<p>ಜರಗನಹಳ್ಳಿಯ ಗ್ರಾಮಾಭಿವೃದ್ಧಿ ಸಂಘವು ಏಪ್ರಿಲ್ 15ರಂದು ರಾಮಚಂದ್ರಸ್ವಾಮಿಯ ಬ್ರಹ್ಮರಥೋತ್ಸವವವನ್ನು ಹಮ್ಮಿಕೊಂಡಿದೆ. <br /> <br /> ಈ ಮಹೋತ್ಸವದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. 13ರಂದು ಬೆಳಿಗ್ಗೆ ಅಂಕುರಾರ್ಪಣ, ಧ್ವಜಾರೋಹಣ, ಕಲಶ ಸ್ಥಾಪನೆ, ಭೇರಿತಾಡನೋತ್ಸವ. ರಾತ್ರಿ ಶೇಷವಾಹನೋತ್ಸವ ಮತ್ತಿತರ ಕಾರ್ಯಕ್ರಮಗಳು ಜರುಗಲಿವೆ. <br /> <br /> 14ರಂದು ಬೆಳಿಗ್ಗೆ ಹನುಮಂತೋತ್ಸವ, ವೈರಮುಡಿ ಉತ್ಸವ. ಸಂಜೆ ಪ್ರಕಾರೋತ್ಸವ, ಕಾಶಿಯಾತ್ರೆ, ಸೀತಾಕಲ್ಯಾಣೋತ್ಸವ. ರಾತ್ರಿ ಗಜೇಂದ್ರಮೋಕ್ಷ ಕಾರ್ಯಕ್ರಮಗಳು ನಡೆಯಲಿವೆ.<br /> <br /> 15ರಂದು ಬೆಳಿಗ್ಗೆ ಗಂಗಾಧರೇಶ್ವರ ಸ್ವಾಮಿಗೆ ಅಭಿಷೇಕ, ನವಗ್ರಹ ಅಭಿಷೇಕ, ಮಧ್ಯಾಹ್ನ 1.45ಕ್ಕೆ ಬ್ರಹ್ಮರಥೋತ್ಸವ ನಡೆಯಲಿದೆ. ಸಂಜೆ ಧೂಳೋತ್ಸವ, ಚಂದ್ರ ಮಂಡಲೋತ್ಸವ, ಉಯ್ಯಾಲೋತ್ಸವ ಮೊದಲಾದ ಉತ್ಸವಗಳನ್ನು ಹಮ್ಮಿಕೊಳ್ಳಲಾಗಿದೆ. <br /> <br /> ರಾತ್ರಿ 8ಕ್ಕೆ ಮಂಟಪೋತ್ಸವ, 10ಕ್ಕೆ ಶ್ರೀ ಗಣಪತಿ ಹೂವಿನ ಪಲ್ಲಕ್ಕಿ ಉತ್ಸವ ಜರುಗಲಿದೆ. ಅಂದು ಬೆಳಿಗ್ಗೆ 8ಕ್ಕೆ ರಾಜ್ಯ ಮಟ್ಟದ ರಸ್ತೆ ಓಟದ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. <br /> <br /> 16ರಂದು ಸಂಜೆ 5ಕ್ಕೆ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ಆಶ್ರಯದಲ್ಲಿ ರಂಗೋಲಿ ಸ್ಪರ್ಧೆ ನಡೆಯಲಿದೆ. 17ರ ರಾತ್ರಿ 9.30ಕ್ಕೆ ಶ್ರೀ ರಾಮಾಂಜನೇಯ ಕೃಪಾಪೋಷಿತ ನಾಟಕ ಮಂಡಳಿ ತಂಡದಿಂದ ರಾಜವಿಕ್ರಮ ಅಥವಾ ಶನಿ ಪ್ರಭಾವ ಎಂಬ ಪೌರಾಣಿಕ ನಾಟಕ ಪ್ರದರ್ಶನ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜರಗನಹಳ್ಳಿಯ ಗ್ರಾಮಾಭಿವೃದ್ಧಿ ಸಂಘವು ಏಪ್ರಿಲ್ 15ರಂದು ರಾಮಚಂದ್ರಸ್ವಾಮಿಯ ಬ್ರಹ್ಮರಥೋತ್ಸವವವನ್ನು ಹಮ್ಮಿಕೊಂಡಿದೆ. <br /> <br /> ಈ ಮಹೋತ್ಸವದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. 13ರಂದು ಬೆಳಿಗ್ಗೆ ಅಂಕುರಾರ್ಪಣ, ಧ್ವಜಾರೋಹಣ, ಕಲಶ ಸ್ಥಾಪನೆ, ಭೇರಿತಾಡನೋತ್ಸವ. ರಾತ್ರಿ ಶೇಷವಾಹನೋತ್ಸವ ಮತ್ತಿತರ ಕಾರ್ಯಕ್ರಮಗಳು ಜರುಗಲಿವೆ. <br /> <br /> 14ರಂದು ಬೆಳಿಗ್ಗೆ ಹನುಮಂತೋತ್ಸವ, ವೈರಮುಡಿ ಉತ್ಸವ. ಸಂಜೆ ಪ್ರಕಾರೋತ್ಸವ, ಕಾಶಿಯಾತ್ರೆ, ಸೀತಾಕಲ್ಯಾಣೋತ್ಸವ. ರಾತ್ರಿ ಗಜೇಂದ್ರಮೋಕ್ಷ ಕಾರ್ಯಕ್ರಮಗಳು ನಡೆಯಲಿವೆ.<br /> <br /> 15ರಂದು ಬೆಳಿಗ್ಗೆ ಗಂಗಾಧರೇಶ್ವರ ಸ್ವಾಮಿಗೆ ಅಭಿಷೇಕ, ನವಗ್ರಹ ಅಭಿಷೇಕ, ಮಧ್ಯಾಹ್ನ 1.45ಕ್ಕೆ ಬ್ರಹ್ಮರಥೋತ್ಸವ ನಡೆಯಲಿದೆ. ಸಂಜೆ ಧೂಳೋತ್ಸವ, ಚಂದ್ರ ಮಂಡಲೋತ್ಸವ, ಉಯ್ಯಾಲೋತ್ಸವ ಮೊದಲಾದ ಉತ್ಸವಗಳನ್ನು ಹಮ್ಮಿಕೊಳ್ಳಲಾಗಿದೆ. <br /> <br /> ರಾತ್ರಿ 8ಕ್ಕೆ ಮಂಟಪೋತ್ಸವ, 10ಕ್ಕೆ ಶ್ರೀ ಗಣಪತಿ ಹೂವಿನ ಪಲ್ಲಕ್ಕಿ ಉತ್ಸವ ಜರುಗಲಿದೆ. ಅಂದು ಬೆಳಿಗ್ಗೆ 8ಕ್ಕೆ ರಾಜ್ಯ ಮಟ್ಟದ ರಸ್ತೆ ಓಟದ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. <br /> <br /> 16ರಂದು ಸಂಜೆ 5ಕ್ಕೆ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ಆಶ್ರಯದಲ್ಲಿ ರಂಗೋಲಿ ಸ್ಪರ್ಧೆ ನಡೆಯಲಿದೆ. 17ರ ರಾತ್ರಿ 9.30ಕ್ಕೆ ಶ್ರೀ ರಾಮಾಂಜನೇಯ ಕೃಪಾಪೋಷಿತ ನಾಟಕ ಮಂಡಳಿ ತಂಡದಿಂದ ರಾಜವಿಕ್ರಮ ಅಥವಾ ಶನಿ ಪ್ರಭಾವ ಎಂಬ ಪೌರಾಣಿಕ ನಾಟಕ ಪ್ರದರ್ಶನ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>