<p>ರಾಮನಗರ: ತೀವ್ರ ಬರದಿಂದ ತತ್ತರಿಸಿರುವ ರಾಮನಗರ ತಾಲ್ಲೂಕನ್ನು ಬರ ಪೀಡಿತ ಎಂದು ಘೋಷಿಸುವಂತೆ ಸೋಮವಾರ ನಡೆಯುವ ವಿಧಾನ ಮಂಡಲದ ಅಧಿವೇಶನದಲ್ಲಿ ಒತ್ತಾಯಿಸುವುದಾಗಿ ಶಾಸಕ ಕೆ.ರಾಜು ತಿಳಿಸಿದರು.<br /> <br /> ತಾಲ್ಲೂಕಿನ ಹುಲಿಕೆರೆ-ಗುನ್ನೂರು ಗ್ರಾಮ ಪಂಚಾಯಿತಿಯ ಕೇಂದ್ರ ಸ್ಥಾನ ಅವ್ವೇರಹಳ್ಳಿಯಲ್ಲಿ ಶನಿವಾರ ನಡೆದ ಜನಸ್ಪಂದನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. <br /> <br /> ತಾಲ್ಲೂಕಿನಲ್ಲಿ ಎರಡು ತಿಂಗಳಿಂದೀಚೆಗೆ 150 ಕೊಳವೆ ಬಾವಿಗಳನ್ನು ಕೊರೆಯಲಾಗಿದೆ. ನೂರಕ್ಕೂ ಹೆಚ್ಚು ಕೊಳವೆ ಬಾವಿಗಳಿಗೆ ಪಂಪ್ಸೆಟ್ಗಳನ್ನು ಅಳವಡಿಸಿ ನೀರಿನ ಸಮಸ್ಯೆಯನ್ನು ಬಗೆಹರಿಸುವ ಪ್ರಯತ್ನ ಮಾಡಲಾಗಿದೆ. <br /> <br /> ನೀರಿಗೆ ತೀವ್ರ ತತ್ವಾರ ಉಂಟಾದ ಕಡೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. <br /> <br /> ಖಾತೆ ಬದಲಾವಣೆ, ಜಮೀನು ಅಳತೆ ಮಾಡುವ ಪ್ರಕ್ರಿಯೆಯನ್ನು ಸಕಾಲ ವ್ಯಾಪ್ತಿಗೆ ತಂದರೆ ರೈತರಿಗೆ ಸಾಕಷ್ಟು ಅನುಕೂಲವಾಗುತ್ತದೆ. ಈ ಕುರಿತು ಸರ್ಕಾರದ ಮೇಲೆ ಒತ್ತಡ ತರುವುದಾಗಿ ಶಾಸಕ ರಾಜು ತಿಳಿಸಿದರು. <br /> <br /> ಬಿಪಿಎಲ್ ಪಡಿತರ ಚೀಟಿ ಅರ್ಹರಿಗೆ ದೊರೆಯುವಂತಾಗಬೇಕು ಎಂದ ಅವರು, ವೃದ್ಧಾಪ್ಯ, ಅಂಗವಿಕಲ ಹಾಗೂ ವಿಧವಾ ವೇತನಕ್ಕಾಗಿ ಜನರು ಶಾಸಕ ಬಳಿ ಬರುವಂತೆ ಮಾಡಬೇಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.<br /> <br /> ತಹಸೀಲ್ದಾರ್ ಡಾ. ರವಿ ಎಂ ತಿರ್ಲಾಪುರ ಮಾತನಾಡಿ, ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಸಕಾಲದಿಂದ ತಾಲ್ಲೂಕಿನಲ್ಲಿ ಏಪ್ರಿಲ್ನಿಂದ ಶುಕ್ರವಾರದವರೆಗೆ ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ ಇಪ್ಪತ್ತು ಸಾವಿರ ಅರ್ಜಿಗಳು ಸಲ್ಲಿಕೆಯಾಗಿದ್ದವು. <br /> <br /> ಇದರಲ್ಲಿ 19,883 ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ವಿಲೆವಾರಿ ಮಾಡಲಾಗಿದೆ. ಅಂದರೆ ಶೇ.99.21ರಷ್ಟು ಪ್ರಗತಿ ಸಾಧಿಸಲಾಗಿದೆ. ಸಕಾಲ ಅನುಷ್ಠಾನಗೊಳಿಸುವಲ್ಲಿ ರಾಮನಗರ ಜಿಲ್ಲೆ ರಾಜ್ಯದಲ್ಲಿ 6ನೇ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ರಾಮನಗರ ತಾಲ್ಲೂಕು ಮೊದಲನೇ ಸ್ಥಾನ ಪಡೆದಿದೆ. ಸಕಾಲದಿಂದಾಗಿ ಅಧಿಕಾರಿಗಳಲ್ಲಿ ಜಾಗೃತಿ ಮೂಡಿದೆ ಎಂದು ತಿಳಿಸಿದರು.<br /> <br /> ಭೂಮಿ ಯೋಜನೆಯಲ್ಲಿ ರಾಮನಗರ ತಾಲ್ಲೂಕು 183ನೇ ಸ್ಥಾನದಲ್ಲಿತ್ತು. ಅದೀಗ 53ನೇ ಸ್ಥಾನಕ್ಕೆ ಬಂದಿದೆ. ಖಾಲಿಯಿರುವ ಸರ್ವೇಯರ್ಗಳ ಹುದ್ದೆಗಳನ್ನು ಭರ್ತಿ ಮಾಡಲು ಶಾಸಕರು ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಮನವಿ ಮಾಡಿದರು.<br /> <br /> ಖಾಸಗಿ ಜವಾಬ್ದಾರಿಯಲ್ಲಿ ನಡೆಯುತ್ತಿರುವ ನೆಮ್ಮದಿ ಕೇಂದ್ರಗಳನ್ನು ಸೆಪ್ಟೆಂಬರ್ನಿಂದ ಕಂದಾಯ ಇಲಾಖೆಯೇ ನಿರ್ವಹಿಸಲಿದೆ. ಮುಂದಿನ ದಿನಗಳಲ್ಲಿ ವಿಳಂಬ ಆಗುವುದಿಲ್ಲ. ಬಿಎಸ್ಎನ್ಎಲ್ ಹೈ ಪವರ್ ಬ್ರಾಡ್ಬ್ಯಾಂಡ್ ಅನ್ನು ಇಲಾಖೆ ಪ್ರತ್ಯೇಕವಾಗಿ ಅಳವಡಿಸಿಕೊಳ್ಳಲಿದೆ. ಸೋಲಾರ್ ಬ್ಯಾಟರಿ ಹಾಗೂ ಯುಪಿಎಸ್ ಸೌಲಭ್ಯವನ್ನು ಕಲ್ಪಿಸುವುದರಿಂದ 8 ಗಂಟೆಗಳ ಕಾಲ ವಿದ್ಯುತ್ ಇಲ್ಲದಿದ್ದರೂ ಕಾರ್ಯ ನಿರ್ವಹಿಸಬಹುದಾಗಿದೆ. ಜನರ ಕೆಲಸಗಳು ಶೀಘ್ರ ಆಗಲಿವೆ ಎಂದು ಭರವಸೆ ನೀಡಿದರು.<br /> <br /> ಜಿಲ್ಲೆಯಲ್ಲಿ ಸುಮಾರು ಆರೂವರೆ ಸಾವಿರ ಪಿಂಚಣಿದಾರರನ್ನು ಅನರ್ಹಗೊಳಿಸಲಾಗಿದೆ. ಇದರಲ್ಲಿ ಶೇ. 50 ರಷ್ಟು ಮಂದಿ ಮೃತಪಟ್ಟಿದ್ದಾರೆ. ಈ ಪ್ರಕ್ರಿಯೆಯಲ್ಲಿ ಅರ್ಹ ಫಲಾನುಭವಿಗಳಿಗೆ ಅನ್ಯಾಯ ಆಗಿದ್ದರೆ ಮರು ಪರಿಶೀಲನೆ ಮಾಡುವ ಅವಕಾಶವಿದೆ. ಅಂತವರು ನನ್ನನ್ನು ನೇರವಾಗಿ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.<br /> <br /> ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ನಾರಾಯಣ ಸ್ವಾಮಿ, ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ಸಿ.ರಾಜಣ್ಣ, ತಾಲ್ಲೂಕು ಪಂಚಾಯಿತಿ ಸದಸ್ಯೆ ಚಿಕ್ಕತಾಯಮ್ಮ, ಗ್ರಾಮ ಪಂಚಾಯತಿ ಅಧ್ಯಕ್ಷೆ ಲಕ್ಷ್ಮಮ್ಮ, ಉಪಾಧ್ಯಕ್ಷ ನಾಗರಾಜು, ಸದಸ್ಯರುಗಳಾದ ಮಧು, ಶಾಂತಕುಮಾರ್, ಪುಟ್ಟರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮನಗರ: ತೀವ್ರ ಬರದಿಂದ ತತ್ತರಿಸಿರುವ ರಾಮನಗರ ತಾಲ್ಲೂಕನ್ನು ಬರ ಪೀಡಿತ ಎಂದು ಘೋಷಿಸುವಂತೆ ಸೋಮವಾರ ನಡೆಯುವ ವಿಧಾನ ಮಂಡಲದ ಅಧಿವೇಶನದಲ್ಲಿ ಒತ್ತಾಯಿಸುವುದಾಗಿ ಶಾಸಕ ಕೆ.ರಾಜು ತಿಳಿಸಿದರು.<br /> <br /> ತಾಲ್ಲೂಕಿನ ಹುಲಿಕೆರೆ-ಗುನ್ನೂರು ಗ್ರಾಮ ಪಂಚಾಯಿತಿಯ ಕೇಂದ್ರ ಸ್ಥಾನ ಅವ್ವೇರಹಳ್ಳಿಯಲ್ಲಿ ಶನಿವಾರ ನಡೆದ ಜನಸ್ಪಂದನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. <br /> <br /> ತಾಲ್ಲೂಕಿನಲ್ಲಿ ಎರಡು ತಿಂಗಳಿಂದೀಚೆಗೆ 150 ಕೊಳವೆ ಬಾವಿಗಳನ್ನು ಕೊರೆಯಲಾಗಿದೆ. ನೂರಕ್ಕೂ ಹೆಚ್ಚು ಕೊಳವೆ ಬಾವಿಗಳಿಗೆ ಪಂಪ್ಸೆಟ್ಗಳನ್ನು ಅಳವಡಿಸಿ ನೀರಿನ ಸಮಸ್ಯೆಯನ್ನು ಬಗೆಹರಿಸುವ ಪ್ರಯತ್ನ ಮಾಡಲಾಗಿದೆ. <br /> <br /> ನೀರಿಗೆ ತೀವ್ರ ತತ್ವಾರ ಉಂಟಾದ ಕಡೆ ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. <br /> <br /> ಖಾತೆ ಬದಲಾವಣೆ, ಜಮೀನು ಅಳತೆ ಮಾಡುವ ಪ್ರಕ್ರಿಯೆಯನ್ನು ಸಕಾಲ ವ್ಯಾಪ್ತಿಗೆ ತಂದರೆ ರೈತರಿಗೆ ಸಾಕಷ್ಟು ಅನುಕೂಲವಾಗುತ್ತದೆ. ಈ ಕುರಿತು ಸರ್ಕಾರದ ಮೇಲೆ ಒತ್ತಡ ತರುವುದಾಗಿ ಶಾಸಕ ರಾಜು ತಿಳಿಸಿದರು. <br /> <br /> ಬಿಪಿಎಲ್ ಪಡಿತರ ಚೀಟಿ ಅರ್ಹರಿಗೆ ದೊರೆಯುವಂತಾಗಬೇಕು ಎಂದ ಅವರು, ವೃದ್ಧಾಪ್ಯ, ಅಂಗವಿಕಲ ಹಾಗೂ ವಿಧವಾ ವೇತನಕ್ಕಾಗಿ ಜನರು ಶಾಸಕ ಬಳಿ ಬರುವಂತೆ ಮಾಡಬೇಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.<br /> <br /> ತಹಸೀಲ್ದಾರ್ ಡಾ. ರವಿ ಎಂ ತಿರ್ಲಾಪುರ ಮಾತನಾಡಿ, ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಸಕಾಲದಿಂದ ತಾಲ್ಲೂಕಿನಲ್ಲಿ ಏಪ್ರಿಲ್ನಿಂದ ಶುಕ್ರವಾರದವರೆಗೆ ಕಂದಾಯ ಇಲಾಖೆಗೆ ಸಂಬಂಧಪಟ್ಟಂತೆ ಇಪ್ಪತ್ತು ಸಾವಿರ ಅರ್ಜಿಗಳು ಸಲ್ಲಿಕೆಯಾಗಿದ್ದವು. <br /> <br /> ಇದರಲ್ಲಿ 19,883 ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ ವಿಲೆವಾರಿ ಮಾಡಲಾಗಿದೆ. ಅಂದರೆ ಶೇ.99.21ರಷ್ಟು ಪ್ರಗತಿ ಸಾಧಿಸಲಾಗಿದೆ. ಸಕಾಲ ಅನುಷ್ಠಾನಗೊಳಿಸುವಲ್ಲಿ ರಾಮನಗರ ಜಿಲ್ಲೆ ರಾಜ್ಯದಲ್ಲಿ 6ನೇ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ರಾಮನಗರ ತಾಲ್ಲೂಕು ಮೊದಲನೇ ಸ್ಥಾನ ಪಡೆದಿದೆ. ಸಕಾಲದಿಂದಾಗಿ ಅಧಿಕಾರಿಗಳಲ್ಲಿ ಜಾಗೃತಿ ಮೂಡಿದೆ ಎಂದು ತಿಳಿಸಿದರು.<br /> <br /> ಭೂಮಿ ಯೋಜನೆಯಲ್ಲಿ ರಾಮನಗರ ತಾಲ್ಲೂಕು 183ನೇ ಸ್ಥಾನದಲ್ಲಿತ್ತು. ಅದೀಗ 53ನೇ ಸ್ಥಾನಕ್ಕೆ ಬಂದಿದೆ. ಖಾಲಿಯಿರುವ ಸರ್ವೇಯರ್ಗಳ ಹುದ್ದೆಗಳನ್ನು ಭರ್ತಿ ಮಾಡಲು ಶಾಸಕರು ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಮನವಿ ಮಾಡಿದರು.<br /> <br /> ಖಾಸಗಿ ಜವಾಬ್ದಾರಿಯಲ್ಲಿ ನಡೆಯುತ್ತಿರುವ ನೆಮ್ಮದಿ ಕೇಂದ್ರಗಳನ್ನು ಸೆಪ್ಟೆಂಬರ್ನಿಂದ ಕಂದಾಯ ಇಲಾಖೆಯೇ ನಿರ್ವಹಿಸಲಿದೆ. ಮುಂದಿನ ದಿನಗಳಲ್ಲಿ ವಿಳಂಬ ಆಗುವುದಿಲ್ಲ. ಬಿಎಸ್ಎನ್ಎಲ್ ಹೈ ಪವರ್ ಬ್ರಾಡ್ಬ್ಯಾಂಡ್ ಅನ್ನು ಇಲಾಖೆ ಪ್ರತ್ಯೇಕವಾಗಿ ಅಳವಡಿಸಿಕೊಳ್ಳಲಿದೆ. ಸೋಲಾರ್ ಬ್ಯಾಟರಿ ಹಾಗೂ ಯುಪಿಎಸ್ ಸೌಲಭ್ಯವನ್ನು ಕಲ್ಪಿಸುವುದರಿಂದ 8 ಗಂಟೆಗಳ ಕಾಲ ವಿದ್ಯುತ್ ಇಲ್ಲದಿದ್ದರೂ ಕಾರ್ಯ ನಿರ್ವಹಿಸಬಹುದಾಗಿದೆ. ಜನರ ಕೆಲಸಗಳು ಶೀಘ್ರ ಆಗಲಿವೆ ಎಂದು ಭರವಸೆ ನೀಡಿದರು.<br /> <br /> ಜಿಲ್ಲೆಯಲ್ಲಿ ಸುಮಾರು ಆರೂವರೆ ಸಾವಿರ ಪಿಂಚಣಿದಾರರನ್ನು ಅನರ್ಹಗೊಳಿಸಲಾಗಿದೆ. ಇದರಲ್ಲಿ ಶೇ. 50 ರಷ್ಟು ಮಂದಿ ಮೃತಪಟ್ಟಿದ್ದಾರೆ. ಈ ಪ್ರಕ್ರಿಯೆಯಲ್ಲಿ ಅರ್ಹ ಫಲಾನುಭವಿಗಳಿಗೆ ಅನ್ಯಾಯ ಆಗಿದ್ದರೆ ಮರು ಪರಿಶೀಲನೆ ಮಾಡುವ ಅವಕಾಶವಿದೆ. ಅಂತವರು ನನ್ನನ್ನು ನೇರವಾಗಿ ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.<br /> <br /> ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ನಾರಾಯಣ ಸ್ವಾಮಿ, ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ಸಿ.ರಾಜಣ್ಣ, ತಾಲ್ಲೂಕು ಪಂಚಾಯಿತಿ ಸದಸ್ಯೆ ಚಿಕ್ಕತಾಯಮ್ಮ, ಗ್ರಾಮ ಪಂಚಾಯತಿ ಅಧ್ಯಕ್ಷೆ ಲಕ್ಷ್ಮಮ್ಮ, ಉಪಾಧ್ಯಕ್ಷ ನಾಗರಾಜು, ಸದಸ್ಯರುಗಳಾದ ಮಧು, ಶಾಂತಕುಮಾರ್, ಪುಟ್ಟರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>