<p><strong>ಕಾರವಾರ: </strong>ನಾವು ನಮ್ಮ ಶರೀರ, ಬಳಗ, ನಮ್ಮ ಕುಟುಂಬ ಎಂಬ ಸೀಮಿತವಾದ ಬೇಲಿಯನ್ನು ಹಾಕಿಕೊಂಡು ಜೀವಿಸುತ್ತೇವೆ. ಆದರೆ, ಈ ಸೀಮೆಯನ್ನು ದಾಟಿ ಸಮಾಜದತ್ತ ಕಣ್ಣು ಹೊರಳಿಸಿದರೆ ಆಗುವ ಅನುಭೂತಿಯೇ ಬೇರೆ ಎಂದು ರಾಘವೇಶ್ವರ ಸ್ವಾಮೀಜಿ ಹೇಳಿದರು.<br /> <br /> ಗೋಕರ್ಣದ ಅಶೋಕೆಯಲ್ಲಿ ಹದಿನೆಂಟನೇ ಚಾತುರ್ಮಾಸ ವ್ರತದ ಸೀಮೋಲ್ಲಂಘನ ಮಾಡಿ ಬಳಿಕ ನಡೆದ ಧರ್ಮಸಭೆಯಲ್ಲಿ ಶಿಷ್ಯರಿಗೆ ಅನುಗ್ರಹ ಸಂದೇಶ ನೀಡಿದ ಅವರು, ಎಲ್ಲರೂ ನಮ್ಮವರೆಂದುಕೊಂಡು ವ್ಯವಹರಿಸಿದಾಗ ಆಗುವ ಸಂತೋಷ ಅನಿರ್ವಚನೀಯವಾದುದು ಎಂದರು. <br /> <br /> ಇಷ್ಟು ದಿನಗಳಕಾಲ ಅಶೋಕೆಯಲ್ಲಿ ರಾಮಕಥಾ ಪ್ರವಚನ ನಡೆಯುತ್ತಿತ್ತು. ಇದು ಅಕ್ಷರಶಃ ಅಯೋಧ್ಯೆಯಾಗಿ ಪರಿವರ್ತಿತವಾಗಿತ್ತು. ಮಠದ ಆರಾಧ್ಯ ದೇವ ರಾಮಚಂದ್ರನು ಈ ಪ್ರದೇಶದಿಂದ ಆಕರ್ಷಿತನಾಗಿ ಆದಿಶಂಕರಾಚಾರ್ಯರ ಮೂಲಕ ದೂರದ ಅಯೋಧ್ಯೆಯಿಂದ ಇಲ್ಲಿಗೆ ಬಂದು ನೆಲೆಸಿದ. ಅಶೋಕೆ ಹಲವು ವಿಸ್ಮಯಗಳ ತಾಣ ಎಂದರು. <br /> <br /> ನಮ್ಮ ಪರಂಪರೆಯವರೆಲ್ಲರೂ ರಾಮಚಂದ್ರನ ನೆರಳಿನಲ್ಲಿಯೇ ಬಾಳಿ ಬದುಕಿದವರು. ರಾಮನನ್ನು ನಂಬಿ ಬದುಕುವವರಿಗೆ ಬೇರಾವುದರ ಅಗತ್ಯವೂ ಇಲ್ಲ ಎಂದು ಸ್ವಾಮೀಜಿ ನುಡಿದರು. ಶಿಷ್ಯರು ನದಿಗಳಾದರೆ ಗುರು ಸಮುದ್ರದಂತೆ. ವರ್ಷವಿಡೀ ಸಂಚರಿಸುತ್ತ ಸಮಾಜಕ್ಕೆ ಧರ್ಮಮಾರ್ಗವನ್ನು ಬೋಧಿಸುವ ಯತಿಗಳು ಚಾತುರ್ಮಾಸ ಕಾಲದಲ್ಲಿ ಒಂದೆಡೆ ನಿಂತು ಅಂತರ್ಮುಖಿಗಳಾಗುತ್ತಾರೆ. <br /> <br /> ಇದು ಶಿಷ್ಯರೆಂಬ ನದಿಗಳು ಗುರು ರೂಪವಾದ ಸಮುದ್ರವನ್ನು ತನ್ನೊಳಗಿಟ್ಟುಕೊಳ್ಳುವ ಅದರಲ್ಲಿ ಸೇರಿಹೋಗುವ ಪರಿ ಎಂದು ಸ್ವಾಮೀಜಿ ಹೇಳಿದರು.ಕ್ಷೇತ್ರ ದೇವತೆ ಭದ್ರಕಾಳೀ, ದೇವರಭಾವಿಯ ಕೆಂಗಳಾ ಪರಮೇಶ್ವರೀ ದೇವಾಲಯಗಳಿಗೆ ಸ್ವಾಮೀಜಿ ಸಂದರ್ಶನ ನೀಡಿ ಸೀಮೋಲ್ಲಂಘನ ವಿಧಿಯನ್ನು ಪೂರೈಸಿದರು. <br /> <br /> ಪ್ರತಿವರ್ಷ ಚಾತುರ್ಮಾಸ ಸೀಮೋಲ್ಲಂಘನದ ನಂತರ ನಡೆಯುವ ಧರ್ಮಸಭೆಯಲ್ಲಿ ನೀಡಲಾಗುವ ಪ್ರತಿಷ್ಠಿತ ಚಾತುರ್ಮಾಸ ಪ್ರಶಸ್ತಿಯನ್ನು ರಾಣೆಬೆನ್ನೂರಿನ ಉದ್ಯಮಿ ವಾಸುದೇವ ಹೆಬ್ಬಾರ್ ಅವರಿಗೆ ನೀಡಿ ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ: </strong>ನಾವು ನಮ್ಮ ಶರೀರ, ಬಳಗ, ನಮ್ಮ ಕುಟುಂಬ ಎಂಬ ಸೀಮಿತವಾದ ಬೇಲಿಯನ್ನು ಹಾಕಿಕೊಂಡು ಜೀವಿಸುತ್ತೇವೆ. ಆದರೆ, ಈ ಸೀಮೆಯನ್ನು ದಾಟಿ ಸಮಾಜದತ್ತ ಕಣ್ಣು ಹೊರಳಿಸಿದರೆ ಆಗುವ ಅನುಭೂತಿಯೇ ಬೇರೆ ಎಂದು ರಾಘವೇಶ್ವರ ಸ್ವಾಮೀಜಿ ಹೇಳಿದರು.<br /> <br /> ಗೋಕರ್ಣದ ಅಶೋಕೆಯಲ್ಲಿ ಹದಿನೆಂಟನೇ ಚಾತುರ್ಮಾಸ ವ್ರತದ ಸೀಮೋಲ್ಲಂಘನ ಮಾಡಿ ಬಳಿಕ ನಡೆದ ಧರ್ಮಸಭೆಯಲ್ಲಿ ಶಿಷ್ಯರಿಗೆ ಅನುಗ್ರಹ ಸಂದೇಶ ನೀಡಿದ ಅವರು, ಎಲ್ಲರೂ ನಮ್ಮವರೆಂದುಕೊಂಡು ವ್ಯವಹರಿಸಿದಾಗ ಆಗುವ ಸಂತೋಷ ಅನಿರ್ವಚನೀಯವಾದುದು ಎಂದರು. <br /> <br /> ಇಷ್ಟು ದಿನಗಳಕಾಲ ಅಶೋಕೆಯಲ್ಲಿ ರಾಮಕಥಾ ಪ್ರವಚನ ನಡೆಯುತ್ತಿತ್ತು. ಇದು ಅಕ್ಷರಶಃ ಅಯೋಧ್ಯೆಯಾಗಿ ಪರಿವರ್ತಿತವಾಗಿತ್ತು. ಮಠದ ಆರಾಧ್ಯ ದೇವ ರಾಮಚಂದ್ರನು ಈ ಪ್ರದೇಶದಿಂದ ಆಕರ್ಷಿತನಾಗಿ ಆದಿಶಂಕರಾಚಾರ್ಯರ ಮೂಲಕ ದೂರದ ಅಯೋಧ್ಯೆಯಿಂದ ಇಲ್ಲಿಗೆ ಬಂದು ನೆಲೆಸಿದ. ಅಶೋಕೆ ಹಲವು ವಿಸ್ಮಯಗಳ ತಾಣ ಎಂದರು. <br /> <br /> ನಮ್ಮ ಪರಂಪರೆಯವರೆಲ್ಲರೂ ರಾಮಚಂದ್ರನ ನೆರಳಿನಲ್ಲಿಯೇ ಬಾಳಿ ಬದುಕಿದವರು. ರಾಮನನ್ನು ನಂಬಿ ಬದುಕುವವರಿಗೆ ಬೇರಾವುದರ ಅಗತ್ಯವೂ ಇಲ್ಲ ಎಂದು ಸ್ವಾಮೀಜಿ ನುಡಿದರು. ಶಿಷ್ಯರು ನದಿಗಳಾದರೆ ಗುರು ಸಮುದ್ರದಂತೆ. ವರ್ಷವಿಡೀ ಸಂಚರಿಸುತ್ತ ಸಮಾಜಕ್ಕೆ ಧರ್ಮಮಾರ್ಗವನ್ನು ಬೋಧಿಸುವ ಯತಿಗಳು ಚಾತುರ್ಮಾಸ ಕಾಲದಲ್ಲಿ ಒಂದೆಡೆ ನಿಂತು ಅಂತರ್ಮುಖಿಗಳಾಗುತ್ತಾರೆ. <br /> <br /> ಇದು ಶಿಷ್ಯರೆಂಬ ನದಿಗಳು ಗುರು ರೂಪವಾದ ಸಮುದ್ರವನ್ನು ತನ್ನೊಳಗಿಟ್ಟುಕೊಳ್ಳುವ ಅದರಲ್ಲಿ ಸೇರಿಹೋಗುವ ಪರಿ ಎಂದು ಸ್ವಾಮೀಜಿ ಹೇಳಿದರು.ಕ್ಷೇತ್ರ ದೇವತೆ ಭದ್ರಕಾಳೀ, ದೇವರಭಾವಿಯ ಕೆಂಗಳಾ ಪರಮೇಶ್ವರೀ ದೇವಾಲಯಗಳಿಗೆ ಸ್ವಾಮೀಜಿ ಸಂದರ್ಶನ ನೀಡಿ ಸೀಮೋಲ್ಲಂಘನ ವಿಧಿಯನ್ನು ಪೂರೈಸಿದರು. <br /> <br /> ಪ್ರತಿವರ್ಷ ಚಾತುರ್ಮಾಸ ಸೀಮೋಲ್ಲಂಘನದ ನಂತರ ನಡೆಯುವ ಧರ್ಮಸಭೆಯಲ್ಲಿ ನೀಡಲಾಗುವ ಪ್ರತಿಷ್ಠಿತ ಚಾತುರ್ಮಾಸ ಪ್ರಶಸ್ತಿಯನ್ನು ರಾಣೆಬೆನ್ನೂರಿನ ಉದ್ಯಮಿ ವಾಸುದೇವ ಹೆಬ್ಬಾರ್ ಅವರಿಗೆ ನೀಡಿ ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>