<p>ಬೆಂಗಳೂರು: ಬೆಂಗಳೂರು ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ 2012ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯ ರಾಮಚಂದ್ರ ಗೌಡ ಅವರ ಆಯ್ಕೆ ಪ್ರಶ್ನಿಸಿ ಜೆಡಿಎಸ್ನ ಅ. ದೇವೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ ಶನಿವಾರ ವಜಾಗೊಳಿಸಿದೆ.<br /> <br /> ‘ನನ್ನ ಪರವಾಗಿ ಚಲಾವಣೆ ಆಗಿದ್ದ 761 ಮತಗಳನ್ನು ಚುನಾವಣಾ ಅಧಿಕಾರಿ ಕುಲಗೆಟ್ಟ ಮತ ಎಂದು ಘೋಷಿಸಿದ್ದಾರೆ. ಇದು ಸರಿಯಲ್ಲ. ಆ ಮತಗಳನ್ನು ಸೇರಿಸಿದರೆ ನಾನು ಗೆಲುವು ಸಾಧಿಸುತ್ತಿದ್ದೆ’ ಎಂದು ದೇವೇಗೌಡ ಅವರು ಅರ್ಜಿಯಲ್ಲಿ ವಾದಿಸಿದ್ದರು.<br /> <br /> ಈ ವಾದಕ್ಕೆ ಪೂರಕವಾಗಿ ಅರ್ಜಿದಾರರು ಅಗತ್ಯ ಆಧಾರಗಳನ್ನು ನೀಡಿಲ್ಲ ಎಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಜಿ. ರಮೇಶ್ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.<br /> <br /> ‘ನನಗೇ ಮತ ನೀಡಿ, ಎದುರಾಳಿಗಳಿಗೆ ಬೇಡ’ ಎಂದು ಚುನಾವಣಾ ಪ್ರಚಾರದ ವೇಳೆ ಹೇಳುವುದು ಪ್ರಜಾಸತ್ತಾತ್ಮಕ ಹಕ್ಕು ಎಂದು ಆದೇಶದಲ್ಲಿ ಹೇಳಲಾಗಿದೆ.<br /> <br /> <strong>ಹುಂಡಿ ತೆರೆಯಲು ಅನುಮತಿ</strong><br /> ಬೆಂಗಳೂರು: ನಗರದ ಮಲ್ಲೇಶ್ವರದಲ್ಲಿರುವ ಸರ್ಕಲ್ ಮಾರಮ್ಮ ದೇವಸ್ಥಾನದ ಹುಂಡಿಯನ್ನು ತೆರೆಯಲು ಸರ್ಕಾರಕ್ಕೆ ಹೈಕೋರ್ಟ್ ಶನಿವಾರ ಅನುಮತಿ ನೀಡಿದೆ.<br /> <br /> ಈ ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ಸೇರಿಸಿದ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಅವರು ನಡೆಸುತ್ತಿದ್ದಾರೆ. ವಿಚಾರಣೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಬೆಂಗಳೂರು ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ 2012ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯ ರಾಮಚಂದ್ರ ಗೌಡ ಅವರ ಆಯ್ಕೆ ಪ್ರಶ್ನಿಸಿ ಜೆಡಿಎಸ್ನ ಅ. ದೇವೇಗೌಡ ಅವರು ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ ಶನಿವಾರ ವಜಾಗೊಳಿಸಿದೆ.<br /> <br /> ‘ನನ್ನ ಪರವಾಗಿ ಚಲಾವಣೆ ಆಗಿದ್ದ 761 ಮತಗಳನ್ನು ಚುನಾವಣಾ ಅಧಿಕಾರಿ ಕುಲಗೆಟ್ಟ ಮತ ಎಂದು ಘೋಷಿಸಿದ್ದಾರೆ. ಇದು ಸರಿಯಲ್ಲ. ಆ ಮತಗಳನ್ನು ಸೇರಿಸಿದರೆ ನಾನು ಗೆಲುವು ಸಾಧಿಸುತ್ತಿದ್ದೆ’ ಎಂದು ದೇವೇಗೌಡ ಅವರು ಅರ್ಜಿಯಲ್ಲಿ ವಾದಿಸಿದ್ದರು.<br /> <br /> ಈ ವಾದಕ್ಕೆ ಪೂರಕವಾಗಿ ಅರ್ಜಿದಾರರು ಅಗತ್ಯ ಆಧಾರಗಳನ್ನು ನೀಡಿಲ್ಲ ಎಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಜಿ. ರಮೇಶ್ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.<br /> <br /> ‘ನನಗೇ ಮತ ನೀಡಿ, ಎದುರಾಳಿಗಳಿಗೆ ಬೇಡ’ ಎಂದು ಚುನಾವಣಾ ಪ್ರಚಾರದ ವೇಳೆ ಹೇಳುವುದು ಪ್ರಜಾಸತ್ತಾತ್ಮಕ ಹಕ್ಕು ಎಂದು ಆದೇಶದಲ್ಲಿ ಹೇಳಲಾಗಿದೆ.<br /> <br /> <strong>ಹುಂಡಿ ತೆರೆಯಲು ಅನುಮತಿ</strong><br /> ಬೆಂಗಳೂರು: ನಗರದ ಮಲ್ಲೇಶ್ವರದಲ್ಲಿರುವ ಸರ್ಕಲ್ ಮಾರಮ್ಮ ದೇವಸ್ಥಾನದ ಹುಂಡಿಯನ್ನು ತೆರೆಯಲು ಸರ್ಕಾರಕ್ಕೆ ಹೈಕೋರ್ಟ್ ಶನಿವಾರ ಅನುಮತಿ ನೀಡಿದೆ.<br /> <br /> ಈ ದೇವಸ್ಥಾನವನ್ನು ಮುಜರಾಯಿ ಇಲಾಖೆ ವ್ಯಾಪ್ತಿಗೆ ಸೇರಿಸಿದ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎ.ಎಸ್. ಬೋಪಣ್ಣ ಅವರು ನಡೆಸುತ್ತಿದ್ದಾರೆ. ವಿಚಾರಣೆ ಮುಂದೂಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>