗಾಲ ಮುಗಿಯುವ ಮುನ್ನವೇ ವಿದ್ಯುತ್ ಕಡಿತ ಆರಂಭಿಸಿ ಜನರಿಗೆ ದ್ರೋಹ ಬಗೆಯಲಾಗಿದೆ. <br /> <br /> ಭ್ರಷ್ಟಾಚಾರ ಆರೊಪ ಹೊತ್ತು ಮುಖ್ಯಮಂತ್ರಿ ಸಹಿತ ಸಚಿ ಸಂಪುಟದ ಸದಸ್ಯರು ಜೈಲು ಪಾಲಾಗುತ್ತಿದ್ದರೆ, ಲೋಕಾಯುಕ್ತ ವರದಿಯನ್ನು ತಿರಸ್ಕರಿಸಲು ವೇದಿಕೆ ಸಿದ್ಧಪಡಿಸುತ್ತಿರುವ ಸರ್ಕಾರ ನೈತಿಕವಾಗಿ ಕುಸಿದುಹೋಗಿದೆ. ಬಡವರಿಗೆ ವರದಾನವಾಗಿರುವ ಎಲ್ಲ ಸಾಮಾಜಿಕ ನೆರವು ಕಾರ್ಯಕ್ರಮಗಳ ಅನುಷ್ಠಾನ ಕುಂಠಿತವಾಗಿದೆ ಎಂದು ದೂರಿದರು. <br /> <br /> <br /> ಪಕ್ಷದ ಪ್ರಮುಖರಾದ ಎಸ್. ರಾಜು ಪೂಜಾರಿ, ಎಸ್. ವಾಸುದೇವ ಯಡಿಯಾಳ, ಎಸ್. ಪ್ರಕಾಶ್ಚಂದ್ರ ಶೆಟ್ಟಿ, ವಂಡಬಳ್ಳಿ ಜಯರಾಮ ಶೆಟ್ಟಿ, ಎಸ್. ಮದನ ಕುಮಾರ್ ಅವರೂ ಮಾತನಾಡಿದರು. <br /> <br /> ಸಭೆಯ ನಂತರ ಸರ್ಕಾರದ ವಿರುದ್ಧ ಆರೋಪ ಪತ್ರವನ್ನು ಉಪ ತಹಶೀಲ್ದಾರ್ ನರಸಿಂಹ ಅವರಿಗೆ ಸಲ್ಲಿಸಲಾಯಿತು. <br /> <br /> ಬ್ಲಾಕ್ ಸಮಿತಿ ಅಧ್ಯಕ್ಷ ಕೆ.ರಮೇಶ ಗಾಣಿಗ, ಕಾರ್ಯದರ್ಶಿ ಸತೀಶ ಎಂ. ನಾಯಕ್, ಕೆಪಿಸಿಸಿ ಸದಸ್ಯ ಬಿ. ರಘುರಾಮ ಶೆಟ್ಟಿ, ಜಿ.ಪಂ ಪಂಚಾಯಿತಿ ಸದಸ್ಯ ಅನಂತ ಮೊವಾಡಿ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೈಂದೂರು: `ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟತೆಯನ್ನು ಬಯಲುಗೊಳಿಸಿರುವ ಲೋಕಾಯುಕ್ತ ವರದಿಯ ಪ್ರಕಾರ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ರಾಜ್ಯದ ಅಮೂಲ್ಯ ನೈಸರ್ಗಿಕ ಸಂಪತ್ತನ್ನು ಲೂಟಿ ಮಾಡಿ ಸ್ವಂತ ಸಂಪತ್ತು ಹೆಚ್ಚಿಸಿಕೊಂಡ ಎಲ್ಲರನ್ನು ಶಿಕ್ಷೆಗೊಳಪಡಿಸಬೇಕು~ ಎಂದು ಶುಕ್ರವಾರ ಬೈಂದೂರು ಮತ್ತು ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದ ಪ್ರತಿಭಟನಾ ಸಭೆಯಲ್ಲಿ ಆಗ್ರಹಿಸಲಾಯಿತು. ಬೈಂದೂರು ವಿಶೇಷ ತಹಶೀಲ್ದಾರ್ ಕಚೇರಿ ಮುಂದೆ ನಡೆದ ಈ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ಗೋಪಾಲ ಪೂಜಾರಿ, ಸರ್ಕಾರದ ಭ್ರಷ್ಟಾಚಾರ, ಆಡಳಿತ ವೈಫಲ್ಯ ಮತ್ತು ಜನ ವಿರೋಧಿ ಕ್ರಮಗಳನ್ನು ಖಂಡಿಸಿದರು. ಮಳೆಗಾಲ ಮುಗಿಯುವ ಮುನ್ನವೇ ವಿದ್ಯುತ್ ಕಡಿತ ಆರಂಭಿಸಿ ಜನರಿಗೆ ದ್ರೋಹ ಬಗೆಯಲಾಗಿದೆ. <br /> <br /> ಭ್ರಷ್ಟಾಚಾರ ಆರೊಪ ಹೊತ್ತು ಮುಖ್ಯಮಂತ್ರಿ ಸಹಿತ ಸಚಿ ಸಂಪುಟದ ಸದಸ್ಯರು ಜೈಲು ಪಾಲಾಗುತ್ತಿದ್ದರೆ, ಲೋಕಾಯುಕ್ತ ವರದಿಯನ್ನು ತಿರಸ್ಕರಿಸಲು ವೇದಿಕೆ ಸಿದ್ಧಪಡಿಸುತ್ತಿರುವ ಸರ್ಕಾರ ನೈತಿಕವಾಗಿ ಕುಸಿದುಹೋಗಿದೆ. ಬಡವರಿಗೆ ವರದಾನವಾಗಿರುವ ಎಲ್ಲ ಸಾಮಾಜಿಕ ನೆರವು ಕಾರ್ಯಕ್ರಮಗಳ ಅನುಷ್ಠಾನ ಕುಂಠಿತವಾಗಿದೆ ಎಂದು ದೂರಿದರು. <br /> <br /> <br /> ಪಕ್ಷದ ಪ್ರಮುಖರಾದ ಎಸ್. ರಾಜು ಪೂಜಾರಿ, ಎಸ್. ವಾಸುದೇವ ಯಡಿಯಾಳ, ಎಸ್. ಪ್ರಕಾಶ್ಚಂದ್ರ ಶೆಟ್ಟಿ, ವಂಡಬಳ್ಳಿ ಜಯರಾಮ ಶೆಟ್ಟಿ, ಎಸ್. ಮದನ ಕುಮಾರ್ ಅವರೂ ಮಾತನಾಡಿದರು. <br /> <br /> ಸಭೆಯ ನಂತರ ಸರ್ಕಾರದ ವಿರುದ್ಧ ಆರೋಪ ಪತ್ರವನ್ನು ಉಪ ತಹಶೀಲ್ದಾರ್ ನರಸಿಂಹ ಅವರಿಗೆ ಸಲ್ಲಿಸಲಾಯಿತು. <br /> <br /> ಬ್ಲಾಕ್ ಸಮಿತಿ ಅಧ್ಯಕ್ಷ ಕೆ.ರಮೇಶ ಗಾಣಿಗ, ಕಾರ್ಯದರ್ಶಿ ಸತೀಶ ಎಂ. ನಾಯಕ್, ಕೆಪಿಸಿಸಿ ಸದಸ್ಯ ಬಿ. ರಘುರಾಮ ಶೆಟ್ಟಿ, ಜಿ.ಪಂ ಪಂಚಾಯಿತಿ ಸದಸ್ಯ ಅನಂತ ಮೊವಾಡಿ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>