<p><strong>ಹರಿದ್ವಾರ (ಐಎಎನ್ಎಸ್, ಪಿಟಿಐ):</strong> ಯೋಗ ಗುರು ಬಾಬಾ ರಾಮದೇವ್ ಅವರ ಸಹಾಯಕ ಬಾಲಕೃಷ್ಣ ಅವರನ್ನು ಶುಕ್ರವಾರ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.ಬಾಲಕೃಷ್ಣ ಅವರು ನಕಲಿ ದಾಖಲೆಗಳನ್ನು ನೀಡಿ ಪಾಸ್ಪೋರ್ಟ್ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಹೋರಡಿಸಿತ್ತು. <br /> <br /> ಇಲ್ಲಿನ ಪತಂಜಲಿ ಯೋಗ ಆಶ್ರಮಕ್ಕೆ ಆಗಮಿಸಿದ ಸಿಬಿಐ ಅಧಿಕಾರಿಗಳು ಬಾಲಕೃಷ್ಣ ಅವರನ್ನು ಬಂಧಿಸಿ ಕರೆದೊಯ್ದರು. ಈ ಸಂದರ್ಭದಲ್ಲಿ ಆಶ್ರಮದ ಸುತ್ತಲು ಭಾರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.<br /> ಬಾಲಕೃಷ್ಣ ಅವರನ್ನು ಹೆಚ್ಚಿನ ತನಿಖೆಗೆ ಒಳಪಡಿಸಿ ಡೆಹ್ರಾಡೂನ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.<br /> <br /> <strong>ಬೆದರಿಕೆ ತಂತ್ರ: </strong>ಬಾಲಕೃಷ್ಣ ಬಂಧನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ರಾಮದೇವ್, ಇದು `ಸರ್ಕಾರದ ಬೆದರಿಕೆ ತಂತ್ರ~ ಎಂದು ಟೀಕಿಸಿದ್ದಾರೆ.ಬಾಲಕೃಷ್ಣ ವಿರುದ್ಧ ಕ್ರಮ ತೆಗೆದು ಕೊಳ್ಳುವುದರ ಮೂಲಕ ಸ್ವದೇಶಕ್ಕೆ ಕಪ್ಪು ಹಣ ತರುವಂತೆ ನಡೆಸುತ್ತಿರುವ ತಮ್ಮ ಹೋರಾಟವನ್ನು ಹತ್ತಿಕಲು ಸರ್ಕಾರ ಮುಂದಾಗಿದೆ ಬಾಬಾ ಆರೋಪಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿದ್ವಾರ (ಐಎಎನ್ಎಸ್, ಪಿಟಿಐ):</strong> ಯೋಗ ಗುರು ಬಾಬಾ ರಾಮದೇವ್ ಅವರ ಸಹಾಯಕ ಬಾಲಕೃಷ್ಣ ಅವರನ್ನು ಶುಕ್ರವಾರ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.ಬಾಲಕೃಷ್ಣ ಅವರು ನಕಲಿ ದಾಖಲೆಗಳನ್ನು ನೀಡಿ ಪಾಸ್ಪೋರ್ಟ್ ಪಡೆದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಹೋರಡಿಸಿತ್ತು. <br /> <br /> ಇಲ್ಲಿನ ಪತಂಜಲಿ ಯೋಗ ಆಶ್ರಮಕ್ಕೆ ಆಗಮಿಸಿದ ಸಿಬಿಐ ಅಧಿಕಾರಿಗಳು ಬಾಲಕೃಷ್ಣ ಅವರನ್ನು ಬಂಧಿಸಿ ಕರೆದೊಯ್ದರು. ಈ ಸಂದರ್ಭದಲ್ಲಿ ಆಶ್ರಮದ ಸುತ್ತಲು ಭಾರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.<br /> ಬಾಲಕೃಷ್ಣ ಅವರನ್ನು ಹೆಚ್ಚಿನ ತನಿಖೆಗೆ ಒಳಪಡಿಸಿ ಡೆಹ್ರಾಡೂನ್ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.<br /> <br /> <strong>ಬೆದರಿಕೆ ತಂತ್ರ: </strong>ಬಾಲಕೃಷ್ಣ ಬಂಧನಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ರಾಮದೇವ್, ಇದು `ಸರ್ಕಾರದ ಬೆದರಿಕೆ ತಂತ್ರ~ ಎಂದು ಟೀಕಿಸಿದ್ದಾರೆ.ಬಾಲಕೃಷ್ಣ ವಿರುದ್ಧ ಕ್ರಮ ತೆಗೆದು ಕೊಳ್ಳುವುದರ ಮೂಲಕ ಸ್ವದೇಶಕ್ಕೆ ಕಪ್ಪು ಹಣ ತರುವಂತೆ ನಡೆಸುತ್ತಿರುವ ತಮ್ಮ ಹೋರಾಟವನ್ನು ಹತ್ತಿಕಲು ಸರ್ಕಾರ ಮುಂದಾಗಿದೆ ಬಾಬಾ ಆರೋಪಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>